Homeಮುಖಪುಟಕಾರ್ಮಿಕರ ಮೇಲೆ ಹಿಡಿತ : ಕೊರೊನಾ ಹೆಸರಲ್ಲಿ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ.

ಕಾರ್ಮಿಕರ ಮೇಲೆ ಹಿಡಿತ : ಕೊರೊನಾ ಹೆಸರಲ್ಲಿ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಯೋಜಿತವಲ್ಲದ ಲಾಕ್‌ಡೌನ್ ಸಾರಿಗೆ, ಆರೋಗ್ಯ, ಉದ್ಯೋಗ, ಹಣಕಾಸು ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗಳಿಗೆ ತೀವ್ರವಾದ ಸಮಸ್ಯೆಗಳನ್ನು ತಂದೊಡ್ಡಿದೆ. ಇದಾಗಿಯೂ ವಲಸೆ ಕಾರ್ಮಿಕರ ಬಿಕ್ಕಟ್ಟು ದೇಶ ಸ್ವಾತಂತ್ರ್ಯ ಗಳಿಸಿದಾಗಿನಿಂದ ಅತ್ಯಂತ ದುಃಖಕರ ಘಟನೆಯಲ್ಲಿ ಒಂದಾಗಿದೆ.

ದೆಹಲಿ ಹಾಗೂ ಯು.ಪಿ.ಯಲ್ಲಿ ವಲಸೆ ಕಾರ್ಮಿಕರ ದೈನಂದಿನ ವರದಿಗಳನ್ನು ನಾವು ನೋಡುತ್ತಿದ್ದೇವೆ. ಬಿಹಾರ್‌ನ ರೈಲ್ವೆ ನಿಲ್ದಾಣವೊಂದರಲ್ಲಿ ಮೃತ ತಾಯಿಯನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರು ಮಗುವಿನ ದೃಶ್ಯವನ್ನು ನೋಡಿದ್ದೇವೆ. ಆಹಾರದ ಕೊರತೆಯಿಂದಾಗಿ ಶ್ರಮಿಕ್ ವಿಶೇಷ ರೈಲುಗಳಲ್ಲಿ ಕಾರ್ಮಿಕರು ಸಾಯುತ್ತಿದ್ದಾರೆ. ಇವೆಲ್ಲವೂ ಮೋದಿ ಭರವಸೆ ನೀಡಿದ ‘ಅಚ್ಛೇ ದಿನ’ಗಳ ನಿಜರೂಪವನ್ನು ಅರಿತುಕೊಳ್ಳಲು ಸಹಾಯ ಮಾಡುತ್ತದೆ.

ಈ ಪರಿಸ್ಥಿತಿಯಿಂದ ಹೊರಬಂದು ವಲಸೆ ಕಾರ್ಮಿಕರಿಗೆ ಸಹಾಯ ಮಾಡಲು ಹಲವು ರಾಜ್ಯಗಳು ಪ್ರಯತ್ನಿಸುತ್ತಿದ್ದರೆ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಂತಹ ಕೆಲವು ರಾಜ್ಯಗಳು ಅವರ ವಿರುದ್ಧ ವಿಲಕ್ಷಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಮೂಲಕ ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ.

ಇತ್ತೀಚೆಗೆ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಸರ್ಕಾರವು ತನ್ನ ಕಾರ್ಮಿಕ ಕಾನೂನುಗಳಿಗೆ ಹಲವಾರು ತಿದ್ದುಪಡಿಗಳನ್ನು ಗೆಜೆಟ್ ಮಾಡಿ, ಕಾರ್ಖಾನೆಗಳ ಕಾಯ್ದೆಯ ಅಗತ್ಯ ನಿಬಂಧನೆಗಳನ್ನು ಮೊಟಕುಗೊಳಿಸಿ ಕಾರ್ಖಾನೆಗಳ ಮಾಲಿಕರಿಗೆ ನೆರವಾಯಿತು. ಅಂತೆಯೇ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕೆಲವು ಮೂಲಭೂತ ನಿಬಂಧನೆಗಳನ್ನು ಹೊರತುಪಡಿಸಿ, ಮೂರು ವರ್ಷಗಳ ಅವಧಿಗೆ, ಉತ್ಪಾದನಾ ಪ್ರಕ್ರಿಯೆಯಲ್ಲಿ ತೊಡಗಿರುವ ಎಲ್ಲಾ ಕಾರ್ಖಾನೆಗಳು ಮತ್ತು ಸಂಸ್ಥೆಗಳನ್ನು ಎಲ್ಲಾ ಕಾರ್ಮಿಕ ಕಾನೂನುಗಳ ಕಾರ್ಯಾಚರಣೆಯಿಂದ ವಿನಾಯಿತಿ ನೀಡಿದೆ.

ಆಶ್ಚರ್ಯಕರ ಸುಗ್ರೀವಾಜ್ಞೆಗಳು ಮತ್ತು ಆದೇಶಗಳ ಸರಣಿಯಲ್ಲಿ, ಉತ್ತರ ಪ್ರದೇಶದ ರಾಜ್ಯದ ಕಾರ್ಮಿಕರನ್ನು ಬೇರೆ ರಾಜ್ಯಗಳು ಸರ್ಕಾರದ ಅನುಮತಿಯೊಂದಿಗೆ ನೇಮಿಸಬೇಕು ಎಂದು ಇತ್ತೀಚೆಗೆ ಅಸಂವಿಧಾನಿಕ ಹೇಳಿಕೆ ನೀಡಿದೆ. ಇದಕ್ಕಾಗಿ ಕಾರ್ಮಿಕರು ಜೀವನೋಪಾಯವನ್ನು ಗಳಿಸಲು ರಾಜ್ಯ ಸರ್ಕಾರದ ಅನುಮತಿಗೆ ಕಾಯಬೇಕಾಗುತ್ತದೆ.

ಮೇಲಿನ ಹೇಳಿಕೆ ಭಾರತ ಸಂವಿದಾನದ ಸ್ಪಷ್ಟ ಉಲ್ಲಂಘನೆಯಾಗಿದ್ದು, ಭಾರತದ ಸಂವಿಧಾನದ ಆರ್ಟಿಕಲ್ 19 (1) (ಡಿ) – ಎಲ್ಲಾ ನಾಗರಿಕರಿಗೆ ಭಾರತದ ಭೂಪ್ರದೇಶದಾದ್ಯಂತ ಮುಕ್ತವಾಗಿ ಚಲಿಸುವ ಹಕ್ಕನ್ನು ಖಾತರಿಪಡಿಸುತ್ತದೆ. ಅಲ್ಲದೆ, ಆರ್ಟಿಕಲ್ 19 (1) (ಇ) ಎಲ್ಲಾ ನಾಗರಿಕರಿಗೆ ಭಾರತದ ಯಾವುದೇ ಭಾಗದಲ್ಲಿ ವಾಸಿಸುವ ಮತ್ತು ನೆಲೆಸುವ ಹಕ್ಕನ್ನು ಖಾತರಿಪಡಿಸುತ್ತದೆ.

ಇದ್ಯಾವುದನ್ನೂ ಉತ್ತರ ಪ್ರದೇಶದ ಆದಿತ್ಯನಾಥ್ ಸರ್ಕಾರ ಪರಿಗಣಿಸದೇ ಕಾರ್ಮಿಕರು ಬೇರೆ ರಾಜ್ಯಗಳಿಗೆ ಹೋಗ ಬೇಕಾದರೆ ಸರ್ಕಾರದ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ, ಜೊತೆಗೆ ರಾಜ್ಯದ ಕಾರ್ಮಿಕ ಕಾನೂನನ್ನು ಅಮಾನತಿನಲ್ಲಿಟ್ಟಿದೆ. ಇವೆಲ್ಲವನ್ನೂ ಜೊತೆಯಲ್ಲಿಟ್ಟುಕೊಂಡೇ ನೋಡಬೇಕಾಗುತ್ತದೆ. ಯಾಕೆಂದರೆ ಎಲ್ಲಾ ಸರಕಾರವೂ ಬಂಡವಾಳಶಾಹಿಗಳ ಪರವಾಗಿಯೇ ಇರುತ್ತದೆ.

ತನ್ನ ಹೇಳಿಕೆಗೆ ಆದಿತ್ಯನಾಥ್ ಕೊಟ್ಟಿರುವ ಸಮರ್ಥನೆಯೇನೆಂದರೆ ಉತ್ತರ ಪ್ರದೇಶದ ಕಾರ್ಮಿಕರನ್ನು ಇತರ ರಾಜ್ಯಗಳು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು. ಆದರೆ ಸ್ವತಃ ತನ್ನ ರಾಜ್ಯದಲ್ಲಿ ಮಾತ್ರ ಕಾರ್ಮಿಕರ ಸಂವಿಧಾನಿಕ ದತ್ತವಾಗಿರುವ ಕಾರ್ಮಿಕರ ಹಕ್ಕನ್ನು ತಡೆಹಿಡಿದಿದ್ದಾರೆ, ಅಂದರೆ ಮುಂದಿನ ಮೂರು ವರ್ಷಗಳಲ್ಲಿ ಅವರು ತಮ್ಮ ರಾಜ್ಯದ ಕಾರ್ಮಿಕರ ಶೋಷಣೆ ಮಾಡಲು ಒಪ್ಪಿಗೆ ಕೊಟ್ಟಿದ್ದಾರೆ ಎಂದೇ ಅರ್ಥ. ಒಟ್ಟಿನಲ್ಲಿ ನೋಡುವುದಾದರೆ ತಮ್ಮ ರಾಜ್ಯದ ಕಾರ್ಮಿಕರನ್ನು ಒತ್ತೆಯಾಳುಗಳಂತೆ ಮಾಡಿ ತಮ್ಮ ರಾಜ್ಯದಲ್ಲೆ ಉಳಿಸಿ ಜೀತ ಮಾಡಿಸುವ ಹುನ್ನಾರ ಈ ಹೇಳಿಕೆಯಲ್ಲಿದೆ.

ಕೊರೊನಾ ಸೋಂಕಿನ ಹೆಸರಲ್ಲಿ ಅಧೀಕೃತ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ. ನಮ್ಮ ಪೂರ್ವಜರು ತ್ಯಾಗ ಬಲಿದಾನದಿಂದ ಗಳಿಸಿದ ಸ್ವಾತಂತ್ರ್ಯವನ್ನು ನಾವೇ ಆರಿಸಿದ ವ್ಯಕ್ತಿಗಳು ನಮ್ಮಿಂದ ಕಿತ್ತುಕೊಳ್ಳುತ್ತಿದ್ದಾರೆ.

  • ಅಮರೀಶ್‌ ರಂಜನ್‌ ಪಾಂಡೆ ಮತ್ತು ಅಂಬುಜ್‌ ದಿಕ್ಷಿತ್‌ (ಉತ್ತರ ಪ್ರದೇಶ)

ಕೃಪೆ: ನ್ಯಾಷನಲ್‌ ಹೆರಾಲ್ಡ್


ಓದಿ: ಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...