Homeಅಂತರಾಷ್ಟ್ರೀಯವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು.

- Advertisement -
- Advertisement -

ನಿಮ್ಮನ್ನು ಸತತವಾಗಿ ಗಮನಿಸುವೆ; ಇದುವೆ ನನ್ನ ಸಂದೇಶ : ಗ್ರೇಟಾ ತನ್ಬೆರ್ಗ್‌

ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ಇದು ತಪ್ಪು. ನಾನಿಲ್ಲಿ ಇರಬಾರದಾಗಿತ್ತು. ನಾನೀಗ ನನ್ನ ಶಾಲೆಯಲ್ಲಿ, ಸಾಗರದಾಚೆ ಇರಬೇಕಿತ್ತು. ಆದರೂ ನೀವು ನಮ್ಮ ಕಡೆ, ಯುವಜನರ ಕಡೆ ಬರುತ್ತೀರ, ನಿಮ್ಮ ಭರವಸೆ, ನಿರೀಕ್ಷೆಗಳನ್ನು ಹುಡುಕಿಕೊಂಡು. ನಿಮಗೆಷ್ಟು ಧೈರ್ಯ?

ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಕನಸುಗಳನ್ನು ಹಾಗೂ ನನ್ನ ಬಾಲ್ಯವನ್ನು ನನ್ನಿಂದ ಕದ್ದಿದ್ದೀರ. ಆದರೂ ನಾನು ಅದೃಷ್ಟವಂತೆ. ಆದರೆ ಜನರು ನರಳುತ್ತಿದ್ದಾರೆ. ಜನರು ಸಾಯುತ್ತಿದ್ದಾರೆ. ಪರಿಸರ ವ್ಯವಸ್ಥೆಯು ಸಂಪೂರ್ಣವಾಗಿ ನಾಶವಾಗುತ್ತಿದೆ. ಒಂದು ಸಾಮೂಹಿಕ ಅಳಿವಿನ ಪ್ರಾರಂಭದ ಘಟ್ಟದಲ್ಲಿದ್ದೇವೆ. ಹಾಗೂ ಇಂಥ ಸಮಯದಲ್ಲಿ ನೀವು ದುಡ್ಡು ಮತ್ತು ಆರ್ಥಿಕ ಬೆಳವಣಿಗೆಯ ಚೆಂದದ ಕಥೆಗಳ ಬಗ್ಗೆಯೇ ಮಾತನಾಡುತ್ತೀರಿ. ನಿಮಗೆಷ್ಟು ಧೈರ್ಯ?

ಮೂವತ್ತು ವರ್ಷಗಳಗಿಂದ ವಿಜ್ಞಾನವು ಸ್ಪಷ್ಟವಾಗಿ ಹೇಳುತ್ತಲಿದೆ. ಆದರೂ ನಿಮ್ಮ ಮುಖವನ್ನು ಬೇರೆಡೆ ತಿರುಗಿಸಲು ನಿಮಗೆಷ್ಟು ಧೈರ್ಯ? ಹಾಗೂ ಈ ಸಮಸ್ಯೆಯ ಪರಿಹಾರ ಮತ್ತು ಇದಕ್ಕೆ ಬೇಕಿರುವ ರಾಜಕೀಯ ಕಾಣಿಸಿಕೊಳ್ಳದೇ ಇದ್ದರೂ ಇಲ್ಲಿ ಬಂದು, ನಾವು ಮಾಡಬೇಕಾದದ್ದನ್ನು ಮಾಡುತ್ತಿದ್ದೇವೆ ಎಂದು ಹೇಳಲು ನಿಮಗೆಷ್ಟು ಧೈರ್ಯ?

ನಮ್ಮ ಮಾತುಗಳನ್ನು ಕೇಳಿಸಿಕೊಳ್ಳುತ್ತೀರಿ ಮತ್ತು ಇದರ ತುರ್ತನ್ನು ಅರ್ಥಮಾಡಿಕೊಳ್ಳುತ್ತೀರಿ ಎಂದು ನೀವು ಹೇಳುತ್ತೀರಿ. ಆದರೆ, ನಾನೆಷ್ಟೇ ಸಿಟ್ಟಿನಲ್ಲಿರಲಿ ಮತ್ತು ದುಃಖದಲ್ಲಿರಲಿ, ನಿಮ್ಮ ಈ ಮಾತುಗಳನ್ನು ನಂಬಲು ಸಾಧ್ಯವಿಲ್ಲ. ಏಕೆಂದರೆ, ಒಂದು ವೇಳೆ ನೀವು ಪರಿಸ್ಥಿತಿಯನ್ನು ನಿಜವಾಗಿಯೂ ಅರ್ಥಮಾಡಿಕೊಂಡು ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ವಿಫಲವಾಗುತ್ತಿದ್ದರೆ, ನೀವು ದುಷ್ಟರು ಎಂತಾಗುವುದು. ಹಾಗೂ ನಾನು ಇದನ್ನು ನಂಬಲು ತಯಾರಿಲ್ಲ.

ಹತ್ತು ವರ್ಷಗಳಲ್ಲಿ ಹೊರಸೂಸುವಿಕೆಯನ್ನು (ಎಮಿಷನ್ಸ್) ಅರ್ಧದಷ್ಟು ಕಡಿತಗೊಳಿಸುವ ಈ ಜನಪ್ರಿಯ ಪರಿಕಲ್ಪನೆ ಏನು ಮಾಡಬಲ್ಲದು ಗೊತ್ತೆ? ಇದು 1.5 ಡಿಗ್ರಿಗಿಂತ ಕಡಿಮೆ ಇರಲು ಕೇವಲ 50% ಅವಕಾಶವನ್ನು ನೀಡುತ್ತದೆ ಹಾಗೂ ಮನುಷ್ಯನ ನಿಯಂತ್ರಣವನ್ನು ಮೀರಿದ ಮತ್ತೇ ಬದಲಾಯಿಸಲಾಗದಂತಹ ಸರಣಿ ಪ್ರತಿಕ್ರಿಯೆಗಳನ್ನು ಪ್ರಾರಂಭಿಸುವ ಅಪಾಯ ಹೊಂದಿದೆ.

50% ನಿಮಗೆ ಒಪ್ಪಿಗೆ ಇರಬಹುದು. ಆದರೆ, ಈ ಸಂಖ್ಯೆಗಳು ನಿರ್ಣಾಯಕ ಹಂತಗಳನ್ನು (ಟಿಪಿಂಗ್ ಪಾಯಿಂಟ್ಸ್), ಹೆಚ್ಚಿನ ಫೀಡ್‍ಬ್ಯಾಕ್ ಲೂಪ್ಸ್, ವಾಯು ಮಾಲಿನ್ಯದಿಂದ ಕಾಣಿಸಿಕೊಳ್ಳದ ತಾಪಮಾನದ ಹೆಚ್ಚುವರಿ ಏರಿಕೆ ಅಥವಾ ಹವಾಮಾನದ ನ್ಯಾಯದ ಅಂಶಗಳನ್ನು ಹೊಂದಿಲ್ಲ. ಇದರೊಂದಿಗೆ, ಗಾಳಿಯಲ್ಲಿರುವ ಶತಕೋಟಿ ಟನ್‍ಗಳಷ್ಟಿರುವ ನಿಮ್ಮ ಕಾರ್ಬನ್ ಡೈಆಕ್ಸೈಡ್ ಅನ್ನು ನಮ್ಮ ಪೀಳಿಗೆಯ ಜನರು ಹೀರವವರು ಎನ್ನುವುದರ ಮೇಲೆ ಅವಲಂಬಿಸಿಲಾಗಿದೆ. ಈ ಗಾಳಿಯನ್ನು ಸೇವಿಸಲು ಬೇಕಾದ ತಂತ್ರಜ್ಞಾನದ ಅಭಿವೃದ್ಧಿಯೂ ಕಾಣಿಸಿಕೊಳ್ಳುತ್ತಿಲ್ಲ.

ಹಾಗಾಗಿ, ಈ 50% ನಮಗೆ ಒಪ್ಪಿಗೆಯಿಲ್ಲ – ಇದರ ಪರಿಣಾಮಗಳನ್ನು ಎದುರಿಸಬೇಕಾದ ನಮಗೆ ಒಪ್ಪಿಗೆಯಿಲ್ಲ.

ಜಾಗತಿಕ ತಾಪಮಾನದಲ್ಲಿ 1.5 ಡಿಗ್ರಿ ಹೆಚ್ಚಳಕ್ಕಿಂತ ಕೆಳಗಿರಬೇಕಾದ 67% ಅವಕಾಶವನ್ನು ಹೊಂದಬೇಕಾದರೆ, ಕ್ಲೈಮೇಟ್ ಚೇಂಜ್‍ನ ಅಂತತರಾಷ್ಟ್ರೀಯ ಪ್ಯಾನೆಲ್ ನೀಡಿದ ಅತಿ ಹೆಚ್ಚಿನ ಸಂಭವನೀಯತೆ – ಇಡೀ ವಿಶ್ವವು ಹೊರಸೂಸಲು 1ನೇ ಜನವರಿ 2018ರಂದು ಕಾರ್ಬನ್ ಡೈಆಕ್ಸೈಡ್ ನ 420 ಗಿಗಾಟನ್ ಹೊಂದಿತ್ತು. ಇಂದು ಆ ಸಂಖ್ಯಯೂ ಈಗಾಗಲೇ 350 ಗಿಗಾಟನ್‍ಗಳಗಿಂತ ಕಡಿಮೆಯಾಗಿದೆ.

ಕೆಲವು ತಾಂತ್ರಿಕ ಪರಿಹಾರಗಳಿಂದ ಮತ್ತು ‘ಎಂದಿನಂತೆ ನಡೆಯುವ ವ್ಯವಹಾರ’ದಿಂದ ಇದನ್ನು ಬಗೆಹರಿಸಬಹುದು ಎಂದು ನಟಿಸಲು ನಿಮಗೆಷ್ಟು ಧೈರ್ಯ? ಇಂದಿನ ಹೊರಸೂಸುವಿಕೆಯ ಲೆವೆಲ್ ನೋಡಿದರೆ, ಈಗ ಬಾಕಿ ಉಳಿದಿರುವ ಕಾರ್ಬನ್ ಡೈಆಕ್ಸೈಡ್ ಬಜೆಟ್ ಕೇವಲ ಎಂಟೂವರೆ ವರ್ಷಗಳಲ್ಲಿ ಮುಗಿದುಹೋಗುವುದು.

ಈ ಅಂಕಿ ಅಂಶಗಳಿಗೆ ಪೂರಕವಾಗಿ ಯಾವುದೇ ಪರಿಹಾರಗಳು ಅಥವಾ ಯೋಜನೆಗಳು ಇಂದು ಕಾಣಿಸಿಕೊಳ್ಳುವುದಿಲ್ಲ, ಏಕೆಂದರೆ, ಈ ಅಂಕಿಅಂಶಗಳು ತುಂಬಾ ಅನಾನುಕೂಲಕರವಾಗಿವೆ. ಹಾಗೂ ನೀವುಗಳು ಇದನ್ನು ಹೀಗೆಯೇ ಇದೆ ಎಂದು ಹೇಳಿಕೊಳ್ಳುವಷ್ಟು ಪ್ರಬುದ್ಧರಾಗಿಲ್ಲ.

ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು.

ಇದರಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಬಿಡುವುದಿಲ್ಲ. ಇಲ್ಲಿಯೇ, ಇದೇ ಸಮಯದಲ್ಲಿ ನಾವು ಗೆರೆಯನ್ನು ಎಳೆಯುತ್ತಿದ್ದೇವೆ. ಜಗತ್ತು ಎಚ್ಚೆತ್ತುಕೊಳ್ಳುತ್ತಿದೆ. ಬದಲಾವಣೆ ಬರುತ್ತಿದೆ, ನಿಮಗಿಷ್ಟವಾಗಲಿ ಆಗದೇ ಇರಲಿ ಬದಲಾವಣೆ ಬರುತ್ತಿದೆ…

ಧನ್ಯವಾದಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...