Homeಕರ್ನಾಟಕಜಿಎಸ್‌ಟಿ ಹಣ ಬಡವರ ಬದುಕಿಗೋ?, ಒಂದೆರಡು ಕಂಪನಿಗಳ ಉದ್ಧಾರಕ್ಕೋ?: ಎಚ್‌ಡಿಕೆ ಪ್ರಶ್ನೆ

ಜಿಎಸ್‌ಟಿ ಹಣ ಬಡವರ ಬದುಕಿಗೋ?, ಒಂದೆರಡು ಕಂಪನಿಗಳ ಉದ್ಧಾರಕ್ಕೋ?: ಎಚ್‌ಡಿಕೆ ಪ್ರಶ್ನೆ

- Advertisement -
- Advertisement -

ದೇಶದ ಜನರು ಇಂತಹ ಕಷ್ಟದ ಸಮಯದಲ್ಲೂ ತೆರಿಗೆ ಕಟ್ಟುತ್ತಿದ್ದಾರೆ. ಆ ಹಣ ಬಡವರ ಬದುಕಿಗೆ ಉಪಯೋಗ ಆಗುತ್ತಿದೆಯೋ ಅಥವಾ ಒಂದೆರಡು ಕಂಪನಿಗಳ ಉದ್ಧಾರ ಮಾಡಲು ಬಳಕೆಯಾಗುತ್ತಿದೆಯೋ ಎಂಬುದನ್ನು ಜನರ ಮುಂದಿಡಬೇಕು. ಏಕೆಂದರೆ ದೇಶದಲ್ಲಿ ಜಿಎಸ್‌ಟಿ ತೆರಿಗೆ ದಾಖಲೆ ಪ್ರಮಾಣದಲ್ಲಿ ಸಂಗ್ರಹ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಯಚೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ”ಕರ್ನಾಟಕದ 10 ಜಿಲ್ಲೆಯಲ್ಲಿ ಬಡತನವಿದೆ ಎಂದು ಕೇಂದ್ರದ ವರದಿಯಲ್ಲಿದೆ. ರಾಯಚೂರು ಜಿಲ್ಲೆಯ ಅಪೌಷ್ಟಿಕತೆ ಸಮಸ್ಯೆಗೆ ಬಿಜೆಪಿ ಸರ್ಕಾರ ಏನು ಪರಿಹಾರ ಕಲ್ಪಿಸಿದೆ ಎನ್ನುವುದನ್ನು ಪ್ರಧಾನಮಂತ್ರಿ ರಾಯಚೂರು ಜಿಲ್ಲೆಯ ಸಿಂಧನೂರಿಗೆ ಬಂದಾಗ ಹೇಳಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ನಾಯಕರು ರಾಜ್ಯ ಚುನಾವಣಾ ಪ್ರಚಾರಕ್ಕೆ ಬರುತ್ತಿರುವ ಬಗ್ಗೆ ಮಾತನಾಡಿದ ಅವರು, ”ಎರಡೂ ರಾಷ್ಟ್ರೀಯ ಪಕ್ಷಗಳ ಉತ್ತರ‌ ಭಾರತದ ನಾಯಕರಿಗೆ ಕರ್ನಾಟಕದ ಮೇಲೆ ಇತ್ತೀಚೆಗೆ ಪ್ರೀತಿ ಹೆಚ್ಚಾಗಿದೆ. ಪ್ರಧಾನಮಂತ್ರಿ ಹಾಗೂ ಕೇಂದ್ರ ಗೃಹ ಸಚಿವರು ರಾಜ್ಯ ಬಿಟ್ಟು ಅಲಗಾಡುತ್ತಿಲ್ಲ. ಈ ಬಾರಿ ಕರ್ನಾಟಕದ ಜನರು ಹಣಬಲಕ್ಕಿಂತ ಜನಬಲ ಗೆಲ್ಲುತ್ತದೆ ಎಂಬುದನ್ನು ತೋರಿಸಲಿದ್ದಾರೆ” ಎಂದರು.

ಇದನ್ನೂ ಓದಿ: ಸಿಟಿ ರವಿ ಸೋಲಿಸಲು ಕಾಂಗ್ರೆಸ್‌ಗೆ ಮತ ಹಾಕಿ: ಕೈ ಅಭ್ಯರ್ಥಿ ಪರ ಜೆಡಿಎಸ್ ಮುಖಂಡನ ಪ್ರಚಾರ

”ಬಿಜೆಪಿಯವರು 70 ಸೀಟು ಪಡೆಯಲು ಬೆವರು ಹರಿಸಬೇಕಾಗುತ್ತದೆ. ಈ ಸಲ ಪ್ರತಿ ಜಿಲ್ಲೆಯಲ್ಲಿ ಜೆಡಿಎಸ್ ಖಾತೆ ತೆರೆಯಲಿದೆ. ಉತ್ತರ ಕರ್ನಾಟಕ ಭಾಗದಲ್ಲಿಯೇ ಕನಿಷ್ಠ‌ 35 ಸ್ಥಾನಗಳನ್ನು ಪಡೆಯುತ್ತಿದ್ದೇವೆ. ದೇವೇಗೌಡರನ್ನು ಭೇಟಿ ಮಾಡಿದ ಧೂತರು ಯಾರು ಎಂಬುದು ಚುನಾವಣೆ ಬಳಿಕ ಬಹಿರಂಗವಾಗಲಿದೆ” ಎಂದು ಮೈತ್ರಿ ಸರ್ಕಾರ ರಚನೆಯ ಬಗ್ಗೆ ಸುಳಿವು ನೀಡಿದರು.

”ಸಮೀಕ್ಷೆಗಳನ್ನು ಹಣ ಕೊಟ್ಟು ಮಾಡಿಸುತ್ತಾರೆ. ಈ ಮೂಲಕ ಜನರ‌ ಭಾವನೆಗಳನ್ನು ಕದಡುವ ಯತ್ನ‌ ಮಾಡುತ್ತಿದ್ದಾರೆ. ಬಿಜೆಪಿ ಪ್ರಣಾಳಿಕೆಯಲ್ಲಿ ಜೆಡಿಎಸ್ ಪಂಚರತ್ನ ಯೋಜನೆಗಳನ್ನೇ ಬಹುತೇಕ ನಕಲು ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದರು.

ಈ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿ, ”ಬಿಜೆಪಿಯವರ ಹೆಲಿಕಾಪ್ಟರ್ ಹಾರಿದ ನಂತರ ಬೇರೆ ಪಕ್ಷದವರ ಹೆಲಿಕಾಪ್ಟರ್ ಹಾರಲು ಅನುಮತಿ ನೀಡುತ್ತಿದ್ದಾರೆ. ಚುನಾವಣೆ ಆಯೋಗ ಈ ಬಗ್ಗೆ ಗಮನಹರಿಸಬೇಕಾಗಿತ್ತು. ಆದರೆ ಅದು ಆಗುತ್ತಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...