Homeಮುಖಪುಟಬಿಜೆಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಫಲ; ಚು.ಆಯೋಗವನ್ನು ತರಾಟೆಗೆ ತೆಗೆದುಕೊಂಡ ಕಲ್ಕತ್ತಾ ಹೈಕೋರ್ಟ್

ಬಿಜೆಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಫಲ; ಚು.ಆಯೋಗವನ್ನು ತರಾಟೆಗೆ ತೆಗೆದುಕೊಂಡ ಕಲ್ಕತ್ತಾ ಹೈಕೋರ್ಟ್

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಯಾವುದೇ ರೀತಿಯ ಅವಹೇಳನಕಾರಿ ಜಾಹೀರಾತುಗಳನ್ನು ಪ್ರಕಟಿಸದಂತೆ ಕಲ್ಕತ್ತಾ ಹೈಕೋರ್ಟ್ ಬಿಜೆಪಿಗೆ ನಿರ್ಬಂಧ ವಿಧಿಸಿದೆ, ಇದರ ಜೊತೆಗೆ ಟಿಎಂಸಿ ದೂರು ನೀಡಿದ್ದರೂ ಕ್ರಮವನ್ನು ಕೈಗೊಳ್ಳದ ಚುನಾವಣಾ ಆಯೋಗವನ್ನು ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಮೂರ್ತಿ ಸಬ್ಯಸಾಚಿ ಭಟ್ಟಾಚಾರ್ಯ ಅವರ ಏಕಸದಸ್ಯ ಪೀಠ, ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಪಕ್ಷವನ್ನು ಗುರಿಯಾಗಿಸಿಕೊಂಡು ಬಿಜೆಪಿ ನೀಡುತ್ತಿರುವ ಜಾಹೀರಾತುಗಳ ವಿರುದ್ಧ ಟಿಎಂಸಿ ಸಲ್ಲಿಸಿದ ದೂರುಗಳನ್ನು ಬಗೆಹರಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದೆ.

ಸೂಕ್ತ ಸಮಯದಲ್ಲಿ ಟಿಎಂಸಿಯ ದೂರುಗಳನ್ನು ಪರಿಹರಿಸಲು ಚುನಾವಣಾ ಆಯೋಗ ಸಂಪೂರ್ಣವಾಗಿ ವಿಫಲವಾಗಿದೆ. ತತ್‌ಕ್ಷಣದ ಅರ್ಜಿಯು ಕೇವಲ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸುವುದು ಮಾತ್ರವಲ್ಲ, ಪ್ರಾಥಮಿಕವಾಗಿ ಟಿಎಂಸಿ ಮತ್ತು ಅದರ ಕಾರ್ಯಕರ್ತರ ರಾಜಕೀಯ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುವ ಜಾಹೀರಾತುಗಳನ್ನು ಪ್ರಕಟಿಸದಂತೆ ಬಿಜೆಪಿಯನ್ನು ನಿರ್ಬಂಧಿಸುವುದಕ್ಕಾಗಿದೆ ಎಂದು ಹೇಳಿದೆ.

ಚುನಾವಣೆಯ ಹಿಂದಿನ ದಿನದ ಬಿಜೆಪಿಯ ಜಾಹೀರಾತುಗಳು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಮತ್ತು ಟಿಎಂಸಿ ಮತ್ತು ನಾಗರಿಕರ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಹಕ್ಕುಗಳಿಗೆ ಧಕ್ಕೆಯುಂಟುಮಾಡಿದೆ ಎಂದು ನ್ಯಾಯಾಲಯ ಗಮನಿಸಿದೆ.

ಟಿಎಂಸಿ ವಿರುದ್ಧ ಮಾಡಲಾದ ಆರೋಪಗಳು ಖಂಡಿತವಾಗಿಯೂ ನಿಂದನಾತ್ಮಕವಾಗಿವೆ ಹಾಗೂ ಎದುರಾಳಿಗಳ ವಿರುದ್ಧ ವೈಯಕ್ತಿಕ ದಾಳಿಗಳನ್ನು ನಡೆಸಿ ಅವರನ್ನು ಅವಮಾನಿಸುವ ಉದ್ದೇಶ ಹೊಂದಿವೆ, ಆದ್ದರಿಂದ ಅಂತಹ ಜಾಹೀರಾತುಗಳನ್ನು ಪ್ರಕಟಿಸದಂತೆ ತಡೆಯಾಜ್ಞೆ ವಿಧಿಸುವುದಾಗಿ ನ್ಯಾಯಾಲಯ ಹೇಳಿದೆ.

ಜಾಹೀರಾತುಗಳು ಅವಹೇಳನಕಾರಿಯಾದ ವೈಯಕ್ತಿಕ ದಾಳಿಗಳನ್ನು ಒಳಗೊಂಡಿವೆ ಮತ್ತು ಅಂತಹ ಜಾಹೀರಾತುಗಳನ್ನು ಪ್ರಕಟಿಸದಂತೆ ಬಿಜೆಪಿಯನ್ನು ನಿರ್ಬಂಧಿಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ. ಮುಕ್ತ, ನ್ಯಾಯಸಮ್ಮತ ಮತ್ತು ನಿಷ್ಕಳಂಕ ಚುನಾವಣಾ ಪ್ರಕ್ರಿಯೆಗಾಗಿ, ಮುಂದಿನ ಆದೇಶದವರೆಗೆ ಅಂತಹ ಜಾಹೀರಾತುಗಳನ್ನು ಪ್ರಕಟಿಸದಂತೆ ನಿರ್ಬಂಧಿಸಿರುವುದಾಗಿ ನ್ಯಾಯಾಲಯ ಹೇಳಿದೆ.

ಚುನಾವಣಾ ಸಮಯದಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ವಿರುದ್ಧ ಯಾವುದೇ ಪರಿಶೀಲಿಸದ ಮಾಹಿತಿಯನ್ನು ಮಾಧ್ಯಮಗಳು ಪ್ರಕಟಿಸುವುದನ್ನು ತಪ್ಪಿಸಬೇಕು ಎಂದು ನ್ಯಾಯಾಧೀಶರು ತೀರ್ಪಿನ ವೇಳೆ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂ ಪಕ್ಷದ ವಿರುದ್ಧ ಕೆಲವು ಪತ್ರಿಕೆಗಳಲ್ಲಿ ಪ್ರಕಟವಾದ ಜಾಹೀರಾತುಗಳನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ತಡೆಯಾಜ್ಞೆ ಕೋರಿ ಟಿಎಂಸಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ನಿಂದನಾತ್ಮಕ ಜಾಹೀರಾತುಗಳ ಬಗ್ಗೆ ಟಿಎಂಸಿ ಚುನಾವಣಾ ಆಯೋಗಕ್ಕೆ ದೂರುಗಳನ್ನು ನೀಡಿದೆ, ಆದರೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಟಿಎಂಸಿ ನ್ಯಾಯಾಲಯದ ಮೊರೆ ಹೋದ ಬಳಿಕವಷ್ಟೇ ಚುನಾವಣಾ ಆಯೋಗ ಬಿಜೆಪಿಗೆ ಶೋಕಾಸ್ ನೋಟಿಸ್ ನೀಡಿದೆ ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಇದನ್ನು ಓದಿ: ಬಿಜೆಪಿ ಸರ್ಕಾರದ ನೀತಿಗಳು ಅತಿ ಹೆಚ್ಚು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ: ವರದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...