Homeಕರ್ನಾಟಕಕುಟುಂಬದ ಒಡತಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ನಾಳೆಯೇ ಚಾಲನೆ

ಕುಟುಂಬದ ಒಡತಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ನಾಳೆಯೇ ಚಾಲನೆ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ರಾಹುಲ್ ಗಾಂಧಿ ಅವರು ನಾಳೆ (ಬುಧವಾರ) ಚಾಲನೆ ನೀಡಲಿದ್ದಾರೆ. ರಾಜ್ಯಾದ್ಯಂತ 10,400 ಕೇಂದ್ರಗಳಲ್ಲಿ ಏಕಕಾಲದಲ್ಲಿ ಯೋಜನೆಯನ್ನು ಪ್ರಾರಂಭಿಸಲಾಗುತ್ತದೆ.

ಬುಧವಾರ ಮೈಸೂರಿನ ಮಹಾರಾಜ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.  ಈ ಯೋಜನೆ ಮೂಲಕ ಕುಟುಂಬದ ಒಡತಿ ಖಾತೆಗೆ 2000 ರೂ. ನೀಡಲಾಗುತ್ತದೆ. ಯೋಜನೆ ಜಾರಿಯಾದ ನಂತರ 1.9 ಕೋಟಿ ಮಹಿಳೆಯರ ಖಾತೆಗಳಿಗೆ ಹಣ ಹಾಕಲಾಗುತ್ತದೆ ಎಂದು ಸರ್ಕಾರ ಘೋಷಿಸಿದೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಹತೆ

ಕುಟಂಬದ ಒಡತಿ ಕಡ್ಡಾಯವಾಗಿ ಬಿಪಿಎಲ್​ ಅಥವಾ ಎಪಿಎಲ್​ ಕಾರ್ಡ್​​​​ ಅಥವಾ ಅಂತ್ಯೋದಯ ಕಾರ್ಡ್‌ ಹೊಂದಿರಬೇಕು. ಅಲ್ಲದೇ ಕುಟುಂಬದ ಒಡತಿ ಅಥವಾ ಆಕೆಯ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಅಥವಾ ಸರಕು ಮತ್ತು ಸೇವಾ ತೆರಿಗೆ ರಿಟರ್ನ್ಸ್ ಕ್ಲೈಮ್ ಮಾಡಿದ್ದರೆ ಅವರು ಯೋಜನೆಗೆ ಅರ್ಹರಲ್ಲ ಎಂದು ಸರ್ಕಾರ ಘೋಷಿಸಿತ್ತು.

ಜುಲೈ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು. ಜುಲೈ 20ರಿಂದ ಈವರೆಗು 1.10 ಕೋಟಿಗೂ ಹೆಚ್ಚು ಮಹಿಳೆಯರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ನೋಂದಾಯಿಸಿಕೊಂಡ ನಂತರ ಖಾತರಿಗಾಗಿ ನೋಂದಣಿ ದಿನಾಂಕ, ಸಮಯ ಮತ್ತು ಸ್ಥಳದ ಬಗ್ಗೆ ಅರ್ಹ ಮಹಿಳೆಗೆ ಸಂದೇಶ ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ನೋಂದಣಿಗಾಗಿ ತಮ್ಮ ನಿಗದಿತ ದಿನಾಂಕ ಮತ್ತು ಸಮಯವನ್ನು ತಿಳಿಯಲು ಇಚ್ಛಿಸುವವರು 12 ಅಂಕಿಯ ಪಡಿತರ ಚೀಟಿ ಸಂಖ್ಯೆಯನ್ನು 8147500500/ 8277000555 ಸಂಖ್ಯೆಗೆ ಸಂದೇಶ ಕಳುಹಿಸಬೇಕು. ನಂತರ ಅರ್ಹ ಮಹಿಳೆಯರು ನೋಂದಣಿಯ ಸ್ಥಳ, ದಿನಾಂಕ ಮತ್ತು ಸಮಯದ ವಿವರಗಳನ್ನು ಪಡೆಯುತ್ತಾರೆ.

ಕರ್ನಾಟಕದಾದ್ಯಂತ 11,000 ಕೇಂದ್ರಗಳಲ್ಲಿ ನೋಂದಣಿ ಮಾಡಲಾಗುತ್ತದೆ ಎಂದು ಸಚಿವ ಹೆಬ್ಬಾಳ್ಕರ್ ಹೇಳಿದ್ದರು. ಫಲಾನುಭವಿಗಳು ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬಹುದು. ಯೋಜನೆಗೆ ಯಾವುದೇ ಕೊನೆಯ ದಿನಾಂಕವಿಲ್ಲ. ಫಲಾನುಭವಿಗಳು ಯೋಜನೆಯನ್ನು ಪಡೆಯಲು ಯಾವುದೇ ಸಮಯದಲ್ಲಿ ನೋಂದಾಯಿಸಿಕೊಳ್ಳಬಹುದು.

ಗೃಹಲಕ್ಷ್ಮಿ ನೋಂದಣಿಗೆ ಅಗತ್ಯ ದಾಖಲೆಗಳು:

  1. ಆಧಾರ್ ಕಾರ್ಡ್
  2. ಪತಿಯ ಆಧಾರ್ ಕಾರ್ಡ್
  3. ಪಡಿತರ ಚೀಟಿ, ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್
  4. ಫಲಾನುಭವಿಗಳು ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಿರಬೇಕು.

ಗೃಹಲಕ್ಷ್ಮಿ ಯೋಜನೆಗೆ ಈ ವರ್ಷ 17,500 ಕೋಟಿ ರೂ.ಗಳನ್ನು ಸರ್ಕಾರ ಮೀಸಲಿಟ್ಟಿದೆ. ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ವಾರ್ಷಿಕ 32,000 ಕೋಟಿ ರೂ. ಅಗತ್ಯವಿದೆ. ಈ ವರ್ಷ ಒಟ್ಟು 1.28 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯುವ ನಿರೀಕ್ಷೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...