Homeಅಂತರಾಷ್ಟ್ರೀಯರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ ಹಾಗೂ ಖ್ಯಾತ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಬೆಂಬಲ ಸೂಚಿಸಿದ್ದಾರೆ.

ರೈತರ ಹೋರಾಟಕ ಕುರಿತು ಸಿಎನ್‌ಎನ್‌ ಲೇಖನವನ್ನು ಟ್ವೀಟ್ ಮಾಡಿರುವ ಪಾಪ್ ಗಾಯಕಿ ರಿಹಾನ್ನಾ, “ನಾವ್ಯಾಕೆ ಈ ವಿಷಯದ ಕುರಿತು ಚರ್ಚಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಜನವರಿ 26 ರ ಗಣರಾಜ್ಯೋತ್ಸವದಂದು ರೈತರು ಟ್ರಾಕ್ಟ್‌‌ರ್‌ ಪರೇಡ್‌ ನಡೆಸಿದ ದಿನ ಅಹಿತಕರ ಘಟನೆ ನಡೆದಿತ್ತು. ಇದರ ನಂತರ ಹೋರಾಟದ ಸ್ಥಳದಲ್ಲಿ ಇಂಟರ್‌ನೆಟ್ ಸೇವೆಯನ್ನು ಸರ್ಕಾರ ತಡೆಹಿಡಿದಿತ್ತು. ಇದರ ಬಗ್ಗೆ ಸಿಎನ್‌ಎನ್ ವರದಿ ಮಾಡಿತ್ತು.

ರಿಹಾನ್ನಾ ಟ್ವೀಟ್ ಮಾಡಿದ ಬೆನ್ನಿಗೆ ಕಿರಿಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಕೂಡಾ ಅದೇ ಲೇಖನವನ್ನು ಟ್ವೀಟ್ ಮಾಡಿದ್ದು, “ಭಾರತೀಯ ರೈತರ ಹೋರಾಟಕ್ಕೆ ನಮ್ಮ ಬೆಂಬಲ” ಎಂದು ಬರೆದಿದ್ದಾರೆ.

ಜೊತೆಗೆ ಅಮೆರಿಕದ ನಟಿ ಅಮಂಡಾ ಸೆರ್ನಿ ಕೂಡಾ ಭಾರತೀಯ ರೈತರಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ರೈತ ಮಹಿಳೆಯರ ಮೂರ್ತಿಯೊಂದರ ಚಿತ್ರವೊಂದನ್ನು ತನ್ನ ಇನ್ಸ್ಟಾಗ್ರಾಮ್ ಮೂಲಕ ಪೋಸ್ಟ್‌ ಮಾಡಿರುವ ಅವರು, “ಜಗತ್ತೆ ನೋಡುತ್ತಿದೆ” ಎಂದು ಬರೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ, “ಜಗತ್ತೆ ನೋಡುತ್ತಿದೆ. ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ನೀವು ಭಾರತೀಯ ಅಥವಾ ಪಂಜಾಬಿ ಅಥವಾ ದಕ್ಷಿಣ ಏಷ್ಯಾದವರೆ ಆಗಿರಬೇಕಾಗಿಲ್ಲ. ನಿಮಗೆ ಮಾನವೀಯತೆ ಬಗ್ಗೆ ಕಾಳಜಿ ಇದ್ದರೆ ಸಾಕು. ವಾಕ್ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಮಾನವ ಮತ್ತು ನಾಗರಿಕ ಹಕ್ಕುಗಳು, ಕಾರ್ಮಿಕರಿಗೆ ಸಮಾನತೆ ಮತ್ತು ಘನತೆಯನ್ನು ಯಾವಾಗಲೂ ಕೇಳುತ್ತಲೆ ಇರಿ” ಎಂದು ಬರೆದಿದ್ದಾರೆ.

ರಿಹಾನ್ನಾ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಪರ ವಿರೋಧ ಚರ್ಚೆಗೂ ಕಾರಣವಾಗಿದೆ. ಕೆಲವರು ಇದು ಭಾತರದ ಆಂತರಿಕ ವಿಷಯ ಎಂದು ಹೇಳಿದರೆ, ಇನ್ನೂ ಕೆಲವರು ಇದು ಅಂತರಾಷ್ಟ್ರೀಯ ವಿಷಯ ಎಂದು ಸಮರ್ಥನೆ ಮಾಡಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ ಹೇಳಿದ್ದೇನು?

ಪ್ರಣವ್ ಮಹಾಜನ ಎಂಬ ಪೊಲೀಸ್ ಅಧಿಕಾರಿ, “ಭಾರತೀಯರಿಗೆ ಇದರ ಬಗ್ಗೆ ಮಾತನಾಡಲು ಹಕ್ಕಿದೆ ಯಾಕೆಂದರೆ ಅದು ನಮ್ಮ ವಿಷಯ, ನಮ್ಮ ರಾಷ್ಟ್ರದ ವಿಷಯ. ಸರ್ಕಾರವನ್ನು ಟೀಕಿಸಲು ಭಾರತೀಯರಿಗೆ ಎಲ್ಲ ಹಕ್ಕಿದೆ ಏಕೆಂದರೆ ಅದು ನಮ್ಮ ಸರ್ಕಾರ. ಆದರೆ ಎಂಎಸ್ಪಿಯ ಪೂರ್ಣ ರೂಪವನ್ನು ಸಹ ತಿಳಿದಿಲ್ಲದ ಜನರಿಗೆ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸುವ ಹಕ್ಕಿಲ್ಲ” ಎಂದು ಹೇಳಿದ್ದಾರೆ.

ಪ್ರಣವ್ ಟ್ವೀಟ್‌ಗೆ ಉತ್ತರಿಸಿರುವ ಸುಪ್ರೀಂಕೋರ್ಟ್ ವಕೀಲೆ ಕರುಣಾ ನಂದಿ, “ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ಪತ್ರಕರ್ತರ ವಿರುದ್ದ ಕಾನೂನು ಕ್ರಮಗಳು ಎಂಎಸ್‌ಪಿ ಕುರಿತ ಚರ್ಚೆಗಳನ್ನೂ ಮೀರಿವೆ. ಕೇಂದ್ರ ಸರ್ಕಾರವು ಜಾಗತಿಕ ಘೋಷಣೆಯಾದ ಮಾನವ ಹಕ್ಕುಗಳನ್ನು ಮತ್ತು ಐಸಿಸಿಪಿಆರ್‌‌ನ 19 ನೇ ವಿಧಿಯನ್ನು ಉಲ್ಲಂಘಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

ಮತ್ತೊಬ್ಬ ಐಪಿಎಸ್ ಅಧಿಕಾರಿಯಾದ ರೂಪಿನ್ ಶರ್ಮಾ, “ಈ ವಿಷಯದಲ್ಲಿ ವಿದೇಶಿಯರ ಹಸ್ತಕ್ಷೇಪ ಅಗತ್ಯವಿಲ್ಲ. ಭಾರತ ಮತ್ತು ಅದರ ರೈತರು ನಿಮ್ಮ ಬೆಂಬಲವಿಲ್ಲದೆ ಇವುಗಳನ್ನು ಮಾಡಬಹುದು. ನೀವು ಪರಿಸರ ಹೋರಾಟದಲ್ಲಷ್ಟೇ ನಿಮ್ಮ ಗಮನ ಕೇಂದ್ರೀಕರಿಸಿ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್‌ಗೆ ಹೇಳಿದ್ದಾರೆ.

ಇದಕ್ಕೆ ಉತ್ತರಿಸಿರುವ ಇಶಾನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, “ವಿದೇಶಿಯರು ನಮ್ಮ ಆಂತರಿಕ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಬಾರದು ಆದರೆ ನಮ್ಮ ಗೌರವಾನ್ವಿತ ಪ್ರಧಾನಮಂತ್ರಿಯವರ ‘ಅಬ್ ಕಿ ಬಾರ್ ಟ್ರಂಪ್ ಸರ್ಕಾರ್’ ಘೋಷಣೆಗೆ ಏನಾಯಿತು?. ಅವರು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರಲಿಲ್ಲವೇ? ಅಲ್ಲದೆ ಸರ್ಕಾರವು ಮುಳ್ಳುಬೇಲಿಗಳನ್ನು ಸ್ಥಾಪಿಸುವ ಮೂಲಕ ಸಿಂಘು ಗಡಿಯನ್ನು ಯುದ್ಧ ವಲಯವನ್ನಾಗಿ ಯಾಕೆ ಮಾಡಿದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ಭಾರತದ ಆಂತರಿಕ ವಿಷಯದ ಬಗ್ಗೆ ವಿದೇಶಿಗರು ಪ್ರತಿಕ್ರಿಯಿಸುವುದು ನಿಮಗೆ ಒಪ್ಪಿಗೆಯೆ, ಭಾರತದ ಆಂತರಿಕ ವಿಷಯಗಳಲ್ಲಿ ಬಾಹ್ಯ ಶಕ್ತಿಗಳು ಹಸ್ತಕ್ಷೇಪ ಮಾಡುವುದು ಸರಿಯಾಗಿದೆಯೆ, ಒಬ್ಬ ವಕೀಲೆ ಆಗಿ ಇದನ್ನು ನೀವು ಒಪ್ಪುತೀರಾ ಎಂಬ ಪ್ರಶ್ನೆಗೆ ಕರುಣಾ ಅವರು, “ವಕೀಲೆಯಾಗಿ ಮತ್ತು ಒಬ್ಬ ಮನುಷ್ಯಳಾಗಿ, ಕೆಲವು ಹಕ್ಕುಗಳು ಸಾರ್ವತ್ರಿಕವೆಂದು ನಾನು ನಂಬುತ್ತೇನೆ. ಅಮೆರಿಕಾದಲ್ಲಿ ಒಬ್ಬ ಕಪ್ಪು ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಾಗುತ್ತಿದ್ದರೆ ಅಥವಾ ರುವಾಂಡಾದಲ್ಲಿ ನರಮೇಧ ನಡೆದರೆ ಖಂಡಿಸಬಾರದೆ” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ನೀಡುತ್ತಿರುವ ಕಿರುಕುಳ ನಿಲ್ಲಿಸುವವರೆಗೆ ಯಾವುದೇ ಮಾತುಕತೆಯಿಲ್ಲ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...