Homeಮುಖಪುಟಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಲವು ರಾಜ್ಯಗಳು ತಮ್ಮ ಪಾಲಿನ ಹಣಕ್ಕಾಗಿ ಒತ್ತಾಯಿಸಲು ಬಯಸಿದ್ದರು. ಆದರೆ ಕೇಂದ್ರ ಸರ್ಕಾರವೇ ತನ್ನ ಕಷ್ಟ ತೋಡಿಕೊಂಡಿದ್ದು ರಾಜ್ಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

- Advertisement -
- Advertisement -

ಇಂದು ನಡೆದ 41ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೋವಿಡ್‌ ಸಾಂಕ್ರಾಮಿಕದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ ಎಂದಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೊರೊನಾ ದೇವರ ಕಾರ್ಯ ಎಂದು ಹೇಳುವ ಮೂಲಕ ಅಸಹಾಯಕತೆ ಪ್ರದರ್ಶಿಸಿದ್ದಾರೆ.

2021ರ ವಿತ್ತೀಯ ವರ್ಷದಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ 2.35 ಲಕ್ಷ ಕೋಟಿ ಕೊರತೆ ಬೀಳಲಿದೆ. ಹಾಗಾಗಿ ರಾಜ್ಯಗಳಿಗೆ ಪಾಲು ನೀಡಲು ಹಣದ ಕೊರತೆಯುಂಟಾಗಿದೆ ಎಂದು ಕೇಂದ್ರ ಸರ್ಕಾರದ ಕಂದಾಯ ಕಾರ್ಯದರ್ಶಿ ಎ.ಬಿ.‌ ಪಾಂಡೆ ತಿಳಿಸಿದ್ದಾರೆ.

ಮಾರ್ಚ್‌ನಲ್ಲಿ 13,806 ರೂ ಬಿಡುಗಡೆಯೊಂದಿಗೆ 2019-20ನೇ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಈಗಾಗಲೇ ಒಟ್ಟು 1.65 ಲಕ್ಷ ಕೋಟಿ ರೂ ಜಿಎಸ್‌ಟಿ ಪರಿಹಾರ ಹಣ ನೀಡಲಾಗಿದೆ. ಆದರೆ ಜಿಎಸ್‌ಟಿ ಪರಿಹಾರಕ್ಕಾಗಿನ ಸೆಸ್ ಸಂಗ್ರಹ ಕೇವಲ 95,444 ಕೋಟಿ ರೂ ಗೆ ಕುಸಿದಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಲವು ರಾಜ್ಯಗಳು ತಮ್ಮ ಪಾಲಿನ ಹಣಕ್ಕಾಗಿ ಒತ್ತಾಯಿಸಲು ಬಯಸಿದ್ದರು. ಆದರೆ ಕೇಂದ್ರ ಸರ್ಕಾರವೇ ತನ್ನ ಕಷ್ಟ ತೋಡಿಕೊಂಡಿದ್ದು ರಾಜ್ಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಬಿಜೆಪಿಯೇತರ ಪಕ್ಷಗಳು ಆಳ್ವಿಕೆಯಲ್ಲಿರುವ ರಾಜ್ಯಗಳು ಕೇಂದ್ರವು ನಮ್ಮ ಪಾಲಿನ ಜಿಎಸ್‌ಟಿ ಹಣವನ್ನು ನೀಡುವುದು ಶಾಸನಬದ್ಧ ಬಾಧ್ಯತೆಯಾಗಿದೆ ಎಂದು ಸಭೆಯಲ್ಲಿ ಆಗ್ರಹಿಸಿದ್ದಾರೆ. ಆದರು ಜಿಎಸ್‌ಟಿ ಸಂಗ್ರಹ ಕುಸಿದಿರುವಾಗ ಕೇಂದ್ರಕ್ಕೆ ಅಂತಹ ಬಾಧ್ಯತೆಗಳಿಲ್ಲ ಎಂದು ಸರ್ಕಾರ ವಾದಿಸಿದೆ.

ಕೇಂದ್ರ ಸರ್ಕಾರವು ನಮಗೆ 4400 ಕೋಟಿ ಜಿಎಸ್‌ಟಿ ಹಣ ಬಾಕಿ ಉಳಿಸಿಕೊಂಡಿದೆ. ನಾವು ರಾಜ್ಯದಲ್ಲಿ 1800 ಕೋಟಿ ಸಂಬಳ ನೀಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಹಣ ನೀಡದಿದ್ದರೆ ನಾವು ಏನು ಮಾಡಬೇಕು ಎಂದು ಪಂಜಾಬ್ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಜಿಎಸ್‌ಟಿ ಆದಾಯದ ನಷ್ಟಕ್ಕೆ ಕೇಂದ್ರವು ರಾಜ್ಯಗಳಿಗೆ ಸಂಪೂರ್ಣ ಪರಿಹಾರವನ್ನು ನೀಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...