Homeಕರ್ನಾಟಕಶಿಕ್ಷಣದ ಸಾಮಾಗ್ರಿಗಳ ಮೇಲೆ ಜಿಎಸ್‌ಟಿ ಹೊರೆ: ‘ಶಿಕ್ಷಣ ವಿರೋಧಿ ನೀತಿ’ ಎಂದು ಎಸ್ಎಫ್ಐ ಆಕ್ರೋಶ

ಶಿಕ್ಷಣದ ಸಾಮಾಗ್ರಿಗಳ ಮೇಲೆ ಜಿಎಸ್‌ಟಿ ಹೊರೆ: ‘ಶಿಕ್ಷಣ ವಿರೋಧಿ ನೀತಿ’ ಎಂದು ಎಸ್ಎಫ್ಐ ಆಕ್ರೋಶ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಶಿಕ್ಷಣದ ಸಾಮಾಗ್ರಿಗಳಾದ ಪೆನ್ಸಿಲ್, ಷಾರ್ಪನರ್, ರೈಟಿಂಗ್‌-ಡ್ರಾಯಿಂಗ್-ಪ್ರಿಂಟಿಂಗ್ ಇಂಕ್, ಪೇಪರ್, ಚಾರ್ಟ್ಸ್, ಗ್ರಾಫ್ ಪೇಪರ್, ನೋಟ್ ಬುಕ್ ಮೇಲೆ ಜಿಎಸ್‌ಟಿ ಹಾಕಿರುವುದು ವಿದ್ಯಾರ್ಥಿಗಳಿಗೆ ‘ಹೊರೆಯಾಗಲಿದೆ’ ಎಂದು ಪ್ರತಿಪಾದಿಸಿರುವ ಭಾರತ ವಿಧ್ಯಾರ್ಥಿ ಫೆಡರೇಷನ್‌(ಎಸ್‌ಎಫ್‌ಐ) ಸರ್ಕಾರದ ಈ ನಡೆಯು ‘ಶಿಕ್ಷಣ ವಿರೋಧಿ ನೀತಿ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಹೊಸ ಜಿಎಸ್‌ಟಿ ಬಗ್ಗೆ ಎಸ್‌ಎಫ್‌ಐ ರಾಜ್ಯ ಸಮಿತಿ, “ಮೋದಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಶಿಕ್ಷಣದ ಮೇಲೆ ದಾಳಿಗಳು ಹೆಚ್ಚಾಗಿವೆ. ಶಿಕ್ಷಣದ ವ್ಯಾಪಾರೀಕರಣ ತೀವ್ರಗೊಂಡು ತಳಸಮುದಾಯದ ಮಕ್ಕಳು ಶಿಕ್ಷಣದಿಂದ ಹೊರ ಹೋಗುತ್ತಿರುವ ಹೆಚ್ಚಾಗುತ್ತಿದೆ” ಎಂದು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಂತಹ ವಿಷಮ ಸಂಧರ್ಭದಲ್ಲಿ ಅಪ್ರಜಾಸತ್ತತ್ಮಕವಾಗಿ, ಅವೈಜ್ಞಾನಿಕವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಎನ್ಇಪಿ ಜಾರಿಗೊಳಿಸುತ್ತಿದೆ. ಇದರ ನಡುವೆಯೇ ಒಕ್ಕೂಟ ಸರ್ಕಾರ ಶಿಕ್ಷಣದ ಸಾಮಾಗ್ರಿಗಳಾದ ಪೆನ್ಸಿಲ್, ಷಾರ್ಪನರ್, ರೈಟಿಂಗ್-ಡ್ರಾಯಿಂಗ್-ಪ್ರಿಂಟಿಂಗ್ ಇಂಕ್, ಪೇಪರ್ ಮೇಲೆ 18% ಜಿಎಸ್‌ಟಿ ಹೇರಿ, ಚಾರ್ಟ್ಸ್, ಗ್ರಾಫ್ ಪೇಪರ್, ನೋಟ್ ಬುಕ್ ಮೇಲೆ 12% ಜಿಎಸ್ಟಿ ತೆರಿಗೆ ಹೊರೆ ಹಾಕಿರುವುದು ಶಿಕ್ಷಣ ವಿರೋಧಿ ನೀತಿಯಾಗಿದೆ” ಎಂದು ಎಸ್‌ಎಫ್‌ಐ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ‘ಮತ್ತೆ ಗಬ್ಬರ್‌ ಸಿಂಗ್ ಸ್ಟ್ರೈಕ್‌’: ಜಿಎಸ್‌ಟಿ ಏರಿಕೆಯ ಬಗ್ಗೆ ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಒಕ್ಕೂಟ ಸರ್ಕಾರದ ಈ ನೀತಿಯು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಶಿಕ್ಷಣದ ವೆಚ್ಚ ವಿಪರೀತ ಏರಿಕೆ ಮಾಡಲಿದೆ. ಇದು ತಳಸಮುದಾಯಗಳ ಬಡ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸುವ ಕ್ರಮಗಳಾಗಿವೆ ಎಂದು ಎಸ್ಎಫ್‌ಐ ಆರೋಪಿಸಿದೆ.

“ಕೂಡಲೇ ಶಿಕ್ಷಣದ ಸಾಮಾಗ್ರಿಗಳ ಮೇಲೆ ವಿಧಿಸಿರುವ ಲೂಟಿಕೋರ ಜಿಎಸ್ಟಿ ತೆರಿಗೆಯನ್ನು ವಾಪಸ್ ಪಡೆಯಬೇಕು. ಶಿಕ್ಷಣದ ಸಮಗ್ರ ಅಭಿವೃದ್ದಿಗೆ ಒಟ್ಟು ರಾಷ್ಟ್ರೀಯ ಉತ್ಪನ್ನ ಜಿಡಿಪಿಯ 6% ಅಥವಾ ಕೇಂದ್ರ ಬಜೆಟ್ ನಲ್ಲಿ 10% ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು” ಎಂದು ಎಸ್ಎಫ್ಐ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...