Homeಮುಖಪುಟಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನ ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ

- Advertisement -
- Advertisement -

ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂದ್ರಮೋದಿಯವರು ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ ಎಂದು ಮಾಜ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದಿರುವ ಅವರು, “ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ” ಎಂದಿದ್ದಾರೆ.

ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ ದುರುದ್ದೇಶವೇನು? ಇದು ಪರಮಪೂಜ್ಯರಿಗೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರೆ.

ಇಂತಹ ಚಿಲ್ಲರೆ, ದ್ವೇಷದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದು ಎನ್ನುವುದು ಭ್ರಮೆ, ಮೂರ್ಖತನದ ಪರಮಾವಧಿ. ಹೆಸರು ಬದಲಿಸಿದ ನಂತರ ಸಾರ್ವಜನಿಕರು, ಸ್ಥಳೀಯರು, ಕನ್ನಡಪರ, ಪ್ರಗತಿಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದೇ ತಡ, ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಕಾಲ್ಪನಿಕ ಹೆಸರಗಳನ್ನು ತೆರವುಗೊಳಿಸಿ ಗೌರವ ಉಳಿಸಿಕೊಂಡಿದೆ ಎಂದಿದ್ದಾರೆ.

ಇಂತಹ ಲಜ್ಜಗೇಡಿ ನಡೆ ರಾಜ್ಯ ಬಿಜೆಪಿ ಸರಕಾರದ ನೀಚ ರಾಜಕಾರಣಕ್ಕೆ ಸಾಕ್ಷಿ. ಪ್ರಧಾನಿ ಶ್ರೀ ಮೋದಿ ಅವರನ್ನು ಮೆಚ್ಚಿಸಲು ಉರಿಗೌಡ, ನಂಜೇಗೌಡ ಹೆಸರುಗಳನ್ನು ಸೃಷ್ಟಿಸಲಾಯಿತಾ? ಅಥವಾ ಆ ಷಡ್ಯಂತ್ರಕ್ಕೆ ರಾಜ್ಯ ಸರಕಾರದ ಒಪ್ಪಿಗೆಯೂ ಇತ್ತಾ? ಇಲ್ಲವೇ, ಇಂಥ ಹೊಣೆಗೇಡಿ ಕೃತ್ಯದ ಬಗ್ಗೆ ಪ್ರಧಾನಿ ಕಚೇರಿಗೂ ಮಾಹಿತಿ ಇತ್ತಾ? ತಿಳಿಯಬೇಕಿದೆ ಎಂದಿದ್ದಾರೆ.

ಸುಳ್ಳುಗಳಿಗೆ ಆಯಸ್ಸು ಬಹಳ ಕಡಿಮೆ ಎನ್ನುವುದನ್ನು ಇನ್ನಾದರೂ ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಸುಳ್ಳುಗಳ ಮಹಾ ಕಾರ್ಖಾನೆಯನ್ನೇ ತೆರೆದು ʼಸುಳ್ಳುಸೃಷ್ಟಿʼ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಈಗ ಸ್ವಾಭಿಮಾನದಿಂದ ಭೂಮಿತಾಯಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗರ ಮೇಲೆ ಬಿದ್ದಿದೆ.
ಇಡೀ ಒಕ್ಕಲಿಗ ಸಮುದಾಯವನ್ನು ಅಪಹಾಸ್ಯಕ್ಕೆ ಗುರಿ ಮಾಡುವ, ಇಡೀ ಸಮುದಾಯಕ್ಕೆ ಅಪಕೀರ್ತಿ ತರುವ ಹಾಗೂ ಟಿಪ್ಪುವನ್ನು ಕೊಂದ ಕಳಂಕವನ್ನು ಒಕ್ಕಲಿಗರಿಗೆ ಅಂಟಿಸುವ ಹೀನ ಕೆಲಸವನ್ನು ಬಿಜೆಪಿ ಮಾಡಲು ಹೊರಟಿದೆ. ಇದನ್ನು ಒಕ್ಕಲಿಗರು ಸಹಿಸರು ಎಂದು ಹೇಳಿದ್ದಾರೆ.

ಒಂದೆಡೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಒಕ್ಕಲಿಗರನ್ನು ಓಲೈಸುವ ಕೆಲಸ ಮಾಡುತ್ತಿರುವ ಬಿಜೆಪಿಗರು, ಇನ್ನೊಂದೆಡೆ ಕೊಲೆಯ ಕಳಂಕವನ್ನು ಮೆತ್ತಿ, ಅದೇ ಒಕ್ಕಲಿಗ ಸಮುದಾಯಕ್ಕೆ ಐತಿಹಾಸಿಕವಾಗಿ ಶಾಶ್ವತ ಕಪ್ಪುಚುಕ್ಕೆ ಮೆತ್ತಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಕ್ಕಾಗಿ ಮಾನಕ್ಕೂ ಅಂಜದ ಬಿಜೆಪಿ, ಸುಳ್ಳಿನ ಮೂಲಕ ಚುನಾವಣೆ ಗೆಲ್ಲಲು ಹೊರಟಂತಿದೆ. ರೋಡ್ ಶೋ ಮೂಲಕ ಮಂಡ್ಯದ ಜನರಿಗೆ ಮೋಡಿ ಮಾಡುವುದು ಎಂದರೆ ಇದೇನಾ? ಇಂಥ ವಿದ್ರೋಹಿ ಕೃತ್ಯಗಳನ್ನು ಒಕ್ಕಲಿಗರು ಮಾತ್ರವಲ್ಲ, ಸೌಹಾರ್ದತೆಯಿಂದ ರಾಜ್ಯದಲ್ಲಿ ಬಾಳುತ್ತಿರುವ ಯಾವ ಸಮುದಾಯವೂ ಸಹಿಸದು.
ತಾಳ್ಮೆ, ಸ್ವಾಭಿಮಾನ, ಸ್ವಂತಿಕೆ, ಸೇವೆ, ಸೌಹಾರ್ದತೆ, ಸಮನ್ವಯ ತತ್ವದ ತಳಹದಿಯ ಮೇಲೆ ಬೆಳೆದಿದೆ ಒಕ್ಕಲಿಗ ಸಮುದಾಯ. ದ್ವೇಷ ಮತ್ತು ಹಸಿಸುಳ್ಳುಗಳನ್ನು ಅವರೆಂದು ಪೋಷಿಸಿ ಬೆಳೆಸಿದವರಲ್ಲ. ಒಂದೀಡಿ ಸಮುದಾಯವನ್ನು ಇಂಥ ನಿಕೃಷ್ಟ ರಾಜಕಾರಣಕ್ಕೆ ಇಳಿಸಿ, ಬಳಸಬಹುದು ಎಂಬ ಪಾಪಿಚಿಂತನೆಯೇ ಬಿಜೆಪಿಯ ಹೊಲಸು ರಾಜಕಾರಣದ ಪರಾಕಾಷ್ಠೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ; ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ. #ಒಕ್ಕಲಿಗರ_ಮೇಲೆ_ಬಿಜೆಪಿ_ವಕ್ರದೃಷ್ಟಿ ಎಂಬ ಹ್ಯಾಸ್‌ಟ್ಯಾಗ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಡೆದ ಸಾಲುಸಾಲು ಭ್ರಷ್ಟಾಚಾರದ ಹಗರಣಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...