Homeಮುಖಪುಟಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಲವು ರಾಜ್ಯಗಳು ತಮ್ಮ ಪಾಲಿನ ಹಣಕ್ಕಾಗಿ ಒತ್ತಾಯಿಸಲು ಬಯಸಿದ್ದರು. ಆದರೆ ಕೇಂದ್ರ ಸರ್ಕಾರವೇ ತನ್ನ ಕಷ್ಟ ತೋಡಿಕೊಂಡಿದ್ದು ರಾಜ್ಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

- Advertisement -
- Advertisement -

ಇಂದು ನಡೆದ 41ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೋವಿಡ್‌ ಸಾಂಕ್ರಾಮಿಕದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ ಎಂದಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೊರೊನಾ ದೇವರ ಕಾರ್ಯ ಎಂದು ಹೇಳುವ ಮೂಲಕ ಅಸಹಾಯಕತೆ ಪ್ರದರ್ಶಿಸಿದ್ದಾರೆ.

2021ರ ವಿತ್ತೀಯ ವರ್ಷದಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ 2.35 ಲಕ್ಷ ಕೋಟಿ ಕೊರತೆ ಬೀಳಲಿದೆ. ಹಾಗಾಗಿ ರಾಜ್ಯಗಳಿಗೆ ಪಾಲು ನೀಡಲು ಹಣದ ಕೊರತೆಯುಂಟಾಗಿದೆ ಎಂದು ಕೇಂದ್ರ ಸರ್ಕಾರದ ಕಂದಾಯ ಕಾರ್ಯದರ್ಶಿ ಎ.ಬಿ.‌ ಪಾಂಡೆ ತಿಳಿಸಿದ್ದಾರೆ.

ಮಾರ್ಚ್‌ನಲ್ಲಿ 13,806 ರೂ ಬಿಡುಗಡೆಯೊಂದಿಗೆ 2019-20ನೇ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಈಗಾಗಲೇ ಒಟ್ಟು 1.65 ಲಕ್ಷ ಕೋಟಿ ರೂ ಜಿಎಸ್‌ಟಿ ಪರಿಹಾರ ಹಣ ನೀಡಲಾಗಿದೆ. ಆದರೆ ಜಿಎಸ್‌ಟಿ ಪರಿಹಾರಕ್ಕಾಗಿನ ಸೆಸ್ ಸಂಗ್ರಹ ಕೇವಲ 95,444 ಕೋಟಿ ರೂ ಗೆ ಕುಸಿದಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಲವು ರಾಜ್ಯಗಳು ತಮ್ಮ ಪಾಲಿನ ಹಣಕ್ಕಾಗಿ ಒತ್ತಾಯಿಸಲು ಬಯಸಿದ್ದರು. ಆದರೆ ಕೇಂದ್ರ ಸರ್ಕಾರವೇ ತನ್ನ ಕಷ್ಟ ತೋಡಿಕೊಂಡಿದ್ದು ರಾಜ್ಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಬಿಜೆಪಿಯೇತರ ಪಕ್ಷಗಳು ಆಳ್ವಿಕೆಯಲ್ಲಿರುವ ರಾಜ್ಯಗಳು ಕೇಂದ್ರವು ನಮ್ಮ ಪಾಲಿನ ಜಿಎಸ್‌ಟಿ ಹಣವನ್ನು ನೀಡುವುದು ಶಾಸನಬದ್ಧ ಬಾಧ್ಯತೆಯಾಗಿದೆ ಎಂದು ಸಭೆಯಲ್ಲಿ ಆಗ್ರಹಿಸಿದ್ದಾರೆ. ಆದರು ಜಿಎಸ್‌ಟಿ ಸಂಗ್ರಹ ಕುಸಿದಿರುವಾಗ ಕೇಂದ್ರಕ್ಕೆ ಅಂತಹ ಬಾಧ್ಯತೆಗಳಿಲ್ಲ ಎಂದು ಸರ್ಕಾರ ವಾದಿಸಿದೆ.

ಕೇಂದ್ರ ಸರ್ಕಾರವು ನಮಗೆ 4400 ಕೋಟಿ ಜಿಎಸ್‌ಟಿ ಹಣ ಬಾಕಿ ಉಳಿಸಿಕೊಂಡಿದೆ. ನಾವು ರಾಜ್ಯದಲ್ಲಿ 1800 ಕೋಟಿ ಸಂಬಳ ನೀಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಹಣ ನೀಡದಿದ್ದರೆ ನಾವು ಏನು ಮಾಡಬೇಕು ಎಂದು ಪಂಜಾಬ್ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಜಿಎಸ್‌ಟಿ ಆದಾಯದ ನಷ್ಟಕ್ಕೆ ಕೇಂದ್ರವು ರಾಜ್ಯಗಳಿಗೆ ಸಂಪೂರ್ಣ ಪರಿಹಾರವನ್ನು ನೀಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...