Homeಮುಖಪುಟಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನ ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ

- Advertisement -
- Advertisement -

ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂದ್ರಮೋದಿಯವರು ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ ಎಂದು ಮಾಜ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದಿರುವ ಅವರು, “ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ” ಎಂದಿದ್ದಾರೆ.

ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ ದುರುದ್ದೇಶವೇನು? ಇದು ಪರಮಪೂಜ್ಯರಿಗೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರೆ.

ಇಂತಹ ಚಿಲ್ಲರೆ, ದ್ವೇಷದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದು ಎನ್ನುವುದು ಭ್ರಮೆ, ಮೂರ್ಖತನದ ಪರಮಾವಧಿ. ಹೆಸರು ಬದಲಿಸಿದ ನಂತರ ಸಾರ್ವಜನಿಕರು, ಸ್ಥಳೀಯರು, ಕನ್ನಡಪರ, ಪ್ರಗತಿಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದೇ ತಡ, ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಕಾಲ್ಪನಿಕ ಹೆಸರಗಳನ್ನು ತೆರವುಗೊಳಿಸಿ ಗೌರವ ಉಳಿಸಿಕೊಂಡಿದೆ ಎಂದಿದ್ದಾರೆ.

ಇಂತಹ ಲಜ್ಜಗೇಡಿ ನಡೆ ರಾಜ್ಯ ಬಿಜೆಪಿ ಸರಕಾರದ ನೀಚ ರಾಜಕಾರಣಕ್ಕೆ ಸಾಕ್ಷಿ. ಪ್ರಧಾನಿ ಶ್ರೀ ಮೋದಿ ಅವರನ್ನು ಮೆಚ್ಚಿಸಲು ಉರಿಗೌಡ, ನಂಜೇಗೌಡ ಹೆಸರುಗಳನ್ನು ಸೃಷ್ಟಿಸಲಾಯಿತಾ? ಅಥವಾ ಆ ಷಡ್ಯಂತ್ರಕ್ಕೆ ರಾಜ್ಯ ಸರಕಾರದ ಒಪ್ಪಿಗೆಯೂ ಇತ್ತಾ? ಇಲ್ಲವೇ, ಇಂಥ ಹೊಣೆಗೇಡಿ ಕೃತ್ಯದ ಬಗ್ಗೆ ಪ್ರಧಾನಿ ಕಚೇರಿಗೂ ಮಾಹಿತಿ ಇತ್ತಾ? ತಿಳಿಯಬೇಕಿದೆ ಎಂದಿದ್ದಾರೆ.

ಸುಳ್ಳುಗಳಿಗೆ ಆಯಸ್ಸು ಬಹಳ ಕಡಿಮೆ ಎನ್ನುವುದನ್ನು ಇನ್ನಾದರೂ ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಸುಳ್ಳುಗಳ ಮಹಾ ಕಾರ್ಖಾನೆಯನ್ನೇ ತೆರೆದು ʼಸುಳ್ಳುಸೃಷ್ಟಿʼ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಈಗ ಸ್ವಾಭಿಮಾನದಿಂದ ಭೂಮಿತಾಯಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗರ ಮೇಲೆ ಬಿದ್ದಿದೆ.
ಇಡೀ ಒಕ್ಕಲಿಗ ಸಮುದಾಯವನ್ನು ಅಪಹಾಸ್ಯಕ್ಕೆ ಗುರಿ ಮಾಡುವ, ಇಡೀ ಸಮುದಾಯಕ್ಕೆ ಅಪಕೀರ್ತಿ ತರುವ ಹಾಗೂ ಟಿಪ್ಪುವನ್ನು ಕೊಂದ ಕಳಂಕವನ್ನು ಒಕ್ಕಲಿಗರಿಗೆ ಅಂಟಿಸುವ ಹೀನ ಕೆಲಸವನ್ನು ಬಿಜೆಪಿ ಮಾಡಲು ಹೊರಟಿದೆ. ಇದನ್ನು ಒಕ್ಕಲಿಗರು ಸಹಿಸರು ಎಂದು ಹೇಳಿದ್ದಾರೆ.

ಒಂದೆಡೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಒಕ್ಕಲಿಗರನ್ನು ಓಲೈಸುವ ಕೆಲಸ ಮಾಡುತ್ತಿರುವ ಬಿಜೆಪಿಗರು, ಇನ್ನೊಂದೆಡೆ ಕೊಲೆಯ ಕಳಂಕವನ್ನು ಮೆತ್ತಿ, ಅದೇ ಒಕ್ಕಲಿಗ ಸಮುದಾಯಕ್ಕೆ ಐತಿಹಾಸಿಕವಾಗಿ ಶಾಶ್ವತ ಕಪ್ಪುಚುಕ್ಕೆ ಮೆತ್ತಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಕ್ಕಾಗಿ ಮಾನಕ್ಕೂ ಅಂಜದ ಬಿಜೆಪಿ, ಸುಳ್ಳಿನ ಮೂಲಕ ಚುನಾವಣೆ ಗೆಲ್ಲಲು ಹೊರಟಂತಿದೆ. ರೋಡ್ ಶೋ ಮೂಲಕ ಮಂಡ್ಯದ ಜನರಿಗೆ ಮೋಡಿ ಮಾಡುವುದು ಎಂದರೆ ಇದೇನಾ? ಇಂಥ ವಿದ್ರೋಹಿ ಕೃತ್ಯಗಳನ್ನು ಒಕ್ಕಲಿಗರು ಮಾತ್ರವಲ್ಲ, ಸೌಹಾರ್ದತೆಯಿಂದ ರಾಜ್ಯದಲ್ಲಿ ಬಾಳುತ್ತಿರುವ ಯಾವ ಸಮುದಾಯವೂ ಸಹಿಸದು.
ತಾಳ್ಮೆ, ಸ್ವಾಭಿಮಾನ, ಸ್ವಂತಿಕೆ, ಸೇವೆ, ಸೌಹಾರ್ದತೆ, ಸಮನ್ವಯ ತತ್ವದ ತಳಹದಿಯ ಮೇಲೆ ಬೆಳೆದಿದೆ ಒಕ್ಕಲಿಗ ಸಮುದಾಯ. ದ್ವೇಷ ಮತ್ತು ಹಸಿಸುಳ್ಳುಗಳನ್ನು ಅವರೆಂದು ಪೋಷಿಸಿ ಬೆಳೆಸಿದವರಲ್ಲ. ಒಂದೀಡಿ ಸಮುದಾಯವನ್ನು ಇಂಥ ನಿಕೃಷ್ಟ ರಾಜಕಾರಣಕ್ಕೆ ಇಳಿಸಿ, ಬಳಸಬಹುದು ಎಂಬ ಪಾಪಿಚಿಂತನೆಯೇ ಬಿಜೆಪಿಯ ಹೊಲಸು ರಾಜಕಾರಣದ ಪರಾಕಾಷ್ಠೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ; ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ. #ಒಕ್ಕಲಿಗರ_ಮೇಲೆ_ಬಿಜೆಪಿ_ವಕ್ರದೃಷ್ಟಿ ಎಂಬ ಹ್ಯಾಸ್‌ಟ್ಯಾಗ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಡೆದ ಸಾಲುಸಾಲು ಭ್ರಷ್ಟಾಚಾರದ ಹಗರಣಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...