Homeಅಂತರಾಷ್ಟ್ರೀಯರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ ಹಾಗೂ ಖ್ಯಾತ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಬೆಂಬಲ ಸೂಚಿಸಿದ್ದಾರೆ.

ರೈತರ ಹೋರಾಟಕ ಕುರಿತು ಸಿಎನ್‌ಎನ್‌ ಲೇಖನವನ್ನು ಟ್ವೀಟ್ ಮಾಡಿರುವ ಪಾಪ್ ಗಾಯಕಿ ರಿಹಾನ್ನಾ, “ನಾವ್ಯಾಕೆ ಈ ವಿಷಯದ ಕುರಿತು ಚರ್ಚಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಜನವರಿ 26 ರ ಗಣರಾಜ್ಯೋತ್ಸವದಂದು ರೈತರು ಟ್ರಾಕ್ಟ್‌‌ರ್‌ ಪರೇಡ್‌ ನಡೆಸಿದ ದಿನ ಅಹಿತಕರ ಘಟನೆ ನಡೆದಿತ್ತು. ಇದರ ನಂತರ ಹೋರಾಟದ ಸ್ಥಳದಲ್ಲಿ ಇಂಟರ್‌ನೆಟ್ ಸೇವೆಯನ್ನು ಸರ್ಕಾರ ತಡೆಹಿಡಿದಿತ್ತು. ಇದರ ಬಗ್ಗೆ ಸಿಎನ್‌ಎನ್ ವರದಿ ಮಾಡಿತ್ತು.

ರಿಹಾನ್ನಾ ಟ್ವೀಟ್ ಮಾಡಿದ ಬೆನ್ನಿಗೆ ಕಿರಿಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಕೂಡಾ ಅದೇ ಲೇಖನವನ್ನು ಟ್ವೀಟ್ ಮಾಡಿದ್ದು, “ಭಾರತೀಯ ರೈತರ ಹೋರಾಟಕ್ಕೆ ನಮ್ಮ ಬೆಂಬಲ” ಎಂದು ಬರೆದಿದ್ದಾರೆ.

ಜೊತೆಗೆ ಅಮೆರಿಕದ ನಟಿ ಅಮಂಡಾ ಸೆರ್ನಿ ಕೂಡಾ ಭಾರತೀಯ ರೈತರಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ರೈತ ಮಹಿಳೆಯರ ಮೂರ್ತಿಯೊಂದರ ಚಿತ್ರವೊಂದನ್ನು ತನ್ನ ಇನ್ಸ್ಟಾಗ್ರಾಮ್ ಮೂಲಕ ಪೋಸ್ಟ್‌ ಮಾಡಿರುವ ಅವರು, “ಜಗತ್ತೆ ನೋಡುತ್ತಿದೆ” ಎಂದು ಬರೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ, “ಜಗತ್ತೆ ನೋಡುತ್ತಿದೆ. ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ನೀವು ಭಾರತೀಯ ಅಥವಾ ಪಂಜಾಬಿ ಅಥವಾ ದಕ್ಷಿಣ ಏಷ್ಯಾದವರೆ ಆಗಿರಬೇಕಾಗಿಲ್ಲ. ನಿಮಗೆ ಮಾನವೀಯತೆ ಬಗ್ಗೆ ಕಾಳಜಿ ಇದ್ದರೆ ಸಾಕು. ವಾಕ್ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಮಾನವ ಮತ್ತು ನಾಗರಿಕ ಹಕ್ಕುಗಳು, ಕಾರ್ಮಿಕರಿಗೆ ಸಮಾನತೆ ಮತ್ತು ಘನತೆಯನ್ನು ಯಾವಾಗಲೂ ಕೇಳುತ್ತಲೆ ಇರಿ” ಎಂದು ಬರೆದಿದ್ದಾರೆ.

ರಿಹಾನ್ನಾ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಪರ ವಿರೋಧ ಚರ್ಚೆಗೂ ಕಾರಣವಾಗಿದೆ. ಕೆಲವರು ಇದು ಭಾತರದ ಆಂತರಿಕ ವಿಷಯ ಎಂದು ಹೇಳಿದರೆ, ಇನ್ನೂ ಕೆಲವರು ಇದು ಅಂತರಾಷ್ಟ್ರೀಯ ವಿಷಯ ಎಂದು ಸಮರ್ಥನೆ ಮಾಡಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ ಹೇಳಿದ್ದೇನು?

ಪ್ರಣವ್ ಮಹಾಜನ ಎಂಬ ಪೊಲೀಸ್ ಅಧಿಕಾರಿ, “ಭಾರತೀಯರಿಗೆ ಇದರ ಬಗ್ಗೆ ಮಾತನಾಡಲು ಹಕ್ಕಿದೆ ಯಾಕೆಂದರೆ ಅದು ನಮ್ಮ ವಿಷಯ, ನಮ್ಮ ರಾಷ್ಟ್ರದ ವಿಷಯ. ಸರ್ಕಾರವನ್ನು ಟೀಕಿಸಲು ಭಾರತೀಯರಿಗೆ ಎಲ್ಲ ಹಕ್ಕಿದೆ ಏಕೆಂದರೆ ಅದು ನಮ್ಮ ಸರ್ಕಾರ. ಆದರೆ ಎಂಎಸ್ಪಿಯ ಪೂರ್ಣ ರೂಪವನ್ನು ಸಹ ತಿಳಿದಿಲ್ಲದ ಜನರಿಗೆ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸುವ ಹಕ್ಕಿಲ್ಲ” ಎಂದು ಹೇಳಿದ್ದಾರೆ.

ಪ್ರಣವ್ ಟ್ವೀಟ್‌ಗೆ ಉತ್ತರಿಸಿರುವ ಸುಪ್ರೀಂಕೋರ್ಟ್ ವಕೀಲೆ ಕರುಣಾ ನಂದಿ, “ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ಪತ್ರಕರ್ತರ ವಿರುದ್ದ ಕಾನೂನು ಕ್ರಮಗಳು ಎಂಎಸ್‌ಪಿ ಕುರಿತ ಚರ್ಚೆಗಳನ್ನೂ ಮೀರಿವೆ. ಕೇಂದ್ರ ಸರ್ಕಾರವು ಜಾಗತಿಕ ಘೋಷಣೆಯಾದ ಮಾನವ ಹಕ್ಕುಗಳನ್ನು ಮತ್ತು ಐಸಿಸಿಪಿಆರ್‌‌ನ 19 ನೇ ವಿಧಿಯನ್ನು ಉಲ್ಲಂಘಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

ಮತ್ತೊಬ್ಬ ಐಪಿಎಸ್ ಅಧಿಕಾರಿಯಾದ ರೂಪಿನ್ ಶರ್ಮಾ, “ಈ ವಿಷಯದಲ್ಲಿ ವಿದೇಶಿಯರ ಹಸ್ತಕ್ಷೇಪ ಅಗತ್ಯವಿಲ್ಲ. ಭಾರತ ಮತ್ತು ಅದರ ರೈತರು ನಿಮ್ಮ ಬೆಂಬಲವಿಲ್ಲದೆ ಇವುಗಳನ್ನು ಮಾಡಬಹುದು. ನೀವು ಪರಿಸರ ಹೋರಾಟದಲ್ಲಷ್ಟೇ ನಿಮ್ಮ ಗಮನ ಕೇಂದ್ರೀಕರಿಸಿ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್‌ಗೆ ಹೇಳಿದ್ದಾರೆ.

ಇದಕ್ಕೆ ಉತ್ತರಿಸಿರುವ ಇಶಾನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, “ವಿದೇಶಿಯರು ನಮ್ಮ ಆಂತರಿಕ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಬಾರದು ಆದರೆ ನಮ್ಮ ಗೌರವಾನ್ವಿತ ಪ್ರಧಾನಮಂತ್ರಿಯವರ ‘ಅಬ್ ಕಿ ಬಾರ್ ಟ್ರಂಪ್ ಸರ್ಕಾರ್’ ಘೋಷಣೆಗೆ ಏನಾಯಿತು?. ಅವರು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರಲಿಲ್ಲವೇ? ಅಲ್ಲದೆ ಸರ್ಕಾರವು ಮುಳ್ಳುಬೇಲಿಗಳನ್ನು ಸ್ಥಾಪಿಸುವ ಮೂಲಕ ಸಿಂಘು ಗಡಿಯನ್ನು ಯುದ್ಧ ವಲಯವನ್ನಾಗಿ ಯಾಕೆ ಮಾಡಿದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ಭಾರತದ ಆಂತರಿಕ ವಿಷಯದ ಬಗ್ಗೆ ವಿದೇಶಿಗರು ಪ್ರತಿಕ್ರಿಯಿಸುವುದು ನಿಮಗೆ ಒಪ್ಪಿಗೆಯೆ, ಭಾರತದ ಆಂತರಿಕ ವಿಷಯಗಳಲ್ಲಿ ಬಾಹ್ಯ ಶಕ್ತಿಗಳು ಹಸ್ತಕ್ಷೇಪ ಮಾಡುವುದು ಸರಿಯಾಗಿದೆಯೆ, ಒಬ್ಬ ವಕೀಲೆ ಆಗಿ ಇದನ್ನು ನೀವು ಒಪ್ಪುತೀರಾ ಎಂಬ ಪ್ರಶ್ನೆಗೆ ಕರುಣಾ ಅವರು, “ವಕೀಲೆಯಾಗಿ ಮತ್ತು ಒಬ್ಬ ಮನುಷ್ಯಳಾಗಿ, ಕೆಲವು ಹಕ್ಕುಗಳು ಸಾರ್ವತ್ರಿಕವೆಂದು ನಾನು ನಂಬುತ್ತೇನೆ. ಅಮೆರಿಕಾದಲ್ಲಿ ಒಬ್ಬ ಕಪ್ಪು ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಾಗುತ್ತಿದ್ದರೆ ಅಥವಾ ರುವಾಂಡಾದಲ್ಲಿ ನರಮೇಧ ನಡೆದರೆ ಖಂಡಿಸಬಾರದೆ” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ನೀಡುತ್ತಿರುವ ಕಿರುಕುಳ ನಿಲ್ಲಿಸುವವರೆಗೆ ಯಾವುದೇ ಮಾತುಕತೆಯಿಲ್ಲ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...