Homeಕರ್ನಾಟಕಹೆಚ್ಚುತ್ತಿರುವ ದಲಿತರ ಮೇಲಿನ ಹಲ್ಲೆ: ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ

ಹೆಚ್ಚುತ್ತಿರುವ ದಲಿತರ ಮೇಲಿನ ಹಲ್ಲೆ: ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ

ಸೂಚನೆ: ‘ಎಲ್ಲರ ಕನ್ನಡ’ ಚರ್‍ಚೆಯ ಬಾಗವಾಗಿ ಮಾಡಲಾದ ಪ್ರಾಯೋಗಿಕ ವರದಿ ಇದಾಗಿದ್ದು, ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ.

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಮಂಡ್ಯ ಜಿಲ್ಲೆಯಲ್ಲಿ ದಲಿತರ ಮೇಲೆ ಹೆಚ್ಚಾಗುತ್ತಿರುವ ಹಲ್ಲೆಗಳನ್ನು ಕಂಡಿಸಿ, ಸವರ್‍ಣೀಯರ ದಬ್ಬಾಳಿಕೆಯನ್ನು ತಡೆಯಬೇಕೆಂದು ಆಗ್ರಹಿಸಿ ದಲಿತ ಮುಖಂಡರು ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ ನಡೆಸಿದ್ದಾರೆ.

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಕಳೆದ ಒಂದು ತಿಂಗಳ ಅವದಿಯಲ್ಲಿ ಎರಡು ಬಾರಿ ದಲಿತರ ಮೇಲೆ ಹಲ್ಲೆ ಪ್ರಕರಣಗಳು ನಡೆದಿವೆ. ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ಮಾಡಲಾಗಿತ್ತು. ದೇವಾಲಯ ಪ್ರವೇಶಿಸಿದ್ದರಿಂದ ಸವರ್‍ಣೀಯರು ಹಲ್ಲೆ ನಡೆಸಿರುವುದಾಗಿ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಶೀಳನೆರೆ ಹೋಬಳಿ ಬಳ್ಳೇಕೆರೆ ಗ್ರಾಮದಲ್ಲಿ ಹಲ್ಲೆ ನಡೆದಿದ್ದು ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಅಲ್ಲದೆ ದಲಿತರಿಗೆ ಕ್ಶೌರ ಮಾಡುವುದಿಲ್ಲ ಎಂದು ಸವಿತಾ ಸಮಾಜದ ವ್ಯಕ್ತಿಯೊಬ್ಬರು ಹೇಳುತ್ತಿರುವ ವಿಡಿಯೊ ಇತ್ತೀಚೆಗೆ ವೈರಲ್‌ ಆಗಿತ್ತು.

ಪದೇ ಪದೇ ಇಂತಹ ಪ್ರಕರಣಗಳು ಜರುಗುತ್ತಿರುತ್ತಿರುವುದನ್ನು ದಲಿತ ಮುಕಂಡರು ಖಂಡಿಸಿದ್ದು, ಕೆ.ಆರ್‌.ಪೇಟೆ ತಾಲ್ಲೂಕಿನ ಪ್ರವಾಸಿ ಮಂದಿರ ಬಳಿ ಸೇರಿ ಪ್ರತಿಬಟನೆ ನಡೆಸಿದ್ದಾರೆ.

ರಾಜ್ಯ ಮಾದಿಗ ಸಮಾಜ ಸಂಗಟನೆಯ ಕೆ.ಆರ್‌.ಪೇಟೆ ತಾಲೂಕು ಅದ್ಯಕ್ಷರಾದ ಹೊಸಹೊಳಲು ದೇವರಾಜು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ದಲಿತರ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿದ್ದರೂ ಪೋಲೀಸ್ ಇಲಾಖೆ, ತಾಲೂಕು ಆಡಳಿತ ದಲಿತರಿಗೆ ರಕ್ಶಣೆ ಕೊಡುವುದರಲ್ಲಿ ವಿಪಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನಾದ್ಯಂತ ಕೆಲವು ಹಳ್ಳಿಗಳಲ್ಲಿ ದಲಿತರ ಮೇಲೆ ದಾಳಿ ನಡೆಯುತ್ತಿವೆ. ಆದರೆ ಜಿಲ್ಲಾಡಳಿತ, ತಾಲೂಕು ಆಡಳಿತ ಕೈಕಟ್ಟಿ ಕೂತಿವೆ. ಮುಂದಿನ ದಿನಗಳಲ್ಲಿ ಅದಿಕಾರಿಗಳ ನಿರ್ಲಕ್ಶ್ಯ ಮುಂದುವರಿದರೆ ತಾಲ್ಲೂಕಿನ ಎಲ್ಲಾ ದಲಿತ ಸಂಗಟನೆಗಳ ಜೊತೆ ಸೇರಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಚಲವಾದಿ ಮಹಾಸಬಾದ ಜಿಲ್ಲಾದ್ಯಕ್ಷರಾದ ಮಾಂಬಳ್ಳಿ ಜಯರಾಂ ಮಾತನಾಡಿ, “ತಾಲ್ಲೂಕಿನ ಶೀಳನೆರೆ ಹೋಬಳಿ ಬಳ್ಳೇಕೆರೆ ಗ್ರಾಮದ ದಲಿತ ಮಹಿಳೆಯ ಮೇಲೆ ಸವರ್‍ಣೀಯ ಪುರುಷನು ತನ್ನ ಪತ್ನಿಯ ಜೊತೆ ಸೇರಿ ಕ್ಶುಲ್ಲಕ ಕಾರಣಕ್ಕಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ತಪ್ಪಿತಸ್ತರನ್ನು ಕೂಡಲೇ ಬಂದಿಸಬೇಕು. ಅಲ್ಲದೇ ಹಲ್ಲೆಗೊಳಗಾದ ಕುಟುಂಬಕ್ಕೆ ಪೋಲೀಸ್ ಅದಿಕಾರಿಗಳು ರಕ್ಷಣೆ ನೀಡಬೇಕು” ಎಂದು ಆಗ್ರಹಿಸಿದರು.

ಕೆ.ಆರ್‌.ಪೇಟೆ ತಾಲ್ಲೂಕು ಡಾ.ಜಗಜೀವನರಾಂ ಸಂಗಟನೆಗಳ ಒಕ್ಕೂಟದ ಅದ್ಯಕ್ಷರಾದ ಹೊಸಹೊಳಲು ಪುಟ್ಟರಾಜು ಮಾತನಾಡಿ, “ಇಂದಿಗೂ ಕೆಲವು ಹಳ್ಳಿಗಳಲ್ಲಿ ಜಾತೀಯತೆ ಜೀವಂತವಾಗಿದೆ. ದಲಿತರನ್ನು ಕೀಳಾಗಿ ನೋಡುತ್ತಿದ್ದಾರೆ. ನಾವು ಸಹ ಮನುಷ್ಯರಲ್ಲವೇ?” ಎಂದು ಪ್ರಶ್ನಿಸಿದರು.

“ನಮಗೂ ಹೋರಾಟ ನಡೆಸುವ ಶಕ್ತಿ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಬರೆದಿರುವ ಸಂವಿದಾನದ ಮೇಲೆ ಗೌರವವಿರುವುದರಿಂದ ನಾವು ಯಾರ ಮೇಲೂ ದಬ್ಬಾಳಿಕೆ ಮಾಡದೇ ನ್ಯಾಯಯುತವಾಗಿ ನಡೆದುಕೊಳ್ಳುತ್ತಿದ್ದೇವೆ. ಆದ್ದರಿಂದ ಒಂದು ತಿಂಗಳಿಗೊಮ್ಮೆಯಾದರೂ ದಲಿತರ ಕುಂದುಕೊರತೆಗಳನ್ನು ನಿವಾರಿಸಲು ಪೊಲೀಸ್‌ ಇಲಾಖೆಯ ಹಿರಿಯ ಅದಿಕಾರಿಗಳು ಸಬೆ ನಡೆಸಿ ದಲಿತರಿಗೆ ನ್ಯಾಯ ಕೊಡಿಸಬೇಕು” ಎಂದು ಆಗ್ರಹಿಸಿದರು.

ಇದೇ ಸಂದರ್ಬದಲ್ಲಿ ಕೆ.ಆರ್‌.ಪೇಟೆ ತಾಲೂಕು ದಲಿತ ಸಂಗಟನೆಯ ಸದಸ್ಯರು, ತಾಲೂಕು ಆಡಳಿತ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಬದಲ್ಲಿ ತಾ.ಪಂ.ಮಾಜಿ ಅದ್ಯಕ್ಷರಾದ ಸೋಮಯ್ಯ, ಕೂಡಲಕುಪ್ಪೆ ರಾಜಯ್ಯ, ಕಜಾಂಚಿ ಪುಟ್ಟರಾಜು, ತಾ.ಸಂ. ಕಾರ್ಯದರ್ಶಿ ಮಹಾದೇವ, ಚಲುವರಾಜು, ಉಪಾದ್ಯಕ್ಷರಾದ ಮೋಹನ್, ಆಲೇನಹಳ್ಳಿ ಮಹದೇವ, ಚಟ್ಟಂಗೆರೆ ನಿಂಗರಾಜು, ಸೋಮೇಶ್, ಗ್ರಾ.ಪಂ. ಸದಸ್ಯರಾದ ಶಿವು, ಪಿ.ಬಿ.ಮಂಚನಹಳ್ಳಿ ಮಹೇಶ್, ರಾಯಸಮುದ್ರ ವೆಂಕಟೇಶ್‌ ಸೇರಿದಂತೆ ತಾಲೂಕು ದಲಿತ ಸಂಗಟನೆಯ ನೂರಾರು ಸದಸ್ಯರು ಪ್ರತಿಬಟನೆಯಲ್ಲಿ ಪಾಲ್ಗೊಂಡಿದ್ದರು.


ಇದನ್ನೂ ಓದಿರಿ: ಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲ್ಲರ ಕನ್ನಡದಲ್ಲಿ, ಮೊದಲ ಹಂತದಲ್ಲಿ,
    ೧) ಋ,ಐ,ಔ,ಃಃ
    ೨) ಮಹಾಪ್ರಾಣಗಳು
    ೩) ಙ,ಞ,ಷ
    ಬಳಸಬಾರದು

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...