Homeಮುಖಪುಟಮೇಲಂಗಿ ಕಳಚದೆ ದೇವಸ್ಥಾನ ಪ್ರವೇಶಿಸಿದ ಗುಂಪು: ಕೇರಳದಲ್ಲಿ ವಿನೂತನ ಪ್ರತಿಭಟನೆ

ಮೇಲಂಗಿ ಕಳಚದೆ ದೇವಸ್ಥಾನ ಪ್ರವೇಶಿಸಿದ ಗುಂಪು: ಕೇರಳದಲ್ಲಿ ವಿನೂತನ ಪ್ರತಿಭಟನೆ

- Advertisement -
- Advertisement -

ಪತ್ತನಂತಿಟ್ಟ (ಕೇರಳ): ಪುರುಷ ಭಕ್ತರು ದೇವಾಲಯ ಪ್ರವೇಶಿಸುವ ಮುನ್ನ ಶರ್ಟ್ ಅಥವಾ ಮೇಲಂಗಿ ಕಳಚಬೇಕು ಎಂಬ ದೀರ್ಘಕಾಲದ ಪದ್ಧತಿಯನ್ನು ವಿರೋಧಿಸಿ, ಭಾನುವಾರ (ಮಾ.23) ಇಲ್ಲಿನ ಕೊಯಿಕ್ಕಲ್ ಶ್ರೀ ಧರ್ಮಶಾಸ್ತ ದೇವಸ್ಥಾನಕ್ಕೆ ಗುಂಪೊಂದು ಶರ್ಟ್ ಕಳಚದೆ ಪ್ರವೇಶಿಸಿ ಪ್ರತಿಭಟಿಸಿದೆ.

ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ನಿರ್ವಹಿಸುವ ಪೆರುನಾಡುವಿನ ದೇವಾಲಯದ ಮುಂದೆ ಎಸ್‌ಎನ್‌ಡಿಪಿ ಸಂಯುಕ್ತ ಸಮರ ಸಮಿತಿಯ ಸದಸ್ಯರು (ಪ್ರತಿಭಟನಾಕಾರರು) ತಮ್ಮ ಶರ್ಟ್‌ಗಳನ್ನು ಕಳಚದೆ ಸರತಿ ಸಾಲಿನಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿದ ವಿಡಿಯೋಗಳು ವೈರಲ್ ಆಗಿದೆ.

ಪೊಲೀಸರು ಮತ್ತು ದೇವಾಲಯದ ಆಡಳಿತ ಮಂಡಳಿಯವರು ಆಕ್ಷೇಪ ವ್ಯಕ್ತಪಡಿಸದ ಕಾರಣ ಪ್ರತಿಭಟನೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಕೊನೆಗೊಂಡಿದೆ.

ಪುರುಷ ಭಕ್ತರು ದೇವಸ್ಥಾನ ಪ್ರವೇಶಿಸುವ ಮುನ್ನ ತಮ್ಮ ಮೇಲಂಗಿ ಕಳಚುವ ಕಡ್ಡಾಯ ಪದ್ಧತಿಯನ್ನು ಶಾಶ್ವತವಾಗಿ ಕೊನೆಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

“ಪ್ರತಿಭಟನೆ ಶಾಂತಿಯುತವಾಗಿತ್ತು. ಭಕ್ತರು ಸಾಂಪ್ರದಾಯಿಕವಾಗಿ ಈ ಪದ್ಧತಿಯನ್ನು ಅನುಸರಿಸುತ್ತಿದ್ದರೂ, ಯಾರಾದರೂ ತಮ್ಮ ಶರ್ಟ್ ಕಳಚದೆ ದೇವಾಲಯ ಪ್ರವೇಶಿಸಿದರೆ ಅದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಈಗಾಗಲೇ ಸ್ಪಷ್ಟಪಡಿಸಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಎಲ್ಲಾ ದೇವಾಲಯಗಳಲ್ಲಿ ಮೇಲಂಗಿ ಕಳಚುವ ಈ ಪದ್ಧತಿಯನ್ನು ರದ್ದುಗೊಳಿಸಬೇಕೆಂದು ಸ್ವಾಮಿ ಸಚ್ಚಿದಾನಂದ ಕರೆ ನೀಡಿದ ತಿಂಗಳುಗಳ ನಂತರ ಈ ಪ್ರತಿಭಟನೆ ನಡೆದಿದೆ.

ಸಮಾಜ ಸುಧಾರಕ ನಾರಾಯಣ ಗುರು ಸ್ಥಾಪಿಸಿದ ಪ್ರಸಿದ್ಧ ಶಿವಗಿರಿ ಮಠದ ಮುಖ್ಯಸ್ಥರಾದ ಸ್ವಾಮಿ ಸಚ್ಚಿದಾನಂದ ಅವರು ಈ ಪದ್ಧತಿಯನ್ನು ಸಾಮಾಜಿಕ ಅನಿಷ್ಟ ಎಂದು ಬಣ್ಣಿಸಿದ್ದರು ಮತ್ತು ಕಳೆದ ವರ್ಷ ಅದನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದರು.

ಪುರುಷರು ಜನಿವಾರ ಧರಿಸಿದ್ದಾರೆಯೇ ಎಂದು ಪರಿಶೀಲಿಸಲು ಮೇಲಂಗಿ ಕಳಚುವ ಸಂಪ್ರದಾಯ ಪರಿಚಯಿಸಲಾಯಿತು ಎಂದು ಸ್ವಾಮಿ ಸಚ್ಚಿದಾನಂದ ಹೇಳಿದ್ದಾರೆ.

ಶ್ರೀ ನಾರಾಯಣ ಧರ್ಮ ಪರಿಪಾಲನಾ (ಎಸ್‌ಎನ್‌ಡಿಪಿ) ಸಂಖ್ಯಾತ್ಮಕವಾಗಿ ಪ್ರಬಲವಾದ ಈಜವ (ಈಡಿಗ-ಬಿಲ್ಲವ) ಸಮುದಾಯವನ್ನು ಪ್ರತಿನಿಧಿಸುವ ಪ್ರಮುಖ ಸಂಘಟನೆಯಾಗಿದೆ.

ಸಂಸತ್ತನ್ನು ಮುಂದೂಡಲು ಬಿಜೆಪಿ ‘ಸಂಪೂರ್ಣ ನಕಲಿ’ ವಿಷಯವನ್ನು ಮಂಡಿಸಿದೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...