Homeಎಕಾನಮಿಜಿಎಸ್‌ಟಿ: ಲಾಕ್‌ಡೌನ್‌ ನಂತರ ಮೊದಲ ಬಾರಿಗೆ 1.05 ಲಕ್ಷ ಕೋಟಿ ಸಂಗ್ರಹ!

ಜಿಎಸ್‌ಟಿ: ಲಾಕ್‌ಡೌನ್‌ ನಂತರ ಮೊದಲ ಬಾರಿಗೆ 1.05 ಲಕ್ಷ ಕೋಟಿ ಸಂಗ್ರಹ!

ಅಕ್ಟೋಬರ್‌ ತಿಂಗಳಿನಲ್ಲಿ ಜಿಎಸ್‌ಟಿ ದೊಡ್ಡಮೊತ್ತದಲ್ಲಿ ಸಂಗ್ರಹವಾಗಿದೆ. ಈಗಲಾದರೂ ರಾಜ್ಯಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಜಿಎಸ್‌ಟಿ ಪಾಲು ಸಿಗಲಿದೆಯೇ ಎಂದು ಕಾದುನೋಡಬೇಕಿದೆ.

- Advertisement -
- Advertisement -

ಅಕ್ಟೋಬರ್‌ ತಿಂಗಳಿನಲ್ಲಿ 1.05 ಲಕ್ಷ ಕೋಟಿ ರೂ.ಗಳಷ್ಟು ಜಿಎಸ್‌ಟಿ ಸಂಗ್ರಹವಾಗಿದ್ದು, ಈ ವರ್ಷದ ಫೆಬ್ರವರಿಯ ನಂತರ ಮೊದಲ ಬಾರಿಗೆ ಜಿಎಸ್‌ಟಿ ಸಂಗ್ರಹ 1 ಲಕ್ಷ ಕೋಟಿ ರೂ.ಗಳನ್ನು ದಾಟಿದೆ ಎಂದು ಹಣಕಾಸು ಸಚಿವಾಲಯ ಇಂದು ತಿಳಿಸಿದೆ.

ಇದನ್ನೂ ಓದಿ: ಜಿಎಸ್‌ಟಿ ಬಿಕ್ಕಟ್ಟು: 1.1 ಲಕ್ಷ ಕೋಟಿ ರೂ. ಸಾಲ ಪಡೆಯಲು ಒಪ್ಪಿದ ಕೇಂದ್ರ!

2020 ರ ಅಕ್ಟೋಬರ್‌ನಲ್ಲಿ ಸಂಗ್ರಹಿಸಿದ ಒಟ್ಟು ಜಿಎಸ್‌ಟಿ ಆದಾಯ 1,05,155 ಕೋಟಿ ರೂ. ಆಗಿದ್ದು, ಇದರಲ್ಲಿ ಸಿಜಿಎಸ್‌ಟಿ 19,193 ಕೋಟಿ ರೂ., ಎಸ್‌ಜಿಎಸ್‌ಟಿ 5,411 ಕೋಟಿ ರೂ., ಐಜಿಎಸ್‌ಟಿ 52,540 ಕೋಟಿ ರೂ. (ಸರಕುಗಳ ಆಮದಿನಲ್ಲಿ ಸಂಗ್ರಹಿಸಿದ 23,375 ಕೋಟಿ ರೂ.) ಮತ್ತು ಸೆಸ್ 8,011 ಕೋಟಿ ರೂ. (ಸರಕುಗಳ ಆಮದುಗಾಗಿ ಸಂಗ್ರಹಿಸಿದ 932 ಕೋಟಿ ರೂ. ಸೇರಿದಂತೆ) ಎಂದು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ವರ್ಷದ ಇದೇ ತಿಂಗಳಲ್ಲಿ ಸಂಗ್ರಹಿಸಿದ 95,379 ಕೋಟಿ ರೂ.ಗಳಿಗಿಂತ ಈ ತಿಂಗಳ ಆದಾಯವು ಶೇಕಡಾ 10 ರಷ್ಟು ಹೆಚ್ಚಾಗಿದೆ. ಕೊರೊನಾ ಲಾಕ್‌ಡೌನ್‌ನಿಂದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಕುಸಿದಿತ್ತು.

ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯಗಳ ಪಟ್ಟಿ: ರಾಜ್ಯೋತ್ಸವದಂದು ಸಿದ್ದರಾಮಯ್ಯ ಆಕ್ರೋಶ

ಆರ್ಥಿಕ ಕುಸಿತದ ಕಾರಣದಿಂದ ಈ ವರ್ಷ ರಾಜ್ಯಗಳಿಗೆ ಜಿಎಸ್‌ಟಿ ಪಾಲು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು. ಜೊತೆಗೆ ಇದು “ದೇವರ ಕ್ರಿಯೆ” ಎಂದು ಹೇಳಿ ವ್ಯಾಪಕ ಟೀಕೆ ಮತ್ತು ವ್ಯಂಗ್ಯಕ್ಕೆ ಗುriಯಾಗಿದ್ದರು. ಬಿಜೆಪಿಯೇತರ ರಾಜ್ಯ ಸರ್ಕಾರಗಳು ತಮ್ಮ ಜಿಎಸ್‌ಟಿ ಪಾಲು ನೀಡುವಂತೆ ಪ್ರತಿಭಟಿಸುತ್ತಿದ್ದವು. ಕೇರಳ ಒಂದು ಹೆಜ್ಜೆ ಮುಂದೆ ಹೋಗಿ ಸುಪ್ರೀಂ ಮೆಟ್ಟಿಲೇರುವುದಾಗಿ ಎಚ್ಚರಿಸಿತ್ತು.

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ -23 ರಷ್ಟು ಕುಸಿದಿತ್ತು. ಇದು ಪುನಃ ಚೇತರಿಸಿಕೊಳ್ಳಲು ಕೆಲವು ವರ್ಷಗಳೆ ಬೇಕಾಗಬಹುದು ಎಂದು ಆರ್‌ಬಿಐ ಉಪ ಗವರ್ನರ್‌ ಹೇಳಿದ್ದರು. ಕಳೆದವಾರ ನಿರ್ಮಲಾ ಸೀತಾರಾಮನ್, ಈ ವರ್ಷದ ಮೂರನೇ ತ್ರೈಮಾಸಿಕದಲ್ಲಿಯೂ ಜಿಡಿಪಿ ಋಣಾತ್ಮಕವಾಗಿಯೇ ಇರಲಿದೆ ಎಂದು ಹೇಳಿದ್ದರು.

ಇದೀಗ ಅಕ್ಟೋಬರ್‌ ತಿಂಗಳಿನಲ್ಲಿ ಜಿಎಸ್‌ಟಿ ದೊಡ್ಡಮೊತ್ತದಲ್ಲಿ ಸಂಗ್ರಹವಾಗಿದೆ. ಈಗಲಾದರೂ ರಾಜ್ಯಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಜಿಎಸ್‌ಟಿ ಪಾಲು ಸಿಗಲಿದೆಯೇ ಎಂದು ಕಾದುನೋಡಬೇಕಿದೆ.


ಇದನ್ನೂ ಓದಿ: ಜಿಎಸ್‌ಟಿ ಪಾಲು ನೀಡುವಂತೆ ಒತ್ತಾಯಿಸಿ ವಿಪಕ್ಷಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...