Homeಮುಖಪುಟಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನ ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ

- Advertisement -
- Advertisement -

ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂದ್ರಮೋದಿಯವರು ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ ಎಂದು ಮಾಜ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದಿರುವ ಅವರು, “ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ” ಎಂದಿದ್ದಾರೆ.

ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ ದುರುದ್ದೇಶವೇನು? ಇದು ಪರಮಪೂಜ್ಯರಿಗೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರೆ.

ಇಂತಹ ಚಿಲ್ಲರೆ, ದ್ವೇಷದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದು ಎನ್ನುವುದು ಭ್ರಮೆ, ಮೂರ್ಖತನದ ಪರಮಾವಧಿ. ಹೆಸರು ಬದಲಿಸಿದ ನಂತರ ಸಾರ್ವಜನಿಕರು, ಸ್ಥಳೀಯರು, ಕನ್ನಡಪರ, ಪ್ರಗತಿಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದೇ ತಡ, ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಕಾಲ್ಪನಿಕ ಹೆಸರಗಳನ್ನು ತೆರವುಗೊಳಿಸಿ ಗೌರವ ಉಳಿಸಿಕೊಂಡಿದೆ ಎಂದಿದ್ದಾರೆ.

ಇಂತಹ ಲಜ್ಜಗೇಡಿ ನಡೆ ರಾಜ್ಯ ಬಿಜೆಪಿ ಸರಕಾರದ ನೀಚ ರಾಜಕಾರಣಕ್ಕೆ ಸಾಕ್ಷಿ. ಪ್ರಧಾನಿ ಶ್ರೀ ಮೋದಿ ಅವರನ್ನು ಮೆಚ್ಚಿಸಲು ಉರಿಗೌಡ, ನಂಜೇಗೌಡ ಹೆಸರುಗಳನ್ನು ಸೃಷ್ಟಿಸಲಾಯಿತಾ? ಅಥವಾ ಆ ಷಡ್ಯಂತ್ರಕ್ಕೆ ರಾಜ್ಯ ಸರಕಾರದ ಒಪ್ಪಿಗೆಯೂ ಇತ್ತಾ? ಇಲ್ಲವೇ, ಇಂಥ ಹೊಣೆಗೇಡಿ ಕೃತ್ಯದ ಬಗ್ಗೆ ಪ್ರಧಾನಿ ಕಚೇರಿಗೂ ಮಾಹಿತಿ ಇತ್ತಾ? ತಿಳಿಯಬೇಕಿದೆ ಎಂದಿದ್ದಾರೆ.

ಸುಳ್ಳುಗಳಿಗೆ ಆಯಸ್ಸು ಬಹಳ ಕಡಿಮೆ ಎನ್ನುವುದನ್ನು ಇನ್ನಾದರೂ ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು. ಸುಳ್ಳುಗಳ ಮಹಾ ಕಾರ್ಖಾನೆಯನ್ನೇ ತೆರೆದು ʼಸುಳ್ಳುಸೃಷ್ಟಿʼ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಈಗ ಸ್ವಾಭಿಮಾನದಿಂದ ಭೂಮಿತಾಯಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗರ ಮೇಲೆ ಬಿದ್ದಿದೆ.
ಇಡೀ ಒಕ್ಕಲಿಗ ಸಮುದಾಯವನ್ನು ಅಪಹಾಸ್ಯಕ್ಕೆ ಗುರಿ ಮಾಡುವ, ಇಡೀ ಸಮುದಾಯಕ್ಕೆ ಅಪಕೀರ್ತಿ ತರುವ ಹಾಗೂ ಟಿಪ್ಪುವನ್ನು ಕೊಂದ ಕಳಂಕವನ್ನು ಒಕ್ಕಲಿಗರಿಗೆ ಅಂಟಿಸುವ ಹೀನ ಕೆಲಸವನ್ನು ಬಿಜೆಪಿ ಮಾಡಲು ಹೊರಟಿದೆ. ಇದನ್ನು ಒಕ್ಕಲಿಗರು ಸಹಿಸರು ಎಂದು ಹೇಳಿದ್ದಾರೆ.

ಒಂದೆಡೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಒಕ್ಕಲಿಗರನ್ನು ಓಲೈಸುವ ಕೆಲಸ ಮಾಡುತ್ತಿರುವ ಬಿಜೆಪಿಗರು, ಇನ್ನೊಂದೆಡೆ ಕೊಲೆಯ ಕಳಂಕವನ್ನು ಮೆತ್ತಿ, ಅದೇ ಒಕ್ಕಲಿಗ ಸಮುದಾಯಕ್ಕೆ ಐತಿಹಾಸಿಕವಾಗಿ ಶಾಶ್ವತ ಕಪ್ಪುಚುಕ್ಕೆ ಮೆತ್ತಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಕ್ಕಾಗಿ ಮಾನಕ್ಕೂ ಅಂಜದ ಬಿಜೆಪಿ, ಸುಳ್ಳಿನ ಮೂಲಕ ಚುನಾವಣೆ ಗೆಲ್ಲಲು ಹೊರಟಂತಿದೆ. ರೋಡ್ ಶೋ ಮೂಲಕ ಮಂಡ್ಯದ ಜನರಿಗೆ ಮೋಡಿ ಮಾಡುವುದು ಎಂದರೆ ಇದೇನಾ? ಇಂಥ ವಿದ್ರೋಹಿ ಕೃತ್ಯಗಳನ್ನು ಒಕ್ಕಲಿಗರು ಮಾತ್ರವಲ್ಲ, ಸೌಹಾರ್ದತೆಯಿಂದ ರಾಜ್ಯದಲ್ಲಿ ಬಾಳುತ್ತಿರುವ ಯಾವ ಸಮುದಾಯವೂ ಸಹಿಸದು.
ತಾಳ್ಮೆ, ಸ್ವಾಭಿಮಾನ, ಸ್ವಂತಿಕೆ, ಸೇವೆ, ಸೌಹಾರ್ದತೆ, ಸಮನ್ವಯ ತತ್ವದ ತಳಹದಿಯ ಮೇಲೆ ಬೆಳೆದಿದೆ ಒಕ್ಕಲಿಗ ಸಮುದಾಯ. ದ್ವೇಷ ಮತ್ತು ಹಸಿಸುಳ್ಳುಗಳನ್ನು ಅವರೆಂದು ಪೋಷಿಸಿ ಬೆಳೆಸಿದವರಲ್ಲ. ಒಂದೀಡಿ ಸಮುದಾಯವನ್ನು ಇಂಥ ನಿಕೃಷ್ಟ ರಾಜಕಾರಣಕ್ಕೆ ಇಳಿಸಿ, ಬಳಸಬಹುದು ಎಂಬ ಪಾಪಿಚಿಂತನೆಯೇ ಬಿಜೆಪಿಯ ಹೊಲಸು ರಾಜಕಾರಣದ ಪರಾಕಾಷ್ಠೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ; ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ. #ಒಕ್ಕಲಿಗರ_ಮೇಲೆ_ಬಿಜೆಪಿ_ವಕ್ರದೃಷ್ಟಿ ಎಂಬ ಹ್ಯಾಸ್‌ಟ್ಯಾಗ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಡೆದ ಸಾಲುಸಾಲು ಭ್ರಷ್ಟಾಚಾರದ ಹಗರಣಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...