Homeಅಂತರಾಷ್ಟ್ರೀಯರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ ಹಾಗೂ ಖ್ಯಾತ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಬೆಂಬಲ ಸೂಚಿಸಿದ್ದಾರೆ.

ರೈತರ ಹೋರಾಟಕ ಕುರಿತು ಸಿಎನ್‌ಎನ್‌ ಲೇಖನವನ್ನು ಟ್ವೀಟ್ ಮಾಡಿರುವ ಪಾಪ್ ಗಾಯಕಿ ರಿಹಾನ್ನಾ, “ನಾವ್ಯಾಕೆ ಈ ವಿಷಯದ ಕುರಿತು ಚರ್ಚಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಜನವರಿ 26 ರ ಗಣರಾಜ್ಯೋತ್ಸವದಂದು ರೈತರು ಟ್ರಾಕ್ಟ್‌‌ರ್‌ ಪರೇಡ್‌ ನಡೆಸಿದ ದಿನ ಅಹಿತಕರ ಘಟನೆ ನಡೆದಿತ್ತು. ಇದರ ನಂತರ ಹೋರಾಟದ ಸ್ಥಳದಲ್ಲಿ ಇಂಟರ್‌ನೆಟ್ ಸೇವೆಯನ್ನು ಸರ್ಕಾರ ತಡೆಹಿಡಿದಿತ್ತು. ಇದರ ಬಗ್ಗೆ ಸಿಎನ್‌ಎನ್ ವರದಿ ಮಾಡಿತ್ತು.

ರಿಹಾನ್ನಾ ಟ್ವೀಟ್ ಮಾಡಿದ ಬೆನ್ನಿಗೆ ಕಿರಿಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಕೂಡಾ ಅದೇ ಲೇಖನವನ್ನು ಟ್ವೀಟ್ ಮಾಡಿದ್ದು, “ಭಾರತೀಯ ರೈತರ ಹೋರಾಟಕ್ಕೆ ನಮ್ಮ ಬೆಂಬಲ” ಎಂದು ಬರೆದಿದ್ದಾರೆ.

ಜೊತೆಗೆ ಅಮೆರಿಕದ ನಟಿ ಅಮಂಡಾ ಸೆರ್ನಿ ಕೂಡಾ ಭಾರತೀಯ ರೈತರಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ರೈತ ಮಹಿಳೆಯರ ಮೂರ್ತಿಯೊಂದರ ಚಿತ್ರವೊಂದನ್ನು ತನ್ನ ಇನ್ಸ್ಟಾಗ್ರಾಮ್ ಮೂಲಕ ಪೋಸ್ಟ್‌ ಮಾಡಿರುವ ಅವರು, “ಜಗತ್ತೆ ನೋಡುತ್ತಿದೆ” ಎಂದು ಬರೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ, “ಜಗತ್ತೆ ನೋಡುತ್ತಿದೆ. ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ನೀವು ಭಾರತೀಯ ಅಥವಾ ಪಂಜಾಬಿ ಅಥವಾ ದಕ್ಷಿಣ ಏಷ್ಯಾದವರೆ ಆಗಿರಬೇಕಾಗಿಲ್ಲ. ನಿಮಗೆ ಮಾನವೀಯತೆ ಬಗ್ಗೆ ಕಾಳಜಿ ಇದ್ದರೆ ಸಾಕು. ವಾಕ್ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಮಾನವ ಮತ್ತು ನಾಗರಿಕ ಹಕ್ಕುಗಳು, ಕಾರ್ಮಿಕರಿಗೆ ಸಮಾನತೆ ಮತ್ತು ಘನತೆಯನ್ನು ಯಾವಾಗಲೂ ಕೇಳುತ್ತಲೆ ಇರಿ” ಎಂದು ಬರೆದಿದ್ದಾರೆ.

ರಿಹಾನ್ನಾ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಪರ ವಿರೋಧ ಚರ್ಚೆಗೂ ಕಾರಣವಾಗಿದೆ. ಕೆಲವರು ಇದು ಭಾತರದ ಆಂತರಿಕ ವಿಷಯ ಎಂದು ಹೇಳಿದರೆ, ಇನ್ನೂ ಕೆಲವರು ಇದು ಅಂತರಾಷ್ಟ್ರೀಯ ವಿಷಯ ಎಂದು ಸಮರ್ಥನೆ ಮಾಡಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ ಹೇಳಿದ್ದೇನು?

ಪ್ರಣವ್ ಮಹಾಜನ ಎಂಬ ಪೊಲೀಸ್ ಅಧಿಕಾರಿ, “ಭಾರತೀಯರಿಗೆ ಇದರ ಬಗ್ಗೆ ಮಾತನಾಡಲು ಹಕ್ಕಿದೆ ಯಾಕೆಂದರೆ ಅದು ನಮ್ಮ ವಿಷಯ, ನಮ್ಮ ರಾಷ್ಟ್ರದ ವಿಷಯ. ಸರ್ಕಾರವನ್ನು ಟೀಕಿಸಲು ಭಾರತೀಯರಿಗೆ ಎಲ್ಲ ಹಕ್ಕಿದೆ ಏಕೆಂದರೆ ಅದು ನಮ್ಮ ಸರ್ಕಾರ. ಆದರೆ ಎಂಎಸ್ಪಿಯ ಪೂರ್ಣ ರೂಪವನ್ನು ಸಹ ತಿಳಿದಿಲ್ಲದ ಜನರಿಗೆ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸುವ ಹಕ್ಕಿಲ್ಲ” ಎಂದು ಹೇಳಿದ್ದಾರೆ.

ಪ್ರಣವ್ ಟ್ವೀಟ್‌ಗೆ ಉತ್ತರಿಸಿರುವ ಸುಪ್ರೀಂಕೋರ್ಟ್ ವಕೀಲೆ ಕರುಣಾ ನಂದಿ, “ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ಪತ್ರಕರ್ತರ ವಿರುದ್ದ ಕಾನೂನು ಕ್ರಮಗಳು ಎಂಎಸ್‌ಪಿ ಕುರಿತ ಚರ್ಚೆಗಳನ್ನೂ ಮೀರಿವೆ. ಕೇಂದ್ರ ಸರ್ಕಾರವು ಜಾಗತಿಕ ಘೋಷಣೆಯಾದ ಮಾನವ ಹಕ್ಕುಗಳನ್ನು ಮತ್ತು ಐಸಿಸಿಪಿಆರ್‌‌ನ 19 ನೇ ವಿಧಿಯನ್ನು ಉಲ್ಲಂಘಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

ಮತ್ತೊಬ್ಬ ಐಪಿಎಸ್ ಅಧಿಕಾರಿಯಾದ ರೂಪಿನ್ ಶರ್ಮಾ, “ಈ ವಿಷಯದಲ್ಲಿ ವಿದೇಶಿಯರ ಹಸ್ತಕ್ಷೇಪ ಅಗತ್ಯವಿಲ್ಲ. ಭಾರತ ಮತ್ತು ಅದರ ರೈತರು ನಿಮ್ಮ ಬೆಂಬಲವಿಲ್ಲದೆ ಇವುಗಳನ್ನು ಮಾಡಬಹುದು. ನೀವು ಪರಿಸರ ಹೋರಾಟದಲ್ಲಷ್ಟೇ ನಿಮ್ಮ ಗಮನ ಕೇಂದ್ರೀಕರಿಸಿ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್‌ಗೆ ಹೇಳಿದ್ದಾರೆ.

ಇದಕ್ಕೆ ಉತ್ತರಿಸಿರುವ ಇಶಾನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, “ವಿದೇಶಿಯರು ನಮ್ಮ ಆಂತರಿಕ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಬಾರದು ಆದರೆ ನಮ್ಮ ಗೌರವಾನ್ವಿತ ಪ್ರಧಾನಮಂತ್ರಿಯವರ ‘ಅಬ್ ಕಿ ಬಾರ್ ಟ್ರಂಪ್ ಸರ್ಕಾರ್’ ಘೋಷಣೆಗೆ ಏನಾಯಿತು?. ಅವರು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರಲಿಲ್ಲವೇ? ಅಲ್ಲದೆ ಸರ್ಕಾರವು ಮುಳ್ಳುಬೇಲಿಗಳನ್ನು ಸ್ಥಾಪಿಸುವ ಮೂಲಕ ಸಿಂಘು ಗಡಿಯನ್ನು ಯುದ್ಧ ವಲಯವನ್ನಾಗಿ ಯಾಕೆ ಮಾಡಿದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ಭಾರತದ ಆಂತರಿಕ ವಿಷಯದ ಬಗ್ಗೆ ವಿದೇಶಿಗರು ಪ್ರತಿಕ್ರಿಯಿಸುವುದು ನಿಮಗೆ ಒಪ್ಪಿಗೆಯೆ, ಭಾರತದ ಆಂತರಿಕ ವಿಷಯಗಳಲ್ಲಿ ಬಾಹ್ಯ ಶಕ್ತಿಗಳು ಹಸ್ತಕ್ಷೇಪ ಮಾಡುವುದು ಸರಿಯಾಗಿದೆಯೆ, ಒಬ್ಬ ವಕೀಲೆ ಆಗಿ ಇದನ್ನು ನೀವು ಒಪ್ಪುತೀರಾ ಎಂಬ ಪ್ರಶ್ನೆಗೆ ಕರುಣಾ ಅವರು, “ವಕೀಲೆಯಾಗಿ ಮತ್ತು ಒಬ್ಬ ಮನುಷ್ಯಳಾಗಿ, ಕೆಲವು ಹಕ್ಕುಗಳು ಸಾರ್ವತ್ರಿಕವೆಂದು ನಾನು ನಂಬುತ್ತೇನೆ. ಅಮೆರಿಕಾದಲ್ಲಿ ಒಬ್ಬ ಕಪ್ಪು ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಾಗುತ್ತಿದ್ದರೆ ಅಥವಾ ರುವಾಂಡಾದಲ್ಲಿ ನರಮೇಧ ನಡೆದರೆ ಖಂಡಿಸಬಾರದೆ” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ನೀಡುತ್ತಿರುವ ಕಿರುಕುಳ ನಿಲ್ಲಿಸುವವರೆಗೆ ಯಾವುದೇ ಮಾತುಕತೆಯಿಲ್ಲ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...