Homeಮುಖಪುಟ‘ಜಿಎಸ್‌ಟಿ 12%’: ಜನವರಿಯಿಂದ ಬಟ್ಟೆಬರೆ ಮತ್ತು ಪಾದರಕ್ಷೆಗಳ ಬೆಲೆ ಏರಿಕೆ!

‘ಜಿಎಸ್‌ಟಿ 12%’: ಜನವರಿಯಿಂದ ಬಟ್ಟೆಬರೆ ಮತ್ತು ಪಾದರಕ್ಷೆಗಳ ಬೆಲೆ ಏರಿಕೆ!

- Advertisement -
- Advertisement -

1,000 ರೂ.ಗಿಂತ ಕಡಿಮೆ ಬೆಲೆಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು 12% ಕ್ಕೆ ಏರಿಸಲು ಒಕ್ಕೂಟ ಸರ್ಕಾರ ನಿರ್ಧರಿಸಿರುವುದರಿಂದ ಬಡವರು ಬಳಸುವ ಉಡುಪು, ಬಟ್ಟೆ ಮತ್ತು ಪಾದರಕ್ಷೆಗಳು ಜನವರಿ 1 ರಿಂದ ದುಬಾರಿಯಾಗಲಿದೆ.

1,000 ರೂಪಾಯಿವರೆಗಿನ ಬಟ್ಟೆ ಮತ್ತು ಪಾದರಕ್ಷೆಗಳ ಮೇಲಿನ ಹೊಸ ಜಿಎಸ್‌ಟಿ ದರವನ್ನು 5% ದಿಂದ 12% ಕ್ಕೆ ಹೆಚ್ಚಿಸಲಾಗಿದೆ. ಸಿಂಥೆಟಿಕ್ ಮತ್ತು ಕೃತಕ ನೂಲಿನ ಮೇಲಿನ ತೆರಿಗೆ ಕೂಡಾ 12% ದಷ್ಟು ಹೆಚ್ಚಿಸಲಾಗಿದೆ. ಆದರೆ ಹತ್ತಿ, ರೇಷ್ಮೆ ಮತ್ತು ಉಣ್ಣೆಯ ನೂಲುಗಳ ಮೇಲಿನ ತೆರಿಗೆಯನ್ನು ಹಿಂದಿನಂತೆ ಉಳಿಸಲಾಗಿದೆ.

ಇದನ್ನೂ ಓದಿ:ರೈತ ಹೋರಾಟಕ್ಕೆ ಬೆಂಬಲ: ಬೆಲೆ ಏರಿಕೆ ಕುರಿತು ಕೇಂದ್ರದ ವಿರುದ್ಧ ಕಿಡಿಕಾರಿದ ಸೋನಿಯಾ ಗಾಂಧಿ

ಪರೋಕ್ಷ ತೆರಿಗೆಗಳ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾಗಿರುವ GST ಕೌನ್ಸಿಲ್, ಹೊಸ ತೆರಿಗೆ ದರಗಳಲ್ಲಿನ ಬದಲಾವಣೆಗಳನ್ನು ಶಿಫಾರಸು ಮಾಡಿದ್ದು, ಇದು ವ್ಯಾಪಾರಿಗಳ ಪರವಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ, ವ್ಯಾಪಾರಿಗಳು ಸರ್ಕಾರದ ಈ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಇದು ದೇಶದ ದೊಡ್ಡ ವರ್ಗದ ಜನರಿಗೆ ತೊಂದರೆಯುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

ಜಿಎಸ್‌ಟಿ ಕೌನ್ಸಿಲ್ ವ್ಯಾಪಾರಿಗಳೊಂದಿಗೆ ಸಮಾಲೋಚನೆಯನ್ನು ನಿಲ್ಲಿಸಿದ್ದು, ವ್ಯಾಪಾರದ ಬಗ್ಗೆ ಪರಿಸ್ಥಿತಿಯನ್ನು ತಿಳಿದುಕೊಳ್ಳದೆ ಸರ್ವಾಧಿಕಾರದ ರೀತಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಣ್ಣ ವ್ಯಾಪಾರಿಗಳ ಒಕ್ಕೂಟವಾದ ಆಲ್ ಇಂಡಿಯಾ ಟ್ರೇಡರ್ಸ್ ಭಾನುವಾರ ಹೇಳಿದೆ ಎಂದು ಡೆಕ್ಕನ್‌ ಹೆರಾಲ್ಡ್‌‌ ಉಲ್ಲೇಖಿಸಿದೆ.

ದೇಶದ ಜನಸಂಖ್ಯೆಯ 85% ರಷ್ಟು ಜನರು 1,000 ರೂಪಾಯಿಗಿಂತ ಕಡಿಮೆ ಮೌಲ್ಯದ ಬಟ್ಟೆ ಮತ್ತು ಪಾದರಕ್ಷೆಗಳನ್ನು ಖರೀದಿಸುತ್ತಾರೆ. ಈಗ ಇದರಲ್ಲಿ 5% GST ದರ ಇದೆ. ಸರ್ಕಾರದ ಹೊಸ ನಿರ್ಧಾರವು ಅತ್ಯಂತ ಅವಾಸ್ತವಿಕವಾಗಿದ್ದು, ಸಣ್ಣ ತಯಾರಕರು, ಕುಶಲಕರ್ಮಿಗಳು ಮತ್ತು ಇತರ ವಿಭಾಗಗಳ ಜೀವನೋಪಾಯದ ಮೇಲೆ ಪರಿಣಾಮ ಬೀರುತ್ತದೆ” ಎಂದು ಒಕ್ಕೂಟವು ಹೇಳಿದೆ.

ಕೊರೊನಾದಿಂದಾಗಿ ಕೆಟ್ಟ ಪರಿಣಾಮ ಬೀರಿದ ಜವಳಿ ಉದ್ಯಮ ವಲಯವು, ಕೃಷಿಯ ನಂತರ ಎರಡನೇ ಅತಿ ದೊಡ್ಡ ಆದಾಯ ಉತ್ಪಾದಿಸುವ ವಲಯವಾಗಿದೆ.

ಇದನ್ನೂ ಓದಿ:ಟೊಮಟೊ ಟ್ರಾಲ್‌: ‘ಬೆಲೆ ಏರಿಕೆ’ ಕಂಡು ತರಹೇವಾರಿ ಮೀಮ್ಸ್‌ ಸೃಷ್ಟಿ; ನೋಡಿ ನಕ್ಕುಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...