Homeಕರ್ನಾಟಕಗೃಹಜ್ಯೋತಿ ಅರ್ಜಿ ನೋಂದಣಿ: ನಕಲಿ ಲಿಂಕ್‌ಗಳ ಬಗ್ಗೆ ಬೆಸ್ಕಾಂ ಎಚ್ಚರಿಕೆ, ಇಲ್ಲಿದೆ ಅಸಲಿ ಲಿಂಕ್..

ಗೃಹಜ್ಯೋತಿ ಅರ್ಜಿ ನೋಂದಣಿ: ನಕಲಿ ಲಿಂಕ್‌ಗಳ ಬಗ್ಗೆ ಬೆಸ್ಕಾಂ ಎಚ್ಚರಿಕೆ, ಇಲ್ಲಿದೆ ಅಸಲಿ ಲಿಂಕ್..

- Advertisement -
- Advertisement -

ಗೃಹಜ್ಯೋತಿ ಯೋಜನೆ ಫಲಾನುಭವಿಗಳಾಗಲು ಅರ್ಜಿ ನೋಂದಣಿ ಪ್ರಕ್ರಿಯೆ ರಾಜ್ಯಾದ್ಯಂತ ಆರಂಭವಾಗಿದೆ. ಆರಂಭದಲ್ಲಿ ಕೆಲವು ತೊಂದರೆಗಳಾದವು ಆದರೆ ಇದೀಗ ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ನಡುವೆ ಸೈಬರ್ ವಂಚಕರ ಹಾವಳಿ ಜೋರಾಗಿದೆ. ಹಾಗಾಗಿ ಬೆಸ್ಕಾಂ ಅಧಿಕಾರಿಗಳು ಗ್ರಾಹಕರಿಗೆ ನಕಲಿ ಲಿಂಕ್‌ಗಳು ಹರಿದಾಡುತ್ತಿರುವ ಬಗ್ಗೆ ಎಚ್ಚರಿಕೆ ಇರುವಂತೆ ಮನವಿ ಮಾಡಿದ್ದಾರೆ.

ಸೈಬರ್ ವಂಚಕರು ಗೃಹಜ್ಯೋತಿ ಯೋಜನೆ ಅರ್ಜಿ ನೋಂದಣಿಯ ನಕಲಿ ಲಿಂಕ್‌ಗಳನ್ನು ಸೃಷ್ಟಿಸಿದ್ದು. ಆ ಲಿಂಕ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಒಂದುವೇಳೆ ನೀವು ಅಪ್ಪಿ ತಪ್ಪಿ ಆ ಲಿಂಕ್‌ಗಳನ್ನು ಕ್ಲಿಕ್ ಮಾಡಿದರೆ, ನಿಮ್ಮ ವೈಯಕ್ತಿಕ ವಿವರಗಳು, ಬ್ಯಾಂಕ್‌ ಖಾತೆಗೂ ಕನ್ನ ಹಾಕುವ ಸಾಧ್ಯತೆ ಇರುತ್ತದೆ.

ಗ್ರಾಹಕರಿಗೆ ಬೆಸ್ಕಾಂ ಮನವಿ

ನಕಲಿ ಲಿಂಕ್‌ಗಳು ಹರಿದಾಡುತ್ತಿರುವ ಬಗ್ಗೆ ಬೆಸ್ಕಾಂ ಗ್ರಾಹಕರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ. ಅಧಿಕೃತ ವಬ್‌ಸೈಟ್‌ನಲ್ಲಿ ಮಾತ್ರ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದೆ. ಇನ್ನು ನೋಂದಣಿ ಮಾಡಲು ಗೊತ್ತಿರುವವರು, ಅಕ್ಕ ಪಕ್ಕದವರಿಗೆ, ಗೊತ್ತಿಲ್ಲದವರಿಗೆ ನೋಂದಣಿ ಮಾಡಲು ಸಹಾಯ ಮಾಡುವಂತೆ ಮನವಿ ಮಾಡಿದೆ.

https://sevasindhugs.karnataka.gov.in/ ಈ ವೆಬ್‌ಸೈಟ್‌ನಲ್ಲಿ ಮಾತ್ರ ನೀವು ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬೇಕು. ಸಾಕಷ್ಟು ಜನ ಈ ನೋಂದಣಿ ಮಾಡುತ್ತಿರುವ ಕಾರಣ, ಕೆಲವೊಮ್ಮೆ ಸರ್ವರ್ ಬ್ಯುಸಿ ಬರುತ್ತದೆ. ಹಾಗಂತ ನೀವು ಇನ್ಯಾವುದೋ ವೆಬ್‌ಸೈಟ್‌ಗೆ ತೆರಳಿದರೆ ನಿಮ್ಮ ಆಧಾರ್, ಗ್ರಾಹಕರ ಐಡಿ ವಿವರಗಳು ಸೈಬರ್ ಕಳ್ಳರ ಪಾಲಾಗಲಿವೆ.

ಗೃಹಲಕ್ಷ್ಮಿ, ಯುವ ನಿಧಿ ನೋಂದಣಿ ಬಗ್ಗೆ ಇರಲಿ ಜಾಗ್ರತೆ ಗೃಹ ಜ್ಯೋತಿ ಯೋಜನೆಯಲ್ಲಿ ನೀವು ಆಧಾರ್, ಮೊಬೈಲ್ ಸಂಖ್ಯೆ, ಗ್ರಾಹಕರ ಐಡಿ ವಿವರಗಳನ್ನು ಮಾತ್ರ ನೀಡಬೇಕು. ಆದರೆ ಗೃಹ ಲಕ್ಷ್ಮೀ ಯೋಜನೆ ಮತ್ತು ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ನಿಮ್ಮ ಬ್ಯಾಂಕ್ ಖಾತೆ, ಆಧಾರ್ ನಂಬರ್ ಸೇರಿದಂತೆ ಹಲವು ಮಹತ್ವದ ಮಾಹಿತಿ ನೀಡಬೇಕಾಗುತ್ತದೆ.

ಗೃಹ ಲಕ್ಷ್ಮಿ ಮತ್ತು ಯುವ ನಿಧಿ ಯೋಜನೆಗೆ ಇನ್ನೂ ಅರ್ಜಿ ಸ್ವೀಕರಿಸುತ್ತಿಲ್ಲ. ವಾಟ್ಸಾಪ್ ಸೇರಿದಂತೆ ಹಲವು ಕಡೆ ಬರುವ ಸುಳ್ಳು ಮಾಹಿತಿಗೆ ಮರುಳಾಗಿ ನಕಲಿ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿ, ವಿವರಗಳನ್ನು ನಮೂದಿಸಿದರೆ ವಂಚಕರು ನಿಮ್ಮ ಬ್ಯಾಂಕ್‌ ಖಾತೆಗೆ ಕನ್ನ ಹಾಕುವ ಅಪಾಯ ಹೆಚ್ಚಾಗಿದೆ. ಅಧಿಕೃತ ಆದೇಶ ಬರುವವರೆಗೂ ಈ ರೀತಿಯ ಯಾವುದೇ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ, ಸರ್ಕಾರವೇ ನೋಂದಣಿ ಬಗ್ಗೆ ಸೂಚನೆಗಳನ್ನು ನೀಡಲಿದೆ.

ಎಲ್ಲ ಸರ್ಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಸದ್ಯ ಉಚಿತ ವಿದ್ಯುತ್ ಪಡೆಯುವ ಗೃಹ ಜ್ಯೋತಿಗಾಗಿ ಮಾತ್ರ ಅರ್ಜಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿ ತಿಂಗಳು 2000 ರೂಪಾಯಿ ನೀಡುವ ಗೃಹಲಕ್ಷ್ಮಿ, ನಿರುದ್ಯೋಗಿ ಪದವಿಧರರಿಗೆ 3000 ಸಾವಿರ ರೂಪಾಯಿ ನೀಡುವ ಯುವ ನಿಧಿ ಯೋಜನೆಗಳಿಗೆ ಇನ್ನೂ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭವಾಗಿಲ್ಲ. ಈ ಬಗ್ಗೆ ವಾಟ್ಸಾಪ್, ಇನ್‌ಸ್ಟಾಗ್ರಾಂ, ಟ್ವಿಟರ್, ಟೆಲಿಗ್ರಾಂ, ಮೆಸೇಜ್ ಯಾವುದೇ ಮಾಧ್ಯಮಗಳಲ್ಲಿ ಲಿಂಕ್ ಕಂಡರು ಕ್ಲಿಕ್ ಮಾಡಬೇಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...