Homeಮುಖಪುಟಕಾರ್ಮಿಕರ ಮೇಲೆ ಹಿಡಿತ : ಕೊರೊನಾ ಹೆಸರಲ್ಲಿ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ.

ಕಾರ್ಮಿಕರ ಮೇಲೆ ಹಿಡಿತ : ಕೊರೊನಾ ಹೆಸರಲ್ಲಿ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಯೋಜಿತವಲ್ಲದ ಲಾಕ್‌ಡೌನ್ ಸಾರಿಗೆ, ಆರೋಗ್ಯ, ಉದ್ಯೋಗ, ಹಣಕಾಸು ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗಳಿಗೆ ತೀವ್ರವಾದ ಸಮಸ್ಯೆಗಳನ್ನು ತಂದೊಡ್ಡಿದೆ. ಇದಾಗಿಯೂ ವಲಸೆ ಕಾರ್ಮಿಕರ ಬಿಕ್ಕಟ್ಟು ದೇಶ ಸ್ವಾತಂತ್ರ್ಯ ಗಳಿಸಿದಾಗಿನಿಂದ ಅತ್ಯಂತ ದುಃಖಕರ ಘಟನೆಯಲ್ಲಿ ಒಂದಾಗಿದೆ.

ದೆಹಲಿ ಹಾಗೂ ಯು.ಪಿ.ಯಲ್ಲಿ ವಲಸೆ ಕಾರ್ಮಿಕರ ದೈನಂದಿನ ವರದಿಗಳನ್ನು ನಾವು ನೋಡುತ್ತಿದ್ದೇವೆ. ಬಿಹಾರ್‌ನ ರೈಲ್ವೆ ನಿಲ್ದಾಣವೊಂದರಲ್ಲಿ ಮೃತ ತಾಯಿಯನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರು ಮಗುವಿನ ದೃಶ್ಯವನ್ನು ನೋಡಿದ್ದೇವೆ. ಆಹಾರದ ಕೊರತೆಯಿಂದಾಗಿ ಶ್ರಮಿಕ್ ವಿಶೇಷ ರೈಲುಗಳಲ್ಲಿ ಕಾರ್ಮಿಕರು ಸಾಯುತ್ತಿದ್ದಾರೆ. ಇವೆಲ್ಲವೂ ಮೋದಿ ಭರವಸೆ ನೀಡಿದ ‘ಅಚ್ಛೇ ದಿನ’ಗಳ ನಿಜರೂಪವನ್ನು ಅರಿತುಕೊಳ್ಳಲು ಸಹಾಯ ಮಾಡುತ್ತದೆ.

ಈ ಪರಿಸ್ಥಿತಿಯಿಂದ ಹೊರಬಂದು ವಲಸೆ ಕಾರ್ಮಿಕರಿಗೆ ಸಹಾಯ ಮಾಡಲು ಹಲವು ರಾಜ್ಯಗಳು ಪ್ರಯತ್ನಿಸುತ್ತಿದ್ದರೆ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಂತಹ ಕೆಲವು ರಾಜ್ಯಗಳು ಅವರ ವಿರುದ್ಧ ವಿಲಕ್ಷಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಮೂಲಕ ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ.

ಇತ್ತೀಚೆಗೆ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಸರ್ಕಾರವು ತನ್ನ ಕಾರ್ಮಿಕ ಕಾನೂನುಗಳಿಗೆ ಹಲವಾರು ತಿದ್ದುಪಡಿಗಳನ್ನು ಗೆಜೆಟ್ ಮಾಡಿ, ಕಾರ್ಖಾನೆಗಳ ಕಾಯ್ದೆಯ ಅಗತ್ಯ ನಿಬಂಧನೆಗಳನ್ನು ಮೊಟಕುಗೊಳಿಸಿ ಕಾರ್ಖಾನೆಗಳ ಮಾಲಿಕರಿಗೆ ನೆರವಾಯಿತು. ಅಂತೆಯೇ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕೆಲವು ಮೂಲಭೂತ ನಿಬಂಧನೆಗಳನ್ನು ಹೊರತುಪಡಿಸಿ, ಮೂರು ವರ್ಷಗಳ ಅವಧಿಗೆ, ಉತ್ಪಾದನಾ ಪ್ರಕ್ರಿಯೆಯಲ್ಲಿ ತೊಡಗಿರುವ ಎಲ್ಲಾ ಕಾರ್ಖಾನೆಗಳು ಮತ್ತು ಸಂಸ್ಥೆಗಳನ್ನು ಎಲ್ಲಾ ಕಾರ್ಮಿಕ ಕಾನೂನುಗಳ ಕಾರ್ಯಾಚರಣೆಯಿಂದ ವಿನಾಯಿತಿ ನೀಡಿದೆ.

ಆಶ್ಚರ್ಯಕರ ಸುಗ್ರೀವಾಜ್ಞೆಗಳು ಮತ್ತು ಆದೇಶಗಳ ಸರಣಿಯಲ್ಲಿ, ಉತ್ತರ ಪ್ರದೇಶದ ರಾಜ್ಯದ ಕಾರ್ಮಿಕರನ್ನು ಬೇರೆ ರಾಜ್ಯಗಳು ಸರ್ಕಾರದ ಅನುಮತಿಯೊಂದಿಗೆ ನೇಮಿಸಬೇಕು ಎಂದು ಇತ್ತೀಚೆಗೆ ಅಸಂವಿಧಾನಿಕ ಹೇಳಿಕೆ ನೀಡಿದೆ. ಇದಕ್ಕಾಗಿ ಕಾರ್ಮಿಕರು ಜೀವನೋಪಾಯವನ್ನು ಗಳಿಸಲು ರಾಜ್ಯ ಸರ್ಕಾರದ ಅನುಮತಿಗೆ ಕಾಯಬೇಕಾಗುತ್ತದೆ.

ಮೇಲಿನ ಹೇಳಿಕೆ ಭಾರತ ಸಂವಿದಾನದ ಸ್ಪಷ್ಟ ಉಲ್ಲಂಘನೆಯಾಗಿದ್ದು, ಭಾರತದ ಸಂವಿಧಾನದ ಆರ್ಟಿಕಲ್ 19 (1) (ಡಿ) – ಎಲ್ಲಾ ನಾಗರಿಕರಿಗೆ ಭಾರತದ ಭೂಪ್ರದೇಶದಾದ್ಯಂತ ಮುಕ್ತವಾಗಿ ಚಲಿಸುವ ಹಕ್ಕನ್ನು ಖಾತರಿಪಡಿಸುತ್ತದೆ. ಅಲ್ಲದೆ, ಆರ್ಟಿಕಲ್ 19 (1) (ಇ) ಎಲ್ಲಾ ನಾಗರಿಕರಿಗೆ ಭಾರತದ ಯಾವುದೇ ಭಾಗದಲ್ಲಿ ವಾಸಿಸುವ ಮತ್ತು ನೆಲೆಸುವ ಹಕ್ಕನ್ನು ಖಾತರಿಪಡಿಸುತ್ತದೆ.

ಇದ್ಯಾವುದನ್ನೂ ಉತ್ತರ ಪ್ರದೇಶದ ಆದಿತ್ಯನಾಥ್ ಸರ್ಕಾರ ಪರಿಗಣಿಸದೇ ಕಾರ್ಮಿಕರು ಬೇರೆ ರಾಜ್ಯಗಳಿಗೆ ಹೋಗ ಬೇಕಾದರೆ ಸರ್ಕಾರದ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ, ಜೊತೆಗೆ ರಾಜ್ಯದ ಕಾರ್ಮಿಕ ಕಾನೂನನ್ನು ಅಮಾನತಿನಲ್ಲಿಟ್ಟಿದೆ. ಇವೆಲ್ಲವನ್ನೂ ಜೊತೆಯಲ್ಲಿಟ್ಟುಕೊಂಡೇ ನೋಡಬೇಕಾಗುತ್ತದೆ. ಯಾಕೆಂದರೆ ಎಲ್ಲಾ ಸರಕಾರವೂ ಬಂಡವಾಳಶಾಹಿಗಳ ಪರವಾಗಿಯೇ ಇರುತ್ತದೆ.

ತನ್ನ ಹೇಳಿಕೆಗೆ ಆದಿತ್ಯನಾಥ್ ಕೊಟ್ಟಿರುವ ಸಮರ್ಥನೆಯೇನೆಂದರೆ ಉತ್ತರ ಪ್ರದೇಶದ ಕಾರ್ಮಿಕರನ್ನು ಇತರ ರಾಜ್ಯಗಳು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು. ಆದರೆ ಸ್ವತಃ ತನ್ನ ರಾಜ್ಯದಲ್ಲಿ ಮಾತ್ರ ಕಾರ್ಮಿಕರ ಸಂವಿಧಾನಿಕ ದತ್ತವಾಗಿರುವ ಕಾರ್ಮಿಕರ ಹಕ್ಕನ್ನು ತಡೆಹಿಡಿದಿದ್ದಾರೆ, ಅಂದರೆ ಮುಂದಿನ ಮೂರು ವರ್ಷಗಳಲ್ಲಿ ಅವರು ತಮ್ಮ ರಾಜ್ಯದ ಕಾರ್ಮಿಕರ ಶೋಷಣೆ ಮಾಡಲು ಒಪ್ಪಿಗೆ ಕೊಟ್ಟಿದ್ದಾರೆ ಎಂದೇ ಅರ್ಥ. ಒಟ್ಟಿನಲ್ಲಿ ನೋಡುವುದಾದರೆ ತಮ್ಮ ರಾಜ್ಯದ ಕಾರ್ಮಿಕರನ್ನು ಒತ್ತೆಯಾಳುಗಳಂತೆ ಮಾಡಿ ತಮ್ಮ ರಾಜ್ಯದಲ್ಲೆ ಉಳಿಸಿ ಜೀತ ಮಾಡಿಸುವ ಹುನ್ನಾರ ಈ ಹೇಳಿಕೆಯಲ್ಲಿದೆ.

ಕೊರೊನಾ ಸೋಂಕಿನ ಹೆಸರಲ್ಲಿ ಅಧೀಕೃತ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ. ನಮ್ಮ ಪೂರ್ವಜರು ತ್ಯಾಗ ಬಲಿದಾನದಿಂದ ಗಳಿಸಿದ ಸ್ವಾತಂತ್ರ್ಯವನ್ನು ನಾವೇ ಆರಿಸಿದ ವ್ಯಕ್ತಿಗಳು ನಮ್ಮಿಂದ ಕಿತ್ತುಕೊಳ್ಳುತ್ತಿದ್ದಾರೆ.

  • ಅಮರೀಶ್‌ ರಂಜನ್‌ ಪಾಂಡೆ ಮತ್ತು ಅಂಬುಜ್‌ ದಿಕ್ಷಿತ್‌ (ಉತ್ತರ ಪ್ರದೇಶ)

ಕೃಪೆ: ನ್ಯಾಷನಲ್‌ ಹೆರಾಲ್ಡ್


ಓದಿ: ಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...