Homeಮುಖಪುಟ‘ಜಿಎಸ್‌ಟಿ 12%’: ಜನವರಿಯಿಂದ ಬಟ್ಟೆಬರೆ ಮತ್ತು ಪಾದರಕ್ಷೆಗಳ ಬೆಲೆ ಏರಿಕೆ!

‘ಜಿಎಸ್‌ಟಿ 12%’: ಜನವರಿಯಿಂದ ಬಟ್ಟೆಬರೆ ಮತ್ತು ಪಾದರಕ್ಷೆಗಳ ಬೆಲೆ ಏರಿಕೆ!

- Advertisement -
- Advertisement -

1,000 ರೂ.ಗಿಂತ ಕಡಿಮೆ ಬೆಲೆಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು 12% ಕ್ಕೆ ಏರಿಸಲು ಒಕ್ಕೂಟ ಸರ್ಕಾರ ನಿರ್ಧರಿಸಿರುವುದರಿಂದ ಬಡವರು ಬಳಸುವ ಉಡುಪು, ಬಟ್ಟೆ ಮತ್ತು ಪಾದರಕ್ಷೆಗಳು ಜನವರಿ 1 ರಿಂದ ದುಬಾರಿಯಾಗಲಿದೆ.

1,000 ರೂಪಾಯಿವರೆಗಿನ ಬಟ್ಟೆ ಮತ್ತು ಪಾದರಕ್ಷೆಗಳ ಮೇಲಿನ ಹೊಸ ಜಿಎಸ್‌ಟಿ ದರವನ್ನು 5% ದಿಂದ 12% ಕ್ಕೆ ಹೆಚ್ಚಿಸಲಾಗಿದೆ. ಸಿಂಥೆಟಿಕ್ ಮತ್ತು ಕೃತಕ ನೂಲಿನ ಮೇಲಿನ ತೆರಿಗೆ ಕೂಡಾ 12% ದಷ್ಟು ಹೆಚ್ಚಿಸಲಾಗಿದೆ. ಆದರೆ ಹತ್ತಿ, ರೇಷ್ಮೆ ಮತ್ತು ಉಣ್ಣೆಯ ನೂಲುಗಳ ಮೇಲಿನ ತೆರಿಗೆಯನ್ನು ಹಿಂದಿನಂತೆ ಉಳಿಸಲಾಗಿದೆ.

ಇದನ್ನೂ ಓದಿ:ರೈತ ಹೋರಾಟಕ್ಕೆ ಬೆಂಬಲ: ಬೆಲೆ ಏರಿಕೆ ಕುರಿತು ಕೇಂದ್ರದ ವಿರುದ್ಧ ಕಿಡಿಕಾರಿದ ಸೋನಿಯಾ ಗಾಂಧಿ

ಪರೋಕ್ಷ ತೆರಿಗೆಗಳ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾಗಿರುವ GST ಕೌನ್ಸಿಲ್, ಹೊಸ ತೆರಿಗೆ ದರಗಳಲ್ಲಿನ ಬದಲಾವಣೆಗಳನ್ನು ಶಿಫಾರಸು ಮಾಡಿದ್ದು, ಇದು ವ್ಯಾಪಾರಿಗಳ ಪರವಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ, ವ್ಯಾಪಾರಿಗಳು ಸರ್ಕಾರದ ಈ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಇದು ದೇಶದ ದೊಡ್ಡ ವರ್ಗದ ಜನರಿಗೆ ತೊಂದರೆಯುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

ಜಿಎಸ್‌ಟಿ ಕೌನ್ಸಿಲ್ ವ್ಯಾಪಾರಿಗಳೊಂದಿಗೆ ಸಮಾಲೋಚನೆಯನ್ನು ನಿಲ್ಲಿಸಿದ್ದು, ವ್ಯಾಪಾರದ ಬಗ್ಗೆ ಪರಿಸ್ಥಿತಿಯನ್ನು ತಿಳಿದುಕೊಳ್ಳದೆ ಸರ್ವಾಧಿಕಾರದ ರೀತಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಣ್ಣ ವ್ಯಾಪಾರಿಗಳ ಒಕ್ಕೂಟವಾದ ಆಲ್ ಇಂಡಿಯಾ ಟ್ರೇಡರ್ಸ್ ಭಾನುವಾರ ಹೇಳಿದೆ ಎಂದು ಡೆಕ್ಕನ್‌ ಹೆರಾಲ್ಡ್‌‌ ಉಲ್ಲೇಖಿಸಿದೆ.

ದೇಶದ ಜನಸಂಖ್ಯೆಯ 85% ರಷ್ಟು ಜನರು 1,000 ರೂಪಾಯಿಗಿಂತ ಕಡಿಮೆ ಮೌಲ್ಯದ ಬಟ್ಟೆ ಮತ್ತು ಪಾದರಕ್ಷೆಗಳನ್ನು ಖರೀದಿಸುತ್ತಾರೆ. ಈಗ ಇದರಲ್ಲಿ 5% GST ದರ ಇದೆ. ಸರ್ಕಾರದ ಹೊಸ ನಿರ್ಧಾರವು ಅತ್ಯಂತ ಅವಾಸ್ತವಿಕವಾಗಿದ್ದು, ಸಣ್ಣ ತಯಾರಕರು, ಕುಶಲಕರ್ಮಿಗಳು ಮತ್ತು ಇತರ ವಿಭಾಗಗಳ ಜೀವನೋಪಾಯದ ಮೇಲೆ ಪರಿಣಾಮ ಬೀರುತ್ತದೆ” ಎಂದು ಒಕ್ಕೂಟವು ಹೇಳಿದೆ.

ಕೊರೊನಾದಿಂದಾಗಿ ಕೆಟ್ಟ ಪರಿಣಾಮ ಬೀರಿದ ಜವಳಿ ಉದ್ಯಮ ವಲಯವು, ಕೃಷಿಯ ನಂತರ ಎರಡನೇ ಅತಿ ದೊಡ್ಡ ಆದಾಯ ಉತ್ಪಾದಿಸುವ ವಲಯವಾಗಿದೆ.

ಇದನ್ನೂ ಓದಿ:ಟೊಮಟೊ ಟ್ರಾಲ್‌: ‘ಬೆಲೆ ಏರಿಕೆ’ ಕಂಡು ತರಹೇವಾರಿ ಮೀಮ್ಸ್‌ ಸೃಷ್ಟಿ; ನೋಡಿ ನಕ್ಕುಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...