Homeಮುಖಪುಟಕಾರ್ಮಿಕರ ಮೇಲೆ ಹಿಡಿತ : ಕೊರೊನಾ ಹೆಸರಲ್ಲಿ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ.

ಕಾರ್ಮಿಕರ ಮೇಲೆ ಹಿಡಿತ : ಕೊರೊನಾ ಹೆಸರಲ್ಲಿ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಯೋಜಿತವಲ್ಲದ ಲಾಕ್‌ಡೌನ್ ಸಾರಿಗೆ, ಆರೋಗ್ಯ, ಉದ್ಯೋಗ, ಹಣಕಾಸು ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗಳಿಗೆ ತೀವ್ರವಾದ ಸಮಸ್ಯೆಗಳನ್ನು ತಂದೊಡ್ಡಿದೆ. ಇದಾಗಿಯೂ ವಲಸೆ ಕಾರ್ಮಿಕರ ಬಿಕ್ಕಟ್ಟು ದೇಶ ಸ್ವಾತಂತ್ರ್ಯ ಗಳಿಸಿದಾಗಿನಿಂದ ಅತ್ಯಂತ ದುಃಖಕರ ಘಟನೆಯಲ್ಲಿ ಒಂದಾಗಿದೆ.

ದೆಹಲಿ ಹಾಗೂ ಯು.ಪಿ.ಯಲ್ಲಿ ವಲಸೆ ಕಾರ್ಮಿಕರ ದೈನಂದಿನ ವರದಿಗಳನ್ನು ನಾವು ನೋಡುತ್ತಿದ್ದೇವೆ. ಬಿಹಾರ್‌ನ ರೈಲ್ವೆ ನಿಲ್ದಾಣವೊಂದರಲ್ಲಿ ಮೃತ ತಾಯಿಯನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರು ಮಗುವಿನ ದೃಶ್ಯವನ್ನು ನೋಡಿದ್ದೇವೆ. ಆಹಾರದ ಕೊರತೆಯಿಂದಾಗಿ ಶ್ರಮಿಕ್ ವಿಶೇಷ ರೈಲುಗಳಲ್ಲಿ ಕಾರ್ಮಿಕರು ಸಾಯುತ್ತಿದ್ದಾರೆ. ಇವೆಲ್ಲವೂ ಮೋದಿ ಭರವಸೆ ನೀಡಿದ ‘ಅಚ್ಛೇ ದಿನ’ಗಳ ನಿಜರೂಪವನ್ನು ಅರಿತುಕೊಳ್ಳಲು ಸಹಾಯ ಮಾಡುತ್ತದೆ.

ಈ ಪರಿಸ್ಥಿತಿಯಿಂದ ಹೊರಬಂದು ವಲಸೆ ಕಾರ್ಮಿಕರಿಗೆ ಸಹಾಯ ಮಾಡಲು ಹಲವು ರಾಜ್ಯಗಳು ಪ್ರಯತ್ನಿಸುತ್ತಿದ್ದರೆ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಂತಹ ಕೆಲವು ರಾಜ್ಯಗಳು ಅವರ ವಿರುದ್ಧ ವಿಲಕ್ಷಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಮೂಲಕ ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ.

ಇತ್ತೀಚೆಗೆ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಸರ್ಕಾರವು ತನ್ನ ಕಾರ್ಮಿಕ ಕಾನೂನುಗಳಿಗೆ ಹಲವಾರು ತಿದ್ದುಪಡಿಗಳನ್ನು ಗೆಜೆಟ್ ಮಾಡಿ, ಕಾರ್ಖಾನೆಗಳ ಕಾಯ್ದೆಯ ಅಗತ್ಯ ನಿಬಂಧನೆಗಳನ್ನು ಮೊಟಕುಗೊಳಿಸಿ ಕಾರ್ಖಾನೆಗಳ ಮಾಲಿಕರಿಗೆ ನೆರವಾಯಿತು. ಅಂತೆಯೇ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕೆಲವು ಮೂಲಭೂತ ನಿಬಂಧನೆಗಳನ್ನು ಹೊರತುಪಡಿಸಿ, ಮೂರು ವರ್ಷಗಳ ಅವಧಿಗೆ, ಉತ್ಪಾದನಾ ಪ್ರಕ್ರಿಯೆಯಲ್ಲಿ ತೊಡಗಿರುವ ಎಲ್ಲಾ ಕಾರ್ಖಾನೆಗಳು ಮತ್ತು ಸಂಸ್ಥೆಗಳನ್ನು ಎಲ್ಲಾ ಕಾರ್ಮಿಕ ಕಾನೂನುಗಳ ಕಾರ್ಯಾಚರಣೆಯಿಂದ ವಿನಾಯಿತಿ ನೀಡಿದೆ.

ಆಶ್ಚರ್ಯಕರ ಸುಗ್ರೀವಾಜ್ಞೆಗಳು ಮತ್ತು ಆದೇಶಗಳ ಸರಣಿಯಲ್ಲಿ, ಉತ್ತರ ಪ್ರದೇಶದ ರಾಜ್ಯದ ಕಾರ್ಮಿಕರನ್ನು ಬೇರೆ ರಾಜ್ಯಗಳು ಸರ್ಕಾರದ ಅನುಮತಿಯೊಂದಿಗೆ ನೇಮಿಸಬೇಕು ಎಂದು ಇತ್ತೀಚೆಗೆ ಅಸಂವಿಧಾನಿಕ ಹೇಳಿಕೆ ನೀಡಿದೆ. ಇದಕ್ಕಾಗಿ ಕಾರ್ಮಿಕರು ಜೀವನೋಪಾಯವನ್ನು ಗಳಿಸಲು ರಾಜ್ಯ ಸರ್ಕಾರದ ಅನುಮತಿಗೆ ಕಾಯಬೇಕಾಗುತ್ತದೆ.

ಮೇಲಿನ ಹೇಳಿಕೆ ಭಾರತ ಸಂವಿದಾನದ ಸ್ಪಷ್ಟ ಉಲ್ಲಂಘನೆಯಾಗಿದ್ದು, ಭಾರತದ ಸಂವಿಧಾನದ ಆರ್ಟಿಕಲ್ 19 (1) (ಡಿ) – ಎಲ್ಲಾ ನಾಗರಿಕರಿಗೆ ಭಾರತದ ಭೂಪ್ರದೇಶದಾದ್ಯಂತ ಮುಕ್ತವಾಗಿ ಚಲಿಸುವ ಹಕ್ಕನ್ನು ಖಾತರಿಪಡಿಸುತ್ತದೆ. ಅಲ್ಲದೆ, ಆರ್ಟಿಕಲ್ 19 (1) (ಇ) ಎಲ್ಲಾ ನಾಗರಿಕರಿಗೆ ಭಾರತದ ಯಾವುದೇ ಭಾಗದಲ್ಲಿ ವಾಸಿಸುವ ಮತ್ತು ನೆಲೆಸುವ ಹಕ್ಕನ್ನು ಖಾತರಿಪಡಿಸುತ್ತದೆ.

ಇದ್ಯಾವುದನ್ನೂ ಉತ್ತರ ಪ್ರದೇಶದ ಆದಿತ್ಯನಾಥ್ ಸರ್ಕಾರ ಪರಿಗಣಿಸದೇ ಕಾರ್ಮಿಕರು ಬೇರೆ ರಾಜ್ಯಗಳಿಗೆ ಹೋಗ ಬೇಕಾದರೆ ಸರ್ಕಾರದ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ, ಜೊತೆಗೆ ರಾಜ್ಯದ ಕಾರ್ಮಿಕ ಕಾನೂನನ್ನು ಅಮಾನತಿನಲ್ಲಿಟ್ಟಿದೆ. ಇವೆಲ್ಲವನ್ನೂ ಜೊತೆಯಲ್ಲಿಟ್ಟುಕೊಂಡೇ ನೋಡಬೇಕಾಗುತ್ತದೆ. ಯಾಕೆಂದರೆ ಎಲ್ಲಾ ಸರಕಾರವೂ ಬಂಡವಾಳಶಾಹಿಗಳ ಪರವಾಗಿಯೇ ಇರುತ್ತದೆ.

ತನ್ನ ಹೇಳಿಕೆಗೆ ಆದಿತ್ಯನಾಥ್ ಕೊಟ್ಟಿರುವ ಸಮರ್ಥನೆಯೇನೆಂದರೆ ಉತ್ತರ ಪ್ರದೇಶದ ಕಾರ್ಮಿಕರನ್ನು ಇತರ ರಾಜ್ಯಗಳು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು. ಆದರೆ ಸ್ವತಃ ತನ್ನ ರಾಜ್ಯದಲ್ಲಿ ಮಾತ್ರ ಕಾರ್ಮಿಕರ ಸಂವಿಧಾನಿಕ ದತ್ತವಾಗಿರುವ ಕಾರ್ಮಿಕರ ಹಕ್ಕನ್ನು ತಡೆಹಿಡಿದಿದ್ದಾರೆ, ಅಂದರೆ ಮುಂದಿನ ಮೂರು ವರ್ಷಗಳಲ್ಲಿ ಅವರು ತಮ್ಮ ರಾಜ್ಯದ ಕಾರ್ಮಿಕರ ಶೋಷಣೆ ಮಾಡಲು ಒಪ್ಪಿಗೆ ಕೊಟ್ಟಿದ್ದಾರೆ ಎಂದೇ ಅರ್ಥ. ಒಟ್ಟಿನಲ್ಲಿ ನೋಡುವುದಾದರೆ ತಮ್ಮ ರಾಜ್ಯದ ಕಾರ್ಮಿಕರನ್ನು ಒತ್ತೆಯಾಳುಗಳಂತೆ ಮಾಡಿ ತಮ್ಮ ರಾಜ್ಯದಲ್ಲೆ ಉಳಿಸಿ ಜೀತ ಮಾಡಿಸುವ ಹುನ್ನಾರ ಈ ಹೇಳಿಕೆಯಲ್ಲಿದೆ.

ಕೊರೊನಾ ಸೋಂಕಿನ ಹೆಸರಲ್ಲಿ ಅಧೀಕೃತ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ. ನಮ್ಮ ಪೂರ್ವಜರು ತ್ಯಾಗ ಬಲಿದಾನದಿಂದ ಗಳಿಸಿದ ಸ್ವಾತಂತ್ರ್ಯವನ್ನು ನಾವೇ ಆರಿಸಿದ ವ್ಯಕ್ತಿಗಳು ನಮ್ಮಿಂದ ಕಿತ್ತುಕೊಳ್ಳುತ್ತಿದ್ದಾರೆ.

  • ಅಮರೀಶ್‌ ರಂಜನ್‌ ಪಾಂಡೆ ಮತ್ತು ಅಂಬುಜ್‌ ದಿಕ್ಷಿತ್‌ (ಉತ್ತರ ಪ್ರದೇಶ)

ಕೃಪೆ: ನ್ಯಾಷನಲ್‌ ಹೆರಾಲ್ಡ್


ಓದಿ: ಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....