Homeಮುಖಪುಟಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಲವು ರಾಜ್ಯಗಳು ತಮ್ಮ ಪಾಲಿನ ಹಣಕ್ಕಾಗಿ ಒತ್ತಾಯಿಸಲು ಬಯಸಿದ್ದರು. ಆದರೆ ಕೇಂದ್ರ ಸರ್ಕಾರವೇ ತನ್ನ ಕಷ್ಟ ತೋಡಿಕೊಂಡಿದ್ದು ರಾಜ್ಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

- Advertisement -
- Advertisement -

ಇಂದು ನಡೆದ 41ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೋವಿಡ್‌ ಸಾಂಕ್ರಾಮಿಕದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ ಎಂದಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೊರೊನಾ ದೇವರ ಕಾರ್ಯ ಎಂದು ಹೇಳುವ ಮೂಲಕ ಅಸಹಾಯಕತೆ ಪ್ರದರ್ಶಿಸಿದ್ದಾರೆ.

2021ರ ವಿತ್ತೀಯ ವರ್ಷದಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ 2.35 ಲಕ್ಷ ಕೋಟಿ ಕೊರತೆ ಬೀಳಲಿದೆ. ಹಾಗಾಗಿ ರಾಜ್ಯಗಳಿಗೆ ಪಾಲು ನೀಡಲು ಹಣದ ಕೊರತೆಯುಂಟಾಗಿದೆ ಎಂದು ಕೇಂದ್ರ ಸರ್ಕಾರದ ಕಂದಾಯ ಕಾರ್ಯದರ್ಶಿ ಎ.ಬಿ.‌ ಪಾಂಡೆ ತಿಳಿಸಿದ್ದಾರೆ.

ಮಾರ್ಚ್‌ನಲ್ಲಿ 13,806 ರೂ ಬಿಡುಗಡೆಯೊಂದಿಗೆ 2019-20ನೇ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಈಗಾಗಲೇ ಒಟ್ಟು 1.65 ಲಕ್ಷ ಕೋಟಿ ರೂ ಜಿಎಸ್‌ಟಿ ಪರಿಹಾರ ಹಣ ನೀಡಲಾಗಿದೆ. ಆದರೆ ಜಿಎಸ್‌ಟಿ ಪರಿಹಾರಕ್ಕಾಗಿನ ಸೆಸ್ ಸಂಗ್ರಹ ಕೇವಲ 95,444 ಕೋಟಿ ರೂ ಗೆ ಕುಸಿದಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಲವು ರಾಜ್ಯಗಳು ತಮ್ಮ ಪಾಲಿನ ಹಣಕ್ಕಾಗಿ ಒತ್ತಾಯಿಸಲು ಬಯಸಿದ್ದರು. ಆದರೆ ಕೇಂದ್ರ ಸರ್ಕಾರವೇ ತನ್ನ ಕಷ್ಟ ತೋಡಿಕೊಂಡಿದ್ದು ರಾಜ್ಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಬಿಜೆಪಿಯೇತರ ಪಕ್ಷಗಳು ಆಳ್ವಿಕೆಯಲ್ಲಿರುವ ರಾಜ್ಯಗಳು ಕೇಂದ್ರವು ನಮ್ಮ ಪಾಲಿನ ಜಿಎಸ್‌ಟಿ ಹಣವನ್ನು ನೀಡುವುದು ಶಾಸನಬದ್ಧ ಬಾಧ್ಯತೆಯಾಗಿದೆ ಎಂದು ಸಭೆಯಲ್ಲಿ ಆಗ್ರಹಿಸಿದ್ದಾರೆ. ಆದರು ಜಿಎಸ್‌ಟಿ ಸಂಗ್ರಹ ಕುಸಿದಿರುವಾಗ ಕೇಂದ್ರಕ್ಕೆ ಅಂತಹ ಬಾಧ್ಯತೆಗಳಿಲ್ಲ ಎಂದು ಸರ್ಕಾರ ವಾದಿಸಿದೆ.

ಕೇಂದ್ರ ಸರ್ಕಾರವು ನಮಗೆ 4400 ಕೋಟಿ ಜಿಎಸ್‌ಟಿ ಹಣ ಬಾಕಿ ಉಳಿಸಿಕೊಂಡಿದೆ. ನಾವು ರಾಜ್ಯದಲ್ಲಿ 1800 ಕೋಟಿ ಸಂಬಳ ನೀಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಹಣ ನೀಡದಿದ್ದರೆ ನಾವು ಏನು ಮಾಡಬೇಕು ಎಂದು ಪಂಜಾಬ್ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಜಿಎಸ್‌ಟಿ ಆದಾಯದ ನಷ್ಟಕ್ಕೆ ಕೇಂದ್ರವು ರಾಜ್ಯಗಳಿಗೆ ಸಂಪೂರ್ಣ ಪರಿಹಾರವನ್ನು ನೀಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...