Homeಮುಖಪುಟಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನ ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ

- Advertisement -
- Advertisement -

ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂದ್ರಮೋದಿಯವರು ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ ಎಂದು ಮಾಜ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದಿರುವ ಅವರು, “ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ” ಎಂದಿದ್ದಾರೆ.

ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ ದುರುದ್ದೇಶವೇನು? ಇದು ಪರಮಪೂಜ್ಯರಿಗೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರೆ.

ಇಂತಹ ಚಿಲ್ಲರೆ, ದ್ವೇಷದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದು ಎನ್ನುವುದು ಭ್ರಮೆ, ಮೂರ್ಖತನದ ಪರಮಾವಧಿ. ಹೆಸರು ಬದಲಿಸಿದ ನಂತರ ಸಾರ್ವಜನಿಕರು, ಸ್ಥಳೀಯರು, ಕನ್ನಡಪರ, ಪ್ರಗತಿಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದೇ ತಡ, ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಕಾಲ್ಪನಿಕ ಹೆಸರಗಳನ್ನು ತೆರವುಗೊಳಿಸಿ ಗೌರವ ಉಳಿಸಿಕೊಂಡಿದೆ ಎಂದಿದ್ದಾರೆ.

ಇಂತಹ ಲಜ್ಜಗೇಡಿ ನಡೆ ರಾಜ್ಯ ಬಿಜೆಪಿ ಸರಕಾರದ ನೀಚ ರಾಜಕಾರಣಕ್ಕೆ ಸಾಕ್ಷಿ. ಪ್ರಧಾನಿ ಶ್ರೀ ಮೋದಿ ಅವರನ್ನು ಮೆಚ್ಚಿಸಲು ಉರಿಗೌಡ, ನಂಜೇಗೌಡ ಹೆಸರುಗಳನ್ನು ಸೃಷ್ಟಿಸಲಾಯಿತಾ? ಅಥವಾ ಆ ಷಡ್ಯಂತ್ರಕ್ಕೆ ರಾಜ್ಯ ಸರಕಾರದ ಒಪ್ಪಿಗೆಯೂ ಇತ್ತಾ? ಇಲ್ಲವೇ, ಇಂಥ ಹೊಣೆಗೇಡಿ ಕೃತ್ಯದ ಬಗ್ಗೆ ಪ್ರಧಾನಿ ಕಚೇರಿಗೂ ಮಾಹಿತಿ ಇತ್ತಾ? ತಿಳಿಯಬೇಕಿದೆ ಎಂದಿದ್ದಾರೆ.

ಸುಳ್ಳುಗಳಿಗೆ ಆಯಸ್ಸು ಬಹಳ ಕಡಿಮೆ ಎನ್ನುವುದನ್ನು ಇನ್ನಾದರೂ ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಸುಳ್ಳುಗಳ ಮಹಾ ಕಾರ್ಖಾನೆಯನ್ನೇ ತೆರೆದು ʼಸುಳ್ಳುಸೃಷ್ಟಿʼ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಈಗ ಸ್ವಾಭಿಮಾನದಿಂದ ಭೂಮಿತಾಯಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗರ ಮೇಲೆ ಬಿದ್ದಿದೆ.
ಇಡೀ ಒಕ್ಕಲಿಗ ಸಮುದಾಯವನ್ನು ಅಪಹಾಸ್ಯಕ್ಕೆ ಗುರಿ ಮಾಡುವ, ಇಡೀ ಸಮುದಾಯಕ್ಕೆ ಅಪಕೀರ್ತಿ ತರುವ ಹಾಗೂ ಟಿಪ್ಪುವನ್ನು ಕೊಂದ ಕಳಂಕವನ್ನು ಒಕ್ಕಲಿಗರಿಗೆ ಅಂಟಿಸುವ ಹೀನ ಕೆಲಸವನ್ನು ಬಿಜೆಪಿ ಮಾಡಲು ಹೊರಟಿದೆ. ಇದನ್ನು ಒಕ್ಕಲಿಗರು ಸಹಿಸರು ಎಂದು ಹೇಳಿದ್ದಾರೆ.

ಒಂದೆಡೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಒಕ್ಕಲಿಗರನ್ನು ಓಲೈಸುವ ಕೆಲಸ ಮಾಡುತ್ತಿರುವ ಬಿಜೆಪಿಗರು, ಇನ್ನೊಂದೆಡೆ ಕೊಲೆಯ ಕಳಂಕವನ್ನು ಮೆತ್ತಿ, ಅದೇ ಒಕ್ಕಲಿಗ ಸಮುದಾಯಕ್ಕೆ ಐತಿಹಾಸಿಕವಾಗಿ ಶಾಶ್ವತ ಕಪ್ಪುಚುಕ್ಕೆ ಮೆತ್ತಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಕ್ಕಾಗಿ ಮಾನಕ್ಕೂ ಅಂಜದ ಬಿಜೆಪಿ, ಸುಳ್ಳಿನ ಮೂಲಕ ಚುನಾವಣೆ ಗೆಲ್ಲಲು ಹೊರಟಂತಿದೆ. ರೋಡ್ ಶೋ ಮೂಲಕ ಮಂಡ್ಯದ ಜನರಿಗೆ ಮೋಡಿ ಮಾಡುವುದು ಎಂದರೆ ಇದೇನಾ? ಇಂಥ ವಿದ್ರೋಹಿ ಕೃತ್ಯಗಳನ್ನು ಒಕ್ಕಲಿಗರು ಮಾತ್ರವಲ್ಲ, ಸೌಹಾರ್ದತೆಯಿಂದ ರಾಜ್ಯದಲ್ಲಿ ಬಾಳುತ್ತಿರುವ ಯಾವ ಸಮುದಾಯವೂ ಸಹಿಸದು.
ತಾಳ್ಮೆ, ಸ್ವಾಭಿಮಾನ, ಸ್ವಂತಿಕೆ, ಸೇವೆ, ಸೌಹಾರ್ದತೆ, ಸಮನ್ವಯ ತತ್ವದ ತಳಹದಿಯ ಮೇಲೆ ಬೆಳೆದಿದೆ ಒಕ್ಕಲಿಗ ಸಮುದಾಯ. ದ್ವೇಷ ಮತ್ತು ಹಸಿಸುಳ್ಳುಗಳನ್ನು ಅವರೆಂದು ಪೋಷಿಸಿ ಬೆಳೆಸಿದವರಲ್ಲ. ಒಂದೀಡಿ ಸಮುದಾಯವನ್ನು ಇಂಥ ನಿಕೃಷ್ಟ ರಾಜಕಾರಣಕ್ಕೆ ಇಳಿಸಿ, ಬಳಸಬಹುದು ಎಂಬ ಪಾಪಿಚಿಂತನೆಯೇ ಬಿಜೆಪಿಯ ಹೊಲಸು ರಾಜಕಾರಣದ ಪರಾಕಾಷ್ಠೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ; ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ. #ಒಕ್ಕಲಿಗರ_ಮೇಲೆ_ಬಿಜೆಪಿ_ವಕ್ರದೃಷ್ಟಿ ಎಂಬ ಹ್ಯಾಸ್‌ಟ್ಯಾಗ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಡೆದ ಸಾಲುಸಾಲು ಭ್ರಷ್ಟಾಚಾರದ ಹಗರಣಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...