Homeಮುಖಪುಟಕಾರ್ಮಿಕರ ಮೇಲೆ ಹಿಡಿತ : ಕೊರೊನಾ ಹೆಸರಲ್ಲಿ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ.

ಕಾರ್ಮಿಕರ ಮೇಲೆ ಹಿಡಿತ : ಕೊರೊನಾ ಹೆಸರಲ್ಲಿ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಯೋಜಿತವಲ್ಲದ ಲಾಕ್‌ಡೌನ್ ಸಾರಿಗೆ, ಆರೋಗ್ಯ, ಉದ್ಯೋಗ, ಹಣಕಾಸು ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗಳಿಗೆ ತೀವ್ರವಾದ ಸಮಸ್ಯೆಗಳನ್ನು ತಂದೊಡ್ಡಿದೆ. ಇದಾಗಿಯೂ ವಲಸೆ ಕಾರ್ಮಿಕರ ಬಿಕ್ಕಟ್ಟು ದೇಶ ಸ್ವಾತಂತ್ರ್ಯ ಗಳಿಸಿದಾಗಿನಿಂದ ಅತ್ಯಂತ ದುಃಖಕರ ಘಟನೆಯಲ್ಲಿ ಒಂದಾಗಿದೆ.

ದೆಹಲಿ ಹಾಗೂ ಯು.ಪಿ.ಯಲ್ಲಿ ವಲಸೆ ಕಾರ್ಮಿಕರ ದೈನಂದಿನ ವರದಿಗಳನ್ನು ನಾವು ನೋಡುತ್ತಿದ್ದೇವೆ. ಬಿಹಾರ್‌ನ ರೈಲ್ವೆ ನಿಲ್ದಾಣವೊಂದರಲ್ಲಿ ಮೃತ ತಾಯಿಯನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರು ಮಗುವಿನ ದೃಶ್ಯವನ್ನು ನೋಡಿದ್ದೇವೆ. ಆಹಾರದ ಕೊರತೆಯಿಂದಾಗಿ ಶ್ರಮಿಕ್ ವಿಶೇಷ ರೈಲುಗಳಲ್ಲಿ ಕಾರ್ಮಿಕರು ಸಾಯುತ್ತಿದ್ದಾರೆ. ಇವೆಲ್ಲವೂ ಮೋದಿ ಭರವಸೆ ನೀಡಿದ ‘ಅಚ್ಛೇ ದಿನ’ಗಳ ನಿಜರೂಪವನ್ನು ಅರಿತುಕೊಳ್ಳಲು ಸಹಾಯ ಮಾಡುತ್ತದೆ.

ಈ ಪರಿಸ್ಥಿತಿಯಿಂದ ಹೊರಬಂದು ವಲಸೆ ಕಾರ್ಮಿಕರಿಗೆ ಸಹಾಯ ಮಾಡಲು ಹಲವು ರಾಜ್ಯಗಳು ಪ್ರಯತ್ನಿಸುತ್ತಿದ್ದರೆ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಂತಹ ಕೆಲವು ರಾಜ್ಯಗಳು ಅವರ ವಿರುದ್ಧ ವಿಲಕ್ಷಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಮೂಲಕ ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ.

ಇತ್ತೀಚೆಗೆ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಸರ್ಕಾರವು ತನ್ನ ಕಾರ್ಮಿಕ ಕಾನೂನುಗಳಿಗೆ ಹಲವಾರು ತಿದ್ದುಪಡಿಗಳನ್ನು ಗೆಜೆಟ್ ಮಾಡಿ, ಕಾರ್ಖಾನೆಗಳ ಕಾಯ್ದೆಯ ಅಗತ್ಯ ನಿಬಂಧನೆಗಳನ್ನು ಮೊಟಕುಗೊಳಿಸಿ ಕಾರ್ಖಾನೆಗಳ ಮಾಲಿಕರಿಗೆ ನೆರವಾಯಿತು. ಅಂತೆಯೇ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕೆಲವು ಮೂಲಭೂತ ನಿಬಂಧನೆಗಳನ್ನು ಹೊರತುಪಡಿಸಿ, ಮೂರು ವರ್ಷಗಳ ಅವಧಿಗೆ, ಉತ್ಪಾದನಾ ಪ್ರಕ್ರಿಯೆಯಲ್ಲಿ ತೊಡಗಿರುವ ಎಲ್ಲಾ ಕಾರ್ಖಾನೆಗಳು ಮತ್ತು ಸಂಸ್ಥೆಗಳನ್ನು ಎಲ್ಲಾ ಕಾರ್ಮಿಕ ಕಾನೂನುಗಳ ಕಾರ್ಯಾಚರಣೆಯಿಂದ ವಿನಾಯಿತಿ ನೀಡಿದೆ.

ಆಶ್ಚರ್ಯಕರ ಸುಗ್ರೀವಾಜ್ಞೆಗಳು ಮತ್ತು ಆದೇಶಗಳ ಸರಣಿಯಲ್ಲಿ, ಉತ್ತರ ಪ್ರದೇಶದ ರಾಜ್ಯದ ಕಾರ್ಮಿಕರನ್ನು ಬೇರೆ ರಾಜ್ಯಗಳು ಸರ್ಕಾರದ ಅನುಮತಿಯೊಂದಿಗೆ ನೇಮಿಸಬೇಕು ಎಂದು ಇತ್ತೀಚೆಗೆ ಅಸಂವಿಧಾನಿಕ ಹೇಳಿಕೆ ನೀಡಿದೆ. ಇದಕ್ಕಾಗಿ ಕಾರ್ಮಿಕರು ಜೀವನೋಪಾಯವನ್ನು ಗಳಿಸಲು ರಾಜ್ಯ ಸರ್ಕಾರದ ಅನುಮತಿಗೆ ಕಾಯಬೇಕಾಗುತ್ತದೆ.

ಮೇಲಿನ ಹೇಳಿಕೆ ಭಾರತ ಸಂವಿದಾನದ ಸ್ಪಷ್ಟ ಉಲ್ಲಂಘನೆಯಾಗಿದ್ದು, ಭಾರತದ ಸಂವಿಧಾನದ ಆರ್ಟಿಕಲ್ 19 (1) (ಡಿ) – ಎಲ್ಲಾ ನಾಗರಿಕರಿಗೆ ಭಾರತದ ಭೂಪ್ರದೇಶದಾದ್ಯಂತ ಮುಕ್ತವಾಗಿ ಚಲಿಸುವ ಹಕ್ಕನ್ನು ಖಾತರಿಪಡಿಸುತ್ತದೆ. ಅಲ್ಲದೆ, ಆರ್ಟಿಕಲ್ 19 (1) (ಇ) ಎಲ್ಲಾ ನಾಗರಿಕರಿಗೆ ಭಾರತದ ಯಾವುದೇ ಭಾಗದಲ್ಲಿ ವಾಸಿಸುವ ಮತ್ತು ನೆಲೆಸುವ ಹಕ್ಕನ್ನು ಖಾತರಿಪಡಿಸುತ್ತದೆ.

ಇದ್ಯಾವುದನ್ನೂ ಉತ್ತರ ಪ್ರದೇಶದ ಆದಿತ್ಯನಾಥ್ ಸರ್ಕಾರ ಪರಿಗಣಿಸದೇ ಕಾರ್ಮಿಕರು ಬೇರೆ ರಾಜ್ಯಗಳಿಗೆ ಹೋಗ ಬೇಕಾದರೆ ಸರ್ಕಾರದ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ, ಜೊತೆಗೆ ರಾಜ್ಯದ ಕಾರ್ಮಿಕ ಕಾನೂನನ್ನು ಅಮಾನತಿನಲ್ಲಿಟ್ಟಿದೆ. ಇವೆಲ್ಲವನ್ನೂ ಜೊತೆಯಲ್ಲಿಟ್ಟುಕೊಂಡೇ ನೋಡಬೇಕಾಗುತ್ತದೆ. ಯಾಕೆಂದರೆ ಎಲ್ಲಾ ಸರಕಾರವೂ ಬಂಡವಾಳಶಾಹಿಗಳ ಪರವಾಗಿಯೇ ಇರುತ್ತದೆ.

ತನ್ನ ಹೇಳಿಕೆಗೆ ಆದಿತ್ಯನಾಥ್ ಕೊಟ್ಟಿರುವ ಸಮರ್ಥನೆಯೇನೆಂದರೆ ಉತ್ತರ ಪ್ರದೇಶದ ಕಾರ್ಮಿಕರನ್ನು ಇತರ ರಾಜ್ಯಗಳು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು. ಆದರೆ ಸ್ವತಃ ತನ್ನ ರಾಜ್ಯದಲ್ಲಿ ಮಾತ್ರ ಕಾರ್ಮಿಕರ ಸಂವಿಧಾನಿಕ ದತ್ತವಾಗಿರುವ ಕಾರ್ಮಿಕರ ಹಕ್ಕನ್ನು ತಡೆಹಿಡಿದಿದ್ದಾರೆ, ಅಂದರೆ ಮುಂದಿನ ಮೂರು ವರ್ಷಗಳಲ್ಲಿ ಅವರು ತಮ್ಮ ರಾಜ್ಯದ ಕಾರ್ಮಿಕರ ಶೋಷಣೆ ಮಾಡಲು ಒಪ್ಪಿಗೆ ಕೊಟ್ಟಿದ್ದಾರೆ ಎಂದೇ ಅರ್ಥ. ಒಟ್ಟಿನಲ್ಲಿ ನೋಡುವುದಾದರೆ ತಮ್ಮ ರಾಜ್ಯದ ಕಾರ್ಮಿಕರನ್ನು ಒತ್ತೆಯಾಳುಗಳಂತೆ ಮಾಡಿ ತಮ್ಮ ರಾಜ್ಯದಲ್ಲೆ ಉಳಿಸಿ ಜೀತ ಮಾಡಿಸುವ ಹುನ್ನಾರ ಈ ಹೇಳಿಕೆಯಲ್ಲಿದೆ.

ಕೊರೊನಾ ಸೋಂಕಿನ ಹೆಸರಲ್ಲಿ ಅಧೀಕೃತ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ. ನಮ್ಮ ಪೂರ್ವಜರು ತ್ಯಾಗ ಬಲಿದಾನದಿಂದ ಗಳಿಸಿದ ಸ್ವಾತಂತ್ರ್ಯವನ್ನು ನಾವೇ ಆರಿಸಿದ ವ್ಯಕ್ತಿಗಳು ನಮ್ಮಿಂದ ಕಿತ್ತುಕೊಳ್ಳುತ್ತಿದ್ದಾರೆ.

  • ಅಮರೀಶ್‌ ರಂಜನ್‌ ಪಾಂಡೆ ಮತ್ತು ಅಂಬುಜ್‌ ದಿಕ್ಷಿತ್‌ (ಉತ್ತರ ಪ್ರದೇಶ)

ಕೃಪೆ: ನ್ಯಾಷನಲ್‌ ಹೆರಾಲ್ಡ್


ಓದಿ: ಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...