Homeಅಂತರಾಷ್ಟ್ರೀಯವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು.

- Advertisement -
- Advertisement -

ನಿಮ್ಮನ್ನು ಸತತವಾಗಿ ಗಮನಿಸುವೆ; ಇದುವೆ ನನ್ನ ಸಂದೇಶ : ಗ್ರೇಟಾ ತನ್ಬೆರ್ಗ್‌

ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ಇದು ತಪ್ಪು. ನಾನಿಲ್ಲಿ ಇರಬಾರದಾಗಿತ್ತು. ನಾನೀಗ ನನ್ನ ಶಾಲೆಯಲ್ಲಿ, ಸಾಗರದಾಚೆ ಇರಬೇಕಿತ್ತು. ಆದರೂ ನೀವು ನಮ್ಮ ಕಡೆ, ಯುವಜನರ ಕಡೆ ಬರುತ್ತೀರ, ನಿಮ್ಮ ಭರವಸೆ, ನಿರೀಕ್ಷೆಗಳನ್ನು ಹುಡುಕಿಕೊಂಡು. ನಿಮಗೆಷ್ಟು ಧೈರ್ಯ?

ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಕನಸುಗಳನ್ನು ಹಾಗೂ ನನ್ನ ಬಾಲ್ಯವನ್ನು ನನ್ನಿಂದ ಕದ್ದಿದ್ದೀರ. ಆದರೂ ನಾನು ಅದೃಷ್ಟವಂತೆ. ಆದರೆ ಜನರು ನರಳುತ್ತಿದ್ದಾರೆ. ಜನರು ಸಾಯುತ್ತಿದ್ದಾರೆ. ಪರಿಸರ ವ್ಯವಸ್ಥೆಯು ಸಂಪೂರ್ಣವಾಗಿ ನಾಶವಾಗುತ್ತಿದೆ. ಒಂದು ಸಾಮೂಹಿಕ ಅಳಿವಿನ ಪ್ರಾರಂಭದ ಘಟ್ಟದಲ್ಲಿದ್ದೇವೆ. ಹಾಗೂ ಇಂಥ ಸಮಯದಲ್ಲಿ ನೀವು ದುಡ್ಡು ಮತ್ತು ಆರ್ಥಿಕ ಬೆಳವಣಿಗೆಯ ಚೆಂದದ ಕಥೆಗಳ ಬಗ್ಗೆಯೇ ಮಾತನಾಡುತ್ತೀರಿ. ನಿಮಗೆಷ್ಟು ಧೈರ್ಯ?

ಮೂವತ್ತು ವರ್ಷಗಳಗಿಂದ ವಿಜ್ಞಾನವು ಸ್ಪಷ್ಟವಾಗಿ ಹೇಳುತ್ತಲಿದೆ. ಆದರೂ ನಿಮ್ಮ ಮುಖವನ್ನು ಬೇರೆಡೆ ತಿರುಗಿಸಲು ನಿಮಗೆಷ್ಟು ಧೈರ್ಯ? ಹಾಗೂ ಈ ಸಮಸ್ಯೆಯ ಪರಿಹಾರ ಮತ್ತು ಇದಕ್ಕೆ ಬೇಕಿರುವ ರಾಜಕೀಯ ಕಾಣಿಸಿಕೊಳ್ಳದೇ ಇದ್ದರೂ ಇಲ್ಲಿ ಬಂದು, ನಾವು ಮಾಡಬೇಕಾದದ್ದನ್ನು ಮಾಡುತ್ತಿದ್ದೇವೆ ಎಂದು ಹೇಳಲು ನಿಮಗೆಷ್ಟು ಧೈರ್ಯ?

ನಮ್ಮ ಮಾತುಗಳನ್ನು ಕೇಳಿಸಿಕೊಳ್ಳುತ್ತೀರಿ ಮತ್ತು ಇದರ ತುರ್ತನ್ನು ಅರ್ಥಮಾಡಿಕೊಳ್ಳುತ್ತೀರಿ ಎಂದು ನೀವು ಹೇಳುತ್ತೀರಿ. ಆದರೆ, ನಾನೆಷ್ಟೇ ಸಿಟ್ಟಿನಲ್ಲಿರಲಿ ಮತ್ತು ದುಃಖದಲ್ಲಿರಲಿ, ನಿಮ್ಮ ಈ ಮಾತುಗಳನ್ನು ನಂಬಲು ಸಾಧ್ಯವಿಲ್ಲ. ಏಕೆಂದರೆ, ಒಂದು ವೇಳೆ ನೀವು ಪರಿಸ್ಥಿತಿಯನ್ನು ನಿಜವಾಗಿಯೂ ಅರ್ಥಮಾಡಿಕೊಂಡು ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ವಿಫಲವಾಗುತ್ತಿದ್ದರೆ, ನೀವು ದುಷ್ಟರು ಎಂತಾಗುವುದು. ಹಾಗೂ ನಾನು ಇದನ್ನು ನಂಬಲು ತಯಾರಿಲ್ಲ.

ಹತ್ತು ವರ್ಷಗಳಲ್ಲಿ ಹೊರಸೂಸುವಿಕೆಯನ್ನು (ಎಮಿಷನ್ಸ್) ಅರ್ಧದಷ್ಟು ಕಡಿತಗೊಳಿಸುವ ಈ ಜನಪ್ರಿಯ ಪರಿಕಲ್ಪನೆ ಏನು ಮಾಡಬಲ್ಲದು ಗೊತ್ತೆ? ಇದು 1.5 ಡಿಗ್ರಿಗಿಂತ ಕಡಿಮೆ ಇರಲು ಕೇವಲ 50% ಅವಕಾಶವನ್ನು ನೀಡುತ್ತದೆ ಹಾಗೂ ಮನುಷ್ಯನ ನಿಯಂತ್ರಣವನ್ನು ಮೀರಿದ ಮತ್ತೇ ಬದಲಾಯಿಸಲಾಗದಂತಹ ಸರಣಿ ಪ್ರತಿಕ್ರಿಯೆಗಳನ್ನು ಪ್ರಾರಂಭಿಸುವ ಅಪಾಯ ಹೊಂದಿದೆ.

50% ನಿಮಗೆ ಒಪ್ಪಿಗೆ ಇರಬಹುದು. ಆದರೆ, ಈ ಸಂಖ್ಯೆಗಳು ನಿರ್ಣಾಯಕ ಹಂತಗಳನ್ನು (ಟಿಪಿಂಗ್ ಪಾಯಿಂಟ್ಸ್), ಹೆಚ್ಚಿನ ಫೀಡ್‍ಬ್ಯಾಕ್ ಲೂಪ್ಸ್, ವಾಯು ಮಾಲಿನ್ಯದಿಂದ ಕಾಣಿಸಿಕೊಳ್ಳದ ತಾಪಮಾನದ ಹೆಚ್ಚುವರಿ ಏರಿಕೆ ಅಥವಾ ಹವಾಮಾನದ ನ್ಯಾಯದ ಅಂಶಗಳನ್ನು ಹೊಂದಿಲ್ಲ. ಇದರೊಂದಿಗೆ, ಗಾಳಿಯಲ್ಲಿರುವ ಶತಕೋಟಿ ಟನ್‍ಗಳಷ್ಟಿರುವ ನಿಮ್ಮ ಕಾರ್ಬನ್ ಡೈಆಕ್ಸೈಡ್ ಅನ್ನು ನಮ್ಮ ಪೀಳಿಗೆಯ ಜನರು ಹೀರವವರು ಎನ್ನುವುದರ ಮೇಲೆ ಅವಲಂಬಿಸಿಲಾಗಿದೆ. ಈ ಗಾಳಿಯನ್ನು ಸೇವಿಸಲು ಬೇಕಾದ ತಂತ್ರಜ್ಞಾನದ ಅಭಿವೃದ್ಧಿಯೂ ಕಾಣಿಸಿಕೊಳ್ಳುತ್ತಿಲ್ಲ.

ಹಾಗಾಗಿ, ಈ 50% ನಮಗೆ ಒಪ್ಪಿಗೆಯಿಲ್ಲ – ಇದರ ಪರಿಣಾಮಗಳನ್ನು ಎದುರಿಸಬೇಕಾದ ನಮಗೆ ಒಪ್ಪಿಗೆಯಿಲ್ಲ.

ಜಾಗತಿಕ ತಾಪಮಾನದಲ್ಲಿ 1.5 ಡಿಗ್ರಿ ಹೆಚ್ಚಳಕ್ಕಿಂತ ಕೆಳಗಿರಬೇಕಾದ 67% ಅವಕಾಶವನ್ನು ಹೊಂದಬೇಕಾದರೆ, ಕ್ಲೈಮೇಟ್ ಚೇಂಜ್‍ನ ಅಂತತರಾಷ್ಟ್ರೀಯ ಪ್ಯಾನೆಲ್ ನೀಡಿದ ಅತಿ ಹೆಚ್ಚಿನ ಸಂಭವನೀಯತೆ – ಇಡೀ ವಿಶ್ವವು ಹೊರಸೂಸಲು 1ನೇ ಜನವರಿ 2018ರಂದು ಕಾರ್ಬನ್ ಡೈಆಕ್ಸೈಡ್ ನ 420 ಗಿಗಾಟನ್ ಹೊಂದಿತ್ತು. ಇಂದು ಆ ಸಂಖ್ಯಯೂ ಈಗಾಗಲೇ 350 ಗಿಗಾಟನ್‍ಗಳಗಿಂತ ಕಡಿಮೆಯಾಗಿದೆ.

ಕೆಲವು ತಾಂತ್ರಿಕ ಪರಿಹಾರಗಳಿಂದ ಮತ್ತು ‘ಎಂದಿನಂತೆ ನಡೆಯುವ ವ್ಯವಹಾರ’ದಿಂದ ಇದನ್ನು ಬಗೆಹರಿಸಬಹುದು ಎಂದು ನಟಿಸಲು ನಿಮಗೆಷ್ಟು ಧೈರ್ಯ? ಇಂದಿನ ಹೊರಸೂಸುವಿಕೆಯ ಲೆವೆಲ್ ನೋಡಿದರೆ, ಈಗ ಬಾಕಿ ಉಳಿದಿರುವ ಕಾರ್ಬನ್ ಡೈಆಕ್ಸೈಡ್ ಬಜೆಟ್ ಕೇವಲ ಎಂಟೂವರೆ ವರ್ಷಗಳಲ್ಲಿ ಮುಗಿದುಹೋಗುವುದು.

ಈ ಅಂಕಿ ಅಂಶಗಳಿಗೆ ಪೂರಕವಾಗಿ ಯಾವುದೇ ಪರಿಹಾರಗಳು ಅಥವಾ ಯೋಜನೆಗಳು ಇಂದು ಕಾಣಿಸಿಕೊಳ್ಳುವುದಿಲ್ಲ, ಏಕೆಂದರೆ, ಈ ಅಂಕಿಅಂಶಗಳು ತುಂಬಾ ಅನಾನುಕೂಲಕರವಾಗಿವೆ. ಹಾಗೂ ನೀವುಗಳು ಇದನ್ನು ಹೀಗೆಯೇ ಇದೆ ಎಂದು ಹೇಳಿಕೊಳ್ಳುವಷ್ಟು ಪ್ರಬುದ್ಧರಾಗಿಲ್ಲ.

ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು.

ಇದರಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಬಿಡುವುದಿಲ್ಲ. ಇಲ್ಲಿಯೇ, ಇದೇ ಸಮಯದಲ್ಲಿ ನಾವು ಗೆರೆಯನ್ನು ಎಳೆಯುತ್ತಿದ್ದೇವೆ. ಜಗತ್ತು ಎಚ್ಚೆತ್ತುಕೊಳ್ಳುತ್ತಿದೆ. ಬದಲಾವಣೆ ಬರುತ್ತಿದೆ, ನಿಮಗಿಷ್ಟವಾಗಲಿ ಆಗದೇ ಇರಲಿ ಬದಲಾವಣೆ ಬರುತ್ತಿದೆ…

ಧನ್ಯವಾದಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...