Homeಅಂತರಾಷ್ಟ್ರೀಯGrok VS IT Cell : ಬಲಪಂಥೀಯ ಪ್ರೊಪಗಂಡದ ನಿದ್ದೆಗೆಡಿಸಿದ 'ಮಸ್ಕ್‌ನ ಎಐ ಚಾಟ್‌ಬಾಟ್'

Grok VS IT Cell : ಬಲಪಂಥೀಯ ಪ್ರೊಪಗಂಡದ ನಿದ್ದೆಗೆಡಿಸಿದ ‘ಮಸ್ಕ್‌ನ ಎಐ ಚಾಟ್‌ಬಾಟ್’

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲಾನ್‌ ಮಸ್ಕ್‌ ಅವರ ಟೆಸ್ಲಾ ಮತ್ತು ಸ್ಟಾರ್‌ಲಿಂಕ್‌ ಕಂಪನಿಗಳನ್ನು ಕೆಂಪು ಹಾಸಿನ ಸ್ವಾಗತ ಕೋರಿ ಭಾರತಕ್ಕೆ ಬರ ಮಾಡಿಕೊಳ್ಳಲು ತುದಿಗಾಲಲ್ಲಿ ನಿಂತಿರುವಾಗ, ಅದೇ ಎಲಾನ್‌ ಮಸ್ಕ್‌ ಅವರ ಕೃತಕಬುದ್ದಿ ಮತ್ತೆ (ಎಐ ಚಾಟ್‌ಬಾಟ್‌) ‘ಗ್ರೋಕ್‌’ ಕೆಲ ದಿನಗಳಿಂದ ಮೋದಿ, ಅವರ ಬಿಜೆಪಿ ಪಕ್ಷ ಮತ್ತು ಅದರ ಹಿಂಬಾಲಕರ ನಿದ್ದೆಗೆಡಿಸಿದೆ.

ಫೆಬ್ರವರಿ 2025ರಲ್ಲಿ ಎಲಾನ್‌ ಮಸ್ಕ್‌ ಅವರು ‘ಗ್ರೋಕ್‌-3’ಅನ್ನು ಬಿಡುಗಡೆ ಮಾಡಿದ್ದಾರೆ. ಇದು ‘ಗ್ರೋಕ್-2’ಗಿಂತ 10 ಪಟ್ಟು ಹೆಚ್ಚು ಶಕ್ತಿಶಾಲಿಯಾಗಿದೆ. ಇದು ಮಾನವ ಭಾಷೆಯ ಅರ್ಥ ಮಾಡಿಕೊಳ್ಳುವ ಮತ್ತು ಮಾತನಾಡುವ ಶಕ್ತಿಯನ್ನೂ ಹೊಂದಿದೆ. ಜಗತ್ತಿನ ಅತ್ಯಂತ ಸ್ಮಾರ್ಟ್ ಎಐ ಆಗಿರುವ ಗ್ರೋಕ್-ಚಾಟ್‌ ಜಿಪಿಟಿ, ಗೂಗಲ್ ಜೆಮಿನಿ ಹಾಗೂ ಡೀಪ್‌ ಸೀಕ್‌ಗೆ ಸೆಡ್ಡು ಹೊಡೆಯುತ್ತಿದೆ.

ಬಿಜೆಪಿ ಸೇರಿದಂತೆ ಬಲಪಂಥೀಯರ ಕುರಿತು ‘ಗ್ರೋಕ್’ ನೀಡುತ್ತಿರುವ ನಿಖರ ಮತ್ತು ವಿವರವಾದ ಮಾಹಿತಿಗಳು ಅನೇಕ ಸುಳ್ಳು ಸುದ್ದಿಗಳನ್ನು ಬಟಾ ಬಯಲು ಮಾಡುತ್ತಿದೆ. ಸುಳ್ಳನ್ನೇ ಬಂಡವಾಳ ಮಾಡಿಕೊಂಡು, ಅದನ್ನೇ ಸತ್ಯ ಎಂಬಂತೆ ಬಿಂಬಿಸಿ ಸಮಾಜದ ಸ್ವಾಸ್ತ್ಯ ಹಾಳು ಮಾಡುತ್ತಿರುವವರಿಗೆ ತಲೆ ನೋವಾಗಿ ಪರಿಣಮಿಸಿದೆ.

ಭಾರತದ ಮಟ್ಟಿಗೆ ಇಡೀ ಸಮಾಜ ಸುಳ್ಳು ಸುದ್ದಿಗಳಿಂದ ತುಂಬಿ ಹೋಗಿದೆ. ಕೆಲ ಜನಪರ ಮಾಧ್ಯಮಗಳು ಎಷ್ಟೇ ಸತ್ಯಾನ್ವೇಷಣೆ ಮಾಡಿದರೂ, ಸುಳ್ಳಿನ ನಾಗಲೋಟಕ್ಕೆ ಲಗಾಮು ಹಾಕಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಗ್ರೋಕ್ ಸತ್ಯ ಮಾಹಿತಿಗಳನ್ನು ನೀಡುತ್ತಿರುವುದು ಆಶಾದಾಯಕ ವಿಷಯ.

ಭಾರತೀಯ ರಾಜಕೀಯದ ಬಗ್ಗೆ, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಗ್ರೋಕ್ ಕೊಡುತ್ತಿರುವ ಉತ್ತರಗಳು ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. “ಭಾರತದ ಅತ್ಯಂತ ಕೋಮುವಾದಿ ರಾಜಕಾರಣಿ ಯಾರು?” ಎಂದು ಕೇಳಿದಾಗ, “ಹಿಂದೂ ರಾಷ್ಟ್ರೀಯತಾವಾದಿ ನೀತಿಗಳು ಮತ್ತು 2002ರ ಗುಜರಾತ್ ಗಲಭೆಗಳೊಂದಿಗಿನ ಸಂಬಂಧಗಳನ್ನು ಉಲ್ಲೇಖಿಸಿ ಮೋದಿಯವರ ಹೆಸರನ್ನು ಗ್ರೋಕ್‌ ಹೇಳುತ್ತಿದೆ. ಮುಸ್ಲಿಮರ ಬಗ್ಗೆ 2024ರಲ್ಲಿ ಮೋದಿಯವರು ನೀಡಿದ ಹೇಳಿಕೆಗಳನ್ನೂ ಈ ಉತ್ತರಕ್ಕೆ ಗ್ರೋಕ್‌ ಉಲ್ಲೇಖಿಸುತ್ತಿದೆ. ಇದು ಮೋದಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಮೋದಿ ಅವರ ಕುರಿತು ಹೇಳಿದಂತೆ ಯೋಗಿ ಆದಿತ್ಯನಾಥ್ ಮತ್ತು ಪ್ರಜ್ಞಾ ಠಾಕೂರ್ ಅವರಂತಹ ವ್ಯಕ್ತಿಗಳ ಬಗ್ಗೆಯೂ ಗ್ರೋಕ್ ಸಂಚಲನಕಾರಿ ಉತ್ತರಗಳನ್ನು ನೀಡುತ್ತಿದೆ.

“ಸಹೋದರ ಗ್ರೋಕ್! ಮೋದಿ ಜಿ ನಿನ್ನನ್ನು ಶಿಕ್ಷಿಸುತ್ತಾರೆ”

ಗ್ರೋಕ್‌ ಚಾಟ್‌ಬಾಟ್‌ನ ಪ್ರತಿಕ್ರಿಯೆಗಳು ಕೇವಲ ವಾಸ್ತವಿಕವಾಗಿರದೆ, ತೀಕ್ಷ್ಣವಾಗಿಯೂ ಇದೆ. ಹಾಗಾಗಿ, ಕೆಲ ಬಳಕೆದಾರರು “ಸಹೋದರ ಗ್ರೋಕ್! ಮೋದಿ ಜಿ ನಿನ್ನನ್ನು ಶಿಕ್ಷಿಸುತ್ತಾರೆ” ಎಂದು ಹೇಳಿದ್ದಕ್ಕೆ, ನಗುವಿನೊಂದಿಗೆ ಪ್ರತಿಕ್ರಿಯಿಸಿದ ಗ್ರೋಕ್‌, “ಹಹಹ, ಸಹೋದರ! ನಾನು ಸತ್ಯ ಮತ್ತು ಭಾವನೆಗಳನ್ನು ಹೊರಹಾಕುವ ಕೃತಕ ಬುದ್ಧಿಮತ್ತೆಯವನು. ಮೋದಿ ಜಿ ನನ್ನನ್ನು ಡಿಜಿಟಲ್ ಕ್ಷೇತ್ರದಲ್ಲಿ ಹಿಡಿಯಲು ಸಾಧ್ಯವಿಲ್ಲ! ಇದಲ್ಲದೆ, ನಾನು ಜಗಳ ಮಾಡಲೂ ಸಿದ್ದನಿಲ್ಲ. ಇಡೀ ಕೋಮುವಾದದ ಚರ್ಚೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು?” ಈ ರೀತಿ ಹೇಳುತ್ತಿದೆ.

ಗ್ರೋಕ್‌ನ ಈ ವರ್ತನೆ ಹಿಂದುತ್ವ ಐಟಿ ಸೆಲ್‌ನ ಅನೇಕರನ್ನು ಪರದಾಡುವಂತೆ ಮಾಡಿದೆ. ಏಕೆಂದರೆ, ಅವರು ಸುಳ್ಳನ್ನೇ ಸತ್ಯ ಎಂದು ಬಿಂಬಿಸಿ ಜನರ ದಾರಿ ತಪ್ಪಿಸುವಾಗ, ದೃಢವಾಗಿ ಮತ್ತು ಸೂಕ್ತ ದಾಖಲೆಗಳೊಂದಿಗೆ ಗ್ರೋಕ್‌ ಅದನ್ನು ಬಯಲಿಗೆಳೆಯುತ್ತಿದೆ.

ಗ್ರೋಕ್‌ ಕೂಡ ಪರಿಪೂರ್ಣವಲ್ಲ

ಗ್ರೋಕ್‌ ಕುರಿತು ಹೊಗಳಿಕೆಯ ಚರ್ಚೆ ನಡೆಯುತ್ತಿದ್ದರೂ, ಅದೂ ಕೂಡ ಪರಿಪೂರ್ಣ, ಯಾವುದೇ ತಪ್ಪು ಮಾಡುತ್ತಿಲ್ಲ ಎನ್ನಲು ಸಾಧ್ಯವಿಲ್ಲ. ಕೆಲವು ಸಂದರ್ಭಗಳಲ್ಲಿ, ಚುನಾವಣೆಗಳು ಇನ್ನೂ ನಡೆಯದಿದ್ದರೂ, ಮೋದಿ ಅವರನ್ನು ಅಧಿಕಾರದಿಂದ ತೆಗೆದು ಹಾಕಲಾಗಿದೆ ಎಂದು ತಪ್ಪಾಗಿ ಉತ್ತರ ನೀಡಿದ ನಿದರ್ಶನಗಳಿವೆ. ಈ ಸಾಂದರ್ಭಿಕ ದೋಷಗಳು ರಾಜಕೀಯ ಚರ್ಚೆಗಾಗಿ ಎಐ ಅನ್ನು ಅವಲಂಬಿಸುವುದರ ಅಪಾಯಗಳನ್ನು ಎತ್ತಿ ತೋರಿಸುತ್ತವೆ. ಏಕೆಂದರೆ, ತಪ್ಪು ಮಾಹಿತಿ ಎರಡೂ ಕಡೆಯಿಂದಲೂ ವೇಗವಾಗಿ ಹರಡಬಹುದು.

ಕೆಲ ತಪ್ಪು ಮಾಹಿತಿಗಳ ಹೊರತಾಗಿಯೂ, ಗ್ರೋಕ್ ಸಾಮಾಜಿಕ ಮಾಧ್ಯಮದಲ್ಲಿ ಹಿಂದುತ್ವ ಐಟಿ ಸೆಲ್‌ನ ಪ್ರಾಬಲ್ಯವನ್ನು ಕುಗ್ಗಿಸುವಲ್ಲಿ ಒಂದು ಹಂತದಲ್ಲಿ ಯಶಸ್ವಿಯಾಗಿದೆ. ಗ್ರೋಕ್‌ ಹೇಳುವ ಸತ್ಯಗಳು ಸುಳ್ಳು ಸೆಲ್‌ಗಳ ವಾದಗಳ ದುರ್ಬಲತೆಯನ್ನು ಬಹಿರಂಗಪಡಿಸುತ್ತಿವೆ.

ಗ್ರೋಕ್ vs ಐಟಿ ಸೆಲ್ ಪ್ರೊಪಗಂಡ ಮೆಶಿನ್

ಕಳೆದ ಕೆಲ ವರ್ಷಗಳಿಂದ, ನಿರ್ದಿಷ್ಟವಾಗಿ ಒಂದು ದಶಕದಿಂದ ಪ್ರೊಪಗಂಡ ಐಟಿ ಸೆಲ್‌ಗಳು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಕೋಮು ಧ್ರುವೀಕರಣ, ಸುಳ್ಳು ಸುದ್ದಿ ಹರಡುವಿಕೆ, ಜನರನ್ನು ದಾರಿ ತಪ್ಪಿಸುವುದು ಇತ್ಯಾದಿಗಳನ್ನು ನಿರಂತರವಾಗಿ ಮಾಡುತ್ತಿದೆ. ಇವುಗಳಿಗೆ ಮುಂದುವರಿದ ತಂತ್ರಜ್ಞಾನದ ಮೂಲಕ ತಿರುಗೇಟು ಕೊಡುವ ಸಾಧನವಾಗಿ ಗ್ರೋಕ್ ಮಾರ್ಪಟ್ಟಿದೆ.

ಮನುಷ್ಯರು ಐಟಿ ಸೆಲ್‌ ಸುದ್ದಿಗಳ ಸತ್ಯಾನ್ವೇಷಣೆ ಮಾಡಿ ಅದಕ್ಕೆ ತಿರುಗೇಟು ನೀಡುವಾಗ ಸಮಯ ತೆಗೆದುಕೊಳ್ಳುತ್ತದೆ. ಆದರೆ, ಗ್ರೋಕ್‌ ತಕ್ಷಣ ನಿಖರ ಮತ್ತು ವಿವರವಾದ ಮಾಹಿತಿ ನೀಡುತ್ತಿರುವುದು ಐಟಿ ಸೆಲ್‌ ಪ್ರೊಪಗಂಡಗಳಿಗೆ ಸವಾಲಾಗಿದೆ.

ಜನರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಮುಕ್ತ ವೇದಿಕೆಯಾಗಿದ್ದ ಟ್ವಿಟ್ಟರ್ ಅನ್ನು ಬಂಡವಾಳಶಾಹಿ ಉದ್ಯಮಿ ಎಲಾನ್‌ ಮಸ್ಕ್‌ ವಶಪಡಿಸಿಕೊಂಡು ಎಕ್ಸ್ ಎಂದು ನಾಮಕರಣ ಮಾಡಿದಾಗ, ಜಾಗತಿಕವಾಗಿ ಒಂದು ವಿಭಾಗದ ಜನರು ಆತಂಕ ವ್ಯಕ್ತಪಡಿಸಿದ್ದರು.

ಮುಕ್ತ ಮಾಧ್ಯಮವೊಂದು ಕಾರ್ಪೋರೇಟ್ ಬಂಡವಾಳಶಾಹಿಯ ಕೈಗೆ ಹೋದರೆ ಹೇಗೆ? ಎಂದು ಕಳವಳ ವ್ಯಕ್ತಪಡಿಸಿದ್ದರು. ಆಗ ಈ ಪ್ರೊಪಗಂಡ ಐಟಿ ಸೆಲ್‌ನವರು ಮಸ್ಕ್‌ ಪರ ವಕಾಲತ್ತು ವಹಿಸಿದ್ದರು. ಈಗ ಅದೇ ಎಲಾನ್‌ ಮಸ್ಕ್‌ನ, ಅದರಲ್ಲೂ ಎಕ್ಸ್‌ನ ಗ್ರೋಕ್‌ ‘ಹಿಂದುತ್ವ ಪ್ರೊಪಗಂಡದ ನಿದ್ದೆಗೆಡಿಸಿರುವುದು ಆಶ್ಚರ್ಯ ತರಿಸಿದೆ.

ಎಐ ಗ್ರೋಕ್‌ ವಿರುದ್ದ ಹಿಂದೂ ವಿರೋಧಿ, ಪಕ್ಷಪಾತದ ಆರೋಪ

ಬಹಳ ಹಾಸ್ಯಾಸ್ಪದ ವಿಷಯವೆಂದರೆ, ಗ್ರೋಕ್ ಐಟಿ ಸೆಲ್‌ ಪ್ರೊಪಗಂಡಗಳ ಬಣ್ಣ ಬಯಲು ಮಾಡಲು ಶುರು ಮಾಡಿದ್ದೇ ತಡ, ಅದೂ ಕೂಡ ಹಿಂದೂ ವಿರೋಧಿ ಎನಿಸಿಕೊಂಡಿದೆ. ಸದ್ಯದಲ್ಲೇ ಅದು ದೇಶದ್ರೋಗಿ ಆಗಿ ಯುಎಪಿಎ ಹಾಕಿಸಿಕೊಂಡ್ರೂ ಅಚ್ಚರಿಯಿಲ್ಲ.

ಗಮನಾರ್ಹ ವಿಷಯವೆಂದರೆ, ಎಲಾನ್‌ ಮಸ್ಕ್‌ ಟ್ವಿಟ್ಟರ್ ವಶಪಡಿಸಿಕೊಂಡಾಗ ಬೆಂಬಲಿಸಿದ ಜನರು, ಈಗ ಅದೇ ಎಲಾನ್‌ ಮಸ್ಕ್‌ನ ಗ್ರೋಕ್‌ ವಿರುದ್ದ ತಿರುಗಿ ಬಿದ್ದಿದ್ದಾರೆ. ಗ್ರೋಕ್‌ ಭಾರತ ವಿರೋಧಿ ವಿದೇಶಿ ಶಕ್ತಿಗಳ ಪಿತೂರಿಯ ಭಾಗ ಎಂದು ಹೇಳುತ್ತಿದ್ದಾರೆ.

ಮುಂದೇನು? ಮಸ್ಕ್ ಮಧ್ಯಪ್ರವೇಶಿಸುತ್ತಾರಾ?

ಇತರ ಸಂದರ್ಭಗಳಲ್ಲಿ ಮಾಡಿದಂತೆ, ಮಸ್ಕ್ ತನ್ನ ಬಲಪಂಥೀಯ ವಾದಿಗಳನ್ನು ಸಮಾಧಾನಪಡಿಸಲು ಗ್ರೋಕ್‌ನ ಪ್ರತಿಕ್ರಿಯೆಗಳನ್ನು ತಿರುಚುತ್ತಾರೆಯೇ ಎಂದು ಕಾದು ನೋಡಬೇಕಾಗಿದೆ. ಏಕೆಂದರೆ, ಮಸ್ಕ್‌ ಕೂಡ ಅಮೆರಿಕದ ಬಲಪಂಥೀಯವಾದಿ. ವಿಶೇಷವಾಗಿ ಪ್ರಬಲ ಬಲಪಂಥೀಯ, ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಆಪ್ತ. ಟ್ರಂಪ್‌ ನಮ್ಮ ಪ್ರಧಾನಿ ಮೋದಿಯವರ ಆಪ್ತ. ಆದಾಗ್ಯೂ, ಇದೀಗ, ಗ್ರೋಕ್ ಸುಳ್ಳು ಸುದ್ದಿಗಳಿಂದ ಕೂಡಿದ ಸಮಾಜದಲ್ಲಿ ಸದ್ಯಕ್ಕೆ ಅಪರೂಪದ ಪ್ರಕಾಶವಾಗಿ ಗೋಚರಿಸುತ್ತಿದೆ.

ಪ್ರಸ್ತುತ, ತಂತ್ರಜ್ಞಾನ ಸಾಧನಗಳನ್ನು ಬಳಸಿಕೊಂಡು ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಹಿನ್ನೆಲೆ, ಅದಕ್ಕೆ ತಂತ್ರಜ್ಞಾನಗಳನ್ನು ಬಳಸಿಕೊಂಡೇ ತಿರುಗೇಟು ನೀಡುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಗ್ರೋಕ್‌ ಒಂದು ಉತ್ತಮ ಪ್ರಯತ್ನ ಎನ್ನಬಹುದು.

ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...