Homeಮುಖಪುಟಮೇಲಂಗಿ ಕಳಚದೆ ದೇವಸ್ಥಾನ ಪ್ರವೇಶಿಸಿದ ಗುಂಪು: ಕೇರಳದಲ್ಲಿ ವಿನೂತನ ಪ್ರತಿಭಟನೆ

ಮೇಲಂಗಿ ಕಳಚದೆ ದೇವಸ್ಥಾನ ಪ್ರವೇಶಿಸಿದ ಗುಂಪು: ಕೇರಳದಲ್ಲಿ ವಿನೂತನ ಪ್ರತಿಭಟನೆ

- Advertisement -
- Advertisement -

ಪತ್ತನಂತಿಟ್ಟ (ಕೇರಳ): ಪುರುಷ ಭಕ್ತರು ದೇವಾಲಯ ಪ್ರವೇಶಿಸುವ ಮುನ್ನ ಶರ್ಟ್ ಅಥವಾ ಮೇಲಂಗಿ ಕಳಚಬೇಕು ಎಂಬ ದೀರ್ಘಕಾಲದ ಪದ್ಧತಿಯನ್ನು ವಿರೋಧಿಸಿ, ಭಾನುವಾರ (ಮಾ.23) ಇಲ್ಲಿನ ಕೊಯಿಕ್ಕಲ್ ಶ್ರೀ ಧರ್ಮಶಾಸ್ತ ದೇವಸ್ಥಾನಕ್ಕೆ ಗುಂಪೊಂದು ಶರ್ಟ್ ಕಳಚದೆ ಪ್ರವೇಶಿಸಿ ಪ್ರತಿಭಟಿಸಿದೆ.

ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ನಿರ್ವಹಿಸುವ ಪೆರುನಾಡುವಿನ ದೇವಾಲಯದ ಮುಂದೆ ಎಸ್‌ಎನ್‌ಡಿಪಿ ಸಂಯುಕ್ತ ಸಮರ ಸಮಿತಿಯ ಸದಸ್ಯರು (ಪ್ರತಿಭಟನಾಕಾರರು) ತಮ್ಮ ಶರ್ಟ್‌ಗಳನ್ನು ಕಳಚದೆ ಸರತಿ ಸಾಲಿನಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿದ ವಿಡಿಯೋಗಳು ವೈರಲ್ ಆಗಿದೆ.

ಪೊಲೀಸರು ಮತ್ತು ದೇವಾಲಯದ ಆಡಳಿತ ಮಂಡಳಿಯವರು ಆಕ್ಷೇಪ ವ್ಯಕ್ತಪಡಿಸದ ಕಾರಣ ಪ್ರತಿಭಟನೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಕೊನೆಗೊಂಡಿದೆ.

ಪುರುಷ ಭಕ್ತರು ದೇವಸ್ಥಾನ ಪ್ರವೇಶಿಸುವ ಮುನ್ನ ತಮ್ಮ ಮೇಲಂಗಿ ಕಳಚುವ ಕಡ್ಡಾಯ ಪದ್ಧತಿಯನ್ನು ಶಾಶ್ವತವಾಗಿ ಕೊನೆಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

“ಪ್ರತಿಭಟನೆ ಶಾಂತಿಯುತವಾಗಿತ್ತು. ಭಕ್ತರು ಸಾಂಪ್ರದಾಯಿಕವಾಗಿ ಈ ಪದ್ಧತಿಯನ್ನು ಅನುಸರಿಸುತ್ತಿದ್ದರೂ, ಯಾರಾದರೂ ತಮ್ಮ ಶರ್ಟ್ ಕಳಚದೆ ದೇವಾಲಯ ಪ್ರವೇಶಿಸಿದರೆ ಅದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಈಗಾಗಲೇ ಸ್ಪಷ್ಟಪಡಿಸಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಎಲ್ಲಾ ದೇವಾಲಯಗಳಲ್ಲಿ ಮೇಲಂಗಿ ಕಳಚುವ ಈ ಪದ್ಧತಿಯನ್ನು ರದ್ದುಗೊಳಿಸಬೇಕೆಂದು ಸ್ವಾಮಿ ಸಚ್ಚಿದಾನಂದ ಕರೆ ನೀಡಿದ ತಿಂಗಳುಗಳ ನಂತರ ಈ ಪ್ರತಿಭಟನೆ ನಡೆದಿದೆ.

ಸಮಾಜ ಸುಧಾರಕ ನಾರಾಯಣ ಗುರು ಸ್ಥಾಪಿಸಿದ ಪ್ರಸಿದ್ಧ ಶಿವಗಿರಿ ಮಠದ ಮುಖ್ಯಸ್ಥರಾದ ಸ್ವಾಮಿ ಸಚ್ಚಿದಾನಂದ ಅವರು ಈ ಪದ್ಧತಿಯನ್ನು ಸಾಮಾಜಿಕ ಅನಿಷ್ಟ ಎಂದು ಬಣ್ಣಿಸಿದ್ದರು ಮತ್ತು ಕಳೆದ ವರ್ಷ ಅದನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದರು.

ಪುರುಷರು ಜನಿವಾರ ಧರಿಸಿದ್ದಾರೆಯೇ ಎಂದು ಪರಿಶೀಲಿಸಲು ಮೇಲಂಗಿ ಕಳಚುವ ಸಂಪ್ರದಾಯ ಪರಿಚಯಿಸಲಾಯಿತು ಎಂದು ಸ್ವಾಮಿ ಸಚ್ಚಿದಾನಂದ ಹೇಳಿದ್ದಾರೆ.

ಶ್ರೀ ನಾರಾಯಣ ಧರ್ಮ ಪರಿಪಾಲನಾ (ಎಸ್‌ಎನ್‌ಡಿಪಿ) ಸಂಖ್ಯಾತ್ಮಕವಾಗಿ ಪ್ರಬಲವಾದ ಈಜವ (ಈಡಿಗ-ಬಿಲ್ಲವ) ಸಮುದಾಯವನ್ನು ಪ್ರತಿನಿಧಿಸುವ ಪ್ರಮುಖ ಸಂಘಟನೆಯಾಗಿದೆ.

ಸಂಸತ್ತನ್ನು ಮುಂದೂಡಲು ಬಿಜೆಪಿ ‘ಸಂಪೂರ್ಣ ನಕಲಿ’ ವಿಷಯವನ್ನು ಮಂಡಿಸಿದೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...