Homeಮುಖಪುಟಮೇಲಂಗಿ ಕಳಚದೆ ದೇವಸ್ಥಾನ ಪ್ರವೇಶಿಸಿದ ಗುಂಪು: ಕೇರಳದಲ್ಲಿ ವಿನೂತನ ಪ್ರತಿಭಟನೆ

ಮೇಲಂಗಿ ಕಳಚದೆ ದೇವಸ್ಥಾನ ಪ್ರವೇಶಿಸಿದ ಗುಂಪು: ಕೇರಳದಲ್ಲಿ ವಿನೂತನ ಪ್ರತಿಭಟನೆ

- Advertisement -
- Advertisement -

ಪತ್ತನಂತಿಟ್ಟ (ಕೇರಳ): ಪುರುಷ ಭಕ್ತರು ದೇವಾಲಯ ಪ್ರವೇಶಿಸುವ ಮುನ್ನ ಶರ್ಟ್ ಅಥವಾ ಮೇಲಂಗಿ ಕಳಚಬೇಕು ಎಂಬ ದೀರ್ಘಕಾಲದ ಪದ್ಧತಿಯನ್ನು ವಿರೋಧಿಸಿ, ಭಾನುವಾರ (ಮಾ.23) ಇಲ್ಲಿನ ಕೊಯಿಕ್ಕಲ್ ಶ್ರೀ ಧರ್ಮಶಾಸ್ತ ದೇವಸ್ಥಾನಕ್ಕೆ ಗುಂಪೊಂದು ಶರ್ಟ್ ಕಳಚದೆ ಪ್ರವೇಶಿಸಿ ಪ್ರತಿಭಟಿಸಿದೆ.

ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ನಿರ್ವಹಿಸುವ ಪೆರುನಾಡುವಿನ ದೇವಾಲಯದ ಮುಂದೆ ಎಸ್‌ಎನ್‌ಡಿಪಿ ಸಂಯುಕ್ತ ಸಮರ ಸಮಿತಿಯ ಸದಸ್ಯರು (ಪ್ರತಿಭಟನಾಕಾರರು) ತಮ್ಮ ಶರ್ಟ್‌ಗಳನ್ನು ಕಳಚದೆ ಸರತಿ ಸಾಲಿನಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿದ ವಿಡಿಯೋಗಳು ವೈರಲ್ ಆಗಿದೆ.

ಪೊಲೀಸರು ಮತ್ತು ದೇವಾಲಯದ ಆಡಳಿತ ಮಂಡಳಿಯವರು ಆಕ್ಷೇಪ ವ್ಯಕ್ತಪಡಿಸದ ಕಾರಣ ಪ್ರತಿಭಟನೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಕೊನೆಗೊಂಡಿದೆ.

ಪುರುಷ ಭಕ್ತರು ದೇವಸ್ಥಾನ ಪ್ರವೇಶಿಸುವ ಮುನ್ನ ತಮ್ಮ ಮೇಲಂಗಿ ಕಳಚುವ ಕಡ್ಡಾಯ ಪದ್ಧತಿಯನ್ನು ಶಾಶ್ವತವಾಗಿ ಕೊನೆಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

“ಪ್ರತಿಭಟನೆ ಶಾಂತಿಯುತವಾಗಿತ್ತು. ಭಕ್ತರು ಸಾಂಪ್ರದಾಯಿಕವಾಗಿ ಈ ಪದ್ಧತಿಯನ್ನು ಅನುಸರಿಸುತ್ತಿದ್ದರೂ, ಯಾರಾದರೂ ತಮ್ಮ ಶರ್ಟ್ ಕಳಚದೆ ದೇವಾಲಯ ಪ್ರವೇಶಿಸಿದರೆ ಅದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಈಗಾಗಲೇ ಸ್ಪಷ್ಟಪಡಿಸಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಎಲ್ಲಾ ದೇವಾಲಯಗಳಲ್ಲಿ ಮೇಲಂಗಿ ಕಳಚುವ ಈ ಪದ್ಧತಿಯನ್ನು ರದ್ದುಗೊಳಿಸಬೇಕೆಂದು ಸ್ವಾಮಿ ಸಚ್ಚಿದಾನಂದ ಕರೆ ನೀಡಿದ ತಿಂಗಳುಗಳ ನಂತರ ಈ ಪ್ರತಿಭಟನೆ ನಡೆದಿದೆ.

ಸಮಾಜ ಸುಧಾರಕ ನಾರಾಯಣ ಗುರು ಸ್ಥಾಪಿಸಿದ ಪ್ರಸಿದ್ಧ ಶಿವಗಿರಿ ಮಠದ ಮುಖ್ಯಸ್ಥರಾದ ಸ್ವಾಮಿ ಸಚ್ಚಿದಾನಂದ ಅವರು ಈ ಪದ್ಧತಿಯನ್ನು ಸಾಮಾಜಿಕ ಅನಿಷ್ಟ ಎಂದು ಬಣ್ಣಿಸಿದ್ದರು ಮತ್ತು ಕಳೆದ ವರ್ಷ ಅದನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದರು.

ಪುರುಷರು ಜನಿವಾರ ಧರಿಸಿದ್ದಾರೆಯೇ ಎಂದು ಪರಿಶೀಲಿಸಲು ಮೇಲಂಗಿ ಕಳಚುವ ಸಂಪ್ರದಾಯ ಪರಿಚಯಿಸಲಾಯಿತು ಎಂದು ಸ್ವಾಮಿ ಸಚ್ಚಿದಾನಂದ ಹೇಳಿದ್ದಾರೆ.

ಶ್ರೀ ನಾರಾಯಣ ಧರ್ಮ ಪರಿಪಾಲನಾ (ಎಸ್‌ಎನ್‌ಡಿಪಿ) ಸಂಖ್ಯಾತ್ಮಕವಾಗಿ ಪ್ರಬಲವಾದ ಈಜವ (ಈಡಿಗ-ಬಿಲ್ಲವ) ಸಮುದಾಯವನ್ನು ಪ್ರತಿನಿಧಿಸುವ ಪ್ರಮುಖ ಸಂಘಟನೆಯಾಗಿದೆ.

ಸಂಸತ್ತನ್ನು ಮುಂದೂಡಲು ಬಿಜೆಪಿ ‘ಸಂಪೂರ್ಣ ನಕಲಿ’ ವಿಷಯವನ್ನು ಮಂಡಿಸಿದೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...