Homeಮುಖಪುಟಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನ ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ

- Advertisement -
- Advertisement -

ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂದ್ರಮೋದಿಯವರು ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ ಎಂದು ಮಾಜ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದಿರುವ ಅವರು, “ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ” ಎಂದಿದ್ದಾರೆ.

ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ ದುರುದ್ದೇಶವೇನು? ಇದು ಪರಮಪೂಜ್ಯರಿಗೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರೆ.

ಇಂತಹ ಚಿಲ್ಲರೆ, ದ್ವೇಷದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದು ಎನ್ನುವುದು ಭ್ರಮೆ, ಮೂರ್ಖತನದ ಪರಮಾವಧಿ. ಹೆಸರು ಬದಲಿಸಿದ ನಂತರ ಸಾರ್ವಜನಿಕರು, ಸ್ಥಳೀಯರು, ಕನ್ನಡಪರ, ಪ್ರಗತಿಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದೇ ತಡ, ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಕಾಲ್ಪನಿಕ ಹೆಸರಗಳನ್ನು ತೆರವುಗೊಳಿಸಿ ಗೌರವ ಉಳಿಸಿಕೊಂಡಿದೆ ಎಂದಿದ್ದಾರೆ.

ಇಂತಹ ಲಜ್ಜಗೇಡಿ ನಡೆ ರಾಜ್ಯ ಬಿಜೆಪಿ ಸರಕಾರದ ನೀಚ ರಾಜಕಾರಣಕ್ಕೆ ಸಾಕ್ಷಿ. ಪ್ರಧಾನಿ ಶ್ರೀ ಮೋದಿ ಅವರನ್ನು ಮೆಚ್ಚಿಸಲು ಉರಿಗೌಡ, ನಂಜೇಗೌಡ ಹೆಸರುಗಳನ್ನು ಸೃಷ್ಟಿಸಲಾಯಿತಾ? ಅಥವಾ ಆ ಷಡ್ಯಂತ್ರಕ್ಕೆ ರಾಜ್ಯ ಸರಕಾರದ ಒಪ್ಪಿಗೆಯೂ ಇತ್ತಾ? ಇಲ್ಲವೇ, ಇಂಥ ಹೊಣೆಗೇಡಿ ಕೃತ್ಯದ ಬಗ್ಗೆ ಪ್ರಧಾನಿ ಕಚೇರಿಗೂ ಮಾಹಿತಿ ಇತ್ತಾ? ತಿಳಿಯಬೇಕಿದೆ ಎಂದಿದ್ದಾರೆ.

ಸುಳ್ಳುಗಳಿಗೆ ಆಯಸ್ಸು ಬಹಳ ಕಡಿಮೆ ಎನ್ನುವುದನ್ನು ಇನ್ನಾದರೂ ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಸುಳ್ಳುಗಳ ಮಹಾ ಕಾರ್ಖಾನೆಯನ್ನೇ ತೆರೆದು ʼಸುಳ್ಳುಸೃಷ್ಟಿʼ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಈಗ ಸ್ವಾಭಿಮಾನದಿಂದ ಭೂಮಿತಾಯಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗರ ಮೇಲೆ ಬಿದ್ದಿದೆ.
ಇಡೀ ಒಕ್ಕಲಿಗ ಸಮುದಾಯವನ್ನು ಅಪಹಾಸ್ಯಕ್ಕೆ ಗುರಿ ಮಾಡುವ, ಇಡೀ ಸಮುದಾಯಕ್ಕೆ ಅಪಕೀರ್ತಿ ತರುವ ಹಾಗೂ ಟಿಪ್ಪುವನ್ನು ಕೊಂದ ಕಳಂಕವನ್ನು ಒಕ್ಕಲಿಗರಿಗೆ ಅಂಟಿಸುವ ಹೀನ ಕೆಲಸವನ್ನು ಬಿಜೆಪಿ ಮಾಡಲು ಹೊರಟಿದೆ. ಇದನ್ನು ಒಕ್ಕಲಿಗರು ಸಹಿಸರು ಎಂದು ಹೇಳಿದ್ದಾರೆ.

ಒಂದೆಡೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಒಕ್ಕಲಿಗರನ್ನು ಓಲೈಸುವ ಕೆಲಸ ಮಾಡುತ್ತಿರುವ ಬಿಜೆಪಿಗರು, ಇನ್ನೊಂದೆಡೆ ಕೊಲೆಯ ಕಳಂಕವನ್ನು ಮೆತ್ತಿ, ಅದೇ ಒಕ್ಕಲಿಗ ಸಮುದಾಯಕ್ಕೆ ಐತಿಹಾಸಿಕವಾಗಿ ಶಾಶ್ವತ ಕಪ್ಪುಚುಕ್ಕೆ ಮೆತ್ತಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಕ್ಕಾಗಿ ಮಾನಕ್ಕೂ ಅಂಜದ ಬಿಜೆಪಿ, ಸುಳ್ಳಿನ ಮೂಲಕ ಚುನಾವಣೆ ಗೆಲ್ಲಲು ಹೊರಟಂತಿದೆ. ರೋಡ್ ಶೋ ಮೂಲಕ ಮಂಡ್ಯದ ಜನರಿಗೆ ಮೋಡಿ ಮಾಡುವುದು ಎಂದರೆ ಇದೇನಾ? ಇಂಥ ವಿದ್ರೋಹಿ ಕೃತ್ಯಗಳನ್ನು ಒಕ್ಕಲಿಗರು ಮಾತ್ರವಲ್ಲ, ಸೌಹಾರ್ದತೆಯಿಂದ ರಾಜ್ಯದಲ್ಲಿ ಬಾಳುತ್ತಿರುವ ಯಾವ ಸಮುದಾಯವೂ ಸಹಿಸದು.
ತಾಳ್ಮೆ, ಸ್ವಾಭಿಮಾನ, ಸ್ವಂತಿಕೆ, ಸೇವೆ, ಸೌಹಾರ್ದತೆ, ಸಮನ್ವಯ ತತ್ವದ ತಳಹದಿಯ ಮೇಲೆ ಬೆಳೆದಿದೆ ಒಕ್ಕಲಿಗ ಸಮುದಾಯ. ದ್ವೇಷ ಮತ್ತು ಹಸಿಸುಳ್ಳುಗಳನ್ನು ಅವರೆಂದು ಪೋಷಿಸಿ ಬೆಳೆಸಿದವರಲ್ಲ. ಒಂದೀಡಿ ಸಮುದಾಯವನ್ನು ಇಂಥ ನಿಕೃಷ್ಟ ರಾಜಕಾರಣಕ್ಕೆ ಇಳಿಸಿ, ಬಳಸಬಹುದು ಎಂಬ ಪಾಪಿಚಿಂತನೆಯೇ ಬಿಜೆಪಿಯ ಹೊಲಸು ರಾಜಕಾರಣದ ಪರಾಕಾಷ್ಠೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ; ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ. #ಒಕ್ಕಲಿಗರ_ಮೇಲೆ_ಬಿಜೆಪಿ_ವಕ್ರದೃಷ್ಟಿ ಎಂಬ ಹ್ಯಾಸ್‌ಟ್ಯಾಗ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಡೆದ ಸಾಲುಸಾಲು ಭ್ರಷ್ಟಾಚಾರದ ಹಗರಣಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...