Homeಕರ್ನಾಟಕಹೆಚ್ಚುತ್ತಿರುವ ದಲಿತರ ಮೇಲಿನ ಹಲ್ಲೆ: ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ

ಹೆಚ್ಚುತ್ತಿರುವ ದಲಿತರ ಮೇಲಿನ ಹಲ್ಲೆ: ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ

ಸೂಚನೆ: ‘ಎಲ್ಲರ ಕನ್ನಡ’ ಚರ್‍ಚೆಯ ಬಾಗವಾಗಿ ಮಾಡಲಾದ ಪ್ರಾಯೋಗಿಕ ವರದಿ ಇದಾಗಿದ್ದು, ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ.

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಮಂಡ್ಯ ಜಿಲ್ಲೆಯಲ್ಲಿ ದಲಿತರ ಮೇಲೆ ಹೆಚ್ಚಾಗುತ್ತಿರುವ ಹಲ್ಲೆಗಳನ್ನು ಕಂಡಿಸಿ, ಸವರ್‍ಣೀಯರ ದಬ್ಬಾಳಿಕೆಯನ್ನು ತಡೆಯಬೇಕೆಂದು ಆಗ್ರಹಿಸಿ ದಲಿತ ಮುಖಂಡರು ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ ನಡೆಸಿದ್ದಾರೆ.

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಕಳೆದ ಒಂದು ತಿಂಗಳ ಅವದಿಯಲ್ಲಿ ಎರಡು ಬಾರಿ ದಲಿತರ ಮೇಲೆ ಹಲ್ಲೆ ಪ್ರಕರಣಗಳು ನಡೆದಿವೆ. ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ಮಾಡಲಾಗಿತ್ತು. ದೇವಾಲಯ ಪ್ರವೇಶಿಸಿದ್ದರಿಂದ ಸವರ್‍ಣೀಯರು ಹಲ್ಲೆ ನಡೆಸಿರುವುದಾಗಿ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಶೀಳನೆರೆ ಹೋಬಳಿ ಬಳ್ಳೇಕೆರೆ ಗ್ರಾಮದಲ್ಲಿ ಹಲ್ಲೆ ನಡೆದಿದ್ದು ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಅಲ್ಲದೆ ದಲಿತರಿಗೆ ಕ್ಶೌರ ಮಾಡುವುದಿಲ್ಲ ಎಂದು ಸವಿತಾ ಸಮಾಜದ ವ್ಯಕ್ತಿಯೊಬ್ಬರು ಹೇಳುತ್ತಿರುವ ವಿಡಿಯೊ ಇತ್ತೀಚೆಗೆ ವೈರಲ್‌ ಆಗಿತ್ತು.

ಪದೇ ಪದೇ ಇಂತಹ ಪ್ರಕರಣಗಳು ಜರುಗುತ್ತಿರುತ್ತಿರುವುದನ್ನು ದಲಿತ ಮುಕಂಡರು ಖಂಡಿಸಿದ್ದು, ಕೆ.ಆರ್‌.ಪೇಟೆ ತಾಲ್ಲೂಕಿನ ಪ್ರವಾಸಿ ಮಂದಿರ ಬಳಿ ಸೇರಿ ಪ್ರತಿಬಟನೆ ನಡೆಸಿದ್ದಾರೆ.

ರಾಜ್ಯ ಮಾದಿಗ ಸಮಾಜ ಸಂಗಟನೆಯ ಕೆ.ಆರ್‌.ಪೇಟೆ ತಾಲೂಕು ಅದ್ಯಕ್ಷರಾದ ಹೊಸಹೊಳಲು ದೇವರಾಜು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ದಲಿತರ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿದ್ದರೂ ಪೋಲೀಸ್ ಇಲಾಖೆ, ತಾಲೂಕು ಆಡಳಿತ ದಲಿತರಿಗೆ ರಕ್ಶಣೆ ಕೊಡುವುದರಲ್ಲಿ ವಿಪಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನಾದ್ಯಂತ ಕೆಲವು ಹಳ್ಳಿಗಳಲ್ಲಿ ದಲಿತರ ಮೇಲೆ ದಾಳಿ ನಡೆಯುತ್ತಿವೆ. ಆದರೆ ಜಿಲ್ಲಾಡಳಿತ, ತಾಲೂಕು ಆಡಳಿತ ಕೈಕಟ್ಟಿ ಕೂತಿವೆ. ಮುಂದಿನ ದಿನಗಳಲ್ಲಿ ಅದಿಕಾರಿಗಳ ನಿರ್ಲಕ್ಶ್ಯ ಮುಂದುವರಿದರೆ ತಾಲ್ಲೂಕಿನ ಎಲ್ಲಾ ದಲಿತ ಸಂಗಟನೆಗಳ ಜೊತೆ ಸೇರಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಚಲವಾದಿ ಮಹಾಸಬಾದ ಜಿಲ್ಲಾದ್ಯಕ್ಷರಾದ ಮಾಂಬಳ್ಳಿ ಜಯರಾಂ ಮಾತನಾಡಿ, “ತಾಲ್ಲೂಕಿನ ಶೀಳನೆರೆ ಹೋಬಳಿ ಬಳ್ಳೇಕೆರೆ ಗ್ರಾಮದ ದಲಿತ ಮಹಿಳೆಯ ಮೇಲೆ ಸವರ್‍ಣೀಯ ಪುರುಷನು ತನ್ನ ಪತ್ನಿಯ ಜೊತೆ ಸೇರಿ ಕ್ಶುಲ್ಲಕ ಕಾರಣಕ್ಕಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ತಪ್ಪಿತಸ್ತರನ್ನು ಕೂಡಲೇ ಬಂದಿಸಬೇಕು. ಅಲ್ಲದೇ ಹಲ್ಲೆಗೊಳಗಾದ ಕುಟುಂಬಕ್ಕೆ ಪೋಲೀಸ್ ಅದಿಕಾರಿಗಳು ರಕ್ಷಣೆ ನೀಡಬೇಕು” ಎಂದು ಆಗ್ರಹಿಸಿದರು.

ಕೆ.ಆರ್‌.ಪೇಟೆ ತಾಲ್ಲೂಕು ಡಾ.ಜಗಜೀವನರಾಂ ಸಂಗಟನೆಗಳ ಒಕ್ಕೂಟದ ಅದ್ಯಕ್ಷರಾದ ಹೊಸಹೊಳಲು ಪುಟ್ಟರಾಜು ಮಾತನಾಡಿ, “ಇಂದಿಗೂ ಕೆಲವು ಹಳ್ಳಿಗಳಲ್ಲಿ ಜಾತೀಯತೆ ಜೀವಂತವಾಗಿದೆ. ದಲಿತರನ್ನು ಕೀಳಾಗಿ ನೋಡುತ್ತಿದ್ದಾರೆ. ನಾವು ಸಹ ಮನುಷ್ಯರಲ್ಲವೇ?” ಎಂದು ಪ್ರಶ್ನಿಸಿದರು.

“ನಮಗೂ ಹೋರಾಟ ನಡೆಸುವ ಶಕ್ತಿ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಬರೆದಿರುವ ಸಂವಿದಾನದ ಮೇಲೆ ಗೌರವವಿರುವುದರಿಂದ ನಾವು ಯಾರ ಮೇಲೂ ದಬ್ಬಾಳಿಕೆ ಮಾಡದೇ ನ್ಯಾಯಯುತವಾಗಿ ನಡೆದುಕೊಳ್ಳುತ್ತಿದ್ದೇವೆ. ಆದ್ದರಿಂದ ಒಂದು ತಿಂಗಳಿಗೊಮ್ಮೆಯಾದರೂ ದಲಿತರ ಕುಂದುಕೊರತೆಗಳನ್ನು ನಿವಾರಿಸಲು ಪೊಲೀಸ್‌ ಇಲಾಖೆಯ ಹಿರಿಯ ಅದಿಕಾರಿಗಳು ಸಬೆ ನಡೆಸಿ ದಲಿತರಿಗೆ ನ್ಯಾಯ ಕೊಡಿಸಬೇಕು” ಎಂದು ಆಗ್ರಹಿಸಿದರು.

ಇದೇ ಸಂದರ್ಬದಲ್ಲಿ ಕೆ.ಆರ್‌.ಪೇಟೆ ತಾಲೂಕು ದಲಿತ ಸಂಗಟನೆಯ ಸದಸ್ಯರು, ತಾಲೂಕು ಆಡಳಿತ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಬದಲ್ಲಿ ತಾ.ಪಂ.ಮಾಜಿ ಅದ್ಯಕ್ಷರಾದ ಸೋಮಯ್ಯ, ಕೂಡಲಕುಪ್ಪೆ ರಾಜಯ್ಯ, ಕಜಾಂಚಿ ಪುಟ್ಟರಾಜು, ತಾ.ಸಂ. ಕಾರ್ಯದರ್ಶಿ ಮಹಾದೇವ, ಚಲುವರಾಜು, ಉಪಾದ್ಯಕ್ಷರಾದ ಮೋಹನ್, ಆಲೇನಹಳ್ಳಿ ಮಹದೇವ, ಚಟ್ಟಂಗೆರೆ ನಿಂಗರಾಜು, ಸೋಮೇಶ್, ಗ್ರಾ.ಪಂ. ಸದಸ್ಯರಾದ ಶಿವು, ಪಿ.ಬಿ.ಮಂಚನಹಳ್ಳಿ ಮಹೇಶ್, ರಾಯಸಮುದ್ರ ವೆಂಕಟೇಶ್‌ ಸೇರಿದಂತೆ ತಾಲೂಕು ದಲಿತ ಸಂಗಟನೆಯ ನೂರಾರು ಸದಸ್ಯರು ಪ್ರತಿಬಟನೆಯಲ್ಲಿ ಪಾಲ್ಗೊಂಡಿದ್ದರು.


ಇದನ್ನೂ ಓದಿರಿ: ಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲ್ಲರ ಕನ್ನಡದಲ್ಲಿ, ಮೊದಲ ಹಂತದಲ್ಲಿ,
    ೧) ಋ,ಐ,ಔ,ಃಃ
    ೨) ಮಹಾಪ್ರಾಣಗಳು
    ೩) ಙ,ಞ,ಷ
    ಬಳಸಬಾರದು

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...