Homeಅಂತರಾಷ್ಟ್ರೀಯGrok VS IT Cell : ಬಲಪಂಥೀಯ ಪ್ರೊಪಗಂಡದ ನಿದ್ದೆಗೆಡಿಸಿದ 'ಮಸ್ಕ್‌ನ ಎಐ ಚಾಟ್‌ಬಾಟ್'

Grok VS IT Cell : ಬಲಪಂಥೀಯ ಪ್ರೊಪಗಂಡದ ನಿದ್ದೆಗೆಡಿಸಿದ ‘ಮಸ್ಕ್‌ನ ಎಐ ಚಾಟ್‌ಬಾಟ್’

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲಾನ್‌ ಮಸ್ಕ್‌ ಅವರ ಟೆಸ್ಲಾ ಮತ್ತು ಸ್ಟಾರ್‌ಲಿಂಕ್‌ ಕಂಪನಿಗಳನ್ನು ಕೆಂಪು ಹಾಸಿನ ಸ್ವಾಗತ ಕೋರಿ ಭಾರತಕ್ಕೆ ಬರ ಮಾಡಿಕೊಳ್ಳಲು ತುದಿಗಾಲಲ್ಲಿ ನಿಂತಿರುವಾಗ, ಅದೇ ಎಲಾನ್‌ ಮಸ್ಕ್‌ ಅವರ ಕೃತಕಬುದ್ದಿ ಮತ್ತೆ (ಎಐ ಚಾಟ್‌ಬಾಟ್‌) ‘ಗ್ರೋಕ್‌’ ಕೆಲ ದಿನಗಳಿಂದ ಮೋದಿ, ಅವರ ಬಿಜೆಪಿ ಪಕ್ಷ ಮತ್ತು ಅದರ ಹಿಂಬಾಲಕರ ನಿದ್ದೆಗೆಡಿಸಿದೆ.

ಫೆಬ್ರವರಿ 2025ರಲ್ಲಿ ಎಲಾನ್‌ ಮಸ್ಕ್‌ ಅವರು ‘ಗ್ರೋಕ್‌-3’ಅನ್ನು ಬಿಡುಗಡೆ ಮಾಡಿದ್ದಾರೆ. ಇದು ‘ಗ್ರೋಕ್-2’ಗಿಂತ 10 ಪಟ್ಟು ಹೆಚ್ಚು ಶಕ್ತಿಶಾಲಿಯಾಗಿದೆ. ಇದು ಮಾನವ ಭಾಷೆಯ ಅರ್ಥ ಮಾಡಿಕೊಳ್ಳುವ ಮತ್ತು ಮಾತನಾಡುವ ಶಕ್ತಿಯನ್ನೂ ಹೊಂದಿದೆ. ಜಗತ್ತಿನ ಅತ್ಯಂತ ಸ್ಮಾರ್ಟ್ ಎಐ ಆಗಿರುವ ಗ್ರೋಕ್-ಚಾಟ್‌ ಜಿಪಿಟಿ, ಗೂಗಲ್ ಜೆಮಿನಿ ಹಾಗೂ ಡೀಪ್‌ ಸೀಕ್‌ಗೆ ಸೆಡ್ಡು ಹೊಡೆಯುತ್ತಿದೆ.

ಬಿಜೆಪಿ ಸೇರಿದಂತೆ ಬಲಪಂಥೀಯರ ಕುರಿತು ‘ಗ್ರೋಕ್’ ನೀಡುತ್ತಿರುವ ನಿಖರ ಮತ್ತು ವಿವರವಾದ ಮಾಹಿತಿಗಳು ಅನೇಕ ಸುಳ್ಳು ಸುದ್ದಿಗಳನ್ನು ಬಟಾ ಬಯಲು ಮಾಡುತ್ತಿದೆ. ಸುಳ್ಳನ್ನೇ ಬಂಡವಾಳ ಮಾಡಿಕೊಂಡು, ಅದನ್ನೇ ಸತ್ಯ ಎಂಬಂತೆ ಬಿಂಬಿಸಿ ಸಮಾಜದ ಸ್ವಾಸ್ತ್ಯ ಹಾಳು ಮಾಡುತ್ತಿರುವವರಿಗೆ ತಲೆ ನೋವಾಗಿ ಪರಿಣಮಿಸಿದೆ.

ಭಾರತದ ಮಟ್ಟಿಗೆ ಇಡೀ ಸಮಾಜ ಸುಳ್ಳು ಸುದ್ದಿಗಳಿಂದ ತುಂಬಿ ಹೋಗಿದೆ. ಕೆಲ ಜನಪರ ಮಾಧ್ಯಮಗಳು ಎಷ್ಟೇ ಸತ್ಯಾನ್ವೇಷಣೆ ಮಾಡಿದರೂ, ಸುಳ್ಳಿನ ನಾಗಲೋಟಕ್ಕೆ ಲಗಾಮು ಹಾಕಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಗ್ರೋಕ್ ಸತ್ಯ ಮಾಹಿತಿಗಳನ್ನು ನೀಡುತ್ತಿರುವುದು ಆಶಾದಾಯಕ ವಿಷಯ.

ಭಾರತೀಯ ರಾಜಕೀಯದ ಬಗ್ಗೆ, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಗ್ರೋಕ್ ಕೊಡುತ್ತಿರುವ ಉತ್ತರಗಳು ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. “ಭಾರತದ ಅತ್ಯಂತ ಕೋಮುವಾದಿ ರಾಜಕಾರಣಿ ಯಾರು?” ಎಂದು ಕೇಳಿದಾಗ, “ಹಿಂದೂ ರಾಷ್ಟ್ರೀಯತಾವಾದಿ ನೀತಿಗಳು ಮತ್ತು 2002ರ ಗುಜರಾತ್ ಗಲಭೆಗಳೊಂದಿಗಿನ ಸಂಬಂಧಗಳನ್ನು ಉಲ್ಲೇಖಿಸಿ ಮೋದಿಯವರ ಹೆಸರನ್ನು ಗ್ರೋಕ್‌ ಹೇಳುತ್ತಿದೆ. ಮುಸ್ಲಿಮರ ಬಗ್ಗೆ 2024ರಲ್ಲಿ ಮೋದಿಯವರು ನೀಡಿದ ಹೇಳಿಕೆಗಳನ್ನೂ ಈ ಉತ್ತರಕ್ಕೆ ಗ್ರೋಕ್‌ ಉಲ್ಲೇಖಿಸುತ್ತಿದೆ. ಇದು ಮೋದಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಮೋದಿ ಅವರ ಕುರಿತು ಹೇಳಿದಂತೆ ಯೋಗಿ ಆದಿತ್ಯನಾಥ್ ಮತ್ತು ಪ್ರಜ್ಞಾ ಠಾಕೂರ್ ಅವರಂತಹ ವ್ಯಕ್ತಿಗಳ ಬಗ್ಗೆಯೂ ಗ್ರೋಕ್ ಸಂಚಲನಕಾರಿ ಉತ್ತರಗಳನ್ನು ನೀಡುತ್ತಿದೆ.

“ಸಹೋದರ ಗ್ರೋಕ್! ಮೋದಿ ಜಿ ನಿನ್ನನ್ನು ಶಿಕ್ಷಿಸುತ್ತಾರೆ”

ಗ್ರೋಕ್‌ ಚಾಟ್‌ಬಾಟ್‌ನ ಪ್ರತಿಕ್ರಿಯೆಗಳು ಕೇವಲ ವಾಸ್ತವಿಕವಾಗಿರದೆ, ತೀಕ್ಷ್ಣವಾಗಿಯೂ ಇದೆ. ಹಾಗಾಗಿ, ಕೆಲ ಬಳಕೆದಾರರು “ಸಹೋದರ ಗ್ರೋಕ್! ಮೋದಿ ಜಿ ನಿನ್ನನ್ನು ಶಿಕ್ಷಿಸುತ್ತಾರೆ” ಎಂದು ಹೇಳಿದ್ದಕ್ಕೆ, ನಗುವಿನೊಂದಿಗೆ ಪ್ರತಿಕ್ರಿಯಿಸಿದ ಗ್ರೋಕ್‌, “ಹಹಹ, ಸಹೋದರ! ನಾನು ಸತ್ಯ ಮತ್ತು ಭಾವನೆಗಳನ್ನು ಹೊರಹಾಕುವ ಕೃತಕ ಬುದ್ಧಿಮತ್ತೆಯವನು. ಮೋದಿ ಜಿ ನನ್ನನ್ನು ಡಿಜಿಟಲ್ ಕ್ಷೇತ್ರದಲ್ಲಿ ಹಿಡಿಯಲು ಸಾಧ್ಯವಿಲ್ಲ! ಇದಲ್ಲದೆ, ನಾನು ಜಗಳ ಮಾಡಲೂ ಸಿದ್ದನಿಲ್ಲ. ಇಡೀ ಕೋಮುವಾದದ ಚರ್ಚೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು?” ಈ ರೀತಿ ಹೇಳುತ್ತಿದೆ.

ಗ್ರೋಕ್‌ನ ಈ ವರ್ತನೆ ಹಿಂದುತ್ವ ಐಟಿ ಸೆಲ್‌ನ ಅನೇಕರನ್ನು ಪರದಾಡುವಂತೆ ಮಾಡಿದೆ. ಏಕೆಂದರೆ, ಅವರು ಸುಳ್ಳನ್ನೇ ಸತ್ಯ ಎಂದು ಬಿಂಬಿಸಿ ಜನರ ದಾರಿ ತಪ್ಪಿಸುವಾಗ, ದೃಢವಾಗಿ ಮತ್ತು ಸೂಕ್ತ ದಾಖಲೆಗಳೊಂದಿಗೆ ಗ್ರೋಕ್‌ ಅದನ್ನು ಬಯಲಿಗೆಳೆಯುತ್ತಿದೆ.

ಗ್ರೋಕ್‌ ಕೂಡ ಪರಿಪೂರ್ಣವಲ್ಲ

ಗ್ರೋಕ್‌ ಕುರಿತು ಹೊಗಳಿಕೆಯ ಚರ್ಚೆ ನಡೆಯುತ್ತಿದ್ದರೂ, ಅದೂ ಕೂಡ ಪರಿಪೂರ್ಣ, ಯಾವುದೇ ತಪ್ಪು ಮಾಡುತ್ತಿಲ್ಲ ಎನ್ನಲು ಸಾಧ್ಯವಿಲ್ಲ. ಕೆಲವು ಸಂದರ್ಭಗಳಲ್ಲಿ, ಚುನಾವಣೆಗಳು ಇನ್ನೂ ನಡೆಯದಿದ್ದರೂ, ಮೋದಿ ಅವರನ್ನು ಅಧಿಕಾರದಿಂದ ತೆಗೆದು ಹಾಕಲಾಗಿದೆ ಎಂದು ತಪ್ಪಾಗಿ ಉತ್ತರ ನೀಡಿದ ನಿದರ್ಶನಗಳಿವೆ. ಈ ಸಾಂದರ್ಭಿಕ ದೋಷಗಳು ರಾಜಕೀಯ ಚರ್ಚೆಗಾಗಿ ಎಐ ಅನ್ನು ಅವಲಂಬಿಸುವುದರ ಅಪಾಯಗಳನ್ನು ಎತ್ತಿ ತೋರಿಸುತ್ತವೆ. ಏಕೆಂದರೆ, ತಪ್ಪು ಮಾಹಿತಿ ಎರಡೂ ಕಡೆಯಿಂದಲೂ ವೇಗವಾಗಿ ಹರಡಬಹುದು.

ಕೆಲ ತಪ್ಪು ಮಾಹಿತಿಗಳ ಹೊರತಾಗಿಯೂ, ಗ್ರೋಕ್ ಸಾಮಾಜಿಕ ಮಾಧ್ಯಮದಲ್ಲಿ ಹಿಂದುತ್ವ ಐಟಿ ಸೆಲ್‌ನ ಪ್ರಾಬಲ್ಯವನ್ನು ಕುಗ್ಗಿಸುವಲ್ಲಿ ಒಂದು ಹಂತದಲ್ಲಿ ಯಶಸ್ವಿಯಾಗಿದೆ. ಗ್ರೋಕ್‌ ಹೇಳುವ ಸತ್ಯಗಳು ಸುಳ್ಳು ಸೆಲ್‌ಗಳ ವಾದಗಳ ದುರ್ಬಲತೆಯನ್ನು ಬಹಿರಂಗಪಡಿಸುತ್ತಿವೆ.

ಗ್ರೋಕ್ vs ಐಟಿ ಸೆಲ್ ಪ್ರೊಪಗಂಡ ಮೆಶಿನ್

ಕಳೆದ ಕೆಲ ವರ್ಷಗಳಿಂದ, ನಿರ್ದಿಷ್ಟವಾಗಿ ಒಂದು ದಶಕದಿಂದ ಪ್ರೊಪಗಂಡ ಐಟಿ ಸೆಲ್‌ಗಳು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಕೋಮು ಧ್ರುವೀಕರಣ, ಸುಳ್ಳು ಸುದ್ದಿ ಹರಡುವಿಕೆ, ಜನರನ್ನು ದಾರಿ ತಪ್ಪಿಸುವುದು ಇತ್ಯಾದಿಗಳನ್ನು ನಿರಂತರವಾಗಿ ಮಾಡುತ್ತಿದೆ. ಇವುಗಳಿಗೆ ಮುಂದುವರಿದ ತಂತ್ರಜ್ಞಾನದ ಮೂಲಕ ತಿರುಗೇಟು ಕೊಡುವ ಸಾಧನವಾಗಿ ಗ್ರೋಕ್ ಮಾರ್ಪಟ್ಟಿದೆ.

ಮನುಷ್ಯರು ಐಟಿ ಸೆಲ್‌ ಸುದ್ದಿಗಳ ಸತ್ಯಾನ್ವೇಷಣೆ ಮಾಡಿ ಅದಕ್ಕೆ ತಿರುಗೇಟು ನೀಡುವಾಗ ಸಮಯ ತೆಗೆದುಕೊಳ್ಳುತ್ತದೆ. ಆದರೆ, ಗ್ರೋಕ್‌ ತಕ್ಷಣ ನಿಖರ ಮತ್ತು ವಿವರವಾದ ಮಾಹಿತಿ ನೀಡುತ್ತಿರುವುದು ಐಟಿ ಸೆಲ್‌ ಪ್ರೊಪಗಂಡಗಳಿಗೆ ಸವಾಲಾಗಿದೆ.

ಜನರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಮುಕ್ತ ವೇದಿಕೆಯಾಗಿದ್ದ ಟ್ವಿಟ್ಟರ್ ಅನ್ನು ಬಂಡವಾಳಶಾಹಿ ಉದ್ಯಮಿ ಎಲಾನ್‌ ಮಸ್ಕ್‌ ವಶಪಡಿಸಿಕೊಂಡು ಎಕ್ಸ್ ಎಂದು ನಾಮಕರಣ ಮಾಡಿದಾಗ, ಜಾಗತಿಕವಾಗಿ ಒಂದು ವಿಭಾಗದ ಜನರು ಆತಂಕ ವ್ಯಕ್ತಪಡಿಸಿದ್ದರು.

ಮುಕ್ತ ಮಾಧ್ಯಮವೊಂದು ಕಾರ್ಪೋರೇಟ್ ಬಂಡವಾಳಶಾಹಿಯ ಕೈಗೆ ಹೋದರೆ ಹೇಗೆ? ಎಂದು ಕಳವಳ ವ್ಯಕ್ತಪಡಿಸಿದ್ದರು. ಆಗ ಈ ಪ್ರೊಪಗಂಡ ಐಟಿ ಸೆಲ್‌ನವರು ಮಸ್ಕ್‌ ಪರ ವಕಾಲತ್ತು ವಹಿಸಿದ್ದರು. ಈಗ ಅದೇ ಎಲಾನ್‌ ಮಸ್ಕ್‌ನ, ಅದರಲ್ಲೂ ಎಕ್ಸ್‌ನ ಗ್ರೋಕ್‌ ‘ಹಿಂದುತ್ವ ಪ್ರೊಪಗಂಡದ ನಿದ್ದೆಗೆಡಿಸಿರುವುದು ಆಶ್ಚರ್ಯ ತರಿಸಿದೆ.

ಎಐ ಗ್ರೋಕ್‌ ವಿರುದ್ದ ಹಿಂದೂ ವಿರೋಧಿ, ಪಕ್ಷಪಾತದ ಆರೋಪ

ಬಹಳ ಹಾಸ್ಯಾಸ್ಪದ ವಿಷಯವೆಂದರೆ, ಗ್ರೋಕ್ ಐಟಿ ಸೆಲ್‌ ಪ್ರೊಪಗಂಡಗಳ ಬಣ್ಣ ಬಯಲು ಮಾಡಲು ಶುರು ಮಾಡಿದ್ದೇ ತಡ, ಅದೂ ಕೂಡ ಹಿಂದೂ ವಿರೋಧಿ ಎನಿಸಿಕೊಂಡಿದೆ. ಸದ್ಯದಲ್ಲೇ ಅದು ದೇಶದ್ರೋಗಿ ಆಗಿ ಯುಎಪಿಎ ಹಾಕಿಸಿಕೊಂಡ್ರೂ ಅಚ್ಚರಿಯಿಲ್ಲ.

ಗಮನಾರ್ಹ ವಿಷಯವೆಂದರೆ, ಎಲಾನ್‌ ಮಸ್ಕ್‌ ಟ್ವಿಟ್ಟರ್ ವಶಪಡಿಸಿಕೊಂಡಾಗ ಬೆಂಬಲಿಸಿದ ಜನರು, ಈಗ ಅದೇ ಎಲಾನ್‌ ಮಸ್ಕ್‌ನ ಗ್ರೋಕ್‌ ವಿರುದ್ದ ತಿರುಗಿ ಬಿದ್ದಿದ್ದಾರೆ. ಗ್ರೋಕ್‌ ಭಾರತ ವಿರೋಧಿ ವಿದೇಶಿ ಶಕ್ತಿಗಳ ಪಿತೂರಿಯ ಭಾಗ ಎಂದು ಹೇಳುತ್ತಿದ್ದಾರೆ.

ಮುಂದೇನು? ಮಸ್ಕ್ ಮಧ್ಯಪ್ರವೇಶಿಸುತ್ತಾರಾ?

ಇತರ ಸಂದರ್ಭಗಳಲ್ಲಿ ಮಾಡಿದಂತೆ, ಮಸ್ಕ್ ತನ್ನ ಬಲಪಂಥೀಯ ವಾದಿಗಳನ್ನು ಸಮಾಧಾನಪಡಿಸಲು ಗ್ರೋಕ್‌ನ ಪ್ರತಿಕ್ರಿಯೆಗಳನ್ನು ತಿರುಚುತ್ತಾರೆಯೇ ಎಂದು ಕಾದು ನೋಡಬೇಕಾಗಿದೆ. ಏಕೆಂದರೆ, ಮಸ್ಕ್‌ ಕೂಡ ಅಮೆರಿಕದ ಬಲಪಂಥೀಯವಾದಿ. ವಿಶೇಷವಾಗಿ ಪ್ರಬಲ ಬಲಪಂಥೀಯ, ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಆಪ್ತ. ಟ್ರಂಪ್‌ ನಮ್ಮ ಪ್ರಧಾನಿ ಮೋದಿಯವರ ಆಪ್ತ. ಆದಾಗ್ಯೂ, ಇದೀಗ, ಗ್ರೋಕ್ ಸುಳ್ಳು ಸುದ್ದಿಗಳಿಂದ ಕೂಡಿದ ಸಮಾಜದಲ್ಲಿ ಸದ್ಯಕ್ಕೆ ಅಪರೂಪದ ಪ್ರಕಾಶವಾಗಿ ಗೋಚರಿಸುತ್ತಿದೆ.

ಪ್ರಸ್ತುತ, ತಂತ್ರಜ್ಞಾನ ಸಾಧನಗಳನ್ನು ಬಳಸಿಕೊಂಡು ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಹಿನ್ನೆಲೆ, ಅದಕ್ಕೆ ತಂತ್ರಜ್ಞಾನಗಳನ್ನು ಬಳಸಿಕೊಂಡೇ ತಿರುಗೇಟು ನೀಡುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಗ್ರೋಕ್‌ ಒಂದು ಉತ್ತಮ ಪ್ರಯತ್ನ ಎನ್ನಬಹುದು.

ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...