Homeಮುಖಪುಟನಕಲಿ ಜಿಎಸ್‌ಟಿ ನೋಂದಣಿ: 24,000 ಕೋಟಿ ರೂ.ಗೂ ಅಧಿಕ ತೆರಿಗೆ ವಂಚನೆ ಬಯಲು

ನಕಲಿ ಜಿಎಸ್‌ಟಿ ನೋಂದಣಿ: 24,000 ಕೋಟಿ ರೂ.ಗೂ ಅಧಿಕ ತೆರಿಗೆ ವಂಚನೆ ಬಯಲು

- Advertisement -
- Advertisement -

ಜಿಎಸ್‌ಟಿ ಅಧಿಕಾರಿಗಳು ಕೈಗೊಂಡ ಮಹತ್ವದ ಕಾರ್ಯಚರಣೆಯಲ್ಲಿ 21,791 ನಕಲಿ ಜಿಎಸ್‌ಟಿ ನೋಂದಣಿಗಳು ಪತ್ತೆಯಾಗಿದೆ. ಇದರಿಂದ ಸುಮಾರು 24,000 ಕೋಟಿ ರೂ.ಗೂ ಅಧಿಕ ತೆರಿಗೆ ವಂಚನೆ ಬಯಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಸಚಿವರು, ಪ್ರಾಮಾಣಿಕ ತೆರಿಗೆದಾರರ ಹಿತಾಸಕ್ತಿ ಕಾಪಾಡಲು ಮತ್ತು ತೆರಿಗೆದಾರರಿಗೆ ತೀವ್ರ ತೊಂದರೆಯಾಗದಂತೆ ಕಾಲಕಾಲಕ್ಕೆ ಸೂಚನೆಗಳನ್ನು ನೀಡಲಾಗಿದ್ದು, ಅಧಿಕಾರಿಗಳು ಈ ಬಗ್ಗೆ ಅಧಿಕಾರ ಚಲಾಯಿಸುವಾಗ ಎಚ್ಚರಿಕೆಯಿಂದ ಮತ್ತು ಕಾಳಜಿ ವಹಿಸುವಂತೆ ಸೂಚಿಸಿದ್ದಾರೆ.

ಜಿಎಸ್‌ಟಿ ನೋಂದಣಿ ಹೊಂದಿರುವ ಒಟ್ಟು 21,791 ಘಟಕಗಳು ಅಸ್ತಿತ್ವದಲ್ಲಿಲ್ಲ ಎಂದು ಪತ್ತೆ ಮಾಡಲಾಗಿದೆ. ಇದರಲ್ಲಿ ರಾಜ್ಯ ತೆರಿಗೆ ವ್ಯಾಪ್ತಿಗೆ ಸಂಬಂಧಿಸಿದ 11,392 ಘಟಕಗಳು ಮತ್ತು ಸಿಬಿಐಸಿ ಅಧಿಕಾರ ವ್ಯಾಪ್ತಿಗೆ ಸಂಬಂಧಿಸಿದ 10,399 ಘಟಕಗಳು ಸೇರಿದೆ. ಇದರಿಂದ 24,010 ಕೋಟಿ ರೂ. ವಂಚನೆ ನಡೆದಿರುವುದು ಪತ್ತೆಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ನಡೆಸಿದ ನಕಲಿ ಜಿಎಸ್‌ಟಿ ನೋಂದಣಿಗಳ ವಿರುದ್ಧ ವಿಶೇಷ ಅಭಿಯಾನದ ವೇಳೆ ನಕಲಿ ನೋಂದಣಿ ಹೊಂದಿರುವ ಸಂಸ್ಥೆಗಳ ಸಂಖ್ಯೆ ಮತ್ತು ಪತ್ತೆಯಾದ ಒಟ್ಟು ಮೊತ್ತದ ಕುರಿತ ಪ್ರಶ್ನೆಗೆ ಸಚಿವರು ಉತ್ತರಿಸುತ್ತಾ ಈ ಅಂಕಿ ಅಂಶವನ್ನು ಬಹಿರಂಗಪಡಿಸಿದ್ದಾರೆ. ಮೇ 16 ರಿಂದ ಜು.15ರವೆರೆಗೆ ಸಿಬಿಐಸಿ ಈ ಕುರಿತು ವಿಶೇಷ ಕಾರ್ಯಾಚರಣೆ ನಡೆಸಿತ್ತು.

ಇ–ವಾಣಿಜ್ಯ ಸಂಸ್ಥೆಗಳಿಗೆ ಜಿಎಸ್‌ಟಿ ನೋಂದಣಿಗೆ ಸರಳೀಕೃತ ವಿಧಾನವನ್ನು ಈಗಾಗಲೇ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಇದರ ಅಡಿಯಲ್ಲಿ, ಇ–ವಾಣಿಜ್ಯ ಸಂಸ್ಥೆಗಳು ನೋಂದಣಿಗೆ ಅರ್ಜಿ ಸಲ್ಲಿಸಿದಾಗ, ಅರ್ಜಿ ಸಲ್ಲಿಕೆಯಾದ ರಾಜ್ಯದಲ್ಲಿ ಆ ಸಂಸ್ಥೆಯು ಭೌತಿಕವಾಗಿ ಅಸ್ತಿತ್ವ ಹೊಂದಿಲ್ಲದಿದ್ದರೆ, ತನ್ನ ಭೌತಿಕ ಅಸ್ತಿತ್ವ ಇರುವ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದ ವಿಳಾಸ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಇದೇ  ವೇಳೆ ಹೇಳಿದ್ದಾರೆ.

ಇದಲ್ಲದೆ ನೋಂದಣಿ ಪ್ರಕ್ರಿಯೆಯನ್ನು ಬಲಪಡಿಸಲು ಜಿಎಸ್‌ಟಿ ನಿಯಮಗಳಲ್ಲಿ ತಿದ್ದುಪಡಿಗಳನ್ನು ಮಾಡಲಾಗಿದೆ. ನೋಂದಣಿದಾರರಿಗೆ ಬಯೋಮೆಟ್ರಿಕ್ ಆಧಾರಿತ ಆಧಾರ್ ದೃಢೀಕರಣ, ದಾಖಲೆಗಳ ಮೂಲ ಪ್ರತಿಯ ಪರಿಶೀಲನೆಯನ್ನು ಕೂಡ ಮಾಡಲಾಗುತ್ತದೆ. ನೋಂದಾಯಿತ ವ್ಯಕ್ತಿಯ ಬ್ಯಾಂಕ್ ಖಾತೆ, ಹೆಸರು ಮತ್ತು PAN ನ ವಿವರಗಳನ್ನು ನೋಂದಣಿಯ  30 ದಿನಗಳ ಒಳಗೆ ಒದಗಿಸಬೇಕಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಹೇಳಿದ್ದಾರೆ.

ಇದನ್ನು ಓದಿ: ‘ಗೋರಕ್‌ಪುರ ಆಸ್ಪತ್ರೆ ದುರಂತ’ ಪುಸ್ತಕ ಬರೆದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...