Homeಅಂತರಾಷ್ಟ್ರೀಯವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು.

- Advertisement -
- Advertisement -

ನಿಮ್ಮನ್ನು ಸತತವಾಗಿ ಗಮನಿಸುವೆ; ಇದುವೆ ನನ್ನ ಸಂದೇಶ : ಗ್ರೇಟಾ ತನ್ಬೆರ್ಗ್‌

ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ಇದು ತಪ್ಪು. ನಾನಿಲ್ಲಿ ಇರಬಾರದಾಗಿತ್ತು. ನಾನೀಗ ನನ್ನ ಶಾಲೆಯಲ್ಲಿ, ಸಾಗರದಾಚೆ ಇರಬೇಕಿತ್ತು. ಆದರೂ ನೀವು ನಮ್ಮ ಕಡೆ, ಯುವಜನರ ಕಡೆ ಬರುತ್ತೀರ, ನಿಮ್ಮ ಭರವಸೆ, ನಿರೀಕ್ಷೆಗಳನ್ನು ಹುಡುಕಿಕೊಂಡು. ನಿಮಗೆಷ್ಟು ಧೈರ್ಯ?

ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಕನಸುಗಳನ್ನು ಹಾಗೂ ನನ್ನ ಬಾಲ್ಯವನ್ನು ನನ್ನಿಂದ ಕದ್ದಿದ್ದೀರ. ಆದರೂ ನಾನು ಅದೃಷ್ಟವಂತೆ. ಆದರೆ ಜನರು ನರಳುತ್ತಿದ್ದಾರೆ. ಜನರು ಸಾಯುತ್ತಿದ್ದಾರೆ. ಪರಿಸರ ವ್ಯವಸ್ಥೆಯು ಸಂಪೂರ್ಣವಾಗಿ ನಾಶವಾಗುತ್ತಿದೆ. ಒಂದು ಸಾಮೂಹಿಕ ಅಳಿವಿನ ಪ್ರಾರಂಭದ ಘಟ್ಟದಲ್ಲಿದ್ದೇವೆ. ಹಾಗೂ ಇಂಥ ಸಮಯದಲ್ಲಿ ನೀವು ದುಡ್ಡು ಮತ್ತು ಆರ್ಥಿಕ ಬೆಳವಣಿಗೆಯ ಚೆಂದದ ಕಥೆಗಳ ಬಗ್ಗೆಯೇ ಮಾತನಾಡುತ್ತೀರಿ. ನಿಮಗೆಷ್ಟು ಧೈರ್ಯ?

ಮೂವತ್ತು ವರ್ಷಗಳಗಿಂದ ವಿಜ್ಞಾನವು ಸ್ಪಷ್ಟವಾಗಿ ಹೇಳುತ್ತಲಿದೆ. ಆದರೂ ನಿಮ್ಮ ಮುಖವನ್ನು ಬೇರೆಡೆ ತಿರುಗಿಸಲು ನಿಮಗೆಷ್ಟು ಧೈರ್ಯ? ಹಾಗೂ ಈ ಸಮಸ್ಯೆಯ ಪರಿಹಾರ ಮತ್ತು ಇದಕ್ಕೆ ಬೇಕಿರುವ ರಾಜಕೀಯ ಕಾಣಿಸಿಕೊಳ್ಳದೇ ಇದ್ದರೂ ಇಲ್ಲಿ ಬಂದು, ನಾವು ಮಾಡಬೇಕಾದದ್ದನ್ನು ಮಾಡುತ್ತಿದ್ದೇವೆ ಎಂದು ಹೇಳಲು ನಿಮಗೆಷ್ಟು ಧೈರ್ಯ?

ನಮ್ಮ ಮಾತುಗಳನ್ನು ಕೇಳಿಸಿಕೊಳ್ಳುತ್ತೀರಿ ಮತ್ತು ಇದರ ತುರ್ತನ್ನು ಅರ್ಥಮಾಡಿಕೊಳ್ಳುತ್ತೀರಿ ಎಂದು ನೀವು ಹೇಳುತ್ತೀರಿ. ಆದರೆ, ನಾನೆಷ್ಟೇ ಸಿಟ್ಟಿನಲ್ಲಿರಲಿ ಮತ್ತು ದುಃಖದಲ್ಲಿರಲಿ, ನಿಮ್ಮ ಈ ಮಾತುಗಳನ್ನು ನಂಬಲು ಸಾಧ್ಯವಿಲ್ಲ. ಏಕೆಂದರೆ, ಒಂದು ವೇಳೆ ನೀವು ಪರಿಸ್ಥಿತಿಯನ್ನು ನಿಜವಾಗಿಯೂ ಅರ್ಥಮಾಡಿಕೊಂಡು ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ವಿಫಲವಾಗುತ್ತಿದ್ದರೆ, ನೀವು ದುಷ್ಟರು ಎಂತಾಗುವುದು. ಹಾಗೂ ನಾನು ಇದನ್ನು ನಂಬಲು ತಯಾರಿಲ್ಲ.

ಹತ್ತು ವರ್ಷಗಳಲ್ಲಿ ಹೊರಸೂಸುವಿಕೆಯನ್ನು (ಎಮಿಷನ್ಸ್) ಅರ್ಧದಷ್ಟು ಕಡಿತಗೊಳಿಸುವ ಈ ಜನಪ್ರಿಯ ಪರಿಕಲ್ಪನೆ ಏನು ಮಾಡಬಲ್ಲದು ಗೊತ್ತೆ? ಇದು 1.5 ಡಿಗ್ರಿಗಿಂತ ಕಡಿಮೆ ಇರಲು ಕೇವಲ 50% ಅವಕಾಶವನ್ನು ನೀಡುತ್ತದೆ ಹಾಗೂ ಮನುಷ್ಯನ ನಿಯಂತ್ರಣವನ್ನು ಮೀರಿದ ಮತ್ತೇ ಬದಲಾಯಿಸಲಾಗದಂತಹ ಸರಣಿ ಪ್ರತಿಕ್ರಿಯೆಗಳನ್ನು ಪ್ರಾರಂಭಿಸುವ ಅಪಾಯ ಹೊಂದಿದೆ.

50% ನಿಮಗೆ ಒಪ್ಪಿಗೆ ಇರಬಹುದು. ಆದರೆ, ಈ ಸಂಖ್ಯೆಗಳು ನಿರ್ಣಾಯಕ ಹಂತಗಳನ್ನು (ಟಿಪಿಂಗ್ ಪಾಯಿಂಟ್ಸ್), ಹೆಚ್ಚಿನ ಫೀಡ್‍ಬ್ಯಾಕ್ ಲೂಪ್ಸ್, ವಾಯು ಮಾಲಿನ್ಯದಿಂದ ಕಾಣಿಸಿಕೊಳ್ಳದ ತಾಪಮಾನದ ಹೆಚ್ಚುವರಿ ಏರಿಕೆ ಅಥವಾ ಹವಾಮಾನದ ನ್ಯಾಯದ ಅಂಶಗಳನ್ನು ಹೊಂದಿಲ್ಲ. ಇದರೊಂದಿಗೆ, ಗಾಳಿಯಲ್ಲಿರುವ ಶತಕೋಟಿ ಟನ್‍ಗಳಷ್ಟಿರುವ ನಿಮ್ಮ ಕಾರ್ಬನ್ ಡೈಆಕ್ಸೈಡ್ ಅನ್ನು ನಮ್ಮ ಪೀಳಿಗೆಯ ಜನರು ಹೀರವವರು ಎನ್ನುವುದರ ಮೇಲೆ ಅವಲಂಬಿಸಿಲಾಗಿದೆ. ಈ ಗಾಳಿಯನ್ನು ಸೇವಿಸಲು ಬೇಕಾದ ತಂತ್ರಜ್ಞಾನದ ಅಭಿವೃದ್ಧಿಯೂ ಕಾಣಿಸಿಕೊಳ್ಳುತ್ತಿಲ್ಲ.

ಹಾಗಾಗಿ, ಈ 50% ನಮಗೆ ಒಪ್ಪಿಗೆಯಿಲ್ಲ – ಇದರ ಪರಿಣಾಮಗಳನ್ನು ಎದುರಿಸಬೇಕಾದ ನಮಗೆ ಒಪ್ಪಿಗೆಯಿಲ್ಲ.

ಜಾಗತಿಕ ತಾಪಮಾನದಲ್ಲಿ 1.5 ಡಿಗ್ರಿ ಹೆಚ್ಚಳಕ್ಕಿಂತ ಕೆಳಗಿರಬೇಕಾದ 67% ಅವಕಾಶವನ್ನು ಹೊಂದಬೇಕಾದರೆ, ಕ್ಲೈಮೇಟ್ ಚೇಂಜ್‍ನ ಅಂತತರಾಷ್ಟ್ರೀಯ ಪ್ಯಾನೆಲ್ ನೀಡಿದ ಅತಿ ಹೆಚ್ಚಿನ ಸಂಭವನೀಯತೆ – ಇಡೀ ವಿಶ್ವವು ಹೊರಸೂಸಲು 1ನೇ ಜನವರಿ 2018ರಂದು ಕಾರ್ಬನ್ ಡೈಆಕ್ಸೈಡ್ ನ 420 ಗಿಗಾಟನ್ ಹೊಂದಿತ್ತು. ಇಂದು ಆ ಸಂಖ್ಯಯೂ ಈಗಾಗಲೇ 350 ಗಿಗಾಟನ್‍ಗಳಗಿಂತ ಕಡಿಮೆಯಾಗಿದೆ.

ಕೆಲವು ತಾಂತ್ರಿಕ ಪರಿಹಾರಗಳಿಂದ ಮತ್ತು ‘ಎಂದಿನಂತೆ ನಡೆಯುವ ವ್ಯವಹಾರ’ದಿಂದ ಇದನ್ನು ಬಗೆಹರಿಸಬಹುದು ಎಂದು ನಟಿಸಲು ನಿಮಗೆಷ್ಟು ಧೈರ್ಯ? ಇಂದಿನ ಹೊರಸೂಸುವಿಕೆಯ ಲೆವೆಲ್ ನೋಡಿದರೆ, ಈಗ ಬಾಕಿ ಉಳಿದಿರುವ ಕಾರ್ಬನ್ ಡೈಆಕ್ಸೈಡ್ ಬಜೆಟ್ ಕೇವಲ ಎಂಟೂವರೆ ವರ್ಷಗಳಲ್ಲಿ ಮುಗಿದುಹೋಗುವುದು.

ಈ ಅಂಕಿ ಅಂಶಗಳಿಗೆ ಪೂರಕವಾಗಿ ಯಾವುದೇ ಪರಿಹಾರಗಳು ಅಥವಾ ಯೋಜನೆಗಳು ಇಂದು ಕಾಣಿಸಿಕೊಳ್ಳುವುದಿಲ್ಲ, ಏಕೆಂದರೆ, ಈ ಅಂಕಿಅಂಶಗಳು ತುಂಬಾ ಅನಾನುಕೂಲಕರವಾಗಿವೆ. ಹಾಗೂ ನೀವುಗಳು ಇದನ್ನು ಹೀಗೆಯೇ ಇದೆ ಎಂದು ಹೇಳಿಕೊಳ್ಳುವಷ್ಟು ಪ್ರಬುದ್ಧರಾಗಿಲ್ಲ.

ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು.

ಇದರಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಬಿಡುವುದಿಲ್ಲ. ಇಲ್ಲಿಯೇ, ಇದೇ ಸಮಯದಲ್ಲಿ ನಾವು ಗೆರೆಯನ್ನು ಎಳೆಯುತ್ತಿದ್ದೇವೆ. ಜಗತ್ತು ಎಚ್ಚೆತ್ತುಕೊಳ್ಳುತ್ತಿದೆ. ಬದಲಾವಣೆ ಬರುತ್ತಿದೆ, ನಿಮಗಿಷ್ಟವಾಗಲಿ ಆಗದೇ ಇರಲಿ ಬದಲಾವಣೆ ಬರುತ್ತಿದೆ…

ಧನ್ಯವಾದಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....