Homeಅಂತರಾಷ್ಟ್ರೀಯರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ ಹಾಗೂ ಖ್ಯಾತ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಬೆಂಬಲ ಸೂಚಿಸಿದ್ದಾರೆ.

ರೈತರ ಹೋರಾಟಕ ಕುರಿತು ಸಿಎನ್‌ಎನ್‌ ಲೇಖನವನ್ನು ಟ್ವೀಟ್ ಮಾಡಿರುವ ಪಾಪ್ ಗಾಯಕಿ ರಿಹಾನ್ನಾ, “ನಾವ್ಯಾಕೆ ಈ ವಿಷಯದ ಕುರಿತು ಚರ್ಚಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಜನವರಿ 26 ರ ಗಣರಾಜ್ಯೋತ್ಸವದಂದು ರೈತರು ಟ್ರಾಕ್ಟ್‌‌ರ್‌ ಪರೇಡ್‌ ನಡೆಸಿದ ದಿನ ಅಹಿತಕರ ಘಟನೆ ನಡೆದಿತ್ತು. ಇದರ ನಂತರ ಹೋರಾಟದ ಸ್ಥಳದಲ್ಲಿ ಇಂಟರ್‌ನೆಟ್ ಸೇವೆಯನ್ನು ಸರ್ಕಾರ ತಡೆಹಿಡಿದಿತ್ತು. ಇದರ ಬಗ್ಗೆ ಸಿಎನ್‌ಎನ್ ವರದಿ ಮಾಡಿತ್ತು.

ರಿಹಾನ್ನಾ ಟ್ವೀಟ್ ಮಾಡಿದ ಬೆನ್ನಿಗೆ ಕಿರಿಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಕೂಡಾ ಅದೇ ಲೇಖನವನ್ನು ಟ್ವೀಟ್ ಮಾಡಿದ್ದು, “ಭಾರತೀಯ ರೈತರ ಹೋರಾಟಕ್ಕೆ ನಮ್ಮ ಬೆಂಬಲ” ಎಂದು ಬರೆದಿದ್ದಾರೆ.

ಜೊತೆಗೆ ಅಮೆರಿಕದ ನಟಿ ಅಮಂಡಾ ಸೆರ್ನಿ ಕೂಡಾ ಭಾರತೀಯ ರೈತರಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ರೈತ ಮಹಿಳೆಯರ ಮೂರ್ತಿಯೊಂದರ ಚಿತ್ರವೊಂದನ್ನು ತನ್ನ ಇನ್ಸ್ಟಾಗ್ರಾಮ್ ಮೂಲಕ ಪೋಸ್ಟ್‌ ಮಾಡಿರುವ ಅವರು, “ಜಗತ್ತೆ ನೋಡುತ್ತಿದೆ” ಎಂದು ಬರೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ, “ಜಗತ್ತೆ ನೋಡುತ್ತಿದೆ. ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ನೀವು ಭಾರತೀಯ ಅಥವಾ ಪಂಜಾಬಿ ಅಥವಾ ದಕ್ಷಿಣ ಏಷ್ಯಾದವರೆ ಆಗಿರಬೇಕಾಗಿಲ್ಲ. ನಿಮಗೆ ಮಾನವೀಯತೆ ಬಗ್ಗೆ ಕಾಳಜಿ ಇದ್ದರೆ ಸಾಕು. ವಾಕ್ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಮಾನವ ಮತ್ತು ನಾಗರಿಕ ಹಕ್ಕುಗಳು, ಕಾರ್ಮಿಕರಿಗೆ ಸಮಾನತೆ ಮತ್ತು ಘನತೆಯನ್ನು ಯಾವಾಗಲೂ ಕೇಳುತ್ತಲೆ ಇರಿ” ಎಂದು ಬರೆದಿದ್ದಾರೆ.

ರಿಹಾನ್ನಾ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಪರ ವಿರೋಧ ಚರ್ಚೆಗೂ ಕಾರಣವಾಗಿದೆ. ಕೆಲವರು ಇದು ಭಾತರದ ಆಂತರಿಕ ವಿಷಯ ಎಂದು ಹೇಳಿದರೆ, ಇನ್ನೂ ಕೆಲವರು ಇದು ಅಂತರಾಷ್ಟ್ರೀಯ ವಿಷಯ ಎಂದು ಸಮರ್ಥನೆ ಮಾಡಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ ಹೇಳಿದ್ದೇನು?

ಪ್ರಣವ್ ಮಹಾಜನ ಎಂಬ ಪೊಲೀಸ್ ಅಧಿಕಾರಿ, “ಭಾರತೀಯರಿಗೆ ಇದರ ಬಗ್ಗೆ ಮಾತನಾಡಲು ಹಕ್ಕಿದೆ ಯಾಕೆಂದರೆ ಅದು ನಮ್ಮ ವಿಷಯ, ನಮ್ಮ ರಾಷ್ಟ್ರದ ವಿಷಯ. ಸರ್ಕಾರವನ್ನು ಟೀಕಿಸಲು ಭಾರತೀಯರಿಗೆ ಎಲ್ಲ ಹಕ್ಕಿದೆ ಏಕೆಂದರೆ ಅದು ನಮ್ಮ ಸರ್ಕಾರ. ಆದರೆ ಎಂಎಸ್ಪಿಯ ಪೂರ್ಣ ರೂಪವನ್ನು ಸಹ ತಿಳಿದಿಲ್ಲದ ಜನರಿಗೆ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸುವ ಹಕ್ಕಿಲ್ಲ” ಎಂದು ಹೇಳಿದ್ದಾರೆ.

ಪ್ರಣವ್ ಟ್ವೀಟ್‌ಗೆ ಉತ್ತರಿಸಿರುವ ಸುಪ್ರೀಂಕೋರ್ಟ್ ವಕೀಲೆ ಕರುಣಾ ನಂದಿ, “ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ಪತ್ರಕರ್ತರ ವಿರುದ್ದ ಕಾನೂನು ಕ್ರಮಗಳು ಎಂಎಸ್‌ಪಿ ಕುರಿತ ಚರ್ಚೆಗಳನ್ನೂ ಮೀರಿವೆ. ಕೇಂದ್ರ ಸರ್ಕಾರವು ಜಾಗತಿಕ ಘೋಷಣೆಯಾದ ಮಾನವ ಹಕ್ಕುಗಳನ್ನು ಮತ್ತು ಐಸಿಸಿಪಿಆರ್‌‌ನ 19 ನೇ ವಿಧಿಯನ್ನು ಉಲ್ಲಂಘಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

ಮತ್ತೊಬ್ಬ ಐಪಿಎಸ್ ಅಧಿಕಾರಿಯಾದ ರೂಪಿನ್ ಶರ್ಮಾ, “ಈ ವಿಷಯದಲ್ಲಿ ವಿದೇಶಿಯರ ಹಸ್ತಕ್ಷೇಪ ಅಗತ್ಯವಿಲ್ಲ. ಭಾರತ ಮತ್ತು ಅದರ ರೈತರು ನಿಮ್ಮ ಬೆಂಬಲವಿಲ್ಲದೆ ಇವುಗಳನ್ನು ಮಾಡಬಹುದು. ನೀವು ಪರಿಸರ ಹೋರಾಟದಲ್ಲಷ್ಟೇ ನಿಮ್ಮ ಗಮನ ಕೇಂದ್ರೀಕರಿಸಿ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್‌ಗೆ ಹೇಳಿದ್ದಾರೆ.

ಇದಕ್ಕೆ ಉತ್ತರಿಸಿರುವ ಇಶಾನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, “ವಿದೇಶಿಯರು ನಮ್ಮ ಆಂತರಿಕ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಬಾರದು ಆದರೆ ನಮ್ಮ ಗೌರವಾನ್ವಿತ ಪ್ರಧಾನಮಂತ್ರಿಯವರ ‘ಅಬ್ ಕಿ ಬಾರ್ ಟ್ರಂಪ್ ಸರ್ಕಾರ್’ ಘೋಷಣೆಗೆ ಏನಾಯಿತು?. ಅವರು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರಲಿಲ್ಲವೇ? ಅಲ್ಲದೆ ಸರ್ಕಾರವು ಮುಳ್ಳುಬೇಲಿಗಳನ್ನು ಸ್ಥಾಪಿಸುವ ಮೂಲಕ ಸಿಂಘು ಗಡಿಯನ್ನು ಯುದ್ಧ ವಲಯವನ್ನಾಗಿ ಯಾಕೆ ಮಾಡಿದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ಭಾರತದ ಆಂತರಿಕ ವಿಷಯದ ಬಗ್ಗೆ ವಿದೇಶಿಗರು ಪ್ರತಿಕ್ರಿಯಿಸುವುದು ನಿಮಗೆ ಒಪ್ಪಿಗೆಯೆ, ಭಾರತದ ಆಂತರಿಕ ವಿಷಯಗಳಲ್ಲಿ ಬಾಹ್ಯ ಶಕ್ತಿಗಳು ಹಸ್ತಕ್ಷೇಪ ಮಾಡುವುದು ಸರಿಯಾಗಿದೆಯೆ, ಒಬ್ಬ ವಕೀಲೆ ಆಗಿ ಇದನ್ನು ನೀವು ಒಪ್ಪುತೀರಾ ಎಂಬ ಪ್ರಶ್ನೆಗೆ ಕರುಣಾ ಅವರು, “ವಕೀಲೆಯಾಗಿ ಮತ್ತು ಒಬ್ಬ ಮನುಷ್ಯಳಾಗಿ, ಕೆಲವು ಹಕ್ಕುಗಳು ಸಾರ್ವತ್ರಿಕವೆಂದು ನಾನು ನಂಬುತ್ತೇನೆ. ಅಮೆರಿಕಾದಲ್ಲಿ ಒಬ್ಬ ಕಪ್ಪು ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಾಗುತ್ತಿದ್ದರೆ ಅಥವಾ ರುವಾಂಡಾದಲ್ಲಿ ನರಮೇಧ ನಡೆದರೆ ಖಂಡಿಸಬಾರದೆ” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ನೀಡುತ್ತಿರುವ ಕಿರುಕುಳ ನಿಲ್ಲಿಸುವವರೆಗೆ ಯಾವುದೇ ಮಾತುಕತೆಯಿಲ್ಲ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....