Homeಮುಖಪುಟಕಾರ್ಮಿಕರ ಮೇಲೆ ಹಿಡಿತ : ಕೊರೊನಾ ಹೆಸರಲ್ಲಿ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ.

ಕಾರ್ಮಿಕರ ಮೇಲೆ ಹಿಡಿತ : ಕೊರೊನಾ ಹೆಸರಲ್ಲಿ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಯೋಜಿತವಲ್ಲದ ಲಾಕ್‌ಡೌನ್ ಸಾರಿಗೆ, ಆರೋಗ್ಯ, ಉದ್ಯೋಗ, ಹಣಕಾಸು ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗಳಿಗೆ ತೀವ್ರವಾದ ಸಮಸ್ಯೆಗಳನ್ನು ತಂದೊಡ್ಡಿದೆ. ಇದಾಗಿಯೂ ವಲಸೆ ಕಾರ್ಮಿಕರ ಬಿಕ್ಕಟ್ಟು ದೇಶ ಸ್ವಾತಂತ್ರ್ಯ ಗಳಿಸಿದಾಗಿನಿಂದ ಅತ್ಯಂತ ದುಃಖಕರ ಘಟನೆಯಲ್ಲಿ ಒಂದಾಗಿದೆ.

ದೆಹಲಿ ಹಾಗೂ ಯು.ಪಿ.ಯಲ್ಲಿ ವಲಸೆ ಕಾರ್ಮಿಕರ ದೈನಂದಿನ ವರದಿಗಳನ್ನು ನಾವು ನೋಡುತ್ತಿದ್ದೇವೆ. ಬಿಹಾರ್‌ನ ರೈಲ್ವೆ ನಿಲ್ದಾಣವೊಂದರಲ್ಲಿ ಮೃತ ತಾಯಿಯನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರು ಮಗುವಿನ ದೃಶ್ಯವನ್ನು ನೋಡಿದ್ದೇವೆ. ಆಹಾರದ ಕೊರತೆಯಿಂದಾಗಿ ಶ್ರಮಿಕ್ ವಿಶೇಷ ರೈಲುಗಳಲ್ಲಿ ಕಾರ್ಮಿಕರು ಸಾಯುತ್ತಿದ್ದಾರೆ. ಇವೆಲ್ಲವೂ ಮೋದಿ ಭರವಸೆ ನೀಡಿದ ‘ಅಚ್ಛೇ ದಿನ’ಗಳ ನಿಜರೂಪವನ್ನು ಅರಿತುಕೊಳ್ಳಲು ಸಹಾಯ ಮಾಡುತ್ತದೆ.

ಈ ಪರಿಸ್ಥಿತಿಯಿಂದ ಹೊರಬಂದು ವಲಸೆ ಕಾರ್ಮಿಕರಿಗೆ ಸಹಾಯ ಮಾಡಲು ಹಲವು ರಾಜ್ಯಗಳು ಪ್ರಯತ್ನಿಸುತ್ತಿದ್ದರೆ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಂತಹ ಕೆಲವು ರಾಜ್ಯಗಳು ಅವರ ವಿರುದ್ಧ ವಿಲಕ್ಷಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಮೂಲಕ ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ.

ಇತ್ತೀಚೆಗೆ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಸರ್ಕಾರವು ತನ್ನ ಕಾರ್ಮಿಕ ಕಾನೂನುಗಳಿಗೆ ಹಲವಾರು ತಿದ್ದುಪಡಿಗಳನ್ನು ಗೆಜೆಟ್ ಮಾಡಿ, ಕಾರ್ಖಾನೆಗಳ ಕಾಯ್ದೆಯ ಅಗತ್ಯ ನಿಬಂಧನೆಗಳನ್ನು ಮೊಟಕುಗೊಳಿಸಿ ಕಾರ್ಖಾನೆಗಳ ಮಾಲಿಕರಿಗೆ ನೆರವಾಯಿತು. ಅಂತೆಯೇ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕೆಲವು ಮೂಲಭೂತ ನಿಬಂಧನೆಗಳನ್ನು ಹೊರತುಪಡಿಸಿ, ಮೂರು ವರ್ಷಗಳ ಅವಧಿಗೆ, ಉತ್ಪಾದನಾ ಪ್ರಕ್ರಿಯೆಯಲ್ಲಿ ತೊಡಗಿರುವ ಎಲ್ಲಾ ಕಾರ್ಖಾನೆಗಳು ಮತ್ತು ಸಂಸ್ಥೆಗಳನ್ನು ಎಲ್ಲಾ ಕಾರ್ಮಿಕ ಕಾನೂನುಗಳ ಕಾರ್ಯಾಚರಣೆಯಿಂದ ವಿನಾಯಿತಿ ನೀಡಿದೆ.

ಆಶ್ಚರ್ಯಕರ ಸುಗ್ರೀವಾಜ್ಞೆಗಳು ಮತ್ತು ಆದೇಶಗಳ ಸರಣಿಯಲ್ಲಿ, ಉತ್ತರ ಪ್ರದೇಶದ ರಾಜ್ಯದ ಕಾರ್ಮಿಕರನ್ನು ಬೇರೆ ರಾಜ್ಯಗಳು ಸರ್ಕಾರದ ಅನುಮತಿಯೊಂದಿಗೆ ನೇಮಿಸಬೇಕು ಎಂದು ಇತ್ತೀಚೆಗೆ ಅಸಂವಿಧಾನಿಕ ಹೇಳಿಕೆ ನೀಡಿದೆ. ಇದಕ್ಕಾಗಿ ಕಾರ್ಮಿಕರು ಜೀವನೋಪಾಯವನ್ನು ಗಳಿಸಲು ರಾಜ್ಯ ಸರ್ಕಾರದ ಅನುಮತಿಗೆ ಕಾಯಬೇಕಾಗುತ್ತದೆ.

ಮೇಲಿನ ಹೇಳಿಕೆ ಭಾರತ ಸಂವಿದಾನದ ಸ್ಪಷ್ಟ ಉಲ್ಲಂಘನೆಯಾಗಿದ್ದು, ಭಾರತದ ಸಂವಿಧಾನದ ಆರ್ಟಿಕಲ್ 19 (1) (ಡಿ) – ಎಲ್ಲಾ ನಾಗರಿಕರಿಗೆ ಭಾರತದ ಭೂಪ್ರದೇಶದಾದ್ಯಂತ ಮುಕ್ತವಾಗಿ ಚಲಿಸುವ ಹಕ್ಕನ್ನು ಖಾತರಿಪಡಿಸುತ್ತದೆ. ಅಲ್ಲದೆ, ಆರ್ಟಿಕಲ್ 19 (1) (ಇ) ಎಲ್ಲಾ ನಾಗರಿಕರಿಗೆ ಭಾರತದ ಯಾವುದೇ ಭಾಗದಲ್ಲಿ ವಾಸಿಸುವ ಮತ್ತು ನೆಲೆಸುವ ಹಕ್ಕನ್ನು ಖಾತರಿಪಡಿಸುತ್ತದೆ.

ಇದ್ಯಾವುದನ್ನೂ ಉತ್ತರ ಪ್ರದೇಶದ ಆದಿತ್ಯನಾಥ್ ಸರ್ಕಾರ ಪರಿಗಣಿಸದೇ ಕಾರ್ಮಿಕರು ಬೇರೆ ರಾಜ್ಯಗಳಿಗೆ ಹೋಗ ಬೇಕಾದರೆ ಸರ್ಕಾರದ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ, ಜೊತೆಗೆ ರಾಜ್ಯದ ಕಾರ್ಮಿಕ ಕಾನೂನನ್ನು ಅಮಾನತಿನಲ್ಲಿಟ್ಟಿದೆ. ಇವೆಲ್ಲವನ್ನೂ ಜೊತೆಯಲ್ಲಿಟ್ಟುಕೊಂಡೇ ನೋಡಬೇಕಾಗುತ್ತದೆ. ಯಾಕೆಂದರೆ ಎಲ್ಲಾ ಸರಕಾರವೂ ಬಂಡವಾಳಶಾಹಿಗಳ ಪರವಾಗಿಯೇ ಇರುತ್ತದೆ.

ತನ್ನ ಹೇಳಿಕೆಗೆ ಆದಿತ್ಯನಾಥ್ ಕೊಟ್ಟಿರುವ ಸಮರ್ಥನೆಯೇನೆಂದರೆ ಉತ್ತರ ಪ್ರದೇಶದ ಕಾರ್ಮಿಕರನ್ನು ಇತರ ರಾಜ್ಯಗಳು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು. ಆದರೆ ಸ್ವತಃ ತನ್ನ ರಾಜ್ಯದಲ್ಲಿ ಮಾತ್ರ ಕಾರ್ಮಿಕರ ಸಂವಿಧಾನಿಕ ದತ್ತವಾಗಿರುವ ಕಾರ್ಮಿಕರ ಹಕ್ಕನ್ನು ತಡೆಹಿಡಿದಿದ್ದಾರೆ, ಅಂದರೆ ಮುಂದಿನ ಮೂರು ವರ್ಷಗಳಲ್ಲಿ ಅವರು ತಮ್ಮ ರಾಜ್ಯದ ಕಾರ್ಮಿಕರ ಶೋಷಣೆ ಮಾಡಲು ಒಪ್ಪಿಗೆ ಕೊಟ್ಟಿದ್ದಾರೆ ಎಂದೇ ಅರ್ಥ. ಒಟ್ಟಿನಲ್ಲಿ ನೋಡುವುದಾದರೆ ತಮ್ಮ ರಾಜ್ಯದ ಕಾರ್ಮಿಕರನ್ನು ಒತ್ತೆಯಾಳುಗಳಂತೆ ಮಾಡಿ ತಮ್ಮ ರಾಜ್ಯದಲ್ಲೆ ಉಳಿಸಿ ಜೀತ ಮಾಡಿಸುವ ಹುನ್ನಾರ ಈ ಹೇಳಿಕೆಯಲ್ಲಿದೆ.

ಕೊರೊನಾ ಸೋಂಕಿನ ಹೆಸರಲ್ಲಿ ಅಧೀಕೃತ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ. ನಮ್ಮ ಪೂರ್ವಜರು ತ್ಯಾಗ ಬಲಿದಾನದಿಂದ ಗಳಿಸಿದ ಸ್ವಾತಂತ್ರ್ಯವನ್ನು ನಾವೇ ಆರಿಸಿದ ವ್ಯಕ್ತಿಗಳು ನಮ್ಮಿಂದ ಕಿತ್ತುಕೊಳ್ಳುತ್ತಿದ್ದಾರೆ.

  • ಅಮರೀಶ್‌ ರಂಜನ್‌ ಪಾಂಡೆ ಮತ್ತು ಅಂಬುಜ್‌ ದಿಕ್ಷಿತ್‌ (ಉತ್ತರ ಪ್ರದೇಶ)

ಕೃಪೆ: ನ್ಯಾಷನಲ್‌ ಹೆರಾಲ್ಡ್


ಓದಿ: ಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...