Homeಕರ್ನಾಟಕಅಂತರ್ಜಲ ಮಟ್ಟ ಭಾರೀ ಕುಸಿತ; ಶೀಘ್ರದಲ್ಲೇ ನೀರಿನ ಬಿಕ್ಕಟ್ಟು ಎದುರಿಸಲಿದೆ ಬೆಂಗಳೂರು

ಅಂತರ್ಜಲ ಮಟ್ಟ ಭಾರೀ ಕುಸಿತ; ಶೀಘ್ರದಲ್ಲೇ ನೀರಿನ ಬಿಕ್ಕಟ್ಟು ಎದುರಿಸಲಿದೆ ಬೆಂಗಳೂರು

- Advertisement -
- Advertisement -

ಈ ವರ್ಷದ ಬೇಸಿಗೆಯಲ್ಲಿ ಬೆಂಗಳೂರು ನಗರವು ಆತಂಕಕಾರಿ ನೀರಿನ ಬಿಕ್ಕಟ್ಟನ್ನು ಎದುರಿಸುವ ಸಾಧ್ಯತೆಯಿದೆ. ಫೆಬ್ರವರಿಯಲ್ಲಿ  ಅಂತರ್ಜಲ ಮಟ್ಟ ಅಪಾಯಕಾರಿಯಾಗಿ ಕುಸಿಯುತ್ತದೆ ಎಂದು ಅಂದಾಜಿಸಲಾಗಿದ್ದು, ಮಾರ್ಚ್ ಮತ್ತು ಏಪ್ರಿಲ್ ವೇಳೆಗೆ ಇನ್ನಷ್ಟು ಹದಗೆಡುವ ಮುನ್ಸೂಚನೆ ಇದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಮತ್ತು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ನಡೆಸಿದ ಸಮಗ್ರ ಅಧ್ಯಯನದ ಭಾಗವಾಗಿ ಈ ಮುನ್ಸೂಚನೆಗಳನ್ನು ಬೆಂಗಳೂರಿನ ಜನತೆಗೆ ನೀಡಲಾಗಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಈ ವಾರ ನಗರದ ಹೊರವಲಯದಲ್ಲಿರುವ 80 ವಾರ್ಡ್‌ಗಳಲ್ಲಿ ಅಂತರ್ಜಲ ಮಟ್ಟವು 20-25 ಮೀಟರ್‌ಗಳಷ್ಟು ಕುಸಿಯುವ ನಿರೀಕ್ಷೆಯಿದೆ ಎಂದು ಹೇಳಿದೆ. ಫೆಬ್ರವರಿಯಲ್ಲಿ ಕುಸಿತ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಅಂದಾಜಿಸಿದೆ.

ಕೆ ಆರ್ ಪುರಂ ಮತ್ತು ಮಹದೇವಪುರ ಸೇರಿದಂತೆ 80 ನಿರ್ಣಾಯಕ ವಾರ್ಡ್‌ಗಳು ವಿಶೇಷವಾಗಿ ದುರ್ಬಲವಾಗಿವೆ ಎಂದು ಸಮೀಕ್ಷೆಯು ತೋರಿಸುತ್ತದೆ. ಏಕೆಂದರೆ, ಕೆಲವು ಪ್ರದೇಶಗಳಲ್ಲಿ ಅಂತರ್ಜಲ ಮಟ್ಟವು 20–25 ಮೀಟರ್‌ಗಳಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ.

ಈ ಬಗ್ಗೆ ತಜ್ಞರು ತಾವು ಆಶ್ಚರ್ಯಪಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಏಕೆಂದರೆ, ಅವರು ಹಲವು ವರ್ಷಗಳಿಂದ ಈ ಬಗ್ಗೆ ಎಚ್ಚರಿಕೆ ನೀಡುತ್ತಿದ್ದಾರೆ.

ಇತ್ತೀಚಿನ ಸಮೀಕ್ಷೆಯ ಪ್ರಕಾರ, ಬೆಂಗಳೂರಿನಲ್ಲಿ ಬೋರ್‌ವೆಲ್‌ಗಳ ಮೇಲಿನ ಅವಲಂಬನೆ ದಿನಕ್ಕೆ ಸುಮಾರು 800 ಮಿಲಿಯನ್ ಲೀಟರ್ (ಎಂಎಲ್‌ಡಿ) ಎಂದು ಅಂದಾಜಿಸಲಾಗಿದೆ. ಏಕೆಂದರೆ, ತಜ್ಞರು ಅಂತರ್ಜಲವನ್ನು ಬರಿದುಮಾಡುವ ಅವೈಜ್ಞಾನಿಕ ಬೋರ್‌ವೆಲ್ ಕೊರೆಯುವಿಕೆಯನ್ನು ನಿಲ್ಲಿಸುವ ಅಗತ್ಯವನ್ನು ಒತ್ತಿ ಹೇಳುತ್ತಾರೆ.

ಅಸ್ತಿತ್ವದಲ್ಲಿರುವ ಬೋರ್‌ವೆಲ್‌ಗಳನ್ನು ತಕ್ಷಣ ಪುನರುಜ್ಜೀವನಗೊಳಿಸಬೇಕು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮಳೆಗಾಲಕ್ಕೆ ಮುಂಚಿತವಾಗಿ ಮಳೆನೀರು ಕೊಯ್ಲು ತಂತ್ರಗಳನ್ನು ಜಾರಿಗೆ ತರುವ ಅಗತ್ಯವನ್ನು ತಜ್ಞರು ಒತ್ತಿ ಹೇಳುತ್ತಾರೆ.

ನೀರಿನ ಬಿಕ್ಕಟ್ಟಿನ ಅಪಾಯದಲ್ಲಿರುವ ಪ್ರದೇಶಗಳ ಪಟ್ಟಿ

ನೀರಿನ ಬಿಕ್ಕಟ್ಟಿನಿಂದ ಭಾದಿತವಾಗುವ ಪ್ರದೇಶಗಳಲ್ಲಿ ಹೊರಮಾವು, ರಾಮಮೂರ್ತಿ ನಗರ ಮತ್ತು ಜಕ್ಕೂರು ಸೇರಿವೆ. ಏಕೆಂದರೆ, ಈ ಪ್ರದೇಶಗಳು ಬೋರ್‌ವೆಲ್‌ಗಳನ್ನು ಹೆಚ್ಚು ಅವಲಂಬಿಸಿವೆ, ಇವು ಪ್ರತಿದಿನ ಸುಮಾರು 800 ಮಿಲಿಯನ್ ಲೀಟರ್ ನೀರನ್ನು ಬಳಸುತ್ತವೆ ಎಂದು ವರದಿ ತಿಳಿಸಿದೆ.

ನೀರಿನ ಬಿಕ್ಕಟ್ಟಿಗೆ ಪರಿಹಾರ ಏನು?

ಬೆಂಗಳೂರಿನ ನೀರಿನ ಕೊರತೆಯನ್ನು ಪರಿಹರಿಸಲು, ಬಿಡಬ್ಲ್ಯೂಎಸ್‌ಎಸ್‌ಬಿ ತಜ್ಞರು ಮತ್ತು ಐಐಎಸ್‌ಸಿ ವಿಜ್ಞಾನಿಗಳು, ಅಂತರ್ಜಲ ತಜ್ಞರನ್ನು ಒಳಗೊಂಡ ವಿಶೇಷ ಕಾರ್ಯಪಡೆಯನ್ನು ರಚಿಸಿತು. ಸುಸ್ಥಿರ ಕ್ರಿಯಾ ಯೋಜನೆಯನ್ನು ರಚಿಸಲು ಮಂಡಳಿಯು ಆರು ತಿಂಗಳ ಕಾಲ ನೀರು ಸರಬರಾಜು ಡೇಟಾವನ್ನು ವಿಶ್ಲೇಷಿಸಿತು.

ಸಂಭವನೀಯ ನೀರಿನ ಬಿಕ್ಕಟ್ಟನ್ನು ಗಮನದಲ್ಲಿಟ್ಟುಕೊಂಡು, ಬಿಡಬ್ಲ್ಯೂಎಸ್‌ಎಸ್‌ಬಿಯ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಹೈ-ರಿಸ್ಕ್ ವಾರ್ಡ್‌ಗಳಲ್ಲಿರುವ ನಿವಾಸಿಗಳು ಕೊಳವೆಬಾವಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ಕಾವೇರಿ ನೀರಿನ ಸಂಪರ್ಕಗಳಿಗೆ ಬದಲಾಯಿಸುವಂತೆ ಒತ್ತಾಯಿಸಿದ್ದಾರೆ. ವಿಶೇಷವಾಗಿ ಕಾವೇರಿ ಐದನೇ ಹಂತ ಯೋಜನೆಯ ಅಡಿಯಲ್ಲಿ ಲಭ್ಯತೆ ಹೆಚ್ಚಾದ ಕಾರಣ. ಈ ಪ್ರದೇಶಗಳ ನಿವಾಸಿಗಳು ನೀರಿನ ಬಿಕ್ಕಟ್ಟನ್ನು ಎದುರಿಸಲು ಸಿದ್ಧರಾಗುತ್ತಿದ್ದಾರೆ.

ನೀರಿನ ಮಟ್ಟ ಕುಸಿಯುವ ನಿರೀಕ್ಷೆ ಎಷ್ಟಿದೆ?

ಮಧ್ಯ ಬೆಂಗಳೂರು: 5 ಮೀಟರ್

ಸಿಎಂಸಿ ಪ್ರದೇಶಗಳು: 10-15 ಮೀಟರ್

110 ಹಳ್ಳಿಗಳಲ್ಲಿ: 20-25 ಮೀಟರ್

ಇದನ್ನೂ ಓದಿ; ದೆಹಲಿ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ : ಅಧಿಕಾರಕ್ಕೆ ಬಂದರೆ ಜಾತಿ ಜನಗಣತಿ ನಡೆಸುವ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...