Homeಅಂತರಾಷ್ಟ್ರೀಯರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ ಹಾಗೂ ಖ್ಯಾತ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಬೆಂಬಲ ಸೂಚಿಸಿದ್ದಾರೆ.

ರೈತರ ಹೋರಾಟಕ ಕುರಿತು ಸಿಎನ್‌ಎನ್‌ ಲೇಖನವನ್ನು ಟ್ವೀಟ್ ಮಾಡಿರುವ ಪಾಪ್ ಗಾಯಕಿ ರಿಹಾನ್ನಾ, “ನಾವ್ಯಾಕೆ ಈ ವಿಷಯದ ಕುರಿತು ಚರ್ಚಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಜನವರಿ 26 ರ ಗಣರಾಜ್ಯೋತ್ಸವದಂದು ರೈತರು ಟ್ರಾಕ್ಟ್‌‌ರ್‌ ಪರೇಡ್‌ ನಡೆಸಿದ ದಿನ ಅಹಿತಕರ ಘಟನೆ ನಡೆದಿತ್ತು. ಇದರ ನಂತರ ಹೋರಾಟದ ಸ್ಥಳದಲ್ಲಿ ಇಂಟರ್‌ನೆಟ್ ಸೇವೆಯನ್ನು ಸರ್ಕಾರ ತಡೆಹಿಡಿದಿತ್ತು. ಇದರ ಬಗ್ಗೆ ಸಿಎನ್‌ಎನ್ ವರದಿ ಮಾಡಿತ್ತು.

ರಿಹಾನ್ನಾ ಟ್ವೀಟ್ ಮಾಡಿದ ಬೆನ್ನಿಗೆ ಕಿರಿಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಕೂಡಾ ಅದೇ ಲೇಖನವನ್ನು ಟ್ವೀಟ್ ಮಾಡಿದ್ದು, “ಭಾರತೀಯ ರೈತರ ಹೋರಾಟಕ್ಕೆ ನಮ್ಮ ಬೆಂಬಲ” ಎಂದು ಬರೆದಿದ್ದಾರೆ.

ಜೊತೆಗೆ ಅಮೆರಿಕದ ನಟಿ ಅಮಂಡಾ ಸೆರ್ನಿ ಕೂಡಾ ಭಾರತೀಯ ರೈತರಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ರೈತ ಮಹಿಳೆಯರ ಮೂರ್ತಿಯೊಂದರ ಚಿತ್ರವೊಂದನ್ನು ತನ್ನ ಇನ್ಸ್ಟಾಗ್ರಾಮ್ ಮೂಲಕ ಪೋಸ್ಟ್‌ ಮಾಡಿರುವ ಅವರು, “ಜಗತ್ತೆ ನೋಡುತ್ತಿದೆ” ಎಂದು ಬರೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ, “ಜಗತ್ತೆ ನೋಡುತ್ತಿದೆ. ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ನೀವು ಭಾರತೀಯ ಅಥವಾ ಪಂಜಾಬಿ ಅಥವಾ ದಕ್ಷಿಣ ಏಷ್ಯಾದವರೆ ಆಗಿರಬೇಕಾಗಿಲ್ಲ. ನಿಮಗೆ ಮಾನವೀಯತೆ ಬಗ್ಗೆ ಕಾಳಜಿ ಇದ್ದರೆ ಸಾಕು. ವಾಕ್ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಮಾನವ ಮತ್ತು ನಾಗರಿಕ ಹಕ್ಕುಗಳು, ಕಾರ್ಮಿಕರಿಗೆ ಸಮಾನತೆ ಮತ್ತು ಘನತೆಯನ್ನು ಯಾವಾಗಲೂ ಕೇಳುತ್ತಲೆ ಇರಿ” ಎಂದು ಬರೆದಿದ್ದಾರೆ.

ರಿಹಾನ್ನಾ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಪರ ವಿರೋಧ ಚರ್ಚೆಗೂ ಕಾರಣವಾಗಿದೆ. ಕೆಲವರು ಇದು ಭಾತರದ ಆಂತರಿಕ ವಿಷಯ ಎಂದು ಹೇಳಿದರೆ, ಇನ್ನೂ ಕೆಲವರು ಇದು ಅಂತರಾಷ್ಟ್ರೀಯ ವಿಷಯ ಎಂದು ಸಮರ್ಥನೆ ಮಾಡಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ ಹೇಳಿದ್ದೇನು?

ಪ್ರಣವ್ ಮಹಾಜನ ಎಂಬ ಪೊಲೀಸ್ ಅಧಿಕಾರಿ, “ಭಾರತೀಯರಿಗೆ ಇದರ ಬಗ್ಗೆ ಮಾತನಾಡಲು ಹಕ್ಕಿದೆ ಯಾಕೆಂದರೆ ಅದು ನಮ್ಮ ವಿಷಯ, ನಮ್ಮ ರಾಷ್ಟ್ರದ ವಿಷಯ. ಸರ್ಕಾರವನ್ನು ಟೀಕಿಸಲು ಭಾರತೀಯರಿಗೆ ಎಲ್ಲ ಹಕ್ಕಿದೆ ಏಕೆಂದರೆ ಅದು ನಮ್ಮ ಸರ್ಕಾರ. ಆದರೆ ಎಂಎಸ್ಪಿಯ ಪೂರ್ಣ ರೂಪವನ್ನು ಸಹ ತಿಳಿದಿಲ್ಲದ ಜನರಿಗೆ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸುವ ಹಕ್ಕಿಲ್ಲ” ಎಂದು ಹೇಳಿದ್ದಾರೆ.

ಪ್ರಣವ್ ಟ್ವೀಟ್‌ಗೆ ಉತ್ತರಿಸಿರುವ ಸುಪ್ರೀಂಕೋರ್ಟ್ ವಕೀಲೆ ಕರುಣಾ ನಂದಿ, “ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ಪತ್ರಕರ್ತರ ವಿರುದ್ದ ಕಾನೂನು ಕ್ರಮಗಳು ಎಂಎಸ್‌ಪಿ ಕುರಿತ ಚರ್ಚೆಗಳನ್ನೂ ಮೀರಿವೆ. ಕೇಂದ್ರ ಸರ್ಕಾರವು ಜಾಗತಿಕ ಘೋಷಣೆಯಾದ ಮಾನವ ಹಕ್ಕುಗಳನ್ನು ಮತ್ತು ಐಸಿಸಿಪಿಆರ್‌‌ನ 19 ನೇ ವಿಧಿಯನ್ನು ಉಲ್ಲಂಘಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

ಮತ್ತೊಬ್ಬ ಐಪಿಎಸ್ ಅಧಿಕಾರಿಯಾದ ರೂಪಿನ್ ಶರ್ಮಾ, “ಈ ವಿಷಯದಲ್ಲಿ ವಿದೇಶಿಯರ ಹಸ್ತಕ್ಷೇಪ ಅಗತ್ಯವಿಲ್ಲ. ಭಾರತ ಮತ್ತು ಅದರ ರೈತರು ನಿಮ್ಮ ಬೆಂಬಲವಿಲ್ಲದೆ ಇವುಗಳನ್ನು ಮಾಡಬಹುದು. ನೀವು ಪರಿಸರ ಹೋರಾಟದಲ್ಲಷ್ಟೇ ನಿಮ್ಮ ಗಮನ ಕೇಂದ್ರೀಕರಿಸಿ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್‌ಗೆ ಹೇಳಿದ್ದಾರೆ.

ಇದಕ್ಕೆ ಉತ್ತರಿಸಿರುವ ಇಶಾನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, “ವಿದೇಶಿಯರು ನಮ್ಮ ಆಂತರಿಕ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಬಾರದು ಆದರೆ ನಮ್ಮ ಗೌರವಾನ್ವಿತ ಪ್ರಧಾನಮಂತ್ರಿಯವರ ‘ಅಬ್ ಕಿ ಬಾರ್ ಟ್ರಂಪ್ ಸರ್ಕಾರ್’ ಘೋಷಣೆಗೆ ಏನಾಯಿತು?. ಅವರು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರಲಿಲ್ಲವೇ? ಅಲ್ಲದೆ ಸರ್ಕಾರವು ಮುಳ್ಳುಬೇಲಿಗಳನ್ನು ಸ್ಥಾಪಿಸುವ ಮೂಲಕ ಸಿಂಘು ಗಡಿಯನ್ನು ಯುದ್ಧ ವಲಯವನ್ನಾಗಿ ಯಾಕೆ ಮಾಡಿದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ಭಾರತದ ಆಂತರಿಕ ವಿಷಯದ ಬಗ್ಗೆ ವಿದೇಶಿಗರು ಪ್ರತಿಕ್ರಿಯಿಸುವುದು ನಿಮಗೆ ಒಪ್ಪಿಗೆಯೆ, ಭಾರತದ ಆಂತರಿಕ ವಿಷಯಗಳಲ್ಲಿ ಬಾಹ್ಯ ಶಕ್ತಿಗಳು ಹಸ್ತಕ್ಷೇಪ ಮಾಡುವುದು ಸರಿಯಾಗಿದೆಯೆ, ಒಬ್ಬ ವಕೀಲೆ ಆಗಿ ಇದನ್ನು ನೀವು ಒಪ್ಪುತೀರಾ ಎಂಬ ಪ್ರಶ್ನೆಗೆ ಕರುಣಾ ಅವರು, “ವಕೀಲೆಯಾಗಿ ಮತ್ತು ಒಬ್ಬ ಮನುಷ್ಯಳಾಗಿ, ಕೆಲವು ಹಕ್ಕುಗಳು ಸಾರ್ವತ್ರಿಕವೆಂದು ನಾನು ನಂಬುತ್ತೇನೆ. ಅಮೆರಿಕಾದಲ್ಲಿ ಒಬ್ಬ ಕಪ್ಪು ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಾಗುತ್ತಿದ್ದರೆ ಅಥವಾ ರುವಾಂಡಾದಲ್ಲಿ ನರಮೇಧ ನಡೆದರೆ ಖಂಡಿಸಬಾರದೆ” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ನೀಡುತ್ತಿರುವ ಕಿರುಕುಳ ನಿಲ್ಲಿಸುವವರೆಗೆ ಯಾವುದೇ ಮಾತುಕತೆಯಿಲ್ಲ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...