Homeಮುಖಪುಟ‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

- Advertisement -
- Advertisement -

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದೆ.

ಮೇ 29ರಂದು ನೀಡಿದ ತೀರ್ಪಿನಲ್ಲಿ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು, ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯು) ದಾಖಲಿಸಿರುವ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಯನ್ನು ಮುಂದುವರಿಸುವುದು “ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗ” ಎಂದು ಹೇಳಿದ್ದಾರೆ. ಅಲ್ಲದೆ, ಮುಖ್ಯ ಆರೋಪಕ್ಕೆ ಸಂಬಂಧಿಸಿದ ಎಫ್‌ಐಆರ್ ರದ್ದಾದ ನಂತರ, ಈ ವಿಷಯದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿರುವ ಜಾರಿ ಪ್ರಕರಣದ ಮಾಹಿತಿ ವರದಿ (ಇಸಿಐಆರ್) ಕೂಡ ರದ್ದಾಗಲು ಅರ್ಹವಾಗಿದೆ ಎಂದು ತಿಳಿಸಿದ್ದಾರೆ. 

ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯು) 2020ರಲ್ಲಿ ದಾಖಲಿಸಿದ ಎಫ್‌ಐಆರ್‌ನಲ್ಲಿ, ನ್ಯೂಸ್‌ಕ್ಲಿಕ್‌ನ ಮೂಲ ಸಂಸ್ಥೆಯಾದ ಪಿಪಿಕೆ ನ್ಯೂಸ್‌ಕ್ಲಿಕ್ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್, 2018-19ರ ಹಣಕಾಸು ವರ್ಷದಲ್ಲಿ ಅಮೆರಿಕದ ವರ್ಲ್ಡ್‌ವೈಡ್ ಮೀಡಿಯಾ ಹೋಲ್ಡಿಂಗ್ಸ್ ಎಲ್‌ಎಲ್‌ಸಿಯಿಂದ 9.59 ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆಯನ್ನು ನಿಯಮ ಬಾಹಿರವಾಗಿ ಪಡೆದುಕೊಂಡಿದೆ ಎಂದು ಆರೋಪಿಸಲಾಗಿತ್ತು. ಈ ವಿದೇಶಿ ಹೂಡಿಕೆ ಕಾನೂನಿನ ಉಲ್ಲಂಘನೆಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿದೆ ಎಂದು ಅದರಲ್ಲಿ ದೂರಲಾಗಿತ್ತು.

ಡಿಜಿಟಲ್ ಸುದ್ದಿ ವೆಬ್‌ಸೈಟ್‌ಗಳಲ್ಲಿ ಇರುವ ಶೇಕಡ 26ರಷ್ಟು ವಿದೇಶಿ ನೇರ ಹೂಡಿಕೆಯ ಮಿತಿಯನ್ನು ತಪ್ಪಿಸುವ ಸಲುವಾಗಿ, ಕಂಪನಿಯ ಷೇರುಗಳ ಮೌಲ್ಯವನ್ನು ಅತಿಯಾಗಿ ಹೆಚ್ಚಿಸಿ ಈ ಹೂಡಿಕೆಯನ್ನು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಈ ಹೂಡಿಕೆಯ ಶೇಕಡ 45ಕ್ಕಿಂತ ಹೆಚ್ಚಿನ ಹಣವನ್ನು ದುರುದ್ದೇಶಗಳಿಗಾಗಿ ಸಂಬಳ, ಸಮಾಲೋಚನೆ ಶುಲ್ಕ, ಬಾಡಿಗೆ ಇತ್ಯಾದಿಗಳ ರೂಪದಲ್ಲಿ ಬೇರೆಡೆಗೆ ವರ್ಗಾಯಿಸಲಾಗಿದೆ/ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಅದರಲ್ಲಿ ಹೇಳಲಾಗಿತ್ತು.

ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯವು (ಇಡಿ) ನ್ಯೂಸ್‌ಕ್ಲಿಕ್, ಪ್ರಬೀರ್ ಪುರಕಾಯಸ್ಥ ಮತ್ತು ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣವನ್ನು ದಾಖಲಿಸಿತ್ತು. 

ಪಿಪಿಕೆ ನ್ಯೂಸ್‌ಕ್ಲಿಕ್ ಸ್ಟುಡಿಯೋ ಸಂಸ್ಥೆಯು ಈ ಎಫ್‌ಐಆರ್ ಅಸ್ಪಷ್ಟ ಆರೋಪಗಳಿಂದ ಕೂಡಿದೆ ಎಂದು ಹೇಳಿ, ಅದನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿತ್ತು.

ನ್ಯಾಯಾಲಯವು ತನ್ನ ತೀರ್ಪಿನಲ್ಲಿ, ಈ ಹೂಡಿಕೆಯು ಒಂದು ಆರ್ಥಿಕ ನಿರ್ಧಾರವಾಗಿದ್ದು, ಇದು “ಯಾವುದೇ ಕ್ರಿಮಿನಲ್ ಅಪರಾಧವನ್ನು ಸೂಚಿಸುವುದಿಲ್ಲ” ಎಂದು ತಿಳಿಸಿದೆ. ಅಲ್ಲದೆ, ನ್ಯೂಸ್‌ ಕ್ಲಿಕ್ ಸುದ್ದಿ ಸಂಸ್ಥೆಯ ಪತ್ರಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, ಸಂಬಂಧಿತ ಅವಧಿಯಲ್ಲಿ ಡಿಜಿಟಲ್ ಮಾಧ್ಯಮಗಳಲ್ಲಿ ವಿದೇಶಿ ನೇರ ಹೂಡಿಕೆ ಸ್ವೀಕರಿಸಲು ಯಾವುದೇ ಮಿತಿ ಅಥವಾ ನಿರ್ಬಂಧ ಇರಲಿಲ್ಲ ಎಂದು ಕೋರ್ಟ್ ಹೇಳಿದೆ.

ಈ ಹೂಡಿಕೆಯು ಸ್ವೀಕಾರಾರ್ಹ ನಿಯಮಗಳಂತೆಯೇ ನಡೆದಿದೆ ಮತ್ತು ಎಲ್ಲಾ ಆರೋಪಗಳನ್ನು ಒಪ್ಪಿಕೊಂಡರೂ ಸಹ ವಂಚನೆ ಅಥವಾ ಅಪರಾಧ ನಂಬಿಕೆ ದ್ರೋಹದ ಅಪರಾಧಗಳು ಸಾಬೀತಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ವಂಚನೆ ಅಪರಾಧಕ್ಕೆ “ವಂಚನೆಗೊಳಗಾದ” ವ್ಯಕ್ತಿ ಇರಬೇಕು, ಈ ಪ್ರಕರಣದಲ್ಲಿ ಅದು ಮೆಸರ್ಸ್ ವರ್ಲ್ಡ್‌ವೈಡ್ ಮೀಡಿಯಾ ಹೋಲ್ಡಿಂಗ್ಸ್ ಎಲ್‌ಎಲ್‌ಸಿ ಆಗಿರಬೇಕಿತ್ತು; ಆದರೆ ಅಂತಹ ಯಾವುದೇ ದೂರು ದಾಖಲಾಗಿಲ್ಲ ಮತ್ತು ಬದಲಿಗೆ “ಕೇವಲ ಒಬ್ಬ ಮಾಹಿತಿ ನೀಡಿದವರಿಂದ” ಈ ದೂರು ಬಂದಿದೆ ಎಂದು ಕೋರ್ಟ್ ತಿಳಿಸಿದೆ.

ಡಿಜಿಟಲ್ ಮುದ್ರಣ ಮಾಧ್ಯಮ ವ್ಯವಹಾರದಲ್ಲಿ ತೊಡಗಿರುವ ಕಂಪನಿಯು ಸಂಬಳ, ಸಮಾಲೋಚನೆ ಶುಲ್ಕ, ಬಾಡಿಗೆ ಇತ್ಯಾದಿಗಳಿಗೆ ವೆಚ್ಚ ಮಾಡುವುದು ಸಹಜವಾಗಿದ್ದು, ಆದ್ದರಿಂದ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ/ಬೇರೆಡೆಗೆ ವರ್ಗಾಯಿಸಲಾಗಿದೆ ಎಂಬ ಆರೋಪವು ಸಮರ್ಥನೀಯವಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಅಡಿಯಲ್ಲಿ ಕ್ರಿಮಿನಲ್ ಪಿತೂರಿಯ ಅಪರಾಧದ ಆಧಾರದ ಮೇಲೆ ಹಣ ಅಕ್ರಮ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣವನ್ನು ಮುಂದುವರಿಸಲು ಜಾರಿ ನಿರ್ದೇಶನಾಲಯ ನಡೆಸಿದ ಪ್ರಯತ್ನವನ್ನು ಕೋರ್ಟ್ ತಿರಸ್ಕರಿಸಿದೆ. ತನಿಖಾ ಸಂಸ್ಥೆಯು ಈ ಅಪರಾಧಕ್ಕಾಗಿ ನ್ಯೂಸ್‌ಕ್ಲಿಕ್ ಮತ್ತು ಇತರರು ಅನುಸರಿಸಿದ “ಕಾನೂನುಬಾಹಿರ ಉದ್ದೇಶ” ಅಥವಾ “ಮಾರ್ಗಗಳನ್ನು” ತೋರಿಸುವುದು ಕಡ್ಡಾಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.

“ವಿಶೇಷವಾಗಿ, ಜಾರಿ ನಿರ್ದೇಶನಾಲಯವು ಸುಮಾರು ಒಂದೂವರೆ ವರ್ಷಗಳ ಕಾಲ ವ್ಯಾಪಕ ತನಿಖೆಯನ್ನು ನಡೆಸಿದೆ ಮತ್ತು ಅರ್ಜಿದಾರರನ್ನು ಹಾಗೂ ಅವರ ಉದ್ಯೋಗಿಗಳನ್ನು ಹಲವು ಬಾರಿ ಕರೆಸಿ ವಿಚಾರಣೆ ನಡೆಸಿದೆ. ಆದರೆ ಇಂದಿನವರೆಗೆ ಯಾವುದೇ ಅಪರಾಧ ಸಾಬೀತುಪಡಿಸುವ ಪುರಾವೆಗಳು ಪತ್ತೆಯಾಗಿಲ್ಲ ಅಥವಾ ದಾಖಲೆಯಲ್ಲಿ ಸೇರಿಸಲ್ಪಟ್ಟಿಲ್ಲ. ಕ್ರಿಮಿನಲ್ ಪಿತೂರಿ ನಡೆದಿದೆ ಎಂಬ ಕೇವಲ ಆಧಾರರಹಿತ ಪ್ರತಿಪಾದನೆಗಳನ್ನು ಹೊರತುಪಡಿಸಿ, ಪಿಎಂಎಲ್‌ಎ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ನಡೆದಿರುವುದನ್ನು ದೂರದಿಂದಾದರೂ ಸೂಚಿಸುವಂತಹ ಯಾವುದೇ ಅಪರಾಧದ ಆರೋಪದ ಸುಳಿವು ಕೂಡ ಇಲ್ಲ” ಎಂದು ನ್ಯಾಯಾಲಯ ಹೇಳಿದೆ.

“ಎಫ್‌ಐಆರ್ ಸಂಖ್ಯೆ 0116/2020 ಮತ್ತು ಇಸಿಐಆರ್ ಸಂಖ್ಯೆ ECIR/14/HIU/2020 ಅನ್ನು ಈ ಮೂಲಕ ರದ್ದುಗೊಳಿಸಲಾಗಿದೆ” ಎಂದು ನ್ಯಾಯಾಲಯ ಮುಕ್ತಾಯಗೊಳಿಸಿದೆ.

ಒಮ್ಮೆ ಇಸಿಐಆರ್ ಸ್ವತಃ ರದ್ದಾದ ಮೇಲೆ, ಇಸಿಐಆರ್‌ನ ಪ್ರತಿಯನ್ನು ಒದಗಿಸುವಂತೆ ಕೋರಿ ಸಲ್ಲಿಸಲಾದ ಮನವಿಯು ನಿರರ್ಥಕವಾಗಿದೆ ಎಂದು ನ್ಯಾಯಾಲಯ ಹೇಳಿದೆ.

 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...