Homeಕರ್ನಾಟಕಹೆಚ್ಚುತ್ತಿರುವ ದಲಿತರ ಮೇಲಿನ ಹಲ್ಲೆ: ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ

ಹೆಚ್ಚುತ್ತಿರುವ ದಲಿತರ ಮೇಲಿನ ಹಲ್ಲೆ: ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ

ಸೂಚನೆ: ‘ಎಲ್ಲರ ಕನ್ನಡ’ ಚರ್‍ಚೆಯ ಬಾಗವಾಗಿ ಮಾಡಲಾದ ಪ್ರಾಯೋಗಿಕ ವರದಿ ಇದಾಗಿದ್ದು, ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ.

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಮಂಡ್ಯ ಜಿಲ್ಲೆಯಲ್ಲಿ ದಲಿತರ ಮೇಲೆ ಹೆಚ್ಚಾಗುತ್ತಿರುವ ಹಲ್ಲೆಗಳನ್ನು ಕಂಡಿಸಿ, ಸವರ್‍ಣೀಯರ ದಬ್ಬಾಳಿಕೆಯನ್ನು ತಡೆಯಬೇಕೆಂದು ಆಗ್ರಹಿಸಿ ದಲಿತ ಮುಖಂಡರು ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ ನಡೆಸಿದ್ದಾರೆ.

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಕಳೆದ ಒಂದು ತಿಂಗಳ ಅವದಿಯಲ್ಲಿ ಎರಡು ಬಾರಿ ದಲಿತರ ಮೇಲೆ ಹಲ್ಲೆ ಪ್ರಕರಣಗಳು ನಡೆದಿವೆ. ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ಮಾಡಲಾಗಿತ್ತು. ದೇವಾಲಯ ಪ್ರವೇಶಿಸಿದ್ದರಿಂದ ಸವರ್‍ಣೀಯರು ಹಲ್ಲೆ ನಡೆಸಿರುವುದಾಗಿ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಶೀಳನೆರೆ ಹೋಬಳಿ ಬಳ್ಳೇಕೆರೆ ಗ್ರಾಮದಲ್ಲಿ ಹಲ್ಲೆ ನಡೆದಿದ್ದು ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಅಲ್ಲದೆ ದಲಿತರಿಗೆ ಕ್ಶೌರ ಮಾಡುವುದಿಲ್ಲ ಎಂದು ಸವಿತಾ ಸಮಾಜದ ವ್ಯಕ್ತಿಯೊಬ್ಬರು ಹೇಳುತ್ತಿರುವ ವಿಡಿಯೊ ಇತ್ತೀಚೆಗೆ ವೈರಲ್‌ ಆಗಿತ್ತು.

ಪದೇ ಪದೇ ಇಂತಹ ಪ್ರಕರಣಗಳು ಜರುಗುತ್ತಿರುತ್ತಿರುವುದನ್ನು ದಲಿತ ಮುಕಂಡರು ಖಂಡಿಸಿದ್ದು, ಕೆ.ಆರ್‌.ಪೇಟೆ ತಾಲ್ಲೂಕಿನ ಪ್ರವಾಸಿ ಮಂದಿರ ಬಳಿ ಸೇರಿ ಪ್ರತಿಬಟನೆ ನಡೆಸಿದ್ದಾರೆ.

ರಾಜ್ಯ ಮಾದಿಗ ಸಮಾಜ ಸಂಗಟನೆಯ ಕೆ.ಆರ್‌.ಪೇಟೆ ತಾಲೂಕು ಅದ್ಯಕ್ಷರಾದ ಹೊಸಹೊಳಲು ದೇವರಾಜು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ದಲಿತರ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿದ್ದರೂ ಪೋಲೀಸ್ ಇಲಾಖೆ, ತಾಲೂಕು ಆಡಳಿತ ದಲಿತರಿಗೆ ರಕ್ಶಣೆ ಕೊಡುವುದರಲ್ಲಿ ವಿಪಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನಾದ್ಯಂತ ಕೆಲವು ಹಳ್ಳಿಗಳಲ್ಲಿ ದಲಿತರ ಮೇಲೆ ದಾಳಿ ನಡೆಯುತ್ತಿವೆ. ಆದರೆ ಜಿಲ್ಲಾಡಳಿತ, ತಾಲೂಕು ಆಡಳಿತ ಕೈಕಟ್ಟಿ ಕೂತಿವೆ. ಮುಂದಿನ ದಿನಗಳಲ್ಲಿ ಅದಿಕಾರಿಗಳ ನಿರ್ಲಕ್ಶ್ಯ ಮುಂದುವರಿದರೆ ತಾಲ್ಲೂಕಿನ ಎಲ್ಲಾ ದಲಿತ ಸಂಗಟನೆಗಳ ಜೊತೆ ಸೇರಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಚಲವಾದಿ ಮಹಾಸಬಾದ ಜಿಲ್ಲಾದ್ಯಕ್ಷರಾದ ಮಾಂಬಳ್ಳಿ ಜಯರಾಂ ಮಾತನಾಡಿ, “ತಾಲ್ಲೂಕಿನ ಶೀಳನೆರೆ ಹೋಬಳಿ ಬಳ್ಳೇಕೆರೆ ಗ್ರಾಮದ ದಲಿತ ಮಹಿಳೆಯ ಮೇಲೆ ಸವರ್‍ಣೀಯ ಪುರುಷನು ತನ್ನ ಪತ್ನಿಯ ಜೊತೆ ಸೇರಿ ಕ್ಶುಲ್ಲಕ ಕಾರಣಕ್ಕಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ತಪ್ಪಿತಸ್ತರನ್ನು ಕೂಡಲೇ ಬಂದಿಸಬೇಕು. ಅಲ್ಲದೇ ಹಲ್ಲೆಗೊಳಗಾದ ಕುಟುಂಬಕ್ಕೆ ಪೋಲೀಸ್ ಅದಿಕಾರಿಗಳು ರಕ್ಷಣೆ ನೀಡಬೇಕು” ಎಂದು ಆಗ್ರಹಿಸಿದರು.

ಕೆ.ಆರ್‌.ಪೇಟೆ ತಾಲ್ಲೂಕು ಡಾ.ಜಗಜೀವನರಾಂ ಸಂಗಟನೆಗಳ ಒಕ್ಕೂಟದ ಅದ್ಯಕ್ಷರಾದ ಹೊಸಹೊಳಲು ಪುಟ್ಟರಾಜು ಮಾತನಾಡಿ, “ಇಂದಿಗೂ ಕೆಲವು ಹಳ್ಳಿಗಳಲ್ಲಿ ಜಾತೀಯತೆ ಜೀವಂತವಾಗಿದೆ. ದಲಿತರನ್ನು ಕೀಳಾಗಿ ನೋಡುತ್ತಿದ್ದಾರೆ. ನಾವು ಸಹ ಮನುಷ್ಯರಲ್ಲವೇ?” ಎಂದು ಪ್ರಶ್ನಿಸಿದರು.

“ನಮಗೂ ಹೋರಾಟ ನಡೆಸುವ ಶಕ್ತಿ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಬರೆದಿರುವ ಸಂವಿದಾನದ ಮೇಲೆ ಗೌರವವಿರುವುದರಿಂದ ನಾವು ಯಾರ ಮೇಲೂ ದಬ್ಬಾಳಿಕೆ ಮಾಡದೇ ನ್ಯಾಯಯುತವಾಗಿ ನಡೆದುಕೊಳ್ಳುತ್ತಿದ್ದೇವೆ. ಆದ್ದರಿಂದ ಒಂದು ತಿಂಗಳಿಗೊಮ್ಮೆಯಾದರೂ ದಲಿತರ ಕುಂದುಕೊರತೆಗಳನ್ನು ನಿವಾರಿಸಲು ಪೊಲೀಸ್‌ ಇಲಾಖೆಯ ಹಿರಿಯ ಅದಿಕಾರಿಗಳು ಸಬೆ ನಡೆಸಿ ದಲಿತರಿಗೆ ನ್ಯಾಯ ಕೊಡಿಸಬೇಕು” ಎಂದು ಆಗ್ರಹಿಸಿದರು.

ಇದೇ ಸಂದರ್ಬದಲ್ಲಿ ಕೆ.ಆರ್‌.ಪೇಟೆ ತಾಲೂಕು ದಲಿತ ಸಂಗಟನೆಯ ಸದಸ್ಯರು, ತಾಲೂಕು ಆಡಳಿತ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಬದಲ್ಲಿ ತಾ.ಪಂ.ಮಾಜಿ ಅದ್ಯಕ್ಷರಾದ ಸೋಮಯ್ಯ, ಕೂಡಲಕುಪ್ಪೆ ರಾಜಯ್ಯ, ಕಜಾಂಚಿ ಪುಟ್ಟರಾಜು, ತಾ.ಸಂ. ಕಾರ್ಯದರ್ಶಿ ಮಹಾದೇವ, ಚಲುವರಾಜು, ಉಪಾದ್ಯಕ್ಷರಾದ ಮೋಹನ್, ಆಲೇನಹಳ್ಳಿ ಮಹದೇವ, ಚಟ್ಟಂಗೆರೆ ನಿಂಗರಾಜು, ಸೋಮೇಶ್, ಗ್ರಾ.ಪಂ. ಸದಸ್ಯರಾದ ಶಿವು, ಪಿ.ಬಿ.ಮಂಚನಹಳ್ಳಿ ಮಹೇಶ್, ರಾಯಸಮುದ್ರ ವೆಂಕಟೇಶ್‌ ಸೇರಿದಂತೆ ತಾಲೂಕು ದಲಿತ ಸಂಗಟನೆಯ ನೂರಾರು ಸದಸ್ಯರು ಪ್ರತಿಬಟನೆಯಲ್ಲಿ ಪಾಲ್ಗೊಂಡಿದ್ದರು.


ಇದನ್ನೂ ಓದಿರಿ: ಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲ್ಲರ ಕನ್ನಡದಲ್ಲಿ, ಮೊದಲ ಹಂತದಲ್ಲಿ,
    ೧) ಋ,ಐ,ಔ,ಃಃ
    ೨) ಮಹಾಪ್ರಾಣಗಳು
    ೩) ಙ,ಞ,ಷ
    ಬಳಸಬಾರದು

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...