Homeಮುಖಪುಟನಕಲಿ ಜಿಎಸ್‌ಟಿ ನೋಂದಣಿ: 24,000 ಕೋಟಿ ರೂ.ಗೂ ಅಧಿಕ ತೆರಿಗೆ ವಂಚನೆ ಬಯಲು

ನಕಲಿ ಜಿಎಸ್‌ಟಿ ನೋಂದಣಿ: 24,000 ಕೋಟಿ ರೂ.ಗೂ ಅಧಿಕ ತೆರಿಗೆ ವಂಚನೆ ಬಯಲು

- Advertisement -
- Advertisement -

ಜಿಎಸ್‌ಟಿ ಅಧಿಕಾರಿಗಳು ಕೈಗೊಂಡ ಮಹತ್ವದ ಕಾರ್ಯಚರಣೆಯಲ್ಲಿ 21,791 ನಕಲಿ ಜಿಎಸ್‌ಟಿ ನೋಂದಣಿಗಳು ಪತ್ತೆಯಾಗಿದೆ. ಇದರಿಂದ ಸುಮಾರು 24,000 ಕೋಟಿ ರೂ.ಗೂ ಅಧಿಕ ತೆರಿಗೆ ವಂಚನೆ ಬಯಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಸಚಿವರು, ಪ್ರಾಮಾಣಿಕ ತೆರಿಗೆದಾರರ ಹಿತಾಸಕ್ತಿ ಕಾಪಾಡಲು ಮತ್ತು ತೆರಿಗೆದಾರರಿಗೆ ತೀವ್ರ ತೊಂದರೆಯಾಗದಂತೆ ಕಾಲಕಾಲಕ್ಕೆ ಸೂಚನೆಗಳನ್ನು ನೀಡಲಾಗಿದ್ದು, ಅಧಿಕಾರಿಗಳು ಈ ಬಗ್ಗೆ ಅಧಿಕಾರ ಚಲಾಯಿಸುವಾಗ ಎಚ್ಚರಿಕೆಯಿಂದ ಮತ್ತು ಕಾಳಜಿ ವಹಿಸುವಂತೆ ಸೂಚಿಸಿದ್ದಾರೆ.

ಜಿಎಸ್‌ಟಿ ನೋಂದಣಿ ಹೊಂದಿರುವ ಒಟ್ಟು 21,791 ಘಟಕಗಳು ಅಸ್ತಿತ್ವದಲ್ಲಿಲ್ಲ ಎಂದು ಪತ್ತೆ ಮಾಡಲಾಗಿದೆ. ಇದರಲ್ಲಿ ರಾಜ್ಯ ತೆರಿಗೆ ವ್ಯಾಪ್ತಿಗೆ ಸಂಬಂಧಿಸಿದ 11,392 ಘಟಕಗಳು ಮತ್ತು ಸಿಬಿಐಸಿ ಅಧಿಕಾರ ವ್ಯಾಪ್ತಿಗೆ ಸಂಬಂಧಿಸಿದ 10,399 ಘಟಕಗಳು ಸೇರಿದೆ. ಇದರಿಂದ 24,010 ಕೋಟಿ ರೂ. ವಂಚನೆ ನಡೆದಿರುವುದು ಪತ್ತೆಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ನಡೆಸಿದ ನಕಲಿ ಜಿಎಸ್‌ಟಿ ನೋಂದಣಿಗಳ ವಿರುದ್ಧ ವಿಶೇಷ ಅಭಿಯಾನದ ವೇಳೆ ನಕಲಿ ನೋಂದಣಿ ಹೊಂದಿರುವ ಸಂಸ್ಥೆಗಳ ಸಂಖ್ಯೆ ಮತ್ತು ಪತ್ತೆಯಾದ ಒಟ್ಟು ಮೊತ್ತದ ಕುರಿತ ಪ್ರಶ್ನೆಗೆ ಸಚಿವರು ಉತ್ತರಿಸುತ್ತಾ ಈ ಅಂಕಿ ಅಂಶವನ್ನು ಬಹಿರಂಗಪಡಿಸಿದ್ದಾರೆ. ಮೇ 16 ರಿಂದ ಜು.15ರವೆರೆಗೆ ಸಿಬಿಐಸಿ ಈ ಕುರಿತು ವಿಶೇಷ ಕಾರ್ಯಾಚರಣೆ ನಡೆಸಿತ್ತು.

ಇ–ವಾಣಿಜ್ಯ ಸಂಸ್ಥೆಗಳಿಗೆ ಜಿಎಸ್‌ಟಿ ನೋಂದಣಿಗೆ ಸರಳೀಕೃತ ವಿಧಾನವನ್ನು ಈಗಾಗಲೇ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಇದರ ಅಡಿಯಲ್ಲಿ, ಇ–ವಾಣಿಜ್ಯ ಸಂಸ್ಥೆಗಳು ನೋಂದಣಿಗೆ ಅರ್ಜಿ ಸಲ್ಲಿಸಿದಾಗ, ಅರ್ಜಿ ಸಲ್ಲಿಕೆಯಾದ ರಾಜ್ಯದಲ್ಲಿ ಆ ಸಂಸ್ಥೆಯು ಭೌತಿಕವಾಗಿ ಅಸ್ತಿತ್ವ ಹೊಂದಿಲ್ಲದಿದ್ದರೆ, ತನ್ನ ಭೌತಿಕ ಅಸ್ತಿತ್ವ ಇರುವ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದ ವಿಳಾಸ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಇದೇ  ವೇಳೆ ಹೇಳಿದ್ದಾರೆ.

ಇದಲ್ಲದೆ ನೋಂದಣಿ ಪ್ರಕ್ರಿಯೆಯನ್ನು ಬಲಪಡಿಸಲು ಜಿಎಸ್‌ಟಿ ನಿಯಮಗಳಲ್ಲಿ ತಿದ್ದುಪಡಿಗಳನ್ನು ಮಾಡಲಾಗಿದೆ. ನೋಂದಣಿದಾರರಿಗೆ ಬಯೋಮೆಟ್ರಿಕ್ ಆಧಾರಿತ ಆಧಾರ್ ದೃಢೀಕರಣ, ದಾಖಲೆಗಳ ಮೂಲ ಪ್ರತಿಯ ಪರಿಶೀಲನೆಯನ್ನು ಕೂಡ ಮಾಡಲಾಗುತ್ತದೆ. ನೋಂದಾಯಿತ ವ್ಯಕ್ತಿಯ ಬ್ಯಾಂಕ್ ಖಾತೆ, ಹೆಸರು ಮತ್ತು PAN ನ ವಿವರಗಳನ್ನು ನೋಂದಣಿಯ  30 ದಿನಗಳ ಒಳಗೆ ಒದಗಿಸಬೇಕಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಹೇಳಿದ್ದಾರೆ.

ಇದನ್ನು ಓದಿ: ‘ಗೋರಕ್‌ಪುರ ಆಸ್ಪತ್ರೆ ದುರಂತ’ ಪುಸ್ತಕ ಬರೆದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...