Homeಅಂತರಾಷ್ಟ್ರೀಯವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು.

- Advertisement -
- Advertisement -

ನಿಮ್ಮನ್ನು ಸತತವಾಗಿ ಗಮನಿಸುವೆ; ಇದುವೆ ನನ್ನ ಸಂದೇಶ : ಗ್ರೇಟಾ ತನ್ಬೆರ್ಗ್‌

ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ಇದು ತಪ್ಪು. ನಾನಿಲ್ಲಿ ಇರಬಾರದಾಗಿತ್ತು. ನಾನೀಗ ನನ್ನ ಶಾಲೆಯಲ್ಲಿ, ಸಾಗರದಾಚೆ ಇರಬೇಕಿತ್ತು. ಆದರೂ ನೀವು ನಮ್ಮ ಕಡೆ, ಯುವಜನರ ಕಡೆ ಬರುತ್ತೀರ, ನಿಮ್ಮ ಭರವಸೆ, ನಿರೀಕ್ಷೆಗಳನ್ನು ಹುಡುಕಿಕೊಂಡು. ನಿಮಗೆಷ್ಟು ಧೈರ್ಯ?

ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಕನಸುಗಳನ್ನು ಹಾಗೂ ನನ್ನ ಬಾಲ್ಯವನ್ನು ನನ್ನಿಂದ ಕದ್ದಿದ್ದೀರ. ಆದರೂ ನಾನು ಅದೃಷ್ಟವಂತೆ. ಆದರೆ ಜನರು ನರಳುತ್ತಿದ್ದಾರೆ. ಜನರು ಸಾಯುತ್ತಿದ್ದಾರೆ. ಪರಿಸರ ವ್ಯವಸ್ಥೆಯು ಸಂಪೂರ್ಣವಾಗಿ ನಾಶವಾಗುತ್ತಿದೆ. ಒಂದು ಸಾಮೂಹಿಕ ಅಳಿವಿನ ಪ್ರಾರಂಭದ ಘಟ್ಟದಲ್ಲಿದ್ದೇವೆ. ಹಾಗೂ ಇಂಥ ಸಮಯದಲ್ಲಿ ನೀವು ದುಡ್ಡು ಮತ್ತು ಆರ್ಥಿಕ ಬೆಳವಣಿಗೆಯ ಚೆಂದದ ಕಥೆಗಳ ಬಗ್ಗೆಯೇ ಮಾತನಾಡುತ್ತೀರಿ. ನಿಮಗೆಷ್ಟು ಧೈರ್ಯ?

ಮೂವತ್ತು ವರ್ಷಗಳಗಿಂದ ವಿಜ್ಞಾನವು ಸ್ಪಷ್ಟವಾಗಿ ಹೇಳುತ್ತಲಿದೆ. ಆದರೂ ನಿಮ್ಮ ಮುಖವನ್ನು ಬೇರೆಡೆ ತಿರುಗಿಸಲು ನಿಮಗೆಷ್ಟು ಧೈರ್ಯ? ಹಾಗೂ ಈ ಸಮಸ್ಯೆಯ ಪರಿಹಾರ ಮತ್ತು ಇದಕ್ಕೆ ಬೇಕಿರುವ ರಾಜಕೀಯ ಕಾಣಿಸಿಕೊಳ್ಳದೇ ಇದ್ದರೂ ಇಲ್ಲಿ ಬಂದು, ನಾವು ಮಾಡಬೇಕಾದದ್ದನ್ನು ಮಾಡುತ್ತಿದ್ದೇವೆ ಎಂದು ಹೇಳಲು ನಿಮಗೆಷ್ಟು ಧೈರ್ಯ?

ನಮ್ಮ ಮಾತುಗಳನ್ನು ಕೇಳಿಸಿಕೊಳ್ಳುತ್ತೀರಿ ಮತ್ತು ಇದರ ತುರ್ತನ್ನು ಅರ್ಥಮಾಡಿಕೊಳ್ಳುತ್ತೀರಿ ಎಂದು ನೀವು ಹೇಳುತ್ತೀರಿ. ಆದರೆ, ನಾನೆಷ್ಟೇ ಸಿಟ್ಟಿನಲ್ಲಿರಲಿ ಮತ್ತು ದುಃಖದಲ್ಲಿರಲಿ, ನಿಮ್ಮ ಈ ಮಾತುಗಳನ್ನು ನಂಬಲು ಸಾಧ್ಯವಿಲ್ಲ. ಏಕೆಂದರೆ, ಒಂದು ವೇಳೆ ನೀವು ಪರಿಸ್ಥಿತಿಯನ್ನು ನಿಜವಾಗಿಯೂ ಅರ್ಥಮಾಡಿಕೊಂಡು ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ವಿಫಲವಾಗುತ್ತಿದ್ದರೆ, ನೀವು ದುಷ್ಟರು ಎಂತಾಗುವುದು. ಹಾಗೂ ನಾನು ಇದನ್ನು ನಂಬಲು ತಯಾರಿಲ್ಲ.

ಹತ್ತು ವರ್ಷಗಳಲ್ಲಿ ಹೊರಸೂಸುವಿಕೆಯನ್ನು (ಎಮಿಷನ್ಸ್) ಅರ್ಧದಷ್ಟು ಕಡಿತಗೊಳಿಸುವ ಈ ಜನಪ್ರಿಯ ಪರಿಕಲ್ಪನೆ ಏನು ಮಾಡಬಲ್ಲದು ಗೊತ್ತೆ? ಇದು 1.5 ಡಿಗ್ರಿಗಿಂತ ಕಡಿಮೆ ಇರಲು ಕೇವಲ 50% ಅವಕಾಶವನ್ನು ನೀಡುತ್ತದೆ ಹಾಗೂ ಮನುಷ್ಯನ ನಿಯಂತ್ರಣವನ್ನು ಮೀರಿದ ಮತ್ತೇ ಬದಲಾಯಿಸಲಾಗದಂತಹ ಸರಣಿ ಪ್ರತಿಕ್ರಿಯೆಗಳನ್ನು ಪ್ರಾರಂಭಿಸುವ ಅಪಾಯ ಹೊಂದಿದೆ.

50% ನಿಮಗೆ ಒಪ್ಪಿಗೆ ಇರಬಹುದು. ಆದರೆ, ಈ ಸಂಖ್ಯೆಗಳು ನಿರ್ಣಾಯಕ ಹಂತಗಳನ್ನು (ಟಿಪಿಂಗ್ ಪಾಯಿಂಟ್ಸ್), ಹೆಚ್ಚಿನ ಫೀಡ್‍ಬ್ಯಾಕ್ ಲೂಪ್ಸ್, ವಾಯು ಮಾಲಿನ್ಯದಿಂದ ಕಾಣಿಸಿಕೊಳ್ಳದ ತಾಪಮಾನದ ಹೆಚ್ಚುವರಿ ಏರಿಕೆ ಅಥವಾ ಹವಾಮಾನದ ನ್ಯಾಯದ ಅಂಶಗಳನ್ನು ಹೊಂದಿಲ್ಲ. ಇದರೊಂದಿಗೆ, ಗಾಳಿಯಲ್ಲಿರುವ ಶತಕೋಟಿ ಟನ್‍ಗಳಷ್ಟಿರುವ ನಿಮ್ಮ ಕಾರ್ಬನ್ ಡೈಆಕ್ಸೈಡ್ ಅನ್ನು ನಮ್ಮ ಪೀಳಿಗೆಯ ಜನರು ಹೀರವವರು ಎನ್ನುವುದರ ಮೇಲೆ ಅವಲಂಬಿಸಿಲಾಗಿದೆ. ಈ ಗಾಳಿಯನ್ನು ಸೇವಿಸಲು ಬೇಕಾದ ತಂತ್ರಜ್ಞಾನದ ಅಭಿವೃದ್ಧಿಯೂ ಕಾಣಿಸಿಕೊಳ್ಳುತ್ತಿಲ್ಲ.

ಹಾಗಾಗಿ, ಈ 50% ನಮಗೆ ಒಪ್ಪಿಗೆಯಿಲ್ಲ – ಇದರ ಪರಿಣಾಮಗಳನ್ನು ಎದುರಿಸಬೇಕಾದ ನಮಗೆ ಒಪ್ಪಿಗೆಯಿಲ್ಲ.

ಜಾಗತಿಕ ತಾಪಮಾನದಲ್ಲಿ 1.5 ಡಿಗ್ರಿ ಹೆಚ್ಚಳಕ್ಕಿಂತ ಕೆಳಗಿರಬೇಕಾದ 67% ಅವಕಾಶವನ್ನು ಹೊಂದಬೇಕಾದರೆ, ಕ್ಲೈಮೇಟ್ ಚೇಂಜ್‍ನ ಅಂತತರಾಷ್ಟ್ರೀಯ ಪ್ಯಾನೆಲ್ ನೀಡಿದ ಅತಿ ಹೆಚ್ಚಿನ ಸಂಭವನೀಯತೆ – ಇಡೀ ವಿಶ್ವವು ಹೊರಸೂಸಲು 1ನೇ ಜನವರಿ 2018ರಂದು ಕಾರ್ಬನ್ ಡೈಆಕ್ಸೈಡ್ ನ 420 ಗಿಗಾಟನ್ ಹೊಂದಿತ್ತು. ಇಂದು ಆ ಸಂಖ್ಯಯೂ ಈಗಾಗಲೇ 350 ಗಿಗಾಟನ್‍ಗಳಗಿಂತ ಕಡಿಮೆಯಾಗಿದೆ.

ಕೆಲವು ತಾಂತ್ರಿಕ ಪರಿಹಾರಗಳಿಂದ ಮತ್ತು ‘ಎಂದಿನಂತೆ ನಡೆಯುವ ವ್ಯವಹಾರ’ದಿಂದ ಇದನ್ನು ಬಗೆಹರಿಸಬಹುದು ಎಂದು ನಟಿಸಲು ನಿಮಗೆಷ್ಟು ಧೈರ್ಯ? ಇಂದಿನ ಹೊರಸೂಸುವಿಕೆಯ ಲೆವೆಲ್ ನೋಡಿದರೆ, ಈಗ ಬಾಕಿ ಉಳಿದಿರುವ ಕಾರ್ಬನ್ ಡೈಆಕ್ಸೈಡ್ ಬಜೆಟ್ ಕೇವಲ ಎಂಟೂವರೆ ವರ್ಷಗಳಲ್ಲಿ ಮುಗಿದುಹೋಗುವುದು.

ಈ ಅಂಕಿ ಅಂಶಗಳಿಗೆ ಪೂರಕವಾಗಿ ಯಾವುದೇ ಪರಿಹಾರಗಳು ಅಥವಾ ಯೋಜನೆಗಳು ಇಂದು ಕಾಣಿಸಿಕೊಳ್ಳುವುದಿಲ್ಲ, ಏಕೆಂದರೆ, ಈ ಅಂಕಿಅಂಶಗಳು ತುಂಬಾ ಅನಾನುಕೂಲಕರವಾಗಿವೆ. ಹಾಗೂ ನೀವುಗಳು ಇದನ್ನು ಹೀಗೆಯೇ ಇದೆ ಎಂದು ಹೇಳಿಕೊಳ್ಳುವಷ್ಟು ಪ್ರಬುದ್ಧರಾಗಿಲ್ಲ.

ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು.

ಇದರಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಬಿಡುವುದಿಲ್ಲ. ಇಲ್ಲಿಯೇ, ಇದೇ ಸಮಯದಲ್ಲಿ ನಾವು ಗೆರೆಯನ್ನು ಎಳೆಯುತ್ತಿದ್ದೇವೆ. ಜಗತ್ತು ಎಚ್ಚೆತ್ತುಕೊಳ್ಳುತ್ತಿದೆ. ಬದಲಾವಣೆ ಬರುತ್ತಿದೆ, ನಿಮಗಿಷ್ಟವಾಗಲಿ ಆಗದೇ ಇರಲಿ ಬದಲಾವಣೆ ಬರುತ್ತಿದೆ…

ಧನ್ಯವಾದಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...