Homeಕರ್ನಾಟಕಹೆಚ್ಚುತ್ತಿರುವ ದಲಿತರ ಮೇಲಿನ ಹಲ್ಲೆ: ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ

ಹೆಚ್ಚುತ್ತಿರುವ ದಲಿತರ ಮೇಲಿನ ಹಲ್ಲೆ: ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ

ಸೂಚನೆ: ‘ಎಲ್ಲರ ಕನ್ನಡ’ ಚರ್‍ಚೆಯ ಬಾಗವಾಗಿ ಮಾಡಲಾದ ಪ್ರಾಯೋಗಿಕ ವರದಿ ಇದಾಗಿದ್ದು, ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ.

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಮಂಡ್ಯ ಜಿಲ್ಲೆಯಲ್ಲಿ ದಲಿತರ ಮೇಲೆ ಹೆಚ್ಚಾಗುತ್ತಿರುವ ಹಲ್ಲೆಗಳನ್ನು ಕಂಡಿಸಿ, ಸವರ್‍ಣೀಯರ ದಬ್ಬಾಳಿಕೆಯನ್ನು ತಡೆಯಬೇಕೆಂದು ಆಗ್ರಹಿಸಿ ದಲಿತ ಮುಖಂಡರು ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ ನಡೆಸಿದ್ದಾರೆ.

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಕಳೆದ ಒಂದು ತಿಂಗಳ ಅವದಿಯಲ್ಲಿ ಎರಡು ಬಾರಿ ದಲಿತರ ಮೇಲೆ ಹಲ್ಲೆ ಪ್ರಕರಣಗಳು ನಡೆದಿವೆ. ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ಮಾಡಲಾಗಿತ್ತು. ದೇವಾಲಯ ಪ್ರವೇಶಿಸಿದ್ದರಿಂದ ಸವರ್‍ಣೀಯರು ಹಲ್ಲೆ ನಡೆಸಿರುವುದಾಗಿ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಶೀಳನೆರೆ ಹೋಬಳಿ ಬಳ್ಳೇಕೆರೆ ಗ್ರಾಮದಲ್ಲಿ ಹಲ್ಲೆ ನಡೆದಿದ್ದು ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಅಲ್ಲದೆ ದಲಿತರಿಗೆ ಕ್ಶೌರ ಮಾಡುವುದಿಲ್ಲ ಎಂದು ಸವಿತಾ ಸಮಾಜದ ವ್ಯಕ್ತಿಯೊಬ್ಬರು ಹೇಳುತ್ತಿರುವ ವಿಡಿಯೊ ಇತ್ತೀಚೆಗೆ ವೈರಲ್‌ ಆಗಿತ್ತು.

ಪದೇ ಪದೇ ಇಂತಹ ಪ್ರಕರಣಗಳು ಜರುಗುತ್ತಿರುತ್ತಿರುವುದನ್ನು ದಲಿತ ಮುಕಂಡರು ಖಂಡಿಸಿದ್ದು, ಕೆ.ಆರ್‌.ಪೇಟೆ ತಾಲ್ಲೂಕಿನ ಪ್ರವಾಸಿ ಮಂದಿರ ಬಳಿ ಸೇರಿ ಪ್ರತಿಬಟನೆ ನಡೆಸಿದ್ದಾರೆ.

ರಾಜ್ಯ ಮಾದಿಗ ಸಮಾಜ ಸಂಗಟನೆಯ ಕೆ.ಆರ್‌.ಪೇಟೆ ತಾಲೂಕು ಅದ್ಯಕ್ಷರಾದ ಹೊಸಹೊಳಲು ದೇವರಾಜು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ದಲಿತರ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿದ್ದರೂ ಪೋಲೀಸ್ ಇಲಾಖೆ, ತಾಲೂಕು ಆಡಳಿತ ದಲಿತರಿಗೆ ರಕ್ಶಣೆ ಕೊಡುವುದರಲ್ಲಿ ವಿಪಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನಾದ್ಯಂತ ಕೆಲವು ಹಳ್ಳಿಗಳಲ್ಲಿ ದಲಿತರ ಮೇಲೆ ದಾಳಿ ನಡೆಯುತ್ತಿವೆ. ಆದರೆ ಜಿಲ್ಲಾಡಳಿತ, ತಾಲೂಕು ಆಡಳಿತ ಕೈಕಟ್ಟಿ ಕೂತಿವೆ. ಮುಂದಿನ ದಿನಗಳಲ್ಲಿ ಅದಿಕಾರಿಗಳ ನಿರ್ಲಕ್ಶ್ಯ ಮುಂದುವರಿದರೆ ತಾಲ್ಲೂಕಿನ ಎಲ್ಲಾ ದಲಿತ ಸಂಗಟನೆಗಳ ಜೊತೆ ಸೇರಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಚಲವಾದಿ ಮಹಾಸಬಾದ ಜಿಲ್ಲಾದ್ಯಕ್ಷರಾದ ಮಾಂಬಳ್ಳಿ ಜಯರಾಂ ಮಾತನಾಡಿ, “ತಾಲ್ಲೂಕಿನ ಶೀಳನೆರೆ ಹೋಬಳಿ ಬಳ್ಳೇಕೆರೆ ಗ್ರಾಮದ ದಲಿತ ಮಹಿಳೆಯ ಮೇಲೆ ಸವರ್‍ಣೀಯ ಪುರುಷನು ತನ್ನ ಪತ್ನಿಯ ಜೊತೆ ಸೇರಿ ಕ್ಶುಲ್ಲಕ ಕಾರಣಕ್ಕಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ತಪ್ಪಿತಸ್ತರನ್ನು ಕೂಡಲೇ ಬಂದಿಸಬೇಕು. ಅಲ್ಲದೇ ಹಲ್ಲೆಗೊಳಗಾದ ಕುಟುಂಬಕ್ಕೆ ಪೋಲೀಸ್ ಅದಿಕಾರಿಗಳು ರಕ್ಷಣೆ ನೀಡಬೇಕು” ಎಂದು ಆಗ್ರಹಿಸಿದರು.

ಕೆ.ಆರ್‌.ಪೇಟೆ ತಾಲ್ಲೂಕು ಡಾ.ಜಗಜೀವನರಾಂ ಸಂಗಟನೆಗಳ ಒಕ್ಕೂಟದ ಅದ್ಯಕ್ಷರಾದ ಹೊಸಹೊಳಲು ಪುಟ್ಟರಾಜು ಮಾತನಾಡಿ, “ಇಂದಿಗೂ ಕೆಲವು ಹಳ್ಳಿಗಳಲ್ಲಿ ಜಾತೀಯತೆ ಜೀವಂತವಾಗಿದೆ. ದಲಿತರನ್ನು ಕೀಳಾಗಿ ನೋಡುತ್ತಿದ್ದಾರೆ. ನಾವು ಸಹ ಮನುಷ್ಯರಲ್ಲವೇ?” ಎಂದು ಪ್ರಶ್ನಿಸಿದರು.

“ನಮಗೂ ಹೋರಾಟ ನಡೆಸುವ ಶಕ್ತಿ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಬರೆದಿರುವ ಸಂವಿದಾನದ ಮೇಲೆ ಗೌರವವಿರುವುದರಿಂದ ನಾವು ಯಾರ ಮೇಲೂ ದಬ್ಬಾಳಿಕೆ ಮಾಡದೇ ನ್ಯಾಯಯುತವಾಗಿ ನಡೆದುಕೊಳ್ಳುತ್ತಿದ್ದೇವೆ. ಆದ್ದರಿಂದ ಒಂದು ತಿಂಗಳಿಗೊಮ್ಮೆಯಾದರೂ ದಲಿತರ ಕುಂದುಕೊರತೆಗಳನ್ನು ನಿವಾರಿಸಲು ಪೊಲೀಸ್‌ ಇಲಾಖೆಯ ಹಿರಿಯ ಅದಿಕಾರಿಗಳು ಸಬೆ ನಡೆಸಿ ದಲಿತರಿಗೆ ನ್ಯಾಯ ಕೊಡಿಸಬೇಕು” ಎಂದು ಆಗ್ರಹಿಸಿದರು.

ಇದೇ ಸಂದರ್ಬದಲ್ಲಿ ಕೆ.ಆರ್‌.ಪೇಟೆ ತಾಲೂಕು ದಲಿತ ಸಂಗಟನೆಯ ಸದಸ್ಯರು, ತಾಲೂಕು ಆಡಳಿತ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಬದಲ್ಲಿ ತಾ.ಪಂ.ಮಾಜಿ ಅದ್ಯಕ್ಷರಾದ ಸೋಮಯ್ಯ, ಕೂಡಲಕುಪ್ಪೆ ರಾಜಯ್ಯ, ಕಜಾಂಚಿ ಪುಟ್ಟರಾಜು, ತಾ.ಸಂ. ಕಾರ್ಯದರ್ಶಿ ಮಹಾದೇವ, ಚಲುವರಾಜು, ಉಪಾದ್ಯಕ್ಷರಾದ ಮೋಹನ್, ಆಲೇನಹಳ್ಳಿ ಮಹದೇವ, ಚಟ್ಟಂಗೆರೆ ನಿಂಗರಾಜು, ಸೋಮೇಶ್, ಗ್ರಾ.ಪಂ. ಸದಸ್ಯರಾದ ಶಿವು, ಪಿ.ಬಿ.ಮಂಚನಹಳ್ಳಿ ಮಹೇಶ್, ರಾಯಸಮುದ್ರ ವೆಂಕಟೇಶ್‌ ಸೇರಿದಂತೆ ತಾಲೂಕು ದಲಿತ ಸಂಗಟನೆಯ ನೂರಾರು ಸದಸ್ಯರು ಪ್ರತಿಬಟನೆಯಲ್ಲಿ ಪಾಲ್ಗೊಂಡಿದ್ದರು.


ಇದನ್ನೂ ಓದಿರಿ: ಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲ್ಲರ ಕನ್ನಡದಲ್ಲಿ, ಮೊದಲ ಹಂತದಲ್ಲಿ,
    ೧) ಋ,ಐ,ಔ,ಃಃ
    ೨) ಮಹಾಪ್ರಾಣಗಳು
    ೩) ಙ,ಞ,ಷ
    ಬಳಸಬಾರದು

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...