Homeಕರ್ನಾಟಕಗೃಹಜ್ಯೋತಿ ಅರ್ಜಿ ನೋಂದಣಿ: ನಕಲಿ ಲಿಂಕ್‌ಗಳ ಬಗ್ಗೆ ಬೆಸ್ಕಾಂ ಎಚ್ಚರಿಕೆ, ಇಲ್ಲಿದೆ ಅಸಲಿ ಲಿಂಕ್..

ಗೃಹಜ್ಯೋತಿ ಅರ್ಜಿ ನೋಂದಣಿ: ನಕಲಿ ಲಿಂಕ್‌ಗಳ ಬಗ್ಗೆ ಬೆಸ್ಕಾಂ ಎಚ್ಚರಿಕೆ, ಇಲ್ಲಿದೆ ಅಸಲಿ ಲಿಂಕ್..

- Advertisement -
- Advertisement -

ಗೃಹಜ್ಯೋತಿ ಯೋಜನೆ ಫಲಾನುಭವಿಗಳಾಗಲು ಅರ್ಜಿ ನೋಂದಣಿ ಪ್ರಕ್ರಿಯೆ ರಾಜ್ಯಾದ್ಯಂತ ಆರಂಭವಾಗಿದೆ. ಆರಂಭದಲ್ಲಿ ಕೆಲವು ತೊಂದರೆಗಳಾದವು ಆದರೆ ಇದೀಗ ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ನಡುವೆ ಸೈಬರ್ ವಂಚಕರ ಹಾವಳಿ ಜೋರಾಗಿದೆ. ಹಾಗಾಗಿ ಬೆಸ್ಕಾಂ ಅಧಿಕಾರಿಗಳು ಗ್ರಾಹಕರಿಗೆ ನಕಲಿ ಲಿಂಕ್‌ಗಳು ಹರಿದಾಡುತ್ತಿರುವ ಬಗ್ಗೆ ಎಚ್ಚರಿಕೆ ಇರುವಂತೆ ಮನವಿ ಮಾಡಿದ್ದಾರೆ.

ಸೈಬರ್ ವಂಚಕರು ಗೃಹಜ್ಯೋತಿ ಯೋಜನೆ ಅರ್ಜಿ ನೋಂದಣಿಯ ನಕಲಿ ಲಿಂಕ್‌ಗಳನ್ನು ಸೃಷ್ಟಿಸಿದ್ದು. ಆ ಲಿಂಕ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಒಂದುವೇಳೆ ನೀವು ಅಪ್ಪಿ ತಪ್ಪಿ ಆ ಲಿಂಕ್‌ಗಳನ್ನು ಕ್ಲಿಕ್ ಮಾಡಿದರೆ, ನಿಮ್ಮ ವೈಯಕ್ತಿಕ ವಿವರಗಳು, ಬ್ಯಾಂಕ್‌ ಖಾತೆಗೂ ಕನ್ನ ಹಾಕುವ ಸಾಧ್ಯತೆ ಇರುತ್ತದೆ.

ಗ್ರಾಹಕರಿಗೆ ಬೆಸ್ಕಾಂ ಮನವಿ

ನಕಲಿ ಲಿಂಕ್‌ಗಳು ಹರಿದಾಡುತ್ತಿರುವ ಬಗ್ಗೆ ಬೆಸ್ಕಾಂ ಗ್ರಾಹಕರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ. ಅಧಿಕೃತ ವಬ್‌ಸೈಟ್‌ನಲ್ಲಿ ಮಾತ್ರ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದೆ. ಇನ್ನು ನೋಂದಣಿ ಮಾಡಲು ಗೊತ್ತಿರುವವರು, ಅಕ್ಕ ಪಕ್ಕದವರಿಗೆ, ಗೊತ್ತಿಲ್ಲದವರಿಗೆ ನೋಂದಣಿ ಮಾಡಲು ಸಹಾಯ ಮಾಡುವಂತೆ ಮನವಿ ಮಾಡಿದೆ.

https://sevasindhugs.karnataka.gov.in/ ಈ ವೆಬ್‌ಸೈಟ್‌ನಲ್ಲಿ ಮಾತ್ರ ನೀವು ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬೇಕು. ಸಾಕಷ್ಟು ಜನ ಈ ನೋಂದಣಿ ಮಾಡುತ್ತಿರುವ ಕಾರಣ, ಕೆಲವೊಮ್ಮೆ ಸರ್ವರ್ ಬ್ಯುಸಿ ಬರುತ್ತದೆ. ಹಾಗಂತ ನೀವು ಇನ್ಯಾವುದೋ ವೆಬ್‌ಸೈಟ್‌ಗೆ ತೆರಳಿದರೆ ನಿಮ್ಮ ಆಧಾರ್, ಗ್ರಾಹಕರ ಐಡಿ ವಿವರಗಳು ಸೈಬರ್ ಕಳ್ಳರ ಪಾಲಾಗಲಿವೆ.

ಗೃಹಲಕ್ಷ್ಮಿ, ಯುವ ನಿಧಿ ನೋಂದಣಿ ಬಗ್ಗೆ ಇರಲಿ ಜಾಗ್ರತೆ ಗೃಹ ಜ್ಯೋತಿ ಯೋಜನೆಯಲ್ಲಿ ನೀವು ಆಧಾರ್, ಮೊಬೈಲ್ ಸಂಖ್ಯೆ, ಗ್ರಾಹಕರ ಐಡಿ ವಿವರಗಳನ್ನು ಮಾತ್ರ ನೀಡಬೇಕು. ಆದರೆ ಗೃಹ ಲಕ್ಷ್ಮೀ ಯೋಜನೆ ಮತ್ತು ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ನಿಮ್ಮ ಬ್ಯಾಂಕ್ ಖಾತೆ, ಆಧಾರ್ ನಂಬರ್ ಸೇರಿದಂತೆ ಹಲವು ಮಹತ್ವದ ಮಾಹಿತಿ ನೀಡಬೇಕಾಗುತ್ತದೆ.

ಗೃಹ ಲಕ್ಷ್ಮಿ ಮತ್ತು ಯುವ ನಿಧಿ ಯೋಜನೆಗೆ ಇನ್ನೂ ಅರ್ಜಿ ಸ್ವೀಕರಿಸುತ್ತಿಲ್ಲ. ವಾಟ್ಸಾಪ್ ಸೇರಿದಂತೆ ಹಲವು ಕಡೆ ಬರುವ ಸುಳ್ಳು ಮಾಹಿತಿಗೆ ಮರುಳಾಗಿ ನಕಲಿ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿ, ವಿವರಗಳನ್ನು ನಮೂದಿಸಿದರೆ ವಂಚಕರು ನಿಮ್ಮ ಬ್ಯಾಂಕ್‌ ಖಾತೆಗೆ ಕನ್ನ ಹಾಕುವ ಅಪಾಯ ಹೆಚ್ಚಾಗಿದೆ. ಅಧಿಕೃತ ಆದೇಶ ಬರುವವರೆಗೂ ಈ ರೀತಿಯ ಯಾವುದೇ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ, ಸರ್ಕಾರವೇ ನೋಂದಣಿ ಬಗ್ಗೆ ಸೂಚನೆಗಳನ್ನು ನೀಡಲಿದೆ.

ಎಲ್ಲ ಸರ್ಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಸದ್ಯ ಉಚಿತ ವಿದ್ಯುತ್ ಪಡೆಯುವ ಗೃಹ ಜ್ಯೋತಿಗಾಗಿ ಮಾತ್ರ ಅರ್ಜಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿ ತಿಂಗಳು 2000 ರೂಪಾಯಿ ನೀಡುವ ಗೃಹಲಕ್ಷ್ಮಿ, ನಿರುದ್ಯೋಗಿ ಪದವಿಧರರಿಗೆ 3000 ಸಾವಿರ ರೂಪಾಯಿ ನೀಡುವ ಯುವ ನಿಧಿ ಯೋಜನೆಗಳಿಗೆ ಇನ್ನೂ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭವಾಗಿಲ್ಲ. ಈ ಬಗ್ಗೆ ವಾಟ್ಸಾಪ್, ಇನ್‌ಸ್ಟಾಗ್ರಾಂ, ಟ್ವಿಟರ್, ಟೆಲಿಗ್ರಾಂ, ಮೆಸೇಜ್ ಯಾವುದೇ ಮಾಧ್ಯಮಗಳಲ್ಲಿ ಲಿಂಕ್ ಕಂಡರು ಕ್ಲಿಕ್ ಮಾಡಬೇಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...