Homeಕರ್ನಾಟಕಹೆಚ್ಚುತ್ತಿರುವ ದಲಿತರ ಮೇಲಿನ ಹಲ್ಲೆ: ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ

ಹೆಚ್ಚುತ್ತಿರುವ ದಲಿತರ ಮೇಲಿನ ಹಲ್ಲೆ: ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ

ಸೂಚನೆ: ‘ಎಲ್ಲರ ಕನ್ನಡ’ ಚರ್‍ಚೆಯ ಬಾಗವಾಗಿ ಮಾಡಲಾದ ಪ್ರಾಯೋಗಿಕ ವರದಿ ಇದಾಗಿದ್ದು, ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ.

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಮಂಡ್ಯ ಜಿಲ್ಲೆಯಲ್ಲಿ ದಲಿತರ ಮೇಲೆ ಹೆಚ್ಚಾಗುತ್ತಿರುವ ಹಲ್ಲೆಗಳನ್ನು ಕಂಡಿಸಿ, ಸವರ್‍ಣೀಯರ ದಬ್ಬಾಳಿಕೆಯನ್ನು ತಡೆಯಬೇಕೆಂದು ಆಗ್ರಹಿಸಿ ದಲಿತ ಮುಖಂಡರು ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ ನಡೆಸಿದ್ದಾರೆ.

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಕಳೆದ ಒಂದು ತಿಂಗಳ ಅವದಿಯಲ್ಲಿ ಎರಡು ಬಾರಿ ದಲಿತರ ಮೇಲೆ ಹಲ್ಲೆ ಪ್ರಕರಣಗಳು ನಡೆದಿವೆ. ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ಮಾಡಲಾಗಿತ್ತು. ದೇವಾಲಯ ಪ್ರವೇಶಿಸಿದ್ದರಿಂದ ಸವರ್‍ಣೀಯರು ಹಲ್ಲೆ ನಡೆಸಿರುವುದಾಗಿ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಶೀಳನೆರೆ ಹೋಬಳಿ ಬಳ್ಳೇಕೆರೆ ಗ್ರಾಮದಲ್ಲಿ ಹಲ್ಲೆ ನಡೆದಿದ್ದು ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಅಲ್ಲದೆ ದಲಿತರಿಗೆ ಕ್ಶೌರ ಮಾಡುವುದಿಲ್ಲ ಎಂದು ಸವಿತಾ ಸಮಾಜದ ವ್ಯಕ್ತಿಯೊಬ್ಬರು ಹೇಳುತ್ತಿರುವ ವಿಡಿಯೊ ಇತ್ತೀಚೆಗೆ ವೈರಲ್‌ ಆಗಿತ್ತು.

ಪದೇ ಪದೇ ಇಂತಹ ಪ್ರಕರಣಗಳು ಜರುಗುತ್ತಿರುತ್ತಿರುವುದನ್ನು ದಲಿತ ಮುಕಂಡರು ಖಂಡಿಸಿದ್ದು, ಕೆ.ಆರ್‌.ಪೇಟೆ ತಾಲ್ಲೂಕಿನ ಪ್ರವಾಸಿ ಮಂದಿರ ಬಳಿ ಸೇರಿ ಪ್ರತಿಬಟನೆ ನಡೆಸಿದ್ದಾರೆ.

ರಾಜ್ಯ ಮಾದಿಗ ಸಮಾಜ ಸಂಗಟನೆಯ ಕೆ.ಆರ್‌.ಪೇಟೆ ತಾಲೂಕು ಅದ್ಯಕ್ಷರಾದ ಹೊಸಹೊಳಲು ದೇವರಾಜು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ದಲಿತರ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿದ್ದರೂ ಪೋಲೀಸ್ ಇಲಾಖೆ, ತಾಲೂಕು ಆಡಳಿತ ದಲಿತರಿಗೆ ರಕ್ಶಣೆ ಕೊಡುವುದರಲ್ಲಿ ವಿಪಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನಾದ್ಯಂತ ಕೆಲವು ಹಳ್ಳಿಗಳಲ್ಲಿ ದಲಿತರ ಮೇಲೆ ದಾಳಿ ನಡೆಯುತ್ತಿವೆ. ಆದರೆ ಜಿಲ್ಲಾಡಳಿತ, ತಾಲೂಕು ಆಡಳಿತ ಕೈಕಟ್ಟಿ ಕೂತಿವೆ. ಮುಂದಿನ ದಿನಗಳಲ್ಲಿ ಅದಿಕಾರಿಗಳ ನಿರ್ಲಕ್ಶ್ಯ ಮುಂದುವರಿದರೆ ತಾಲ್ಲೂಕಿನ ಎಲ್ಲಾ ದಲಿತ ಸಂಗಟನೆಗಳ ಜೊತೆ ಸೇರಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಚಲವಾದಿ ಮಹಾಸಬಾದ ಜಿಲ್ಲಾದ್ಯಕ್ಷರಾದ ಮಾಂಬಳ್ಳಿ ಜಯರಾಂ ಮಾತನಾಡಿ, “ತಾಲ್ಲೂಕಿನ ಶೀಳನೆರೆ ಹೋಬಳಿ ಬಳ್ಳೇಕೆರೆ ಗ್ರಾಮದ ದಲಿತ ಮಹಿಳೆಯ ಮೇಲೆ ಸವರ್‍ಣೀಯ ಪುರುಷನು ತನ್ನ ಪತ್ನಿಯ ಜೊತೆ ಸೇರಿ ಕ್ಶುಲ್ಲಕ ಕಾರಣಕ್ಕಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ತಪ್ಪಿತಸ್ತರನ್ನು ಕೂಡಲೇ ಬಂದಿಸಬೇಕು. ಅಲ್ಲದೇ ಹಲ್ಲೆಗೊಳಗಾದ ಕುಟುಂಬಕ್ಕೆ ಪೋಲೀಸ್ ಅದಿಕಾರಿಗಳು ರಕ್ಷಣೆ ನೀಡಬೇಕು” ಎಂದು ಆಗ್ರಹಿಸಿದರು.

ಕೆ.ಆರ್‌.ಪೇಟೆ ತಾಲ್ಲೂಕು ಡಾ.ಜಗಜೀವನರಾಂ ಸಂಗಟನೆಗಳ ಒಕ್ಕೂಟದ ಅದ್ಯಕ್ಷರಾದ ಹೊಸಹೊಳಲು ಪುಟ್ಟರಾಜು ಮಾತನಾಡಿ, “ಇಂದಿಗೂ ಕೆಲವು ಹಳ್ಳಿಗಳಲ್ಲಿ ಜಾತೀಯತೆ ಜೀವಂತವಾಗಿದೆ. ದಲಿತರನ್ನು ಕೀಳಾಗಿ ನೋಡುತ್ತಿದ್ದಾರೆ. ನಾವು ಸಹ ಮನುಷ್ಯರಲ್ಲವೇ?” ಎಂದು ಪ್ರಶ್ನಿಸಿದರು.

“ನಮಗೂ ಹೋರಾಟ ನಡೆಸುವ ಶಕ್ತಿ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಬರೆದಿರುವ ಸಂವಿದಾನದ ಮೇಲೆ ಗೌರವವಿರುವುದರಿಂದ ನಾವು ಯಾರ ಮೇಲೂ ದಬ್ಬಾಳಿಕೆ ಮಾಡದೇ ನ್ಯಾಯಯುತವಾಗಿ ನಡೆದುಕೊಳ್ಳುತ್ತಿದ್ದೇವೆ. ಆದ್ದರಿಂದ ಒಂದು ತಿಂಗಳಿಗೊಮ್ಮೆಯಾದರೂ ದಲಿತರ ಕುಂದುಕೊರತೆಗಳನ್ನು ನಿವಾರಿಸಲು ಪೊಲೀಸ್‌ ಇಲಾಖೆಯ ಹಿರಿಯ ಅದಿಕಾರಿಗಳು ಸಬೆ ನಡೆಸಿ ದಲಿತರಿಗೆ ನ್ಯಾಯ ಕೊಡಿಸಬೇಕು” ಎಂದು ಆಗ್ರಹಿಸಿದರು.

ಇದೇ ಸಂದರ್ಬದಲ್ಲಿ ಕೆ.ಆರ್‌.ಪೇಟೆ ತಾಲೂಕು ದಲಿತ ಸಂಗಟನೆಯ ಸದಸ್ಯರು, ತಾಲೂಕು ಆಡಳಿತ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಬದಲ್ಲಿ ತಾ.ಪಂ.ಮಾಜಿ ಅದ್ಯಕ್ಷರಾದ ಸೋಮಯ್ಯ, ಕೂಡಲಕುಪ್ಪೆ ರಾಜಯ್ಯ, ಕಜಾಂಚಿ ಪುಟ್ಟರಾಜು, ತಾ.ಸಂ. ಕಾರ್ಯದರ್ಶಿ ಮಹಾದೇವ, ಚಲುವರಾಜು, ಉಪಾದ್ಯಕ್ಷರಾದ ಮೋಹನ್, ಆಲೇನಹಳ್ಳಿ ಮಹದೇವ, ಚಟ್ಟಂಗೆರೆ ನಿಂಗರಾಜು, ಸೋಮೇಶ್, ಗ್ರಾ.ಪಂ. ಸದಸ್ಯರಾದ ಶಿವು, ಪಿ.ಬಿ.ಮಂಚನಹಳ್ಳಿ ಮಹೇಶ್, ರಾಯಸಮುದ್ರ ವೆಂಕಟೇಶ್‌ ಸೇರಿದಂತೆ ತಾಲೂಕು ದಲಿತ ಸಂಗಟನೆಯ ನೂರಾರು ಸದಸ್ಯರು ಪ್ರತಿಬಟನೆಯಲ್ಲಿ ಪಾಲ್ಗೊಂಡಿದ್ದರು.


ಇದನ್ನೂ ಓದಿರಿ: ಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲ್ಲರ ಕನ್ನಡದಲ್ಲಿ, ಮೊದಲ ಹಂತದಲ್ಲಿ,
    ೧) ಋ,ಐ,ಔ,ಃಃ
    ೨) ಮಹಾಪ್ರಾಣಗಳು
    ೩) ಙ,ಞ,ಷ
    ಬಳಸಬಾರದು

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...