Homeಮುಖಪುಟಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನ ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ

- Advertisement -
- Advertisement -

ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂದ್ರಮೋದಿಯವರು ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ ಎಂದು ಮಾಜ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದಿರುವ ಅವರು, “ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ” ಎಂದಿದ್ದಾರೆ.

ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ ದುರುದ್ದೇಶವೇನು? ಇದು ಪರಮಪೂಜ್ಯರಿಗೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರೆ.

ಇಂತಹ ಚಿಲ್ಲರೆ, ದ್ವೇಷದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದು ಎನ್ನುವುದು ಭ್ರಮೆ, ಮೂರ್ಖತನದ ಪರಮಾವಧಿ. ಹೆಸರು ಬದಲಿಸಿದ ನಂತರ ಸಾರ್ವಜನಿಕರು, ಸ್ಥಳೀಯರು, ಕನ್ನಡಪರ, ಪ್ರಗತಿಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದೇ ತಡ, ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಕಾಲ್ಪನಿಕ ಹೆಸರಗಳನ್ನು ತೆರವುಗೊಳಿಸಿ ಗೌರವ ಉಳಿಸಿಕೊಂಡಿದೆ ಎಂದಿದ್ದಾರೆ.

ಇಂತಹ ಲಜ್ಜಗೇಡಿ ನಡೆ ರಾಜ್ಯ ಬಿಜೆಪಿ ಸರಕಾರದ ನೀಚ ರಾಜಕಾರಣಕ್ಕೆ ಸಾಕ್ಷಿ. ಪ್ರಧಾನಿ ಶ್ರೀ ಮೋದಿ ಅವರನ್ನು ಮೆಚ್ಚಿಸಲು ಉರಿಗೌಡ, ನಂಜೇಗೌಡ ಹೆಸರುಗಳನ್ನು ಸೃಷ್ಟಿಸಲಾಯಿತಾ? ಅಥವಾ ಆ ಷಡ್ಯಂತ್ರಕ್ಕೆ ರಾಜ್ಯ ಸರಕಾರದ ಒಪ್ಪಿಗೆಯೂ ಇತ್ತಾ? ಇಲ್ಲವೇ, ಇಂಥ ಹೊಣೆಗೇಡಿ ಕೃತ್ಯದ ಬಗ್ಗೆ ಪ್ರಧಾನಿ ಕಚೇರಿಗೂ ಮಾಹಿತಿ ಇತ್ತಾ? ತಿಳಿಯಬೇಕಿದೆ ಎಂದಿದ್ದಾರೆ.

ಸುಳ್ಳುಗಳಿಗೆ ಆಯಸ್ಸು ಬಹಳ ಕಡಿಮೆ ಎನ್ನುವುದನ್ನು ಇನ್ನಾದರೂ ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಸುಳ್ಳುಗಳ ಮಹಾ ಕಾರ್ಖಾನೆಯನ್ನೇ ತೆರೆದು ʼಸುಳ್ಳುಸೃಷ್ಟಿʼ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಈಗ ಸ್ವಾಭಿಮಾನದಿಂದ ಭೂಮಿತಾಯಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗರ ಮೇಲೆ ಬಿದ್ದಿದೆ.
ಇಡೀ ಒಕ್ಕಲಿಗ ಸಮುದಾಯವನ್ನು ಅಪಹಾಸ್ಯಕ್ಕೆ ಗುರಿ ಮಾಡುವ, ಇಡೀ ಸಮುದಾಯಕ್ಕೆ ಅಪಕೀರ್ತಿ ತರುವ ಹಾಗೂ ಟಿಪ್ಪುವನ್ನು ಕೊಂದ ಕಳಂಕವನ್ನು ಒಕ್ಕಲಿಗರಿಗೆ ಅಂಟಿಸುವ ಹೀನ ಕೆಲಸವನ್ನು ಬಿಜೆಪಿ ಮಾಡಲು ಹೊರಟಿದೆ. ಇದನ್ನು ಒಕ್ಕಲಿಗರು ಸಹಿಸರು ಎಂದು ಹೇಳಿದ್ದಾರೆ.

ಒಂದೆಡೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಒಕ್ಕಲಿಗರನ್ನು ಓಲೈಸುವ ಕೆಲಸ ಮಾಡುತ್ತಿರುವ ಬಿಜೆಪಿಗರು, ಇನ್ನೊಂದೆಡೆ ಕೊಲೆಯ ಕಳಂಕವನ್ನು ಮೆತ್ತಿ, ಅದೇ ಒಕ್ಕಲಿಗ ಸಮುದಾಯಕ್ಕೆ ಐತಿಹಾಸಿಕವಾಗಿ ಶಾಶ್ವತ ಕಪ್ಪುಚುಕ್ಕೆ ಮೆತ್ತಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಕ್ಕಾಗಿ ಮಾನಕ್ಕೂ ಅಂಜದ ಬಿಜೆಪಿ, ಸುಳ್ಳಿನ ಮೂಲಕ ಚುನಾವಣೆ ಗೆಲ್ಲಲು ಹೊರಟಂತಿದೆ. ರೋಡ್ ಶೋ ಮೂಲಕ ಮಂಡ್ಯದ ಜನರಿಗೆ ಮೋಡಿ ಮಾಡುವುದು ಎಂದರೆ ಇದೇನಾ? ಇಂಥ ವಿದ್ರೋಹಿ ಕೃತ್ಯಗಳನ್ನು ಒಕ್ಕಲಿಗರು ಮಾತ್ರವಲ್ಲ, ಸೌಹಾರ್ದತೆಯಿಂದ ರಾಜ್ಯದಲ್ಲಿ ಬಾಳುತ್ತಿರುವ ಯಾವ ಸಮುದಾಯವೂ ಸಹಿಸದು.
ತಾಳ್ಮೆ, ಸ್ವಾಭಿಮಾನ, ಸ್ವಂತಿಕೆ, ಸೇವೆ, ಸೌಹಾರ್ದತೆ, ಸಮನ್ವಯ ತತ್ವದ ತಳಹದಿಯ ಮೇಲೆ ಬೆಳೆದಿದೆ ಒಕ್ಕಲಿಗ ಸಮುದಾಯ. ದ್ವೇಷ ಮತ್ತು ಹಸಿಸುಳ್ಳುಗಳನ್ನು ಅವರೆಂದು ಪೋಷಿಸಿ ಬೆಳೆಸಿದವರಲ್ಲ. ಒಂದೀಡಿ ಸಮುದಾಯವನ್ನು ಇಂಥ ನಿಕೃಷ್ಟ ರಾಜಕಾರಣಕ್ಕೆ ಇಳಿಸಿ, ಬಳಸಬಹುದು ಎಂಬ ಪಾಪಿಚಿಂತನೆಯೇ ಬಿಜೆಪಿಯ ಹೊಲಸು ರಾಜಕಾರಣದ ಪರಾಕಾಷ್ಠೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ; ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ. #ಒಕ್ಕಲಿಗರ_ಮೇಲೆ_ಬಿಜೆಪಿ_ವಕ್ರದೃಷ್ಟಿ ಎಂಬ ಹ್ಯಾಸ್‌ಟ್ಯಾಗ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಡೆದ ಸಾಲುಸಾಲು ಭ್ರಷ್ಟಾಚಾರದ ಹಗರಣಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...