Homeಮುಖಪುಟಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನ ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ

- Advertisement -
- Advertisement -

ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂದ್ರಮೋದಿಯವರು ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ ಎಂದು ಮಾಜ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದಿರುವ ಅವರು, “ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ” ಎಂದಿದ್ದಾರೆ.

ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ ದುರುದ್ದೇಶವೇನು? ಇದು ಪರಮಪೂಜ್ಯರಿಗೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರೆ.

ಇಂತಹ ಚಿಲ್ಲರೆ, ದ್ವೇಷದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದು ಎನ್ನುವುದು ಭ್ರಮೆ, ಮೂರ್ಖತನದ ಪರಮಾವಧಿ. ಹೆಸರು ಬದಲಿಸಿದ ನಂತರ ಸಾರ್ವಜನಿಕರು, ಸ್ಥಳೀಯರು, ಕನ್ನಡಪರ, ಪ್ರಗತಿಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದೇ ತಡ, ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಕಾಲ್ಪನಿಕ ಹೆಸರಗಳನ್ನು ತೆರವುಗೊಳಿಸಿ ಗೌರವ ಉಳಿಸಿಕೊಂಡಿದೆ ಎಂದಿದ್ದಾರೆ.

ಇಂತಹ ಲಜ್ಜಗೇಡಿ ನಡೆ ರಾಜ್ಯ ಬಿಜೆಪಿ ಸರಕಾರದ ನೀಚ ರಾಜಕಾರಣಕ್ಕೆ ಸಾಕ್ಷಿ. ಪ್ರಧಾನಿ ಶ್ರೀ ಮೋದಿ ಅವರನ್ನು ಮೆಚ್ಚಿಸಲು ಉರಿಗೌಡ, ನಂಜೇಗೌಡ ಹೆಸರುಗಳನ್ನು ಸೃಷ್ಟಿಸಲಾಯಿತಾ? ಅಥವಾ ಆ ಷಡ್ಯಂತ್ರಕ್ಕೆ ರಾಜ್ಯ ಸರಕಾರದ ಒಪ್ಪಿಗೆಯೂ ಇತ್ತಾ? ಇಲ್ಲವೇ, ಇಂಥ ಹೊಣೆಗೇಡಿ ಕೃತ್ಯದ ಬಗ್ಗೆ ಪ್ರಧಾನಿ ಕಚೇರಿಗೂ ಮಾಹಿತಿ ಇತ್ತಾ? ತಿಳಿಯಬೇಕಿದೆ ಎಂದಿದ್ದಾರೆ.

ಸುಳ್ಳುಗಳಿಗೆ ಆಯಸ್ಸು ಬಹಳ ಕಡಿಮೆ ಎನ್ನುವುದನ್ನು ಇನ್ನಾದರೂ ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಸುಳ್ಳುಗಳ ಮಹಾ ಕಾರ್ಖಾನೆಯನ್ನೇ ತೆರೆದು ʼಸುಳ್ಳುಸೃಷ್ಟಿʼ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಈಗ ಸ್ವಾಭಿಮಾನದಿಂದ ಭೂಮಿತಾಯಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗರ ಮೇಲೆ ಬಿದ್ದಿದೆ.
ಇಡೀ ಒಕ್ಕಲಿಗ ಸಮುದಾಯವನ್ನು ಅಪಹಾಸ್ಯಕ್ಕೆ ಗುರಿ ಮಾಡುವ, ಇಡೀ ಸಮುದಾಯಕ್ಕೆ ಅಪಕೀರ್ತಿ ತರುವ ಹಾಗೂ ಟಿಪ್ಪುವನ್ನು ಕೊಂದ ಕಳಂಕವನ್ನು ಒಕ್ಕಲಿಗರಿಗೆ ಅಂಟಿಸುವ ಹೀನ ಕೆಲಸವನ್ನು ಬಿಜೆಪಿ ಮಾಡಲು ಹೊರಟಿದೆ. ಇದನ್ನು ಒಕ್ಕಲಿಗರು ಸಹಿಸರು ಎಂದು ಹೇಳಿದ್ದಾರೆ.

ಒಂದೆಡೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಒಕ್ಕಲಿಗರನ್ನು ಓಲೈಸುವ ಕೆಲಸ ಮಾಡುತ್ತಿರುವ ಬಿಜೆಪಿಗರು, ಇನ್ನೊಂದೆಡೆ ಕೊಲೆಯ ಕಳಂಕವನ್ನು ಮೆತ್ತಿ, ಅದೇ ಒಕ್ಕಲಿಗ ಸಮುದಾಯಕ್ಕೆ ಐತಿಹಾಸಿಕವಾಗಿ ಶಾಶ್ವತ ಕಪ್ಪುಚುಕ್ಕೆ ಮೆತ್ತಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಕ್ಕಾಗಿ ಮಾನಕ್ಕೂ ಅಂಜದ ಬಿಜೆಪಿ, ಸುಳ್ಳಿನ ಮೂಲಕ ಚುನಾವಣೆ ಗೆಲ್ಲಲು ಹೊರಟಂತಿದೆ. ರೋಡ್ ಶೋ ಮೂಲಕ ಮಂಡ್ಯದ ಜನರಿಗೆ ಮೋಡಿ ಮಾಡುವುದು ಎಂದರೆ ಇದೇನಾ? ಇಂಥ ವಿದ್ರೋಹಿ ಕೃತ್ಯಗಳನ್ನು ಒಕ್ಕಲಿಗರು ಮಾತ್ರವಲ್ಲ, ಸೌಹಾರ್ದತೆಯಿಂದ ರಾಜ್ಯದಲ್ಲಿ ಬಾಳುತ್ತಿರುವ ಯಾವ ಸಮುದಾಯವೂ ಸಹಿಸದು.
ತಾಳ್ಮೆ, ಸ್ವಾಭಿಮಾನ, ಸ್ವಂತಿಕೆ, ಸೇವೆ, ಸೌಹಾರ್ದತೆ, ಸಮನ್ವಯ ತತ್ವದ ತಳಹದಿಯ ಮೇಲೆ ಬೆಳೆದಿದೆ ಒಕ್ಕಲಿಗ ಸಮುದಾಯ. ದ್ವೇಷ ಮತ್ತು ಹಸಿಸುಳ್ಳುಗಳನ್ನು ಅವರೆಂದು ಪೋಷಿಸಿ ಬೆಳೆಸಿದವರಲ್ಲ. ಒಂದೀಡಿ ಸಮುದಾಯವನ್ನು ಇಂಥ ನಿಕೃಷ್ಟ ರಾಜಕಾರಣಕ್ಕೆ ಇಳಿಸಿ, ಬಳಸಬಹುದು ಎಂಬ ಪಾಪಿಚಿಂತನೆಯೇ ಬಿಜೆಪಿಯ ಹೊಲಸು ರಾಜಕಾರಣದ ಪರಾಕಾಷ್ಠೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ; ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ. #ಒಕ್ಕಲಿಗರ_ಮೇಲೆ_ಬಿಜೆಪಿ_ವಕ್ರದೃಷ್ಟಿ ಎಂಬ ಹ್ಯಾಸ್‌ಟ್ಯಾಗ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಡೆದ ಸಾಲುಸಾಲು ಭ್ರಷ್ಟಾಚಾರದ ಹಗರಣಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...