Homeಮುಖಪುಟಜಿಎಸ್‌ಟಿ ಬಿಕ್ಕಟ್ಟು: 1.1 ಲಕ್ಷ ಕೋಟಿ ರೂ. ಸಾಲ ಪಡೆಯಲು ಒಪ್ಪಿದ ಕೇಂದ್ರ!

ಜಿಎಸ್‌ಟಿ ಬಿಕ್ಕಟ್ಟು: 1.1 ಲಕ್ಷ ಕೋಟಿ ರೂ. ಸಾಲ ಪಡೆಯಲು ಒಪ್ಪಿದ ಕೇಂದ್ರ!

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ತೆಲಂಗಾಣದ ಹಣಕಾಸು ಸಚಿವ ಟಿ. ಹರೀಶ್ ರಾವ್, ಸಾಲದ ಹಣವನ್ನು ಅನುದಾನದ ರೂಪದಲ್ಲಿ ತೋರಿಸುವುದರಿಂದ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗಲಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಜಿಎಸ್‌ಟಿ ಜಾರಿಯಿಂದಾಗಿ ರಾಜ್ಯ ಸರ್ಕಾರಗಳಿಗೆ ಉಂಟಾಗಿರುವ ಆದಾಯ ನಷ್ಟವನ್ನು ಸರಿದೂಗಿಸಲು 1.1 ಲಕ್ಷ ಕೋಟಿ ರೂ. ಸಾಲ ಪಡೆಯಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಇದರ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಗಳಿಗೆ ಪತ್ರವನ್ನು ಬರೆದ್ದಾರೆ.

ಜಿಎಸ್‌ಟಿ ಪರಿಹಾರ ನೀಡಲು ಹಣಕಾಸಿನ ಕೊರತೆಯಿದೆ ಎಂದಿದ್ದ ಕೇಂದ್ರವು, ರಾಜ್ಯ ಸರ್ಕಾರಗಳಿಗೆ ಮಾರುಕಟ್ಟೆ ಸಾಲಗಳನ್ನು ಪಡೆಯಲು ಸೂಚಿಸಿದ್ದವು. ಇದಕ್ಕೆ ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯಗಳು ಒಪ್ಪಿತ್ತಾದರೂ, ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳು ಅಸಮಧಾನಗೊಂಡಿದ್ದವು. ಇದೀಗ ತನ್ನ ನಿರ್ಧಾರವನ್ನು ಬದಲಿಸಿರುವ ಕೇಂದ್ರವು, ರಾಜ್ಯ ಸರಕಾರಗಳ ನಡುವಿನ ಬಿಕ್ಕಟ್ಟನ್ನು ಶಮನಗೊಳಿಸಲು ಪ್ರಯತ್ನಿಸಿದೆ.

ಇದನ್ನೂ ಓದಿ: ಜಿಎಸ್‌ಟಿ ಪಾಲು ನೀಡುವಂತೆ ಒತ್ತಾಯಿಸಿ ವಿಪಕ್ಷಗಳ ಪ್ರತಿಭಟನೆ

ಪ್ರಸ್ತುತ ಕೇಂದ್ರ ಸರಕಾರವು ರಾಜ್ಯಗಳಿಗೆ ಅನುದಾನ ಸೆಸ್ ಬಿಡುಗಡೆಯಡಿ ನೀಡಲಿದೆ. ಹಾಗಾಗಿ ಕೇಂದ್ರ ಸರಕಾರವು ಸಾಲದ ಹಣವನ್ನು ರಾಜ್ಯಗಳಿಗೆ ನೀಡುವ ಅನುದಾನದ ರೂಪದಲ್ಲಿ ತೋರಿಸಲಿದೆ.

ಸಮಸ್ಯೆಯನ್ನು ಬಗೆಹರಿಸಲು ರಚನಾತ್ಮಕ ಸಹಕಾರವನ್ನು ನೀಡಿರುವುದಕ್ಕಾಗಿ ರಾಜ್ಯಗಳಿಗೆ ಕೃತಜ್ಞತೆ ಸಲ್ಲಿಸಿರುವ ನಿರ್ಮಲಾ ಸೀತಾರಾಮನ್, “ಕೇಂದ್ರ ಸರಕಾರ ಕಂತುಗಳಲ್ಲಿ ಅಗತ್ಯವಿರುವ ಸಾಲವನ್ನು ಪಡೆದುಕೊಳ್ಳಲಿವೆ ಹಾಗೂ ಅದನ್ನು ರಾಜ್ಯಗಳಿಗೆ ಒಂದಾದ ಬಳಿಕ ಒಂದರಂತೆ ಸಾಲಗಳನ್ನು ವರ್ಗಾಯಿಸಲಿವೆ. ಇದರಿಂದಾಗಿ ಸಮನ್ವಯತೆ ಹಾಗೂ ಸರಳವಾದ ಸಾಲ ದೊರೆಯುವಿಕೆ ಸಾಧ್ಯವಾಗಲಿದೆ. ಅಷ್ಟೇ ಅಲ್ಲದೆ ಅನುಕೂಲಕರವಾದ ಬಡ್ಡಿದರವೂ ಕೂಡಾ ಲಭ್ಯವಾಗಲಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ತೆಲಂಗಾಣದ ಹಣಕಾಸು ಸಚಿವ ಟಿ. ಹರೀಶ್ ರಾವ್, ಸಾಲದ ಹಣವನ್ನು ಅನುದಾನದ ರೂಪದಲ್ಲಿ ತೋರಿಸುವುದರಿಂದ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗಲಿದೆ ಎಂದು ಹೇಳಿದ್ದಾರೆ. ಕೇರಳದ ಹಣಕಾಸು ಸಚಿವ ಥಾಮಸ್ ಐಸಾಕ್ ಕೂಡಾ ಅಸಮಧಾನ ವ್ಯಕ್ತಪಡಿಸಿದ್ದು, ”2023ರಲ್ಲಿ ರಾಜ್ಯಗಳಿಗೆ ಎಷ್ಟು ಜಿಎಸ್‌ಟಿ ಪರಿಹಾರ ನೀಡಲಾಗುವುದೆಂಬ ಬಗ್ಗೆ ಕೇಂದ್ರ ಸರಕಾರ ಸ್ಪಷ್ಟನೆ ನೀಡಬೇಕು” ಎಂದು ಕೇಳಿದ್ದಾರೆ.

ಇದನ್ನೂ ಓದಿ: ಜೆಪಿ ಐಟಿಸೆಲ್‌‌ನ ನಿಜಸ್ವರೂಪ ಬಿಚ್ಚಿಡುತ್ತಿರುವ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....