Homeಕರ್ನಾಟಕಗೃಹಜ್ಯೋತಿ ಅರ್ಜಿ ನೋಂದಣಿ: ನಕಲಿ ಲಿಂಕ್‌ಗಳ ಬಗ್ಗೆ ಬೆಸ್ಕಾಂ ಎಚ್ಚರಿಕೆ, ಇಲ್ಲಿದೆ ಅಸಲಿ ಲಿಂಕ್..

ಗೃಹಜ್ಯೋತಿ ಅರ್ಜಿ ನೋಂದಣಿ: ನಕಲಿ ಲಿಂಕ್‌ಗಳ ಬಗ್ಗೆ ಬೆಸ್ಕಾಂ ಎಚ್ಚರಿಕೆ, ಇಲ್ಲಿದೆ ಅಸಲಿ ಲಿಂಕ್..

- Advertisement -
- Advertisement -

ಗೃಹಜ್ಯೋತಿ ಯೋಜನೆ ಫಲಾನುಭವಿಗಳಾಗಲು ಅರ್ಜಿ ನೋಂದಣಿ ಪ್ರಕ್ರಿಯೆ ರಾಜ್ಯಾದ್ಯಂತ ಆರಂಭವಾಗಿದೆ. ಆರಂಭದಲ್ಲಿ ಕೆಲವು ತೊಂದರೆಗಳಾದವು ಆದರೆ ಇದೀಗ ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ನಡುವೆ ಸೈಬರ್ ವಂಚಕರ ಹಾವಳಿ ಜೋರಾಗಿದೆ. ಹಾಗಾಗಿ ಬೆಸ್ಕಾಂ ಅಧಿಕಾರಿಗಳು ಗ್ರಾಹಕರಿಗೆ ನಕಲಿ ಲಿಂಕ್‌ಗಳು ಹರಿದಾಡುತ್ತಿರುವ ಬಗ್ಗೆ ಎಚ್ಚರಿಕೆ ಇರುವಂತೆ ಮನವಿ ಮಾಡಿದ್ದಾರೆ.

ಸೈಬರ್ ವಂಚಕರು ಗೃಹಜ್ಯೋತಿ ಯೋಜನೆ ಅರ್ಜಿ ನೋಂದಣಿಯ ನಕಲಿ ಲಿಂಕ್‌ಗಳನ್ನು ಸೃಷ್ಟಿಸಿದ್ದು. ಆ ಲಿಂಕ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಒಂದುವೇಳೆ ನೀವು ಅಪ್ಪಿ ತಪ್ಪಿ ಆ ಲಿಂಕ್‌ಗಳನ್ನು ಕ್ಲಿಕ್ ಮಾಡಿದರೆ, ನಿಮ್ಮ ವೈಯಕ್ತಿಕ ವಿವರಗಳು, ಬ್ಯಾಂಕ್‌ ಖಾತೆಗೂ ಕನ್ನ ಹಾಕುವ ಸಾಧ್ಯತೆ ಇರುತ್ತದೆ.

ಗ್ರಾಹಕರಿಗೆ ಬೆಸ್ಕಾಂ ಮನವಿ

ನಕಲಿ ಲಿಂಕ್‌ಗಳು ಹರಿದಾಡುತ್ತಿರುವ ಬಗ್ಗೆ ಬೆಸ್ಕಾಂ ಗ್ರಾಹಕರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ. ಅಧಿಕೃತ ವಬ್‌ಸೈಟ್‌ನಲ್ಲಿ ಮಾತ್ರ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದೆ. ಇನ್ನು ನೋಂದಣಿ ಮಾಡಲು ಗೊತ್ತಿರುವವರು, ಅಕ್ಕ ಪಕ್ಕದವರಿಗೆ, ಗೊತ್ತಿಲ್ಲದವರಿಗೆ ನೋಂದಣಿ ಮಾಡಲು ಸಹಾಯ ಮಾಡುವಂತೆ ಮನವಿ ಮಾಡಿದೆ.

https://sevasindhugs.karnataka.gov.in/ ಈ ವೆಬ್‌ಸೈಟ್‌ನಲ್ಲಿ ಮಾತ್ರ ನೀವು ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬೇಕು. ಸಾಕಷ್ಟು ಜನ ಈ ನೋಂದಣಿ ಮಾಡುತ್ತಿರುವ ಕಾರಣ, ಕೆಲವೊಮ್ಮೆ ಸರ್ವರ್ ಬ್ಯುಸಿ ಬರುತ್ತದೆ. ಹಾಗಂತ ನೀವು ಇನ್ಯಾವುದೋ ವೆಬ್‌ಸೈಟ್‌ಗೆ ತೆರಳಿದರೆ ನಿಮ್ಮ ಆಧಾರ್, ಗ್ರಾಹಕರ ಐಡಿ ವಿವರಗಳು ಸೈಬರ್ ಕಳ್ಳರ ಪಾಲಾಗಲಿವೆ.

ಗೃಹಲಕ್ಷ್ಮಿ, ಯುವ ನಿಧಿ ನೋಂದಣಿ ಬಗ್ಗೆ ಇರಲಿ ಜಾಗ್ರತೆ ಗೃಹ ಜ್ಯೋತಿ ಯೋಜನೆಯಲ್ಲಿ ನೀವು ಆಧಾರ್, ಮೊಬೈಲ್ ಸಂಖ್ಯೆ, ಗ್ರಾಹಕರ ಐಡಿ ವಿವರಗಳನ್ನು ಮಾತ್ರ ನೀಡಬೇಕು. ಆದರೆ ಗೃಹ ಲಕ್ಷ್ಮೀ ಯೋಜನೆ ಮತ್ತು ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ನಿಮ್ಮ ಬ್ಯಾಂಕ್ ಖಾತೆ, ಆಧಾರ್ ನಂಬರ್ ಸೇರಿದಂತೆ ಹಲವು ಮಹತ್ವದ ಮಾಹಿತಿ ನೀಡಬೇಕಾಗುತ್ತದೆ.

ಗೃಹ ಲಕ್ಷ್ಮಿ ಮತ್ತು ಯುವ ನಿಧಿ ಯೋಜನೆಗೆ ಇನ್ನೂ ಅರ್ಜಿ ಸ್ವೀಕರಿಸುತ್ತಿಲ್ಲ. ವಾಟ್ಸಾಪ್ ಸೇರಿದಂತೆ ಹಲವು ಕಡೆ ಬರುವ ಸುಳ್ಳು ಮಾಹಿತಿಗೆ ಮರುಳಾಗಿ ನಕಲಿ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿ, ವಿವರಗಳನ್ನು ನಮೂದಿಸಿದರೆ ವಂಚಕರು ನಿಮ್ಮ ಬ್ಯಾಂಕ್‌ ಖಾತೆಗೆ ಕನ್ನ ಹಾಕುವ ಅಪಾಯ ಹೆಚ್ಚಾಗಿದೆ. ಅಧಿಕೃತ ಆದೇಶ ಬರುವವರೆಗೂ ಈ ರೀತಿಯ ಯಾವುದೇ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ, ಸರ್ಕಾರವೇ ನೋಂದಣಿ ಬಗ್ಗೆ ಸೂಚನೆಗಳನ್ನು ನೀಡಲಿದೆ.

ಎಲ್ಲ ಸರ್ಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಸದ್ಯ ಉಚಿತ ವಿದ್ಯುತ್ ಪಡೆಯುವ ಗೃಹ ಜ್ಯೋತಿಗಾಗಿ ಮಾತ್ರ ಅರ್ಜಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿ ತಿಂಗಳು 2000 ರೂಪಾಯಿ ನೀಡುವ ಗೃಹಲಕ್ಷ್ಮಿ, ನಿರುದ್ಯೋಗಿ ಪದವಿಧರರಿಗೆ 3000 ಸಾವಿರ ರೂಪಾಯಿ ನೀಡುವ ಯುವ ನಿಧಿ ಯೋಜನೆಗಳಿಗೆ ಇನ್ನೂ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭವಾಗಿಲ್ಲ. ಈ ಬಗ್ಗೆ ವಾಟ್ಸಾಪ್, ಇನ್‌ಸ್ಟಾಗ್ರಾಂ, ಟ್ವಿಟರ್, ಟೆಲಿಗ್ರಾಂ, ಮೆಸೇಜ್ ಯಾವುದೇ ಮಾಧ್ಯಮಗಳಲ್ಲಿ ಲಿಂಕ್ ಕಂಡರು ಕ್ಲಿಕ್ ಮಾಡಬೇಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...