Homeಎಕಾನಮಿಜಿಎಸ್‌ಟಿ: ಲಾಕ್‌ಡೌನ್‌ ನಂತರ ಮೊದಲ ಬಾರಿಗೆ 1.05 ಲಕ್ಷ ಕೋಟಿ ಸಂಗ್ರಹ!

ಜಿಎಸ್‌ಟಿ: ಲಾಕ್‌ಡೌನ್‌ ನಂತರ ಮೊದಲ ಬಾರಿಗೆ 1.05 ಲಕ್ಷ ಕೋಟಿ ಸಂಗ್ರಹ!

ಅಕ್ಟೋಬರ್‌ ತಿಂಗಳಿನಲ್ಲಿ ಜಿಎಸ್‌ಟಿ ದೊಡ್ಡಮೊತ್ತದಲ್ಲಿ ಸಂಗ್ರಹವಾಗಿದೆ. ಈಗಲಾದರೂ ರಾಜ್ಯಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಜಿಎಸ್‌ಟಿ ಪಾಲು ಸಿಗಲಿದೆಯೇ ಎಂದು ಕಾದುನೋಡಬೇಕಿದೆ.

- Advertisement -
- Advertisement -

ಅಕ್ಟೋಬರ್‌ ತಿಂಗಳಿನಲ್ಲಿ 1.05 ಲಕ್ಷ ಕೋಟಿ ರೂ.ಗಳಷ್ಟು ಜಿಎಸ್‌ಟಿ ಸಂಗ್ರಹವಾಗಿದ್ದು, ಈ ವರ್ಷದ ಫೆಬ್ರವರಿಯ ನಂತರ ಮೊದಲ ಬಾರಿಗೆ ಜಿಎಸ್‌ಟಿ ಸಂಗ್ರಹ 1 ಲಕ್ಷ ಕೋಟಿ ರೂ.ಗಳನ್ನು ದಾಟಿದೆ ಎಂದು ಹಣಕಾಸು ಸಚಿವಾಲಯ ಇಂದು ತಿಳಿಸಿದೆ.

ಇದನ್ನೂ ಓದಿ: ಜಿಎಸ್‌ಟಿ ಬಿಕ್ಕಟ್ಟು: 1.1 ಲಕ್ಷ ಕೋಟಿ ರೂ. ಸಾಲ ಪಡೆಯಲು ಒಪ್ಪಿದ ಕೇಂದ್ರ!

2020 ರ ಅಕ್ಟೋಬರ್‌ನಲ್ಲಿ ಸಂಗ್ರಹಿಸಿದ ಒಟ್ಟು ಜಿಎಸ್‌ಟಿ ಆದಾಯ 1,05,155 ಕೋಟಿ ರೂ. ಆಗಿದ್ದು, ಇದರಲ್ಲಿ ಸಿಜಿಎಸ್‌ಟಿ 19,193 ಕೋಟಿ ರೂ., ಎಸ್‌ಜಿಎಸ್‌ಟಿ 5,411 ಕೋಟಿ ರೂ., ಐಜಿಎಸ್‌ಟಿ 52,540 ಕೋಟಿ ರೂ. (ಸರಕುಗಳ ಆಮದಿನಲ್ಲಿ ಸಂಗ್ರಹಿಸಿದ 23,375 ಕೋಟಿ ರೂ.) ಮತ್ತು ಸೆಸ್ 8,011 ಕೋಟಿ ರೂ. (ಸರಕುಗಳ ಆಮದುಗಾಗಿ ಸಂಗ್ರಹಿಸಿದ 932 ಕೋಟಿ ರೂ. ಸೇರಿದಂತೆ) ಎಂದು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ವರ್ಷದ ಇದೇ ತಿಂಗಳಲ್ಲಿ ಸಂಗ್ರಹಿಸಿದ 95,379 ಕೋಟಿ ರೂ.ಗಳಿಗಿಂತ ಈ ತಿಂಗಳ ಆದಾಯವು ಶೇಕಡಾ 10 ರಷ್ಟು ಹೆಚ್ಚಾಗಿದೆ. ಕೊರೊನಾ ಲಾಕ್‌ಡೌನ್‌ನಿಂದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಕುಸಿದಿತ್ತು.

ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯಗಳ ಪಟ್ಟಿ: ರಾಜ್ಯೋತ್ಸವದಂದು ಸಿದ್ದರಾಮಯ್ಯ ಆಕ್ರೋಶ

ಆರ್ಥಿಕ ಕುಸಿತದ ಕಾರಣದಿಂದ ಈ ವರ್ಷ ರಾಜ್ಯಗಳಿಗೆ ಜಿಎಸ್‌ಟಿ ಪಾಲು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು. ಜೊತೆಗೆ ಇದು “ದೇವರ ಕ್ರಿಯೆ” ಎಂದು ಹೇಳಿ ವ್ಯಾಪಕ ಟೀಕೆ ಮತ್ತು ವ್ಯಂಗ್ಯಕ್ಕೆ ಗುriಯಾಗಿದ್ದರು. ಬಿಜೆಪಿಯೇತರ ರಾಜ್ಯ ಸರ್ಕಾರಗಳು ತಮ್ಮ ಜಿಎಸ್‌ಟಿ ಪಾಲು ನೀಡುವಂತೆ ಪ್ರತಿಭಟಿಸುತ್ತಿದ್ದವು. ಕೇರಳ ಒಂದು ಹೆಜ್ಜೆ ಮುಂದೆ ಹೋಗಿ ಸುಪ್ರೀಂ ಮೆಟ್ಟಿಲೇರುವುದಾಗಿ ಎಚ್ಚರಿಸಿತ್ತು.

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ -23 ರಷ್ಟು ಕುಸಿದಿತ್ತು. ಇದು ಪುನಃ ಚೇತರಿಸಿಕೊಳ್ಳಲು ಕೆಲವು ವರ್ಷಗಳೆ ಬೇಕಾಗಬಹುದು ಎಂದು ಆರ್‌ಬಿಐ ಉಪ ಗವರ್ನರ್‌ ಹೇಳಿದ್ದರು. ಕಳೆದವಾರ ನಿರ್ಮಲಾ ಸೀತಾರಾಮನ್, ಈ ವರ್ಷದ ಮೂರನೇ ತ್ರೈಮಾಸಿಕದಲ್ಲಿಯೂ ಜಿಡಿಪಿ ಋಣಾತ್ಮಕವಾಗಿಯೇ ಇರಲಿದೆ ಎಂದು ಹೇಳಿದ್ದರು.

ಇದೀಗ ಅಕ್ಟೋಬರ್‌ ತಿಂಗಳಿನಲ್ಲಿ ಜಿಎಸ್‌ಟಿ ದೊಡ್ಡಮೊತ್ತದಲ್ಲಿ ಸಂಗ್ರಹವಾಗಿದೆ. ಈಗಲಾದರೂ ರಾಜ್ಯಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಜಿಎಸ್‌ಟಿ ಪಾಲು ಸಿಗಲಿದೆಯೇ ಎಂದು ಕಾದುನೋಡಬೇಕಿದೆ.


ಇದನ್ನೂ ಓದಿ: ಜಿಎಸ್‌ಟಿ ಪಾಲು ನೀಡುವಂತೆ ಒತ್ತಾಯಿಸಿ ವಿಪಕ್ಷಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...